Homeಮುಖಪುಟಅರವಿಂದ್ ಕೇಜ್ರಿವಾಲ್ ಮೇಲೆ ನೀರು ಎರಚಿ ದಾಳಿಗೆ ಯತ್ನ; ಆರೋಪಿ ಬಂಧನ

ಅರವಿಂದ್ ಕೇಜ್ರಿವಾಲ್ ಮೇಲೆ ನೀರು ಎರಚಿ ದಾಳಿಗೆ ಯತ್ನ; ಆರೋಪಿ ಬಂಧನ

- Advertisement -
- Advertisement -

ಶನಿವಾರ ಸಂಜೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ನೀರು ಎರಚಿ ದಾಳಿಗೆ ಪ್ರಯತ್ನಿಸಿದ ಘಟನೆ ನಡೆದಿದೆ. ವ್ಯಕ್ತಿಯನ್ನು ತಕ್ಷಣವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ ವ್ಯಕ್ತಿಯು ಕೇಜ್ರಿವಾಲ್ ಮೇಲೆ ನೀರು ಎರಚಿರುವುದು ದಾಖಲಾಗಿದೆ. ಆರೋಪಿಯನ್ನು ಖಾನ್ಪುರ್ ಡಿಪೋದ ಬಸ್ ಮಾರ್ಷಲ್ ಅಶೋಕ್ ಝಾ ಎಂದು ಗುರುತಿಸಲಾಗಿದೆ.

ರಾಷ್ಟ್ರ ರಾಜಧಾನಿಯ ಶೇಖ್ ಸರಾಯ್ ಪ್ರದೇಶದಲ್ಲಿ ಕೇಜ್ರಿವಾಲ್ ಅವರು ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದಾಗ ಕೇಜ್ರಿವಾಲ್ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು ಕಿರಿದಾದ ಹಾದಿಯಲ್ಲಿ ನಡೆದು ಜನರಿಗೆ ಶುಭಾಶಯ ಕೋರುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜನಸಂದಣಿ ನಿಯಂತ್ರಣಕ್ಕಾಗಿ ಸರಿಯಾದ ಪೋಲೀಸ್ ನಿಯೋಜನೆಯ ಹೊರತಾಗಿಯೂ, ಸಂಜೆ 5.50 ರ ಸುಮಾರಿಗೆ, ಖಾನ್ಪುರ್ ಡಿಪೋದ ಬಸ್ ಮಾರ್ಷಲ್ ಅಶೋಕ್ ಝಾ ಅವರು ಕೇಜ್ರಿವಾಲ್ ಮೇಲೆ ನೀರು ಎರಚಲು ಪ್ರಯತ್ನಿಸಿದರು. ಸಮೀಪದಲ್ಲಿದ್ದ ಪೊಲೀಸರು ಝಾ ಅವರನ್ನು ಬಂಧಿಸಿದ್ದರಿಂದ ಅವರ ಪ್ರಯತ್ನವನ್ನು ತಕ್ಷಣವೇ ವಿಫಲಗೊಳಿಸಲಾಯಿತು” ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಅಂಕಿತ್ ಚೌಹಾನ್ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಈ ಕೃತ್ಯದ ಹಿಂದಿನ ಉದ್ದೇಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಚೌಹಾಣ್ ಹೇಳಿದ್ದಾರೆ. ಅರಂಭದಲ್ಲಿ ಕೇಜ್ರಿವಾಲ್ ಅವರ ಮೇಲೆ ‘ದ್ರವ’ ಎರಚಲಾಗಿದೆ ಎಂದು ವರದಿಯಾಗಿತ್ತು. ನಂತರ ಎರಚಿದ್ದು ನೀರು ಎಂದು ಸ್ಪಷ್ಟಪಡಿಲಾಗಿದೆ ಎಂದು ವರದಿ ಉಲ್ಲೇಖಿಸಿವೆ.

ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಮೇಲೆ ದಾಳಿ ನಡೆಸಿದ ವ್ಯಕ್ತಿ ಬಿಜೆಪಿಯೊಂದಿಗೆ ನಂಟು ಹೊಂದಿದ್ದಾನೆ ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

“ಬಿಜೆಪಿ ನಾಯಕರು ಎಲ್ಲಾ ರಾಜ್ಯಗಳಲ್ಲಿ ರ‍್ಯಾಲಿಗಳನ್ನು ನಡೆಸುತ್ತಾರೆ, ಆದರೆ ಅವರು ಎಂದಿಗೂ ದಾಳಿಗೆ ಒಳಗಾಗಿಲ್ಲ… ಅರವಿಂದ್ ಕೇಜ್ರಿವಾಲ್ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ… ನಂಗ್ಲೋಯ್‌ನಲ್ಲಿ ಬಿಜೆಪಿ ಅವರ ಮೇಲೆ ಹಲ್ಲೆ ನಡೆಸಿದೆ. ಛತ್ತರ್‌ಪುರದಲ್ಲಿ ಅವರ ಮೇಲೆ ದಾಳಿ ನಡೆದಿದೆ… ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದ್ದು, ಕೇಂದ್ರ ಸರ್ಕಾರ ಮತ್ತು ಗೃಹ ಸಚಿವರು ಏನೂ ಮಾಡುತ್ತಿಲ್ಲ…” ಎಂದು ” ಎಂದು ಗ್ರೇಟರ್ ಕೈಲಾಶ್ ಶಾಸಕ ತಿಳಿಸಿದ್ದಾರೆ.

ದೆಹಲಿಯ ನಂಗ್ಲೋಯ್ ಪ್ರದೇಶದಲ್ಲಿ ಬುಧವಾರ ಬಿಜೆಪಿ ನೇತೃತ್ವದಲ್ಲಿ ಕೇಜ್ರಿವಾಲ್ ವಿರುದ್ಧ ಪ್ರತಿಭಟನೆ ನಡಸಲಾಗಿತ್ತು. ಹಾಗಾಗಿ ಅವರ ಭೇಟಿಯನ್ನು ಮಧ್ಯದಲ್ಲಿ ರದ್ದುಗೊಳಿಸಬೇಕಾಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಘಟನೆ ಬಗ್ಗೆ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಪ್ರತಿಕ್ರಿಯಿಸಿದ್ದು, “ಇಂದು ಹಗಲು ಹೊತ್ತಿನಲ್ಲಿ ಬಿಜೆಪಿ ಕಾರ್ಯಕರ್ತ ಅರವಿಂದ್ ಕೇಜ್ರಿವಾಲ್ ಮೇಲೆ ಹಲ್ಲೆ ನಡೆಸಿದ್ದಾನೆ. ದೆಹಲಿ ಚುನಾವಣೆಯಲ್ಲಿ ಮೂರನೇ ಬಾರಿಗೆ ಸೋತಿರುವ ಬಗ್ಗೆ ಬಿಜೆಪಿ ಆತಂಕದಲ್ಲಿದೆ. ದೆಹಲಿಯ ಜನರು ಇಂತಹ ಅಗ್ಗದ ಕೃತ್ಯಗಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಾರೆ. ಕಳೆದ ಬಾರಿ ಅವರು [ಬಿಜೆಪಿ] ಎಂಟು ಸ್ಥಾನಗಳನ್ನು ಪಡೆದಿದ್ದರು. ಈ ಬಾರಿ ದೆಹಲಿ ಜನರು ಬಿಜೆಪಿಗೆ ಶೂನ್ಯ ಸ್ಥಾನಗಳನ್ನು ನೀಡುತ್ತಾರೆ” ಎಂದು ಹೇಳಿದ್ದಾರೆ.

ಅದಾಗ್ಯೂ ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ಚುನಾವಣೆಗೆ ಮುನ್ನ ಕೇಜ್ರಿವಾಲ್ ಹಳೆಯ ತಂತ್ರಕ್ಕೆ ಮರಳಿದ್ದಾರೆ ಎಂದು ಹೇಳಿದೆ.

“ಅರವಿಂದ್ ಕೇಜ್ರಿವಾಲ್ ಅವರ ಪ್ರತಿಯೊಂದು ರಾಜಕೀಯ ತಂತ್ರವೂ ವಿಫಲವಾಗಿದೆ. ಈಗ ಅವನು ತನ್ನ ಹಳೆಯ ತಂತ್ರಗಳಿಗೆ ಹೊರಳಿದ್ದಾರೆ. ಈ ಹಳೆಯ ತಂತ್ರಗಳಲ್ಲಿ ಅವರಿಗೆ ಕಪಾಳಮೋಕ್ಷ ಮತ್ತು ಅವನ ಮೇಲೆ ಶಾಯಿಯನ್ನು ಎರಚಲಾಗುತ್ತದೆ. ಅಂತಹದ್ದೇ ಘಟನೆ ಇಂದು ನಡೆದಿದೆ. ಅರವಿಂದ್ ಕೇಜ್ರಿವಾಲ್ ಅವರು ಇಂದು ಯಾವ ಹೊಸ ಆಟವನ್ನು ಪ್ರಾರಂಭಿಸಿದ್ದಾರೆ ಎಂದು ಅವರೇ ಹೇಳಬೇಕು” ಎಂದು ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಹೇಳಿದ್ದಾರೆ.

2016ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಕೇಜ್ರಿವಾಲ್ ಮೇಲೆ ಶಾಯಿ ಎರಚಿದ್ದ. ಆಗ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿದ್ದರು. ದೆಹಲಿಯಲ್ಲಿ ಫೆಬ್ರವರಿ ವೇಳೆ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...