Homeಮುಖಪುಟನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ...

ನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

- Advertisement -
- Advertisement -

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಸಂಪಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಮಾನವ ಹಕ್ಕುಗಳ ಹೋರಾಟಗಾರ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಮ್ ಖಾನ್ ಅವರನ್ನು ಬಂಧಿಸಲು ಬೆಂಗಳೂರಿಗೆ ಆಗಮಿಸಿರುವ ದೆಹಲಿ ಪೊಲೀಸರು, ಸ್ಥಳೀಯ ಪೊಲೀಸರ ಗಮನಕ್ಕೆ ತರದೆ ಅಕ್ರಮವಾಗಿ ಬಂಧಿಸಲು ಯತ್ನಿಸಿರುವ ಘಟನೆ ನ.30ರ ಸಂಜೆ ನಡೆದಿತ್ತು.

ಈ ಬಗ್ಗೆ ದೆಹಲಿ ಪೊಲೀಸರ ವಿರುದ್ಧ ನದೀಮ್ ಖಾನ್ ಕುಟುಂಬಸ್ಥರು ಕೂಡಲೇ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಮುಂದಿನ ಕ್ರಮ ಕೈಗೊಂಡಿದ್ದಾರೆ.

“ಶನಿವಾರ ಸಂಜೆ 5ರ ಸುಮಾರಿಗೆ ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಎಂದು ಹೇಳಿಕೊಂಡು ಬಂದ ನಾಲ್ವರು ಅಧಿಕಾರಿಗಳು ಅಕ್ರಮವಾಗಿ ಮನೆಗೆ ನುಗ್ಗಿದರು. ವಾರಂಟ್ ಅಥವಾ ಪೂರ್ವ ಸೂಚನೆಯಿಲ್ಲದೆ ಬಂದಿದ್ದಲ್ಲದೇ, ನಮ್ಮನ್ನು ಬೆದರಿಸಿದ್ದಾರೆ. ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನದೀಮ್ ಖಾನ್ ಅವರ ವಿರುದ್ಧ ನಮ್ಮ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 12:48 ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಅವರನ್ನು ಹುಡುಕಿಕೊಂಡು ಬಂದಿದ್ದೇವೆ ಎಂದು ಹೇಳಿದರು. ದಾಖಲೆ ಕೇಳಿದಾಗ ಆನ್‌ಲೈನ್ ಪ್ರತಿಯನ್ನು ತೋರಿಸಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಸಹೋದರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

“ದೆಹಲಿ ಪೊಲೀಶರು ಮನೆಗೆ ನುಗ್ಗಿದ ವೇಳೆ ಯಾವುದೇ ಸಮವಸ್ತ್ರದಲ್ಲಿ ಇರಲಿಲ್ಲ. 8 ಗಂಟೆ ಸುಮಾರಿಗೆ, ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ 3 ಪೊಲೀಸ್ ಅಧಿಕಾರಿಗಳು ಕೂಡ ನನ್ನ ನಿವಾಸಕ್ಕೆ ಬಂದರು. ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿಲ್ಲ ಎಂಬುದು ನಂತರ ಸ್ಪಷ್ಟವಾಯಿತು. ರಾತ್ರಿ 9 ಗಂಟೆಯವರೆಗೆ ಮನೆಯ ಮೊದಲ ಮಹಡಿಯ ಹಾಲ್‌ನಲ್ಲಿ ಕುಳಿತು ತನಿಖೆಗೆ ನದೀಮ್‌ನನ್ನು ತಮ್ಮೊಂದಿಗೆ ದೆಹಲಿಗೆ ಬರುವಂತೆ ಒತ್ತಾಯಿಸಿದ್ದರು. ಯಾವುದೇ ಸಮನ್ಸ್, ನೋಟಿಸ್, ವಾರಂಟ್ ಇಲ್ಲದಿದ್ದರೂ, ಎಸ್‌ಎಚ್‌ಒ ಮತ್ತು ಇತರ ಪೊಲೀಸ್ ಅಧಿಕಾರಿಗಳು ಮನೆಯಲ್ಲೇ ಐದು ಗಂಟೆಗಳ ಕಾಲ ನಮ್ಮನ್ನು ಬೆದರಿಸಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

“ಎಫ್ಐಆರ್‌ನಲ್ಲಿ ದಾಖಲಿಸಿಕೊಂಡಿರುವ ಎಲ್ಲ ಸೆಕ್ಷನ್‌ನ ಅಪರಾಧಗಳಿಗೆ ಮೂರು ವರ್ಷಗಳಿಗಿಂತ ಕಡಿಮೆಯಿರುವ ಶಿಕ್ಷೆಗಳಾಗಿದೆ. ಆದ್ದರಿಂದ ಇದಕ್ಕೆಲ್ಲ ನೋಟಿಸ್ ನೀಡಬೇಕಿದೆ. ಅದ್ಯಾವುದನ್ನೂ ದೆಹಲಿ ಪೊಲೀಸರು ಪಾಲಿಸಿಲ್ಲ. ಈ ಎಫ್‌ಐಆರ್ ದಾಖಲಾಗುವುದಕ್ಕೂ ಮೊದಲು, ನವೆಂಬರ್ 29ರ ತಡರಾತ್ರಿ ದೆಹಲಿಯಲ್ಲಿರುವ ಎಪಿಸಿಆರ್ ಕಚೇರಿಗೆ 20 ಪೊಲೀಸ್ ಅಧಿಕಾರಿಗಳು ನುಗ್ಗಲು ಪ್ರಯತ್ನಿಸಿದ್ದಾರೆ. ನದೀಮ್ ಮತ್ತು ನನಗೆ ಪೊಲೀಸರು ಮಾನಸಿಕ ಹಿಂಸೆ ನೀಡಿ, ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಬೆದರಿಕೆ, ಅತಿಕ್ರಮಣ, ಅಧಿಕಾರದ ದುರುಪಯೋಗ ನಡೆಸಿದ ದೆಹಲಿ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಜೀವಕ್ಕೆ ಅಪಾಯವಾಗದಂತೆ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗವಾಗದಂತೆ ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ದೂರಿನಲ್ಲಿ ನದೀಮ್ ಖಾನ್ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಮಾತನಾಡಿರುವ ಎಪಿಸಿಆರ್ ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ನಿಯಾಝ್ ಅಹ್ಮದ್, “ದೆಹಲಿ ಪೊಲೀಸರು ಈಗ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಆರೋಪಿಗಳ ಬಂಧನಕ್ಕೂ ಮೊದಲು ನೋಟಿಸ್ ನೀಡಬೇಕಿದೆ. ಅಲ್ಲದೇ, ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿ ಕೂಡ ಇದೆ. ಇದು ಯಾವುದನ್ನೂ ಅನುಸರಿಸದೆ, ಅಕ್ರಮ ಬಂಧನಕ್ಕೆ ಯತ್ನಿಸಿದ್ದಾರೆ. ಮನೆಗೆ ಬಂದವರ ಬಳಿಯಲ್ಲಿ ಐಡಿ ಕಾರ್ಡ್‌ ಕೂಡ ಇರಲಿಲ್ಲ. ಅಲ್ಲದೇ, ಯಾವುದೇ ಮಾಹಿತಿ ನೀಡದೆ ಮನೆಗೆ ನುಗ್ಗಿದ್ದಾರೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿರಲಿಲ್ಲ. ಅತಿಕ್ರಮಣ ಪ್ರವೇಶ ಮಾಡಿ, ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನದೀಮ್ ಖಾನ್ ಕುಟುಂಬಸ್ಥರು ದೂರು ನೀಡಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ” ಎಂದು ತಿಳಿಸಿದರು.

“ನದೀಮ್ ಖಾನ್ ‘ದ್ವೇಷದ ವಿರುದ್ಧ ಒಂದಾದ ನಾವೆಲ್ಲರೂ’ ಎಂಬ ಸಂಘಟನೆಯ ಪದಾಧಿಕಾರಿಯಾಗಿದ್ದು, ಭಾರತ್ ಜೋಡೋ‌ ಅಭಿಯಾನದ ರಾಷ್ಟ್ರೀಯ ಪದಾಧಿಕಾರಿಯೂ ಆಗಿದ್ದಾರೆ. ಅವರನ್ನು ದುರುದ್ದೇಶಪೂರ್ವಕವಾಗಿ ಪ್ರಕರಣಗಳಲ್ಲಿ ಸಿಲುಕಿಸಲು ಯತ್ನಿಸುತ್ತಿರುವುದು ಸ್ಪಷ್ಟ” ಎಂದು ಜಾಗೃತ ಕರ್ನಾಟಕದ ಡಾ.ವಾಸು ಎಚ್ ವಿ ಅವರು ಹೇಳಿದ್ದಾರೆ ಎಂದು ‘ಈದಿನ.ಕಾಮ್‌’ ವರದಿ ಮಾಡಿದೆ.

ದೆಹಲಿ ಪೊಲೀಸರು ಇನ್ನಷ್ಟು ಕುಖ್ಯಾತಿ ಪಡೆಯುವ ಮೊದಲು ನ್ಯಾಯಾಲಯಗಳು ಮಧ್ಯೆ ಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಪೊಲೀಸರು ಕಾನೂನು ಪಾಲಿಸದೇ ಈ ರೀತಿ ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ, ಕಾನೂನಿನ ಕುರಿತು ಜನರಿಗೆ ವಿಶ್ವಾಸ ಕುಂದುತ್ತದೆ. ನದೀಮ್ ಖಾನ್ ವಿಚಾರದಲ್ಲಿ ದೆಹಲಿ ಪೊಲೀಸರು ನಡೆದುಕೊಂಡಿರುವ ರೀತಿಯೇ ಸರಿ ಇಲ್ಲ. ಅನುಮಾನ ಉಂಟು ಮಾಡುವಂಥದ್ದು. ಈ ಹಿಂದೆ ದಿಶಾ ರವಿಯವರ ಪ್ರಕರಣದಲ್ಲೂ ಇದೇ ರೀತಿ ನಡೆದುಕೊಂಡಿದ್ದರು. ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರಿನ ಪೊಲೀಸರು ಏನೂ ಮಾಡಿರಲಿಲ್ಲ” ಎಂದು ವಕೀಲ, ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಹೇಳಿದ್ದಾರೆ.

“ನಮ್ಮದು ಒಕ್ಕೂಟ ದೇಶ; ದೆಹಲಿ ಪೊಲೀಸರು ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿದ್ದಾರೆ ಎಂದು ತಿಳಿದುಕೊಂಡು ತಮಗಿಷ್ಟ ಬಂದಂತೆ ನಡೆದುಕೊಳ್ಳಬಾರದು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ನದೀಮ್ ಹಾಗೂ ಎಪಿಸಿಆರ್‌ನವರು ದನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಗುರಿ ಮಾಡಿಕೊಳ್ಳಲಾಗಿದೆ. ಅವರನ್ನು ಬೆನ್ನತ್ತುತ್ತಿರುವುದು ಖಂಡನೀಯ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕೂಡ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು” ಎಂದು ವಿನಯ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...