Homeಮುಖಪುಟನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ...

ನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

- Advertisement -
- Advertisement -

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಸಂಪಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಮಾನವ ಹಕ್ಕುಗಳ ಹೋರಾಟಗಾರ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಮ್ ಖಾನ್ ಅವರನ್ನು ಬಂಧಿಸಲು ಬೆಂಗಳೂರಿಗೆ ಆಗಮಿಸಿರುವ ದೆಹಲಿ ಪೊಲೀಸರು, ಸ್ಥಳೀಯ ಪೊಲೀಸರ ಗಮನಕ್ಕೆ ತರದೆ ಅಕ್ರಮವಾಗಿ ಬಂಧಿಸಲು ಯತ್ನಿಸಿರುವ ಘಟನೆ ನ.30ರ ಸಂಜೆ ನಡೆದಿತ್ತು.

ಈ ಬಗ್ಗೆ ದೆಹಲಿ ಪೊಲೀಸರ ವಿರುದ್ಧ ನದೀಮ್ ಖಾನ್ ಕುಟುಂಬಸ್ಥರು ಕೂಡಲೇ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಮುಂದಿನ ಕ್ರಮ ಕೈಗೊಂಡಿದ್ದಾರೆ.

“ಶನಿವಾರ ಸಂಜೆ 5ರ ಸುಮಾರಿಗೆ ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಎಂದು ಹೇಳಿಕೊಂಡು ಬಂದ ನಾಲ್ವರು ಅಧಿಕಾರಿಗಳು ಅಕ್ರಮವಾಗಿ ಮನೆಗೆ ನುಗ್ಗಿದರು. ವಾರಂಟ್ ಅಥವಾ ಪೂರ್ವ ಸೂಚನೆಯಿಲ್ಲದೆ ಬಂದಿದ್ದಲ್ಲದೇ, ನಮ್ಮನ್ನು ಬೆದರಿಸಿದ್ದಾರೆ. ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನದೀಮ್ ಖಾನ್ ಅವರ ವಿರುದ್ಧ ನಮ್ಮ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 12:48 ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಅವರನ್ನು ಹುಡುಕಿಕೊಂಡು ಬಂದಿದ್ದೇವೆ ಎಂದು ಹೇಳಿದರು. ದಾಖಲೆ ಕೇಳಿದಾಗ ಆನ್‌ಲೈನ್ ಪ್ರತಿಯನ್ನು ತೋರಿಸಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಸಹೋದರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

“ದೆಹಲಿ ಪೊಲೀಶರು ಮನೆಗೆ ನುಗ್ಗಿದ ವೇಳೆ ಯಾವುದೇ ಸಮವಸ್ತ್ರದಲ್ಲಿ ಇರಲಿಲ್ಲ. 8 ಗಂಟೆ ಸುಮಾರಿಗೆ, ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ 3 ಪೊಲೀಸ್ ಅಧಿಕಾರಿಗಳು ಕೂಡ ನನ್ನ ನಿವಾಸಕ್ಕೆ ಬಂದರು. ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿಲ್ಲ ಎಂಬುದು ನಂತರ ಸ್ಪಷ್ಟವಾಯಿತು. ರಾತ್ರಿ 9 ಗಂಟೆಯವರೆಗೆ ಮನೆಯ ಮೊದಲ ಮಹಡಿಯ ಹಾಲ್‌ನಲ್ಲಿ ಕುಳಿತು ತನಿಖೆಗೆ ನದೀಮ್‌ನನ್ನು ತಮ್ಮೊಂದಿಗೆ ದೆಹಲಿಗೆ ಬರುವಂತೆ ಒತ್ತಾಯಿಸಿದ್ದರು. ಯಾವುದೇ ಸಮನ್ಸ್, ನೋಟಿಸ್, ವಾರಂಟ್ ಇಲ್ಲದಿದ್ದರೂ, ಎಸ್‌ಎಚ್‌ಒ ಮತ್ತು ಇತರ ಪೊಲೀಸ್ ಅಧಿಕಾರಿಗಳು ಮನೆಯಲ್ಲೇ ಐದು ಗಂಟೆಗಳ ಕಾಲ ನಮ್ಮನ್ನು ಬೆದರಿಸಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

“ಎಫ್ಐಆರ್‌ನಲ್ಲಿ ದಾಖಲಿಸಿಕೊಂಡಿರುವ ಎಲ್ಲ ಸೆಕ್ಷನ್‌ನ ಅಪರಾಧಗಳಿಗೆ ಮೂರು ವರ್ಷಗಳಿಗಿಂತ ಕಡಿಮೆಯಿರುವ ಶಿಕ್ಷೆಗಳಾಗಿದೆ. ಆದ್ದರಿಂದ ಇದಕ್ಕೆಲ್ಲ ನೋಟಿಸ್ ನೀಡಬೇಕಿದೆ. ಅದ್ಯಾವುದನ್ನೂ ದೆಹಲಿ ಪೊಲೀಸರು ಪಾಲಿಸಿಲ್ಲ. ಈ ಎಫ್‌ಐಆರ್ ದಾಖಲಾಗುವುದಕ್ಕೂ ಮೊದಲು, ನವೆಂಬರ್ 29ರ ತಡರಾತ್ರಿ ದೆಹಲಿಯಲ್ಲಿರುವ ಎಪಿಸಿಆರ್ ಕಚೇರಿಗೆ 20 ಪೊಲೀಸ್ ಅಧಿಕಾರಿಗಳು ನುಗ್ಗಲು ಪ್ರಯತ್ನಿಸಿದ್ದಾರೆ. ನದೀಮ್ ಮತ್ತು ನನಗೆ ಪೊಲೀಸರು ಮಾನಸಿಕ ಹಿಂಸೆ ನೀಡಿ, ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಬೆದರಿಕೆ, ಅತಿಕ್ರಮಣ, ಅಧಿಕಾರದ ದುರುಪಯೋಗ ನಡೆಸಿದ ದೆಹಲಿ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಜೀವಕ್ಕೆ ಅಪಾಯವಾಗದಂತೆ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗವಾಗದಂತೆ ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ದೂರಿನಲ್ಲಿ ನದೀಮ್ ಖಾನ್ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಮಾತನಾಡಿರುವ ಎಪಿಸಿಆರ್ ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ನಿಯಾಝ್ ಅಹ್ಮದ್, “ದೆಹಲಿ ಪೊಲೀಸರು ಈಗ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಆರೋಪಿಗಳ ಬಂಧನಕ್ಕೂ ಮೊದಲು ನೋಟಿಸ್ ನೀಡಬೇಕಿದೆ. ಅಲ್ಲದೇ, ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿ ಕೂಡ ಇದೆ. ಇದು ಯಾವುದನ್ನೂ ಅನುಸರಿಸದೆ, ಅಕ್ರಮ ಬಂಧನಕ್ಕೆ ಯತ್ನಿಸಿದ್ದಾರೆ. ಮನೆಗೆ ಬಂದವರ ಬಳಿಯಲ್ಲಿ ಐಡಿ ಕಾರ್ಡ್‌ ಕೂಡ ಇರಲಿಲ್ಲ. ಅಲ್ಲದೇ, ಯಾವುದೇ ಮಾಹಿತಿ ನೀಡದೆ ಮನೆಗೆ ನುಗ್ಗಿದ್ದಾರೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿರಲಿಲ್ಲ. ಅತಿಕ್ರಮಣ ಪ್ರವೇಶ ಮಾಡಿ, ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನದೀಮ್ ಖಾನ್ ಕುಟುಂಬಸ್ಥರು ದೂರು ನೀಡಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ” ಎಂದು ತಿಳಿಸಿದರು.

“ನದೀಮ್ ಖಾನ್ ‘ದ್ವೇಷದ ವಿರುದ್ಧ ಒಂದಾದ ನಾವೆಲ್ಲರೂ’ ಎಂಬ ಸಂಘಟನೆಯ ಪದಾಧಿಕಾರಿಯಾಗಿದ್ದು, ಭಾರತ್ ಜೋಡೋ‌ ಅಭಿಯಾನದ ರಾಷ್ಟ್ರೀಯ ಪದಾಧಿಕಾರಿಯೂ ಆಗಿದ್ದಾರೆ. ಅವರನ್ನು ದುರುದ್ದೇಶಪೂರ್ವಕವಾಗಿ ಪ್ರಕರಣಗಳಲ್ಲಿ ಸಿಲುಕಿಸಲು ಯತ್ನಿಸುತ್ತಿರುವುದು ಸ್ಪಷ್ಟ” ಎಂದು ಜಾಗೃತ ಕರ್ನಾಟಕದ ಡಾ.ವಾಸು ಎಚ್ ವಿ ಅವರು ಹೇಳಿದ್ದಾರೆ ಎಂದು ‘ಈದಿನ.ಕಾಮ್‌’ ವರದಿ ಮಾಡಿದೆ.

ದೆಹಲಿ ಪೊಲೀಸರು ಇನ್ನಷ್ಟು ಕುಖ್ಯಾತಿ ಪಡೆಯುವ ಮೊದಲು ನ್ಯಾಯಾಲಯಗಳು ಮಧ್ಯೆ ಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಪೊಲೀಸರು ಕಾನೂನು ಪಾಲಿಸದೇ ಈ ರೀತಿ ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ, ಕಾನೂನಿನ ಕುರಿತು ಜನರಿಗೆ ವಿಶ್ವಾಸ ಕುಂದುತ್ತದೆ. ನದೀಮ್ ಖಾನ್ ವಿಚಾರದಲ್ಲಿ ದೆಹಲಿ ಪೊಲೀಸರು ನಡೆದುಕೊಂಡಿರುವ ರೀತಿಯೇ ಸರಿ ಇಲ್ಲ. ಅನುಮಾನ ಉಂಟು ಮಾಡುವಂಥದ್ದು. ಈ ಹಿಂದೆ ದಿಶಾ ರವಿಯವರ ಪ್ರಕರಣದಲ್ಲೂ ಇದೇ ರೀತಿ ನಡೆದುಕೊಂಡಿದ್ದರು. ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರಿನ ಪೊಲೀಸರು ಏನೂ ಮಾಡಿರಲಿಲ್ಲ” ಎಂದು ವಕೀಲ, ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಹೇಳಿದ್ದಾರೆ.

“ನಮ್ಮದು ಒಕ್ಕೂಟ ದೇಶ; ದೆಹಲಿ ಪೊಲೀಸರು ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿದ್ದಾರೆ ಎಂದು ತಿಳಿದುಕೊಂಡು ತಮಗಿಷ್ಟ ಬಂದಂತೆ ನಡೆದುಕೊಳ್ಳಬಾರದು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ನದೀಮ್ ಹಾಗೂ ಎಪಿಸಿಆರ್‌ನವರು ದನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಗುರಿ ಮಾಡಿಕೊಳ್ಳಲಾಗಿದೆ. ಅವರನ್ನು ಬೆನ್ನತ್ತುತ್ತಿರುವುದು ಖಂಡನೀಯ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕೂಡ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು” ಎಂದು ವಿನಯ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...