Homeಚಳವಳಿಟ್ವಿಟ್ಟರ್‌ ಜಾತಿವಾದ ಮಾಡುತ್ತಿದೆ, ತಳಸಮುದಾಯಗಳನ್ನು ಕಡೆಗಣಿಸುತ್ತಿದೆ - ಪ್ರೊ.ದಿಲೀಪ್‌ ಮಂಡಲ್‌

ಟ್ವಿಟ್ಟರ್‌ ಜಾತಿವಾದ ಮಾಡುತ್ತಿದೆ, ತಳಸಮುದಾಯಗಳನ್ನು ಕಡೆಗಣಿಸುತ್ತಿದೆ – ಪ್ರೊ.ದಿಲೀಪ್‌ ಮಂಡಲ್‌

- Advertisement -
- Advertisement -

ಟ್ವಿಟ್ಟರ್‌ ಜಾತಿವಾದ ಮಾಡುತ್ತಿದ್ದು, ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದೆ ಎಂದು ಹಿರಿಯ ಪತ್ರಕರ್ತರಾದ ಪ್ರೊ.ದಿಲೀಪ್‌ ಮಂಡಲ್‌ ಆರೋಪಿಸಿದ್ದಾರೆ.

ಟ್ವಿಟ್ಟರ್‌ ಒರಿಜಿನಲ್‌ ಆದ, ಹೆಚ್ಚು ಬಳಕೆಯ ಖಾತೆಗಳನ್ನು ವೆರಿಫೈಡ್‌ ಮಾಡುತ್ತದೆ. ಅದಕ್ಕಾಗಿ ಖಾತೆಯ ಹೆಸರಿನ ಮುಂದೆ ’ಬ್ಲೂ ಟಿಕ್’ ಚಿಹ್ನೆ ಹಾಕುತ್ತದೆ. ಇದು ಪ್ರಮುಖ ವ್ಯಕ್ತಿಗಳನ್ನು ಗುರುತಿಸಲು, ಅವರ ಖಾತೆಯನ್ನು ದೃಢೀಕರಿಸಲು ಅನುವಾಗುತ್ತದೆ. ಉದಾಹರಣೆಗೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಅಥವಾ ಬಾಲಿವುಡ್‌ ತಾರೆ ಅಮೀರ್‌ ಖಾನ್‌ರವರ ಹೆಸರಿನಲ್ಲಿ ಹಲವಾರು ಖಾತೆಗಳಿದ್ದಾಗ ಜನರಿಗೆ ಗೊಂದಲವಾಗಬಾರದೆಂದು ಒರಿಜಿನಲ್‌ ಖಾತೆಗೆ ಟ್ವಿಟ್ಟರ್‌ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡಿರುತ್ತದೆ.

ಈ ವೆರಿಫೈಡ್‌ ವಿಚಾರದಲ್ಲಿ ಟ್ವಿಟ್ಟರ್‌ ಜಾತಿವಾದಿಯಾಗಿ ನಡೆದುಕೊಳ್ಳುತ್ತಿದೆ ಎಂದು ಹಲವಾರು ತಳಸಮುದಾಯದ ಚಿಂತಕರು, ಹೋರಾಟಗಾರರು ಆರೋಪಿಸಿದ್ದಾರೆ. ಇದನ್ನು ಹಿರಿಯ ಪತ್ರಕರ್ತ ಪ್ರೊ.ದಿಲೀಪ್‌ ಮಂಡಲ್‌ರವರು ಮೊದಲು ಆರಂಭಿಸಿದರು. ಜಾತಿ ತಾರತಮ್ಯದ ಹಲವಾರು ಮುಖಗಳನ್ನು ಟ್ವಿಟ್ಟರ್‌ ಮೂಲಕ ಅನಾವರಣ ಮಾಡುತ್ತಿದ್ದ ಅವರ ಖಾತೆಯನ್ನು ಟ್ವಿಟ್ಟರ್‌ ಯಾವುದೇ ಕಾರಣವಿಲ್ಲದೇ ಬ್ಲಾಕ್‌ ಮಾಡಿತು. ಆಗ ಅವರು ಟ್ವಿಟ್ಟರ್‌ ವಿರುದ್ಧ ಅಭಿಯಾನ ಆರಂಭಿಸಿದರು.

ಮೊದಲಿಗೆ ಸ್ಯಾಕ್‌ಮಣಿಸ್‌ ಮಹೇಶ್ವರಿ ಎಂಬುದಾಗಿ ಅವರು ಟ್ರೆಂಡ್‌ ಮಾಡಿದರು. ಅದನ್ನು ಟ್ವಿಟ್ಟರ್‌ ತೆಗೆದುಹಾಕಿತು. ನಂತರ ಕ್ಯಾಸ್ಟಿಸ್ಟ್‌ ಟ್ವಿಟ್ಟರ್‌ ಎಂದು ಆನಂತರ ಜೈಭೀಮ್‌ ಟ್ವಿಟ್ಟರ್‌ ಎಂದು ಟ್ರೆಂಡ್‌ ಮಾಡಿ ಲಕ್ಷಾಂತರ ಜನರ ಗಮನಸೆಳೆದರು. ಇದಾದ ನಂತರ ಟ್ವಿಟ್ಟರ್‌ ಎಚ್ಚೆತ್ತುಕೊಂಡು ಅವರ ಅಕೌಂಟ್‌ಗೆ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡಿತು.

ಆಗ ಅವರು ಕೇವಲ ನನ್ನೊಬ್ಬನದು ಮಾತ್ರವಲ್ಲದೇ ದೇಶದ ಎಲ್ಲಾ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಟ್ವಿಟ್ಟರ್‌ ಖಾತೆಗಳಿಗೂ ವೆರಿಫೈಡ್‌ ಎಂದು ’ಬ್ಲೂ ಟಿಕ್’ ಚಿಹ್ನೆ ನೀಡುವಂತೆ ಆಗ್ರಹಿಸಿದರು. #verifySCSTOBCMinority ಹ್ಯಾಷ್‌ಟ್ಯಾಗ್‌ ನೀಡಿದರು. ಆನಂತರ ಈ ವಿಚಾರವಾಗಿ ಇಂದು, ಭೀಮ್ ಆರ್ಮಿ ಮುಂಬೈ ತಂಡವು ಟ್ವಿಟ್ಟರ್ ಇಂಡಿಯಾ ವರ್ಣಭೇದ ನೀತಿಯ ವಿರುದ್ಧ ಪ್ರತಿಭಟನೆಯನ್ನು ನಡೆಸಿ ಇಡೀದಿನ ಟ್ವಟ್ಟರ್‌ ಕಚೇರಿಯನ್ನು ಬಂದ್‌ಮಾಡಿತ್ತು. ಆಗ ಟ್ವಿಟ್ಟರ್‌ನವರು ಭೀಮ್‌ ಆರ್ಮಿ ಸಂಘಟಕರೊಡನೆ ಸಭೆ ಕರೆದಿದ್ದರು.

ಇದನ್ನೂ ಓದಿ: ’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ…

ಪಾ. ರಂಜಿತ್‌ ಎಂಬ ತಮಿಳು ನಿರ್ದೇಶಕರು ಕಾಲ ಮತ್ತು ಕಬಾಲಿಯಂತಹ ಸಾವಿರಾರು ಕೋಟಿ ಬಂಡವಾಳದ ಅದ್ಭುತ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಭಾರತದ ಅತ್ಯಂತ ಯಶಸ್ವಿ ಚಿತ್ರಗಳ ನಿರ್ದೇಶಕರಾಗಿದ್ದು, ಟ್ವಿಟ್ಟರ್‌ನಲ್ಲಿ 8 ಲಕ್ಷಕ್ಕೂ ಹೆಚ್ಚು ಅನುಯಾಯಿಗಳಳನ್ನು ಹೊಂದಿರುವ ಅಂಬೇಡ್ಕರೈಟ್ ಆಗಿದ್ದಾರೆ. ಅವರ ಖಾತೆಯನ್ನು ವೈರಫೈ ಮಾಡಿಲ್ಲ ಏಕೆ ಎಂದು ಟ್ವಿಟರ್ ಇಂಡಿಯಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅದೇ ರೀತಿಯಾಗಿ ನೂರಾರು ಜನರ ಉದಾಹರಣೆಯನ್ನು ದಿಲೀಪ್‌ ಮಂಡಲ್‌ರವರು ಟ್ವಿಟ್ಟರ್‌ನಲ್ಲಿ ಹೆಸರಿಸಿದ್ದಾರೆ. ಕಾಕಾವಾಣಿ ಎಂಬುವವರು ಒಂದೂವರೆ ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಟ್ರೈಬಲ್‌ ಆರ್ಮಿ 12ಸಾವರ ಅನುಯಾಯಿಗಳನ್ನು ಹೊಂದಿದೆ. ಜೈಭೀಮ್‌ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್‌ ರಾವಣ್‌ರವರು 67 ಸಾವಿರ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಇಂತಹ ಅಸಂಖ್ಯ ತಳಸಮುದಾಯದವರ ಟ್ವಿಟ್ಟರ್‌ ಅಕೌಂಟ್‌ ವೆರಿಫೈ ಆಗಿಲ್ಲ. ಆದರೆ ಕೇವಲ 27 ಜನ ಫಾಲೋವರ್ಸ್‌ಗಳನ್ನು ಹೊಂದಿರುವ ಜೈ ಶಾ ಅಕೌಂಟ್‌ ವೈರಿಫೈ ಆಗಿದೆ. 877 ಫಾಲೋವರ್ಸ್‌ಗಳನ್ನು ಹೊಂದಿರುವ ಹಿಂದೂ ವಿಶ್ವ ಎಂಬುವವರ ಅಕೌಂಟ್‌ ವರಿಫೈ ಆಗಲು ಕಾರಣವೇನು? ಎಂದು ಕಿಡಿಕಾರಿದ್ದಾರೆ.

ಇದು ಕೇವಲ ವೆರಿಫೈ ವಿಷಯ ಮಾತ್ರವಲ್ಲ. ಟ್ವಿಟ್ಟರ್‌ನಲ್ಲಿ ತಳಸಮುದಾಯ ವಿಷಯ, ಸುದ್ದಿಗಳನ್ನು, ಬರಹಗಳನ್ನು ಸಹ ಹೆಚ್ಚು ಜನರಿಗೆ ತಲುಪದಂತೆ ಟ್ವಿಟ್ಟರ್‌ ತಡಯುತ್ತಿದೆ ಎಂದು ದಿಲೀಪ್‌ ಮಂಡಲ್‌ರವರ ಆರೋಪಿಸಿದ್ದಾರೆ. ಇದಕ್ಕೆ ಟ್ವಿಟ್ಟರ್‌ ಇಂಡಿಯಾದ ಆಯಾಕಟ್ಟಿಯ ಹುದ್ದೆಗಳಲ್ಲಿ ಕುಳಿತಿರುವ ಜಾತಿವಾದಿಗಳೇ ಕಾರಣ ಎಂದು ದೂರಿದ್ದಾರೆ.

ಇದ್ಯಾವುದಕ್ಕೂ ಟ್ವಿಟ್ಟರ್‌ ಬಳಿ ಉತ್ತರವಿಲ್ಲ. ಮುಕ್ತ ಮತ್ತ ಸ್ವತಂತ್ರ ಎಂದು ಭಾವಿಸುವ ಸೋಷಿಯಲ್‌ ಫ್ಲಾಟ್‌ಫಾರಂಗಳು ಸಹ ಹೇಗೆ ಜಾತಿವಾದಿಗಳಾಗಿವೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ. ಹಾಗಾಗಿ ಇದರ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ದಿಲೀಪ್‌ ಮಂಡಲ್‌ ಹೇಳಿದ್ದಾರೆ.

ಈ ಹಿಂದೆಯೂ ಸಹ 7 ಜನ ಮಹಿಳೆಯರೊಂದಿಗೆ ಟ್ವಿಟ್ಟರ್‌ ಸಿಇಓ ಸಭೆ ಮಾಡುವಾಗ ಸ್ಮಾಶ್ ಬ್ರಾಹ್ಮಿನಿಕಲ್ ಪೆಟ್ರಿಯಾರ್ಕಿ ಎಂಬ ಚಿತ್ರ ನೀಡಿದಾಗ ದೊಡ್ಡ ವಿವಾದವಾಗಿತ್ತು. ಅದು ನಿಜ ಎಂಬುದು ಪದೇ ಪದೇ ಸಾಬೀತಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....