Homeಮುಖಪುಟ"ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ 'ಸಂವಿಧಾನಕ್ಕೆ ಅಪಚಾರ'ವೆಸಗಿದ ನ್ಯಾ. ಚಂದ್ರಚೂಡ್‌" : ದುಷ್ಯಂತ್ ದವೆ

“ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

- Advertisement -
- Advertisement -

ಹಿರಿಯ ಪತ್ರಕರ್ತ ಕರಣ ತಾಪರ್ ಅವರು ‘ದಿ ವೈರ್‌’ ಸುದ್ದಿ ಮಾಧ್ಯಮಕ್ಕಾಗಿ ನಡೆಸಿದ ಸಂದರ್ಶನದಲ್ಲಿ ದೇಶದ ಅಗ್ರಗಣ್ಯ ವಕೀಲರಲ್ಲಿ ಒಬ್ಬರು ಹಾಗೂ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್‌ನ (ವಕೀಲರ ಸಂಘ) ಮಾಜಿ ಅಧ್ಯಕ್ಷ ದುಷ್ಯಂತ್ ದವೆ ಕಣ್ಣೀರಿಟ್ಟಿದ್ದಾರೆ.

ಸಂದರ್ಶನದ ಕೊನೆಯಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ ವಿರುದ್ದ ಅಸಮಾಧಾನ ಹೊರಹಾಕಿದ ದವೆ, “ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಚಂದ್ರಚೂಡ್ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ಕಣ್ಣೀರು ಹಾಕಿದ್ದಾರೆ.

ಸಂದರ್ಶನದಲ್ಲಿ “ನಿವೃತ್ತ ಸಿಜೆಐ ಚಂದ್ರಚೂಡ್ ಅವರು ‘ಯಾರೋ ಹೇಳಿದಂತೆ ನಡೆಯುತ್ತಿದ್ದಾರೆ’ ಎಂದು ದವೆ ಹೇಳಿದರು. ಆಗ ಕರಣ್ ತಾಪರ್ “ಇದರರ್ಥ ಆಡಳಿತರೂಢ ಬಿಜೆಪಿ, ಮೋದಿಯೇ?” ಎಂದು ಮರು ಪ್ರಶ್ನೆ ಹಾಕಿದರು. ಅದಕ್ಕೆ ಉತ್ತರಿಸಿದ ದವೆ, “ಆ ಬಗ್ಗೆ ಸಂದೇಹ ಬೇಡ. ಮೋದಿ ಜೊತೆ ಸೇರಿ ಚಂದ್ರಚೂಡ್ ಅವರು ‘ಆರತಿ ಮಾಡಿರುವುದರಿಂದ, ದೇವರ ಕೃಪೆಯಿಂದ ಆಯೋಧ್ಯೆ ಸಮಸ್ಯೆ ಇತ್ಯರ್ಥವಾಯಿತು ಎಂದು ಹೇಳಿರುವುದರಿಂದ ಇದು ಸಾಬೀತಾಗಿದೆ” ಎಂದಿದ್ದಾರೆ.

“ನಾನು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ. ನಾನು ಚಿಂತಿತನಾಗಿದ್ದೇನೆ. ಈ ಘಟನೆಗಳು ನನ್ನ ಮೇಲೆ ಇಷ್ಟೊಂದು ಪರಿಣಾಮ ಬೀರುತ್ತಿದ್ದರೆ, ಅಲ್ಪ ಸಂಖ್ಯಾತ ಸಮುದಾಯಗಳಿಗೆ ಸೇರಿದವರ ಮೇಲೆ ಎಂತಹ ಪರಿಣಾಮ ಬೀರುತ್ತಿರಬಹುದು? ಈ ದೇಶದ ಪ್ರಸ್ತುತ ಸನ್ನಿವೇಶಗಳ ಬಗ್ಗೆ ಯಾರೂ ಏಕೆ ಏನೂ ಮಾತನಾಡುತ್ತಿಲ್ಲ? ಎಲ್ಲರೂ ಕೇಳುತ್ತಾರೆ ನೀನು ಏಕೆ ಅದರಲ್ಲಿ ಕೈ ಹಾಕುತ್ತಿಯಾ? ಎಂದು. ಇದು ನನ್ನ ದೇಶ, ನಾನು ಸುಮ್ಮನಿರಲು ಸಾಧ್ಯವಿಲ್ಲ” ಎಂದು ದವೆ ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರಸ್ತಕ ಪರಿಸ್ಥಿತಿ ಮತ್ತು ಮಸೀದಿಯ ಅಡಿಯಲ್ಲಿ ಮಂದಿರ ಹುಡುಕುವ ರಾಜಕೀಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ದವೆ, ” ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರ ಮತ್ತು ಮುಸ್ಲಿಂ ಯುವಕರ ಹತ್ಯೆಗೆ ಮಾಜಿ ಸಿಜೆಐ ಡಿ.ವೈ ಚಂದ್ರಚೂಡ್ ಅವರೇ ನೇರ ಹೊಣೆ” ಎಂದು ಆರೋಪಿಸಿದ್ದಾರೆ.

“ಚಂದ್ರಚೂಡ್ ಮತ್ತು ಅವರ ಸಹೋದ್ಯೋಗಿಗಳು ಈ ಹಿಂದಿನ ಸುಪ್ರೀಂ ಕೋರ್ಟ್ ಆದೇಶಗಳನ್ನು ಧಿಕ್ಕರಿಸಿದ್ದಾರೆ. ಅವರು ಕಾನೂನಿನ ನಿಯಮವನ್ನು, ಅಂದರೆ ‘ರೂಲ್ ಆಫ್ ಲಾ’ ವನ್ನು ಮುರಿದಿಲ್ವಾ?” ಎಂದು ದವೆ ಪ್ರಶ್ನಿಸಿದ್ದಾರೆ. “ಚಂದ್ರಚೂಡ್ ಮುಸ್ಲಿಮರ ಮೇಲೆ ದಬ್ಬಾಳಿಕೆ ಮಾಡುವವರಿಗೆ ಮತ್ತು ಮಂದಿರ ಮಸೀದಿ ವಿಭಜಿಸಿ ಲಾಭ ಪಡೆಯುವವರಿಗೆ ಬೇಕಾದಂತೆ ನಡೆದುಕೊಂಡಿದ್ದಾರೆ” ಎಂದು ದವೆ ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರ ಕಾರ್ಯವೈಖರಿ ಮತ್ತು ಮೇ 2022ರ ಜ್ಞಾನವ್ಯಾಪಿ ಮಸೀದಿ ಕುರಿತ ಅವರ ತೀರ್ಪನ್ನು ದವೆ ನೇರವಾಗಿ ಟೀಕಿಸಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ 2022ರಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ದವೆ ಹೇಳಿದ್ದಾರೆ.

“ಆರಾಧನಾ ಸ್ಥಳಗಳ ಕಾಯ್ದೆ, ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ. 1947ರಲ್ಲಿ ಸ್ವಾತಂತ್ರ್ಯ ಬರುವಾಗ ಇದ್ದ ರೀತಿಯಲ್ಲೇ ಇರಬೇಕು ಎನ್ನುತ್ತದೆ. ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ ಎನ್ನುವಾಗ, ಅದನ್ನು ಸಮೀಕ್ಷೆ ನಡೆಸಿ ಹಿನ್ನಲೆ ತಿಳಿಯುವ ಅಗತ್ಯವೇನಿದೆ? ಎಂದು ದವೆ ಪ್ರಶ್ನಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆಯ ಮೂಲ ಉದ್ದೇಶವನ್ನೇ ತನ್ನ ಅಭಿಪ್ರಾಯದ ಮೂಲಕ ಚಂದ್ರಚೂಡ್ ಒಡೆದು ಹಾಕಿದ್ದಾರೆ” ಎಂದು ದವೆ ಕಿಡಿಕಾರಿದ್ದಾರೆ.

“ಚಂದ್ರಚೂಡ್ ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪು ಕೂಡ ಆರಾಧನಾ ಸ್ಥಳಗಳ ಕಾಯ್ದೆ1991ನ್ನು ಶ್ಲಾಘಿಸಿದೆ. ಈ ಕಾಯ್ದೆ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ರಕ್ಷಿಸುತ್ತದೆ ಎಂದು ಹೇಳಿದೆ. ಆದರೆ, ಅದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ನೀಡಿರುವ ಮೌಖಿಕ ಹೇಳಿಕೆ, ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪಿನ ಪೀಠದ ಹೇಳಿಕೆಗೆ ನೇರ ವಿರುದ್ದವಾಗಿದೆ” ಎಂದು ದವೆ ತಿಳಿಸಿದ್ದಾರೆ.

ಸಂಭಾಲ್ ಹಿಂಸಾಚಾರಕ್ಕೆ ನ್ಯಾಯಾಂಗ ಹೊಣೆಯಲ್ಲವೇ? ಎಂದು ದವೆ ಪ್ರಶ್ನಿಸಿದ್ದಾರೆ. ಜ್ಞಾನವ್ಯಾಪಿ ಪ್ರಕರಣದಲ್ಲಿ ಇತರ ನ್ಯಾಯಾಧೀಶರು ಚಂದ್ರಚೂಡ್ ಅಭಿಪ್ರಾಯದ ವಿರುದ್ದ ನಿಲ್ಲಬೇಕಿತ್ತು. ಚಂದ್ರಚೂಡ್ ಅಪ್ರಮಾಣಿಕ ವ್ಯಾಖ್ಯಾನ ನೀಡಿದ್ದಾರೆ. ಅವು ಹಾನಿಕರ ಮತ್ತು ಉದ್ದೇಶಪೂರ್ವಕ ಎಂದು ದವೆ ಆರೋಪಿಸಿದ್ದಾರೆ.

ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿಗಳನ್ನು ಏಕೆ ತಿರಸ್ಕರಿಸಿಲ್ಲ? ಎಂದು ದವೆ ಪ್ರಶ್ನಿಸಿದ್ದಾರೆ. ಅಯೋಧ್ಯೆ ತೀರ್ಪಿನಲ್ಲಿ ಪರೋಕ್ಷವಾಗಿ ನ್ಯಾಯಾಲಯ ಈ ಕಾಯ್ದೆಯನ್ನು ಎತ್ತಿ ಹಿಡಿದಿತ್ತು ಎಂದು ದವೆ ಪುನರುಚ್ಚರಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆ-1991 ಅನ್ನು ಸಂಸತ್ತಿನಲ್ಲೇ ಹಿಂಪಡೆಯಲು ದವೆ ಬಿಜೆಪಿಗೆ ನೇರ ಸವಾಲು ಹಾಕಿದ್ದಾರೆ. ಅದಕ್ಕೆ ಬಿಜೆಪಿಯ ಮಿತ್ರಪಕ್ಷಗಳೇ ಬೆಂಬಲಿಸುವುದಿಲ್ಲ ಎಂದಿದ್ದಾರೆ.

“ಹೊಸ ಸಿಜೆಐ ಖನ್ನಾ ನೇತೃತ್ವದಲ್ಲಿ ಹೊಸ ರೂಪದಲ್ಲಿ ಸುಪ್ರೀಂ ಕೋರ್ಟ್ ನಡೆಯಲಿದೆ ಎಂದು ದವೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂವಿಧಾನವನ್ನು ಅವರು ಗೌರವಿಸುತ್ತಾರೆ. 2014ರಿಂದ 2024ರ ನಡುವೆ ನಡೆದಿರುವ ತಪ್ಪುಗಳನ್ನು ಅವರು ಸರಿಪಡಿಸುತ್ತಾರೆ. ನ್ಯಾಯಮೂರ್ತಿ ಖನ್ನಾ ಅವರ 7 ತಿಂಗಳ ಅಲ್ವಾವಧಿಯ ಅಧಿಕಾರದ ಬಳಿಕ, ಅನೇಕ ಒಳ್ಳೆಯ ನ್ಯಾಯಾಧೀಶರು, ಮುಖ್ಯ ನ್ಯಾಯಮೂರ್ತಿಗಳು ಬರುತ್ತಿದ್ದಾರೆ. ನನಗೆ ಅವರ ಮೇಲೆ ಭರವಸೆ ಇದೆ” ಎಂದು ದೆವ ಹೇಳಿದ್ದಾರೆ.

“ನಾನು ಹೆಮ್ಮೆಯ ಹಿಂದೂ, ನಾನೂ ಬ್ರಾಹ್ಮಣ. ನಾನು ನನ್ನ ದೇವರುಗಳನ್ನು ಪೂಜಿಸುತ್ತೇನೆ. ಆದರೆ, ನಾನು ಇತರ ಧರ್ಮಗಳನ್ನು ಗೌರವಿಸುತ್ತೇನೆ. ನಾವೀಗ ಮಂದಿರ-ಮಸೀದಿ ಅನ್ನುವುದನ್ನು ನಿಲ್ಲಿಸದಿದ್ದರೆ, ದೇಶ ಹೊತ್ತಿ ಉರಿಯಲಿದೆ” ಎಂದು ದವೆ ಎಚ್ಚರಿಸಿದ್ದಾರೆ.

“ಸಂಭಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ. ಈ ರೀತಿ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು. ನಾನು ಇನ್ನೊಂದು ಪಾಕಿಸ್ತಾನ, ಬಾಂಗ್ಲಾದೇಶ ಆಗಲು ಬಯಸುವುದಿಲ್ಲ. ನಾವು ನಮ್ಮ ದೇಶದಲ್ಲಿ ಧಾರ್ಮಿಕ ಸಹಿಷ್ಣುತೆ ಬಯಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ಪೂಜಾಸ್ಥಳಗಳ ಕಾಯ್ದೆ ಕುರಿತು ಚಂದ್ರಚೂಡ್ ಹೇಳಿಕೆ ಎಲ್ಲಾ ವಿವಾದಗಳಿಗೆ ಮೂಲ : ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...