Homeಮುಖಪುಟ"ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ 'ಸಂವಿಧಾನಕ್ಕೆ ಅಪಚಾರ'ವೆಸಗಿದ ನ್ಯಾ. ಚಂದ್ರಚೂಡ್‌" : ದುಷ್ಯಂತ್ ದವೆ

“ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

- Advertisement -
- Advertisement -

ಹಿರಿಯ ಪತ್ರಕರ್ತ ಕರಣ ತಾಪರ್ ಅವರು ‘ದಿ ವೈರ್‌’ ಸುದ್ದಿ ಮಾಧ್ಯಮಕ್ಕಾಗಿ ನಡೆಸಿದ ಸಂದರ್ಶನದಲ್ಲಿ ದೇಶದ ಅಗ್ರಗಣ್ಯ ವಕೀಲರಲ್ಲಿ ಒಬ್ಬರು ಹಾಗೂ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್‌ನ (ವಕೀಲರ ಸಂಘ) ಮಾಜಿ ಅಧ್ಯಕ್ಷ ದುಷ್ಯಂತ್ ದವೆ ಕಣ್ಣೀರಿಟ್ಟಿದ್ದಾರೆ.

ಸಂದರ್ಶನದ ಕೊನೆಯಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ ವಿರುದ್ದ ಅಸಮಾಧಾನ ಹೊರಹಾಕಿದ ದವೆ, “ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಚಂದ್ರಚೂಡ್ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ಕಣ್ಣೀರು ಹಾಕಿದ್ದಾರೆ.

ಸಂದರ್ಶನದಲ್ಲಿ “ನಿವೃತ್ತ ಸಿಜೆಐ ಚಂದ್ರಚೂಡ್ ಅವರು ‘ಯಾರೋ ಹೇಳಿದಂತೆ ನಡೆಯುತ್ತಿದ್ದಾರೆ’ ಎಂದು ದವೆ ಹೇಳಿದರು. ಆಗ ಕರಣ್ ತಾಪರ್ “ಇದರರ್ಥ ಆಡಳಿತರೂಢ ಬಿಜೆಪಿ, ಮೋದಿಯೇ?” ಎಂದು ಮರು ಪ್ರಶ್ನೆ ಹಾಕಿದರು. ಅದಕ್ಕೆ ಉತ್ತರಿಸಿದ ದವೆ, “ಆ ಬಗ್ಗೆ ಸಂದೇಹ ಬೇಡ. ಮೋದಿ ಜೊತೆ ಸೇರಿ ಚಂದ್ರಚೂಡ್ ಅವರು ‘ಆರತಿ ಮಾಡಿರುವುದರಿಂದ, ದೇವರ ಕೃಪೆಯಿಂದ ಆಯೋಧ್ಯೆ ಸಮಸ್ಯೆ ಇತ್ಯರ್ಥವಾಯಿತು ಎಂದು ಹೇಳಿರುವುದರಿಂದ ಇದು ಸಾಬೀತಾಗಿದೆ” ಎಂದಿದ್ದಾರೆ.

“ನಾನು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ. ನಾನು ಚಿಂತಿತನಾಗಿದ್ದೇನೆ. ಈ ಘಟನೆಗಳು ನನ್ನ ಮೇಲೆ ಇಷ್ಟೊಂದು ಪರಿಣಾಮ ಬೀರುತ್ತಿದ್ದರೆ, ಅಲ್ಪ ಸಂಖ್ಯಾತ ಸಮುದಾಯಗಳಿಗೆ ಸೇರಿದವರ ಮೇಲೆ ಎಂತಹ ಪರಿಣಾಮ ಬೀರುತ್ತಿರಬಹುದು? ಈ ದೇಶದ ಪ್ರಸ್ತುತ ಸನ್ನಿವೇಶಗಳ ಬಗ್ಗೆ ಯಾರೂ ಏಕೆ ಏನೂ ಮಾತನಾಡುತ್ತಿಲ್ಲ? ಎಲ್ಲರೂ ಕೇಳುತ್ತಾರೆ ನೀನು ಏಕೆ ಅದರಲ್ಲಿ ಕೈ ಹಾಕುತ್ತಿಯಾ? ಎಂದು. ಇದು ನನ್ನ ದೇಶ, ನಾನು ಸುಮ್ಮನಿರಲು ಸಾಧ್ಯವಿಲ್ಲ” ಎಂದು ದವೆ ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರಸ್ತಕ ಪರಿಸ್ಥಿತಿ ಮತ್ತು ಮಸೀದಿಯ ಅಡಿಯಲ್ಲಿ ಮಂದಿರ ಹುಡುಕುವ ರಾಜಕೀಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ದವೆ, ” ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರ ಮತ್ತು ಮುಸ್ಲಿಂ ಯುವಕರ ಹತ್ಯೆಗೆ ಮಾಜಿ ಸಿಜೆಐ ಡಿ.ವೈ ಚಂದ್ರಚೂಡ್ ಅವರೇ ನೇರ ಹೊಣೆ” ಎಂದು ಆರೋಪಿಸಿದ್ದಾರೆ.

“ಚಂದ್ರಚೂಡ್ ಮತ್ತು ಅವರ ಸಹೋದ್ಯೋಗಿಗಳು ಈ ಹಿಂದಿನ ಸುಪ್ರೀಂ ಕೋರ್ಟ್ ಆದೇಶಗಳನ್ನು ಧಿಕ್ಕರಿಸಿದ್ದಾರೆ. ಅವರು ಕಾನೂನಿನ ನಿಯಮವನ್ನು, ಅಂದರೆ ‘ರೂಲ್ ಆಫ್ ಲಾ’ ವನ್ನು ಮುರಿದಿಲ್ವಾ?” ಎಂದು ದವೆ ಪ್ರಶ್ನಿಸಿದ್ದಾರೆ. “ಚಂದ್ರಚೂಡ್ ಮುಸ್ಲಿಮರ ಮೇಲೆ ದಬ್ಬಾಳಿಕೆ ಮಾಡುವವರಿಗೆ ಮತ್ತು ಮಂದಿರ ಮಸೀದಿ ವಿಭಜಿಸಿ ಲಾಭ ಪಡೆಯುವವರಿಗೆ ಬೇಕಾದಂತೆ ನಡೆದುಕೊಂಡಿದ್ದಾರೆ” ಎಂದು ದವೆ ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರ ಕಾರ್ಯವೈಖರಿ ಮತ್ತು ಮೇ 2022ರ ಜ್ಞಾನವ್ಯಾಪಿ ಮಸೀದಿ ಕುರಿತ ಅವರ ತೀರ್ಪನ್ನು ದವೆ ನೇರವಾಗಿ ಟೀಕಿಸಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ 2022ರಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ದವೆ ಹೇಳಿದ್ದಾರೆ.

“ಆರಾಧನಾ ಸ್ಥಳಗಳ ಕಾಯ್ದೆ, ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ. 1947ರಲ್ಲಿ ಸ್ವಾತಂತ್ರ್ಯ ಬರುವಾಗ ಇದ್ದ ರೀತಿಯಲ್ಲೇ ಇರಬೇಕು ಎನ್ನುತ್ತದೆ. ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ ಎನ್ನುವಾಗ, ಅದನ್ನು ಸಮೀಕ್ಷೆ ನಡೆಸಿ ಹಿನ್ನಲೆ ತಿಳಿಯುವ ಅಗತ್ಯವೇನಿದೆ? ಎಂದು ದವೆ ಪ್ರಶ್ನಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆಯ ಮೂಲ ಉದ್ದೇಶವನ್ನೇ ತನ್ನ ಅಭಿಪ್ರಾಯದ ಮೂಲಕ ಚಂದ್ರಚೂಡ್ ಒಡೆದು ಹಾಕಿದ್ದಾರೆ” ಎಂದು ದವೆ ಕಿಡಿಕಾರಿದ್ದಾರೆ.

“ಚಂದ್ರಚೂಡ್ ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪು ಕೂಡ ಆರಾಧನಾ ಸ್ಥಳಗಳ ಕಾಯ್ದೆ1991ನ್ನು ಶ್ಲಾಘಿಸಿದೆ. ಈ ಕಾಯ್ದೆ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ರಕ್ಷಿಸುತ್ತದೆ ಎಂದು ಹೇಳಿದೆ. ಆದರೆ, ಅದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ನೀಡಿರುವ ಮೌಖಿಕ ಹೇಳಿಕೆ, ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪಿನ ಪೀಠದ ಹೇಳಿಕೆಗೆ ನೇರ ವಿರುದ್ದವಾಗಿದೆ” ಎಂದು ದವೆ ತಿಳಿಸಿದ್ದಾರೆ.

ಸಂಭಾಲ್ ಹಿಂಸಾಚಾರಕ್ಕೆ ನ್ಯಾಯಾಂಗ ಹೊಣೆಯಲ್ಲವೇ? ಎಂದು ದವೆ ಪ್ರಶ್ನಿಸಿದ್ದಾರೆ. ಜ್ಞಾನವ್ಯಾಪಿ ಪ್ರಕರಣದಲ್ಲಿ ಇತರ ನ್ಯಾಯಾಧೀಶರು ಚಂದ್ರಚೂಡ್ ಅಭಿಪ್ರಾಯದ ವಿರುದ್ದ ನಿಲ್ಲಬೇಕಿತ್ತು. ಚಂದ್ರಚೂಡ್ ಅಪ್ರಮಾಣಿಕ ವ್ಯಾಖ್ಯಾನ ನೀಡಿದ್ದಾರೆ. ಅವು ಹಾನಿಕರ ಮತ್ತು ಉದ್ದೇಶಪೂರ್ವಕ ಎಂದು ದವೆ ಆರೋಪಿಸಿದ್ದಾರೆ.

ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿಗಳನ್ನು ಏಕೆ ತಿರಸ್ಕರಿಸಿಲ್ಲ? ಎಂದು ದವೆ ಪ್ರಶ್ನಿಸಿದ್ದಾರೆ. ಅಯೋಧ್ಯೆ ತೀರ್ಪಿನಲ್ಲಿ ಪರೋಕ್ಷವಾಗಿ ನ್ಯಾಯಾಲಯ ಈ ಕಾಯ್ದೆಯನ್ನು ಎತ್ತಿ ಹಿಡಿದಿತ್ತು ಎಂದು ದವೆ ಪುನರುಚ್ಚರಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆ-1991 ಅನ್ನು ಸಂಸತ್ತಿನಲ್ಲೇ ಹಿಂಪಡೆಯಲು ದವೆ ಬಿಜೆಪಿಗೆ ನೇರ ಸವಾಲು ಹಾಕಿದ್ದಾರೆ. ಅದಕ್ಕೆ ಬಿಜೆಪಿಯ ಮಿತ್ರಪಕ್ಷಗಳೇ ಬೆಂಬಲಿಸುವುದಿಲ್ಲ ಎಂದಿದ್ದಾರೆ.

“ಹೊಸ ಸಿಜೆಐ ಖನ್ನಾ ನೇತೃತ್ವದಲ್ಲಿ ಹೊಸ ರೂಪದಲ್ಲಿ ಸುಪ್ರೀಂ ಕೋರ್ಟ್ ನಡೆಯಲಿದೆ ಎಂದು ದವೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂವಿಧಾನವನ್ನು ಅವರು ಗೌರವಿಸುತ್ತಾರೆ. 2014ರಿಂದ 2024ರ ನಡುವೆ ನಡೆದಿರುವ ತಪ್ಪುಗಳನ್ನು ಅವರು ಸರಿಪಡಿಸುತ್ತಾರೆ. ನ್ಯಾಯಮೂರ್ತಿ ಖನ್ನಾ ಅವರ 7 ತಿಂಗಳ ಅಲ್ವಾವಧಿಯ ಅಧಿಕಾರದ ಬಳಿಕ, ಅನೇಕ ಒಳ್ಳೆಯ ನ್ಯಾಯಾಧೀಶರು, ಮುಖ್ಯ ನ್ಯಾಯಮೂರ್ತಿಗಳು ಬರುತ್ತಿದ್ದಾರೆ. ನನಗೆ ಅವರ ಮೇಲೆ ಭರವಸೆ ಇದೆ” ಎಂದು ದೆವ ಹೇಳಿದ್ದಾರೆ.

“ನಾನು ಹೆಮ್ಮೆಯ ಹಿಂದೂ, ನಾನೂ ಬ್ರಾಹ್ಮಣ. ನಾನು ನನ್ನ ದೇವರುಗಳನ್ನು ಪೂಜಿಸುತ್ತೇನೆ. ಆದರೆ, ನಾನು ಇತರ ಧರ್ಮಗಳನ್ನು ಗೌರವಿಸುತ್ತೇನೆ. ನಾವೀಗ ಮಂದಿರ-ಮಸೀದಿ ಅನ್ನುವುದನ್ನು ನಿಲ್ಲಿಸದಿದ್ದರೆ, ದೇಶ ಹೊತ್ತಿ ಉರಿಯಲಿದೆ” ಎಂದು ದವೆ ಎಚ್ಚರಿಸಿದ್ದಾರೆ.

“ಸಂಭಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ. ಈ ರೀತಿ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು. ನಾನು ಇನ್ನೊಂದು ಪಾಕಿಸ್ತಾನ, ಬಾಂಗ್ಲಾದೇಶ ಆಗಲು ಬಯಸುವುದಿಲ್ಲ. ನಾವು ನಮ್ಮ ದೇಶದಲ್ಲಿ ಧಾರ್ಮಿಕ ಸಹಿಷ್ಣುತೆ ಬಯಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ಪೂಜಾಸ್ಥಳಗಳ ಕಾಯ್ದೆ ಕುರಿತು ಚಂದ್ರಚೂಡ್ ಹೇಳಿಕೆ ಎಲ್ಲಾ ವಿವಾದಗಳಿಗೆ ಮೂಲ : ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...