Homeಅಂತರಾಷ್ಟ್ರೀಯಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಗುಂಪು ಘರ್ಷಣೆ: 100ಕ್ಕೂ ಹೆಚ್ಚು ಜನರು ಸಾವು

ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಗುಂಪು ಘರ್ಷಣೆ: 100ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಕೊನಕ್ರಿ, ಗಿನಿಯಾ: ಪಶ್ಚಿಮ ಆಫ್ರಿಕಾದ  ಗಿನಿಯಾದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ನಡುವೆ  ಗುಂಪು ಘರ್ಷಣೆ ನಡೆದ ಪರಿಣಾಮ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಭಾನುವಾರ  ವರದಿಯಾಗಿದೆ.

ಗಿನಿಯಾದ ಎರಡನೇ ಅತಿದೊಡ್ಡ ನಗರವಾದ ಎನ್’ಜೆರೆಕೋರ್‌ನಲ್ಲಿ ನಡೆದ ಫುಟ್‌ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವಿನ ಘರ್ಷಣೆಯಲ್ಲಿ ಡಜನ್ ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

ಅನಾಮಧೇಯ ವೈದ್ಯರೊಬ್ಬರು ಮಾಧ್ಯಮವೊಂದಕ್ಕೆ ಮಾತನಾಡಿ, ಆಸ್ಪತ್ರೆಯಲ್ಲಿ ಕಣ್ಣು ಹಾಯಿಸಿದಷ್ಟು ದೂರದಲ್ಲಿ ಶವಗಳ ಸಾಲುಗಳಿವೆ. ಇತರ ದೇಹಗಳು ಹಜಾರದಲ್ಲಿ ನೆಲದ ಮೇಲೆ ಬಿದ್ದಿವೆ, ಶವಾಗಾರ ತುಂಬಿದೆ. ಸುಮಾರು 100ಕ್ಕೂ ಮಂದಿ ಸತ್ತಿದ್ದಾರೆ  ಎಂದು ಹೇಳಿದ್ದಾರೆ.

ಇದೆಲ್ಲವೂ ರೆಫರಿಯವರ ವಿವಾದಾತ್ಮಕ ನಿರ್ಧಾರದಿಂದ ಪ್ರಾರಂಭವಾಯಿತು. ನಂತರ ಅಭಿಮಾನಿಗಳು ಕ್ರೀಡಾಂಗಣವನ್ನು ಆಕ್ರಮಿಸಿದರು  ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ವೀಡಿಯೋಗಳನ್ನು ತಕ್ಷಣವೇ ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ. ಪಂದ್ಯದ ಹೊರಗೆ ಬೀದಿಯಲ್ಲಿ ಅವ್ಯವಸ್ಥೆಯ ದೃಶ್ಯಗಳು ಮತ್ತು ಹಲವಾರು ಮೃತ ದೇಹಗಳು ನೆಲದ ಮೇಲೆ ಬಿದ್ದಿರುವುದು ಕಾಣುತ್ತಿವೆ.

ಉದ್ರಿಕ್ತ ಫುಟ್ಬಾಲ್  ಪ್ರೇಕ್ಷಕರು ಎನ್ ಜೆರೆಕೋರ್‌ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದರೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

2021ರ ದಂಗೆಯಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ಗಿನಿಯಾದ ಜುಂಟಾ ನಾಯಕ ಮಮಡಿ ಡೌಂಬೌಯಾ ಅವರ ಗೌರವಾರ್ಥವಾಗಿ ಆಯೋಜಿಸಲಾದ ಪಂದ್ಯಾವಳಿ ಇದಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಪಶ್ಚಿಮ ಆಫ್ರಿಕಾದ ರಾಷ್ಟ್ರದಲ್ಲಿ ಇಂತಹ ಪಂದ್ಯಾವಳಿಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ. ಡೌಂಬೌಯಾ ಮುಂದಿನ ವರ್ಷ ನಡೆಯಲಿರುವ ನಿರೀಕ್ಷಿತ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಮೈತ್ರಿಗಳನ್ನು ರೂಪುಗೊಳ್ಳಿಸುವುದಕ್ಕೆ ಈ ಪಂದ್ಯಾವಳಿಯನ್ನು ಅಯೋಜಿಸಲಾಗಿತ್ತು ಎನ್ನಲಾಗಿದೆ.

2020 ರ ಸೆಪ್ಟೆಂಬರ್‌ನಲ್ಲಿ ಅಧ್ಯಕ್ಷ ಆಲ್ಫಾ ಕಾಂಡೆ ಅವರನ್ನು ಪದಚ್ಯುತಗೊಳಿಸುವ ಮೂಲಕ ಡೌಂಬೌಯಾ ಗಿನಿಯಾದ ಅಧಿಕಾರವನ್ನು ವಶಪಡಿಸಿಕೊಂಡರು. ಅಂತರರಾಷ್ಟ್ರೀಯ ಒತ್ತಡದ ಅಡಿಯಲ್ಲಿ, ಅವರು 2024 ರ ಅಂತ್ಯದ ವೇಳೆಗೆ ಅಧಿಕಾರವನ್ನು ನಾಗರಿಕ ಸರ್ಕಾರಕ್ಕೆ ಮರಳಿ ಹಸ್ತಾಂತರಿಸುವುದಾಗಿ ವಾಗ್ದಾನ ಮಾಡಿದರು. ಆದರೆ ನಂತರ ಅವರು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಡೌಂಬೌಯಾ ಅವರು ಭಿನ್ನಾಭಿಪ್ರಾಯ ವ್ಯಕ್ತಪಡಿಸುವವರ ಮೇಲೆ ಇಂದಿಗೂ ದಮನ ನಡೆಸುತ್ತಿದ್ದಾರೆ. ಇಲ್ಲಿಯವರೆಗೆ ಅನೇಕ ವಿರೋಧ ಪಕ್ಷದ ನಾಯಕರನ್ನು ಬಂಧಿಸಿ, ಅವರನ್ನು ನ್ಯಾಯಾಲಯಗಳ ಮುಂದೆ ಹಾಜರುಪಡಿಸಲಾಗಿದೆ ಅಥವಾ ಗಡಿಪಾರು ಮಾಡಲು ಒತ್ತಾಯಿಸಲಾಗಿದೆ.

ಡೌಂಬೌಯಾ ಅವರ ಬೆಂಬಲಿಗರು ಮುಂದಿನ ಅಧ್ಯಕ್ಷೀಯ ಚುನಾವಣೆಯಲ್ಲಿ ಅವರ ಉಮೇದುವಾರಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.ಈ ಚುನಾವಣೆಯನ್ನು 2025ರಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಸಾಕಷ್ಟು ನೈಸರ್ಗಿಕ ಸಂಪನ್ಮೂಲಗಳ ಹೊರತಾಗಿಯೂ, ಗಿನಿಯಾ ಬಡ ರಾಷ್ಟ್ರವಾಗಿ ಉಳಿದಿದೆ. ಇದು ದಶಕಗಳಿಂದ ನಿರಂಕುಶ ಸರ್ಕಾರಗಳಿಂದ ಆಳಲ್ಪಟ್ಟಿದೆ.

ಮಾಲಿ, ಬುರ್ಕಿನಾ ಫಾಸೊ ಮತ್ತು ನೈಜರ್‌ನಲ್ಲಿ ಮಿಲಿಟರಿ ಸಹಾಯದಿಂದ 2020 ರಿಂದ ಪಶ್ಚಿಮ ಆಫ್ರಿಕಾದ ಅಧಿಕಾರವನ್ನು ವಶಪಡಿಸಿಕೊಂಡ ಹಲವಾರು ಅಧಿಕಾರಿಗಳಲ್ಲಿ ಡೌಂಬೌಯಾ ಒಬ್ಬರಾಗಿದ್ದಾರೆ.

ಗಿನಿಯಾದ ಆಗ್ನೇಯದ ಎನ್’ಜೆರೆಕೋರ್‌ ನಲ್ಲಿ ನಡೆದ ಈ ಘರ್ಷಣೆಯ ಪ್ರದೇಶವು ಸುಮಾರು 200,000 ಜನಸಂಖ್ಯೆಯನ್ನು ಹೊಂದಿದೆ.

ಇದನ್ನೂ ಓದಿ…ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...