Homeಕರ್ನಾಟಕಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ 'ಪಾಶ್‌ ಕಮಿಟಿ' ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

ಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ ‘ಪಾಶ್‌ ಕಮಿಟಿ’ ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಚಿತ್ರರಂಗದ ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ಹಲವು ತಿಂಗಳುಗಳ ಒತ್ತಡಕ್ಕೆ ಮಣಿದಿರುವ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’, ಕೊನೆಗೂ “ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ” (posh act) ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ಜಸ್ಟೀಸ್ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಕರ್ನಾಟಕದಲ್ಲಿ ಸಹ ಸಮಿತಿ ರಚಿಸಬೇಕು ಎಂಬ ಕೂಗು ಎದ್ದಿತ್ತು. ಆದರೆ, ಇದಕ್ಕೆ ಚಿತ್ರರಂಗದ ಪ್ರಮುಖರು ಆಸಕ್ತಿ ತೋರಿರಲಿಲ್ಲ. ಇದೀಗ, ಹಿರಿಯ ನಿರ್ದೇಶಕಿ ಕವಿತಾ ಲಂಕೇಶ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಖಾಯಂ ಸದಸ್ಯರಾಗಿ,  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಸದಸ್ಯರಾಗಿ ಹಿರಿಯ ನಟಿ ಪ್ರಮೀಳಾ ಜೋಶಾಯ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ವಿಮಲಾ ಕೆ.ಎಸ್, ಹಿರಿಯ ವಕೀಲೆ ರಾಜಲಕ್ಷ್ಮಿ ಅಂಕಲಗಿ, ಟ್ರಾನ್ಸ್‌ ಜೆಂಡರ್ ಹೋರಾಟಗಾರರಾದ ಮಲ್ಲು ಕುಂಬಾರ್, ನಟಿ ಶೃತಿ ಹರಿಹರನ್, ಹಿರಿಯ ಪತ್ರಕರ್ತ ಮುರುಳೀಧರ್ ಖಜಾನೆ, ರಂಗಕರ್ಮಿ ಶಶಿಕಾಂತ್ ಯಡಹಳ್ಳಿ, ನಿರ್ಮಾಕಪಕರಾದ ಸಾರಾ ಗೋವಿಂದ್ ಸಮಿತಿಯಲ್ಲಿ ಇದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜೊತೆಗೆ ಮಾತನಾಡಿದ ಕವಿತಾ ಲಂಕೇಶ್, “ಪಾಶ್ ಕಮಿಟಿ ರಚಿಸಬೇಕು ಎಂದು ಮಹಿಳಾ ಆಯೋಗದ ನಾಗಲಕ್ಷ್ಮಿ ಅವರೊಟ್ಟಿಗೆ ನಾವು ಹೋಗಿ ಒತ್ತಡ ಹಾಕಿದ್ದೆವು. ಇದಕ್ಕಾಗಿ ನಾವು ಕಳೆದ ಐದು ವರ್ಷಗಳಿಂದ ಎಷ್ಟೇ ಪ್ರಯತ್ನ ಮಾಡಿದರೂ ಆಗಿರಲಿಲ್ಲ; ಈಗ ಸಮಿತಿ ರಚಿಸಿರುವುದು ಸಂತಸ ತಂದಿದೆ” ಎಂದರು.

“ಈಗಷ್ಟೇ ಸಮಿತಿ ರಚನೆ ಆಗಿದೆ, ಇನ್ನಷ್ಟು ಕೆಲಸಗಳು ಬಾಕಿ ಇವೆ. ವಿಭಿನ್ನ ಕ್ಷೇತ್ರಗಳಿಂದ ಸದಸ್ಯರನ್ನು ನೇಮಕ ಮಾಡಿರುವುದು ನನಗೆ ಸಂತಸವಾಗಿದೆ. ದೌರ್ಜನ್ಯವಾದರೆ ನಾವು ಏನು ಮಾಡಬೇಕು ಎಂಬ ಬಗ್ಗೆ ಕೆಲಸ ಆರಂಭಿಸಬೇಕು. ಮೊದಲು ಅದಕ್ಕೊಂದು ಹೆಲ್ಪ್‌ಲೈನ್ ಆಗಬೇಕು. ಏಕೆಂದರೆ, ಯಾರೋ ದೂರು ಕೊಡಬೇಕು ಎಂದರೆ ಸಾಕಷ್ಟು ಗೊಂದಲದಲ್ಲಿ ಇರುತ್ತಾರೆ; ಮೊದಲಿನಿಂದಲೂ ಈ ಸಮಸ್ಯೆ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋದರೆ ಸಾಕಷ್ಟು ನಿರ್ಲಕ್ಷ್ಯ ಮಾಡುತ್ತಿದ್ದರು. ದೂರು ಬಂದರೆ ಏನು ಮಾಡಬಹುದು ಎಂದು ನಾವು ನೋಡಬೇಕು” ಎಂದು ಹೇಳಿದರು.

“ಸಮಿತಿಯಲ್ಲಿ ಟ್ರಾನ್ಸ್‌ ಜೆಂಡರ್‌ ಸಮುದಾಯದ ಮಲ್ಲು ಕುಂಬಾರ್ ಸೇರಿದಂತೆ ಬೇರೆಬೇರೆ ಕ್ಷೇತ್ರದ ಜನರಿದ್ದಾರೆ. ಕೆ.ಎಸ್. ವಿಮಲಾ ಮತ್ತು ರಾಜಲಕ್ಷ್ಮಿ ಅಂಕಲಗಿ ಮಹಿಳೆಯರ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ನಾವು ಸೂಚಿಸಿದ ಹೆಸರುಗಳನ್ನು ಒಪ್ಪಿಕೊಂಡು ಸಮಿತಿ ರಚಿಸಿದ್ದಾರೆ. ಸದ್ಯಕ್ಕಂತೂ ಕಮಿಟಿ ಚೆನ್ನಾಗಿದೆ ಎಂದು ನನಗೆ ಅನಿಸುತ್ತಿದೆ. ಕೆಲಸ ಚೆನ್ನಾಗಿ ಆಗುತ್ತದೆ ಎನ್ನುವ ವಿಶ್ವಾಸ ನನಗಿದೆ. ಇಷ್ಟು ದಿನ ಸಮಸ್ಯೆಗಳಾದರೆ ಅದನ್ನು ಕೇಳುವುದಕ್ಕೇ ಯಾರೂ ಇರಲಿಲ್ಲ” ಎಂದರು.

ಸಮಿತಿ ಸದಸ್ಯರಾದ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, “ಎಲ್ಲ ಅಸಂಘಟಿತ ವಲಯಗಳಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚಿಸಬೇಕು ಎಂಬ ಕಾನೂನಿದೆ. ಆದರೆ, ಚಲನಚಿತ್ರ ವಾಣಿಜ್ಯ ಮಂಡಳಿ ಸಮಿತಿ ರಚಿಸಿಲ್ಲ ಎಂಬ ದೂರು ಹಲವು ದಿನಗಳಿಂದ ಕೇಳಿಬರುತ್ತಿತ್ತು. ಕೇರಳದಲ್ಲಿ ಹೇಮಾ ಸಮಿತಿ ವರದಿ ಹೊರಗೆ ಬಂದ ಬಳಿಕ, ಇಲ್ಲಿಯೂ ಸಮಿತಿ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿದ್ದವು. ಈಗ ವಾಣಿಜ್ಯ ಮಂಡಳಿ ಸಮಿತಿ ರಚಿಸಿ, ಹಲವು ಕ್ಷೇತ್ರಗಳ ಪ್ರಮುಖರನ್ನು ಸದಸ್ಯರನ್ನಾಗಿ ನೇಮಿಸಿದ್ದಾರೆ. ಇಂಥ ಸಮಿತಿ ರಚಿಸುವುದು ಅಗತ್ಯ” ಎಂದರು.

“ಮುಖ್ಯವಾಗಿ, ಇತ್ತೀಚಿನ ದಿನಗಳಲ್ಲಿ ಮೊದಲಿಗಿಂತಲೂ ಹೆಚ್ಚಾಗಿ ಕಲಾವಿದರು, ತಂತ್ರಜ್ಞರು ಸೇರಿದಂತೆ ಹಲವು ವಿಭಾಗಗಳಲ್ಲಿ ಕೆಲಸ ಮಾಡಲು ಅನ್ಯ ರಾಜ್ಯಗಳಿಂದ ಇಲ್ಲಿಗೆ ಬರುತ್ತಿದ್ದಾರೆ. ಇತ್ತೀಚೆಗೆ ಫ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗಿದ್ದು, ಇಲ್ಲಿಗೆ ಕೆಲಸ ಮಾಡಲು ಬಂದವರ ರಕ್ಷಣೆ ಮಾಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ಎಲ್ಲವೂ ಗಮನದಲ್ಲಿಟ್ಟುಕೊಂಡು ಈಗ ಸಮಿತಿ ರಚನೆ ಆಗಿದೆ. ಪಾಶ್ ಕಮಿಟಿ ನಿಯಮಗಳ ಪ್ರಕಾರ, ಸಮಿತಿಯಲ್ಲಿ ಯಾರ್ಯಾರು ಇರಬೇಕು ಎಂದು ಗಮನದಲ್ಲಿ ಇಟ್ಟುಕೊಂಡು ಮಾಡಿದ್ದಾರೆ, ಇದು ಸ್ವಾಗತಾರ್ಹ” ಎಂದು ಹೇಳಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ‘ಕರ್ನಾಟಕ ರಾಜ್ಯ ಮಹಿಳಾ ಆಯೋಗ’ದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ, “ಚಲನಚಿತ್ರ ವಾಣಿಜ್ಯ ಮಂಡಳಿ ಅಂತಿಮವಾಗಿ ಪಾಶ್ ಸಮಿತಿ ರಚಿಸಿರುವುದು ನನಗೆ ಸಂತಸ ತಂದಿದೆ. ನಿಯಮಗಳನ್ನು ಪಾಲನೆ ಮಾಡಿ ಸಮಿತಿ ರಚಿಸಿರುವುದಾಗಿ ನನಗೆ ಮೊದಲೇ ತಿಳಿಸಿದ್ದರು. ಈ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿಗೆ ಬರುವಂತೆ ನನ್ನನ್ನೂ ಕರೆದಿದ್ದರು. ಹೆಣ್ಣು ಮಕ್ಕಳ ರಕ್ಷಣೆ ಪ್ರಮುಖ ಆದ್ಯತೆಯಾಗಿರುವದರಿಂದ ನೀವು ಕಾಲ ದೂಡುವಂತೆ ಇಲ್ಲ ಎಂದು ನಾನು ಅವರಿಗೆ ಮೊದಲೇ ತಿಳಿಸಿದ್ದೆ; ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಹ ನಾನು ಪತ್ರ ಬರೆದಿದ್ದೆ” ಎಂದರು.

“ನಾನು ಪತ್ರಿಕಾಗೋಷ್ಠಿ ನಡೆಸಿದ ನಂತರ, ಅದನ್ನು ಗಂಭೀರವಾಗಿ ಪರಿಗಣಿಸಿ ಸಮಿತಿ ರಚಿಸಿದ್ದಾರೆ. ಇದು ಸ್ವಾಗತಾರ್ಹ, ಮೊದಲ ಬಾರಿಗೆ ಚಲನಚಿತ್ರೋದ್ಯಮದಲ್ಲಿ ಸಮಿತಿ ರಚನೆಯಾಗಿದೆ. ಚಿತ್ರರಂಗದಲ್ಲಿ ಕೆಲಸ ಮಾಡುವ ಯಾವುದೇ ಹೆಣ್ಣು ಮಗಳಿಗೆ ಲೈಂಗಿಕ ದೌರ್ಜನ್ಯ ನಡೆದರೆ, ಅಲ್ಲಿಯೇ ದೂರು ನೀಡಿ, ನ್ಯಾಯ ಪಡೆಯುವ ಪಾಶ್ ಕಮಿಟಿ ರಚನೆಯಾಗಿದೆ. ಹಣ್ಣು ಮಕ್ಕಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿರುವ ವಾಣಿಜ್ಯ ಮಂಡಳಿಗೆ ಅಭಿನಂಧಿಸುತ್ತೇನೆ” ಎಂದು ಹೇಳಿದರು.

“ಆರಂಭದಲ್ಲಿ ವಾಣಿಜ್ಯ ಮಂಡಳಿಯಲ್ಲಿ ಇದಕ್ಕೆ ಭಾರೀ ವಿರೋಧವಿತ್ತು. ನಾನು ಅಲ್ಲಿ ಪತ್ರಿಕಾಗೋಷ್ಠಿ ನಡೆಸಲು ಹೋದಾಗಲೂ ಸಹ ಅಪಸ್ವರವಿತ್ತು. ಜೋರಾಗಿ ಚೀರಾಡಿ, ಜಗಳ ಮಾಡಿ ಪಾಶ್ ಸಮಿತಿ ರಚನೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಏನೋ ಆಗುತ್ತದೆ ಎಂಬ ಕಾರಣಕ್ಕೆ ಅವರು ಸಮಿತಿ ರಚನೆಗೆ ಒಪ್ಪಿಕೊಂಡಿರಲಿಲ್ಲ. ಅವರು ಅರ್ಥ ಮಾಡಿಕೊಳ್ಳುವುದಕ್ಕೆ ಇಷ್ಟು ಕಾಲ ಬೇಕಾಯಿತು. ನಮ್ಮ ಕನ್ನಡದ ನಟಿಯರು ಹಾಗೂ ಉಳಿದವರಿಗೆ ದೌರ್ಜನ್ಯವಾದಾಗ ನ್ಯಾಯ ಪಡೆಯಲು ಅವರದ್ದೇ ತಾಯಿ ಸಂಸ್ಥೆಯಲ್ಲಿ ಕಮಿಟಿ ಇರಬೇಕು. ಅವರ ನಿರ್ಧಾರವನ್ನು ನಾನು ಸ್ವಾಗತ ಕೋರುತ್ತೇನೆ. ಚಲನಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು” ಎಂದು ವಿವರಿಸಿದರು.

ಇದನ್ನೂ ಓದಿ; ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...