Homeಮುಖಪುಟ50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ತೀರ್ಮಾನ

50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ತೀರ್ಮಾನ

- Advertisement -
- Advertisement -

ಡೆಹ್ರಾಡೂನ್:  ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತ ವಿರೋಧಿ ಘಟನೆಗಳ ನಡುವೆ 50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ಭಾನುವಾರದಂದು ತೀರ್ಮಾನಿಸಿದೆ.

ಸುಮಾರು ಅರ್ಧ ಶತಮಾನದಷ್ಟು ಹಳೆಯದಾದ ಮಸೀದಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಿವಿಧ ಹಿಂದೂ ಬಲಪಂಥೀಯ ಸಂಘಟನೆಗಳು ‘ಮಹಾಪಂಚಾಯತ್’ ಆಯೋಜಿಸಿದ ನಂತರ ಉತ್ತರಕಾಶಿಯು ಉದ್ವಿಗ್ನಗೊಂಡಿದೆ. ಈ ಮಸೀದಿ ನಿರ್ಮಾಣವು ಅಕ್ರಮವೆಂದು ಪಂಚಾಯತ್ ಹೇಳಿದೆ.

ಉತ್ತರಕಾಶಿಯ ರಾಮಲೀಲಾ ಮೈದಾನದಲ್ಲಿ ಬಿಗಿ ಭದ್ರತೆಯ ನಡುವೆ “ದೇವಭೂಮಿ ವಿಚಾರ ಮಂಚ್” ಬ್ಯಾನರ್ ಅಡಿಯಲ್ಲಿ ನಡೆದ ಮಹಾಪಂಚಾಯತ್ ಅನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೆಲವು ಶಾಸಕರು ಉದ್ದೇಶಿಸಿ ಮಾತನಾಡಿದರು. ಆದಾಗ್ಯೂ, ಈ ಪಂಚಾಯತ್ ನಲ್ಲಿ ಸುಮಾರು 500 ಜನರು ಮಾತ್ರ ಭಾಗವಹಿಸಿದ್ದರು. ಒಂದು ತಿಂಗಳ ಅವಧಿಯಲ್ಲಿ ಮತ್ತೊಂದು ಮಹಾಪಂಚಾಯತ್ ಅನ್ನು ನಡೆಸಲು ತೀರ್ಮಾನಿಸಲಾಗಿದೆ.

ಜನಸಮೂಹವನ್ನುದ್ದೇಶಿಸಿ ಮಾತನಾಡಿದ ವಿವಾದಿತ ಬಿಜೆಪಿ ನಾಯಕ ಮತ್ತು ತೆಲಂಗಾಣ ಶಾಸಕ ಟಿ ರಾಜಾ ಸಿಂಗ್, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ “ಭೂ ಜಿಹಾದಿಗಳ” ವಿರುದ್ಧ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು ಕಲಿಯಬೇಕಿದೆ ಹಾಗೆಯೇ ಅವರ “ ಬುಲ್ಡೋಜರ್‌ ಸಂಸ್ಕೃತಿ’ಯಿಂದ ಸ್ಫೂರ್ತಿ ಪಡೆಯಬೇಕಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ‘ಚಾಯ್ ಪೇ ಚರ್ಚಾ’ ಮಾಡಬೇಕು. ಯುಪಿಯಲ್ಲಿ ಜಿಹಾದಿಗಳಿಗೆ ಅವರು ಪಾಠ ಕಲಿಸುವ ರೀತಿಯಲ್ಲಿ ತಾವು ಮುಂದುವರಿಯಬೇಕು ಎಂದು ಸಿಂಗ್ ಅವರಿಗೆ ಪ್ರಚೋದಿಸಿದರು.

ಉತ್ತರಾಖಂಡದಲ್ಲಿ ‘ಭೂಮಿ ಜಿಹಾದ್’ ಮಾಡಲು ನಾವು ಜಿಹಾದಿಗಳಿಗೆ ಅವಕಾಶ ನೀಡುವುದಿಲ್ಲ. ಭೂಮಿ ಜಿಹಾದ್’ ಗಳಿಗೆ ಹೇಗೆ ಪಾಠ ಕಲಿಸಬೇಕೆಂದು ಉತ್ತರಾಖಂಡದ ಜನರಿಂದ ದೇಶದ ಹಿಂದೂಗಳು ಸ್ಫೂರ್ತಿ ಪಡೆಯುತ್ತಿದ್ದಾರೆ. ಇದು ಕೇವಲ ಉತ್ತರಕಾಶಿಯ ಸಮಸ್ಯೆಯಲ್ಲ. ದೇಶಾದ್ಯಂತ ಭೂ ಜಿಹಾದ್ ಮತ್ತು ಲವ್ ಜಿಹಾದ್ ನಿರ್ಮೂಲನೆಗೆ ನಾವು ಒಗ್ಗೂಡಬೇಕಾಗಿದೆ ಎಂದು ಶಾಸಕ ಸಿಂಗ್ ಪ್ರತಿಪಾದಿಸಿದರು.

“ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ಅನ್ನು ಹಿಂದೂ ಬಲಪಂಥೀಯ ಸಂಘಟನೆಗಳು ಬಳಸುವ ಪದಗಳಾಗಿವೆ ಮತ್ತು ಇದನ್ನು ಸಾಮಾನ್ಯವಾಗಿ “ಮುಸ್ಲಿಂ-ವಿರೋಧಿ” ವಾಕ್ಚಾತುರ್ಯವಾಗಿ ನೋಡಲಾಗುತ್ತದೆ.

ಉತ್ತರಾಖಂಡದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತ ವಿರೋಧಿ ಘಟನೆಗಳ ಮಧ್ಯೆ ಮಹಾಪಂಚಾಯತ್  ನಡೆಸಿದೆ. ಇದು ಮುಸ್ಲಿಮರ ವಿರುದ್ಧ ಸಾಮಾಜಿಕ ಬಹಿಷ್ಕಾರದ ಕರೆಗಳಿಗೆ ಹೆಚ್ಚಿನ ನಿದರ್ಶನಗಳಿಗೆ ಒಂದು ಉದಾಹರಣೆಯಾಗಿದೆ.

ಮತ್ತೊಬ್ಬ ಬಿಜೆಪಿ ನಾಯಕ ಮತ್ತು ಗಂಗೋತ್ರಿ ಶಾಸಕ ಸುರೇಶ್ ಸಿಂಗ್ ಚೌಹಾಣ್ ಅವರು, ಉತ್ತರಕಾಶಿಯ ಧಾರ್ಮಿಕ ಪಟ್ಟಣದ ಚಿತ್ರಣವನ್ನು ಕಳೆದುಕೊಳ್ಳಲು ನಾವು ಬಿಡುವುದಿಲ್ಲ ಮತ್ತು ಮಾಂಸ ಮತ್ತು ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ನಿಷೇಧಿಸಬೇಕು ಎಂದರು.

ನಾವು ಭಯದ ವಾತಾವರಣವನ್ನು ಸೃಷ್ಟಿಸುತ್ತಿಲ್ಲ, ಆದರೆ ಇದು ಧಾರ್ಮಿಕ ಕ್ಷೇತ್ರದ ಪಟ್ಟಣವಾಗಿದೆ. ಆದಾಗ್ಯೂ, ರೋಹಿಂಗ್ಯಾ ಮುಸ್ಲಿಮರು ಮಾರಾಟಗಾರರಂತೆ ನಟಿಸುತ್ತಿದ್ದಾರೆ, ಉತ್ತರಕಾಶಿಯನ್ನು ಕಲುಷಿತಗೊಳಿಸುತ್ತಿದ್ದಾರೆ. ಇದನ್ನು ಸ್ಥಳೀಯರು ಸಹಿಸುವುದಿಲ್ಲ. ಕೆಲವರು ಇಲ್ಲಿಯ ವಾತಾವರಣವನ್ನು ಕದಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾವು ಅವರನ್ನು ಯಶಸ್ವಿಯಾಗಲು ಬಿಡುವುದಿಲ್ಲ. ಹಾಗಾಗಿ ಹಿಂದೂ ಸಮುದಾಯ ಒಗ್ಗೂಡಬೇಕು ಎಂದು ಅವರು ಕರೆ ನೀಡಿದರು.

ಪಟ್ಟಣದಲ್ಲಿ ದೀರ್ಘಕಾಲ ವಾಸಿಸುವವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಮುಖ್ಯಮಂತ್ರಿಯವರು ಮಸೀದಿಯ ವಿಷಯದ ಬಗ್ಗೆ ಗಮನಹರಿಸಿದ್ದಾರೆ. ಇದು ತನಿಖೆಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಒಂದು ತಿಂಗಳ ನಂತರ ರಾಮಲೀಲಾ ಮೈದಾನದಲ್ಲಿ ಮತ್ತೊಂದು ಮಹಾಪಂಚಾಯತ್ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯಾಧ್ಯಕ್ಷ ಅನುಜ್ ವಾಲಿಯಾ ಘೋಷಿಸಿದರು.

ನಾವು ಮಸೀದಿಯ ವಿರುದ್ಧ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ಆಯೋಜಿಸುತ್ತೇವೆ. ಇದು ನಮ್ಮ ಹೋರಾಟದ ಆರಂಭವಾಗಿದೆ ಎಂದು ಅವರು ಹೇಳಿದರು.

ಮಹಾಪಂಚಾಯತ್‌ಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದ ಕೆಲವೇ ದಿನಗಳಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಅನುಮತಿ ನೀಡಲಾಗಿದೆ. ಸ್ಥಳೀಯ ಆಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿತು.

ಇದನ್ನೂ ಓದಿ…‘ದೆಹಲಿ ಚಲೋ’ ರೈತರ ಮೆರವಣಿಗೆ: ರಾಜಧಾನಿ-ನೋಯ್ಡಾ ಗಡಿಯಲ್ಲಿ ಬೃಹತ್ ಟ್ರಾಫಿಕ್ ಜಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...