Homeಮುಖಪುಟಕ್ರಿಮಿನಲ್‌ ಪ್ರಕರಣಗಳಲ್ಲಿ ಮಗನಿಗೆ ಕ್ಷಮಾದಾನ : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಡೆಗೆ ಭಾರೀ ಟೀಕೆ

ಕ್ರಿಮಿನಲ್‌ ಪ್ರಕರಣಗಳಲ್ಲಿ ಮಗನಿಗೆ ಕ್ಷಮಾದಾನ : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಡೆಗೆ ಭಾರೀ ಟೀಕೆ

- Advertisement -
- Advertisement -

ಅಕ್ರಮ ಬಂದೂಕು ಖರೀದಿ ಮತ್ತು ತೆರಿಗೆ ವಂಚನೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತನ್ನ ಮಗ ಹಂಟರ್ ಬೈಡನ್‌ಗೆ ಕ್ಷಮಾದಾನ ನೀಡುವ ಅರ್ಜಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾನುವಾರ (ಡಿ.1) ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರಾವಧಿಯ ಕೊನೆಯಲ್ಲಿ ಬೈಡನ್‌ ತೆಗೆದುಕೊಂಡ ಈ ನಿಲುವು ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ. ಬೈಡನ್ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜನರು ಆರೋಪಿಸಿದ್ದಾರೆ.

ಆದರೆ, ಬೈಡನ್‌ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದು, “ನನ್ನ ಮಗನನ್ನು ‘ರಾಜಕೀಯವಾಗಿ ಗುರಿಪಡಿಸಲಾಗಿದೆ. ಅನ್ಯಾಯವಾಗಿ ಶಿಕ್ಷೆಗೆ ಒಳಪಡಿಸಲಾಗಿದೆ” ಎಂದಿದ್ದಾರೆ.

“ಇಂದು, ನಾನು ನನ್ನ ಮಗ ಹಂಟರ್‌ ಕ್ಷಮಾದಾನಕ್ಕೆ ಸಹಿ ಹಾಕಿದ್ದೇನೆ. ನಾನು ಅಧಿಕಾರ ವಹಿಸಿಕೊಂಡ ದಿನದಿಂದ ಇದುವರೆಗೆ ನ್ಯಾಯಾಂಗದ ನಿರ್ಧಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದೇನೆ. ಆದೇ ರೀತಿ ನಡೆದುಕೊಂಡಿದ್ದೇನೆ. ಮಗನನ್ನು ಅನ್ಯಾಯವಾಗಿ ವಿಚಾರಣೆಗೆ ಒಳಪಡಿಸಿದಾಗಲೂ ನನ್ನ ಮಾತನ್ನು ಉಳಿಸಿದ್ದೇನೆ. ಸದ್ಯ ಆತನ (ಹಂಟರ್) ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ” ಎಂದು ಶ್ವೇತಭವನ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಬೈಡನ್ ತಿಳಿಸಿದ್ದಾರೆ.

ಬೈಡನ್ ಪುತ್ರ ಹಂಟರ್ ಒಬ್ಬ ಮಾದಕ ವ್ಯಸನಿಯಾಗಿದ್ದಾನೆ. ಆತನನ್ನು ಕ್ಷಮಿಸುವುದಾಗಲಿ ಅಥವಾ ಶಿಕ್ಷೆಯನ್ನು ಕಡಿಮೆ ಮಾಡುವುದಾಗಲಿ ಮಾಡುವುದಿಲ್ಲ ಎಂದು ನೂತನ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ರಿಪಬ್ಲಿಕನ್ ಪಕ್ಷದ ನಾಯಕರು ಪದೇ ಪದೇ ಹೇಳಿದ್ದರು.

ಇದೀಗ ಬೈಡನ್‌ ಮಗನ ಕ್ಷಮಾದಾನಕ್ಕೆ ಸಹಿ ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಇದು ಕಾನೂನಿನ ದುರ್ಬಳಕೆ ಮತ್ತು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ : ಅಕ್ರಮವಾಗಿ ಬಂದೂಕು ಖರೀದಿಸಿದ್ದ ಪ್ರಕರಣದಲ್ಲಿ ಹಂಟರ್‌ ಬೈಡನ್‌ ವಿರುದ್ಧ 2023ರ ಸೆಪ್ಟೆಂಬರ್‌ 15ರಂದು ದೋಷಾರೋಪ ಹೊರಿಸಲಾಗಿತ್ತು.

ಡೆಲವೇರ್‌ನಲ್ಲಿ ಕೋಲ್ಟ್‌ ರಿವಾಲ್ವರ್‌ ಖರೀದಿಸಿದ್ದ ಸಮಯದಲ್ಲಿ ತಾನು ಡ್ರಗ್ಸ್‌ ಬಳಸುತ್ತಿರಲಿಲ್ಲ ಎಂದು ಹಂಟರ್ ಬೈಡನ್‌ ಸುಳ್ಳು ಹೇಳಿಕೆ ನೀಡಿದ್ದರು ಎಂದು ಎರಡನೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಸುಳ್ಳು ಹೇಳಿಕೆಗಳ ಆಧಾರದಲ್ಲಿ ಅಕ್ರಮ ಬಂದೂಕು ಹೊಂದಿದ್ದರು ಎಂಬ ಮೂರನೇ ದೊಷಾರೋಪವೂ ಹಂಟರ್‌ ಬೈಡನ್‌ ಮೇಲೆ ಇತ್ತು.

ಅಕ್ರಮವಾಗಿ ಬಂದೂಕು ಖರೀದಿಸಿದ ಪ್ರಕರಣದಲ್ಲಿ ಡಿಸೆಂಬರ್ 12 ರಂದು ಶಿಕ್ಷೆ ವಿಧಿಸಲು ನಿರ್ಧರಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಫೆಡರಲ್ ತೆರಿಗೆ ವಂಚನೆ ಆರೋಪಗಳಿಗೆ ಅವರು ತಪ್ಪೊಪ್ಪಿಕೊಂಡ ಪ್ರತ್ಯೇಕ ಕ್ರಿಮಿನಲ್ ಪ್ರಕರಣದಲ್ಲಿ, ಇದೇ ಡಿಸೆಂಬರ್ 16ರಂದು ಶಿಕ್ಷೆ ಘೋಷಣೆಯಾಗಲಿತ್ತು. ಆದರೆ, ಬೈಡನ್ ಕ್ಷಮಾದಾನ ನೀಡುವ ಮೂಲಕ ಮಗನಿಗೆ ರಕ್ಷಣೆ ಒದಗಿಸಿದ್ದಾರೆ.

ಇದನ್ನೂ ಓದಿ : ‘ಹೆದ್ದಾರಿ ತಡೆದು ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ..’; ಪ್ರತಿಭಟನಾ ನಿರತ ರೈತ ಮುಖಂಡರಿಗೆ ಸುಪ್ರೀಂ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...