Homeಮುಖಪುಟಕ್ರಿಮಿನಲ್‌ ಪ್ರಕರಣಗಳಲ್ಲಿ ಮಗನಿಗೆ ಕ್ಷಮಾದಾನ : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಡೆಗೆ ಭಾರೀ ಟೀಕೆ

ಕ್ರಿಮಿನಲ್‌ ಪ್ರಕರಣಗಳಲ್ಲಿ ಮಗನಿಗೆ ಕ್ಷಮಾದಾನ : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಡೆಗೆ ಭಾರೀ ಟೀಕೆ

- Advertisement -
- Advertisement -

ಅಕ್ರಮ ಬಂದೂಕು ಖರೀದಿ ಮತ್ತು ತೆರಿಗೆ ವಂಚನೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತನ್ನ ಮಗ ಹಂಟರ್ ಬೈಡನ್‌ಗೆ ಕ್ಷಮಾದಾನ ನೀಡುವ ಅರ್ಜಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾನುವಾರ (ಡಿ.1) ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರಾವಧಿಯ ಕೊನೆಯಲ್ಲಿ ಬೈಡನ್‌ ತೆಗೆದುಕೊಂಡ ಈ ನಿಲುವು ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ. ಬೈಡನ್ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜನರು ಆರೋಪಿಸಿದ್ದಾರೆ.

ಆದರೆ, ಬೈಡನ್‌ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದು, “ನನ್ನ ಮಗನನ್ನು ‘ರಾಜಕೀಯವಾಗಿ ಗುರಿಪಡಿಸಲಾಗಿದೆ. ಅನ್ಯಾಯವಾಗಿ ಶಿಕ್ಷೆಗೆ ಒಳಪಡಿಸಲಾಗಿದೆ” ಎಂದಿದ್ದಾರೆ.

“ಇಂದು, ನಾನು ನನ್ನ ಮಗ ಹಂಟರ್‌ ಕ್ಷಮಾದಾನಕ್ಕೆ ಸಹಿ ಹಾಕಿದ್ದೇನೆ. ನಾನು ಅಧಿಕಾರ ವಹಿಸಿಕೊಂಡ ದಿನದಿಂದ ಇದುವರೆಗೆ ನ್ಯಾಯಾಂಗದ ನಿರ್ಧಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದೇನೆ. ಆದೇ ರೀತಿ ನಡೆದುಕೊಂಡಿದ್ದೇನೆ. ಮಗನನ್ನು ಅನ್ಯಾಯವಾಗಿ ವಿಚಾರಣೆಗೆ ಒಳಪಡಿಸಿದಾಗಲೂ ನನ್ನ ಮಾತನ್ನು ಉಳಿಸಿದ್ದೇನೆ. ಸದ್ಯ ಆತನ (ಹಂಟರ್) ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ” ಎಂದು ಶ್ವೇತಭವನ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಬೈಡನ್ ತಿಳಿಸಿದ್ದಾರೆ.

ಬೈಡನ್ ಪುತ್ರ ಹಂಟರ್ ಒಬ್ಬ ಮಾದಕ ವ್ಯಸನಿಯಾಗಿದ್ದಾನೆ. ಆತನನ್ನು ಕ್ಷಮಿಸುವುದಾಗಲಿ ಅಥವಾ ಶಿಕ್ಷೆಯನ್ನು ಕಡಿಮೆ ಮಾಡುವುದಾಗಲಿ ಮಾಡುವುದಿಲ್ಲ ಎಂದು ನೂತನ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ರಿಪಬ್ಲಿಕನ್ ಪಕ್ಷದ ನಾಯಕರು ಪದೇ ಪದೇ ಹೇಳಿದ್ದರು.

ಇದೀಗ ಬೈಡನ್‌ ಮಗನ ಕ್ಷಮಾದಾನಕ್ಕೆ ಸಹಿ ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಇದು ಕಾನೂನಿನ ದುರ್ಬಳಕೆ ಮತ್ತು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ : ಅಕ್ರಮವಾಗಿ ಬಂದೂಕು ಖರೀದಿಸಿದ್ದ ಪ್ರಕರಣದಲ್ಲಿ ಹಂಟರ್‌ ಬೈಡನ್‌ ವಿರುದ್ಧ 2023ರ ಸೆಪ್ಟೆಂಬರ್‌ 15ರಂದು ದೋಷಾರೋಪ ಹೊರಿಸಲಾಗಿತ್ತು.

ಡೆಲವೇರ್‌ನಲ್ಲಿ ಕೋಲ್ಟ್‌ ರಿವಾಲ್ವರ್‌ ಖರೀದಿಸಿದ್ದ ಸಮಯದಲ್ಲಿ ತಾನು ಡ್ರಗ್ಸ್‌ ಬಳಸುತ್ತಿರಲಿಲ್ಲ ಎಂದು ಹಂಟರ್ ಬೈಡನ್‌ ಸುಳ್ಳು ಹೇಳಿಕೆ ನೀಡಿದ್ದರು ಎಂದು ಎರಡನೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಸುಳ್ಳು ಹೇಳಿಕೆಗಳ ಆಧಾರದಲ್ಲಿ ಅಕ್ರಮ ಬಂದೂಕು ಹೊಂದಿದ್ದರು ಎಂಬ ಮೂರನೇ ದೊಷಾರೋಪವೂ ಹಂಟರ್‌ ಬೈಡನ್‌ ಮೇಲೆ ಇತ್ತು.

ಅಕ್ರಮವಾಗಿ ಬಂದೂಕು ಖರೀದಿಸಿದ ಪ್ರಕರಣದಲ್ಲಿ ಡಿಸೆಂಬರ್ 12 ರಂದು ಶಿಕ್ಷೆ ವಿಧಿಸಲು ನಿರ್ಧರಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಫೆಡರಲ್ ತೆರಿಗೆ ವಂಚನೆ ಆರೋಪಗಳಿಗೆ ಅವರು ತಪ್ಪೊಪ್ಪಿಕೊಂಡ ಪ್ರತ್ಯೇಕ ಕ್ರಿಮಿನಲ್ ಪ್ರಕರಣದಲ್ಲಿ, ಇದೇ ಡಿಸೆಂಬರ್ 16ರಂದು ಶಿಕ್ಷೆ ಘೋಷಣೆಯಾಗಲಿತ್ತು. ಆದರೆ, ಬೈಡನ್ ಕ್ಷಮಾದಾನ ನೀಡುವ ಮೂಲಕ ಮಗನಿಗೆ ರಕ್ಷಣೆ ಒದಗಿಸಿದ್ದಾರೆ.

ಇದನ್ನೂ ಓದಿ : ‘ಹೆದ್ದಾರಿ ತಡೆದು ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ..’; ಪ್ರತಿಭಟನಾ ನಿರತ ರೈತ ಮುಖಂಡರಿಗೆ ಸುಪ್ರೀಂ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...