Homeಮುಖಪುಟಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

- Advertisement -
- Advertisement -

ನವೆಂಬರ್ 23ರಂದು ಪ್ರಕಟಗೊಂಡ ವಿಧಾನಸಭಾ ಚುನಾವಣೆಯ ಫಲಿತಾಂಶದ ಅಂಕಿ-ಅಂಶಗಳಿಂದ ಅಸಮಧಾನಗೊಂಡಿರುವ ಮಹಾರಾಷ್ಟ್ರದ ಗ್ರಾಮವೊಂದರ ಜನರು, ತಾವೇ ಖಾಸಗಿಯಾಗಿ ಇಂದು (ಡಿ.3) ಮರು ಮತದಾನ ಆಯೋಜಿಸಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರದ ಮಾಲ್ಶಿರಾಸ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರ್ಕಡವಾಡಿ ಗ್ರಾಮದ ಜನರು ಬ್ಯಾಲೆಟ್ ಪೇಪರ್ (ಮತ ಪತ್ರ) ಬಳಸಿ ಮರು ಮತದಾನ ನಡೆಸಲಿದ್ದಾರೆ.

ಪರಿಶಿಷ್ಟ ಜಾತಿಗೆ (ಎಸ್‌ಟಿ) ಮೀಸಲಾದ ಮಾಲ್ಶಿರಾಸ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿ ಉತ್ತಮ್ ಜನ್ಕರ್ ಅವರು ಬಿಜೆಪಿ ಅಭ್ಯರ್ಥಿ ರಾಮ್ ಸತುಪ್ತೆ ವಿರುದ್ದ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋತರೂ ಅವರು ಮರ್ಕಡವಾಡಿ ಗ್ರಾಮದಲ್ಲಿ ಪಡೆದ ಮತಗಳ ಸಂಖ್ಯೆ ಗೆದ್ದ ಅಭ್ಯರ್ಥಿಗಿಂತ ಹೆಚ್ಚಿದೆ. ಇದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಗ್ರಾಮದಲ್ಲಿ ಹೆಚ್ಚಿನ ಮತದಾರರು ಗೆದ್ದ ಎನ್‌ಸಿಪಿ ಅಭ್ಯರ್ಥಿಯ ಬೆಂಬಲಿಗರಿದ್ದೇವೆ. ನಮ್ಮ ಮತಗಳೆಲ್ಲ ಅವರಿಗೇ ಹೋಗಿದೆ. ಹೀಗಿದ್ದರೂ, ಬಿಜೆಪಿ ಅಭ್ಯರ್ಥಿ ಹೆಚ್ಚಿನ ಮತ ಪಡೆಯಲು ಹೇಗೆ ಸಾಧ್ಯ? ಚುನಾವಣಾ ಆಯೋಗದ ಅಂಕಿ-ಅಂಶಗಳು ಸರಿಯಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮಸ್ಥರಾದ ರಂಜೀತ್ ಮರ್ಕಡ್ ಈ ಬಗ್ಗೆ ಹೇಳಿಕೆ ನೀಡಿ “ನವೆಂಬರ್ 20ರಂದು ನಡೆದ ಚುನಾವಣೆಯಲ್ಲಿ ಗ್ರಾಮದ 2000 ಮಂದಿ ಅರ್ಹ ಮತದಾರರ ಪೈಕಿ 1900ಕ್ಕೂ ಹೆಚ್ಚು ಮಂದಿ ಮತ ಚಲಾಯಿಸಿದ್ದರು. ನಮ್ಮ ಗ್ರಾಮದಲ್ಲಿ ಮತದಾರರು ಜನ್ಕರ್ ಮತ್ತು ಮೋಹಿತೆ ಪಾಟೀಲ್ ಕುಟುಂಬವನ್ನು ಬೆಂಬಲಿಸುತ್ತಾ ಬಂದಿದ್ದರು. ಆದರೆ, ಈ ಬಾರಿ ಜನ್ಕರ್‌ಗೆ 843 ಮತಗಳು ಬಂದಿದ್ದರೆ, ಸಾತ್ಪುತೆ 1003 ಮತಗಳನ್ನು ಪಡೆದಿದ್ದಾರೆ. ಚುನಾವಣಾ ಆಯೋಗದ ಅಂಕಿ ಅಂಶದ ಬಗ್ಗೆ ನಂಬಿಕೆ ಇಲ್ಲ. ಆದ್ದರಿಂದ ಡಿಸೆಂಬರ್ 3ರಂದು ಮತಪತ್ರಗಳ ಮೂಲಕ ಮರು ಮತದಾನ ಆಯೋಜಿಸಿ, ಮತ ಹಂಚಿಕೆ ಬಗ್ಗೆ ಪುರಾವೆ ತೋರಿಸಲಿದ್ದೇವೆ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಗ್ರಾಮಸ್ಥರೇ ಹಣ ಸಂಗ್ರಹಿಸಿ ಎಲ್ಲಾ ಅಭ್ಯರ್ಥಿಗಳ ಭಾವಚಿತ್ರ ಹಾಗೂ ಹೆಸರನ್ನು ಒಳಗೊಂಡ ಮತಪತ್ರ ಮುದ್ರಿಸಿದ್ದಾರೆ. ಮತಪತ್ರದ ಮೂಲಕ ತಮ್ಮ ಹಕ್ಕು ಚಲಾಯಿಸುವಂತೆ ಬ್ಯಾನರ್‌ಗಳನ್ನೂ ಗ್ರಾಮದಲ್ಲಿ ಹಾಕಲಾಗಿದೆ. ಇಡೀ ಪ್ರಕ್ರಿಯೆಯನ್ನು ನಾವು ಅನುಸರಿಸಲಿದ್ದು, ಗ್ರಾಮಸ್ಥರೆಲ್ಲರೂ ಮತ ಚಲಾಯಿಸುವಂತೆ ಕೋರಿದ್ದೇವೆ ಎಂದು ಮತ್ತೋರ್ವ ಗ್ರಾಮಸ್ಥ ಅಮಿತ್ ವಾಘ್ಮೋರೆ ವಿವರಿಸಿದ್ದಾರೆ.

ಗ್ರಾಮಸ್ಥರ ಚುನಾವಣಾ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡಲು ಸರ್ಕಾರಿ ಅಧಿಕಾರಿಯನ್ನು ನೇಮಿಸುವಂತೆ ಕೋರಲಾಗಿತ್ತು. ಅದನ್ನು ತಿರಸ್ಕರಿಸಲಾಗಿದೆ ಎಂದು ವರದಿಯಾಗಿದೆ.

ಗ್ರಾಮಸ್ಥರ ನಡೆಗೆ ಸೊಲ್ಲಾಪುರ ಜಿಲ್ಲಾಡಳಿತ ಕಳವಳ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳು ಉದ್ವಿಗ್ನತೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ. ಖಾಸಗಿಯಾಗಿ ಮರು ಮತದಾನ ಮಾಡದಂತೆ ಸೂಚಿಸಿ ಹಲವು ಗ್ರಾಮಸ್ಥರಿಗೆ ಜಿಲ್ಲಾಡಳಿತ ನೋಟಿಸ್ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸೊಲ್ಲಾಪುರ ಎಸ್ಪಿ ಅತುಲ್ ಕುಲಕರ್ಣಿ ಮಾತನಾಡಿ, “ನಾವು ಮುಂಜಾಗ್ರತಾ ಸೂಚನೆಗಳನ್ನು ನೀಡಿದ್ದೇವೆ. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಗ್ರಾಮಸ್ಥರೊಂದಿಗೆ ಸಹಕರಿಸಲು ಮನವಿ ಮಾಡಿದ್ದೇವೆ. ಅನಧಿಕೃತ ಮರು ಮತದಾನ ಕೈಬಿಡುವಂತೆ ಜಿಲ್ಲಾಡಳಿತ ಮನವೊಲಿಸುವ ಪ್ರಯತ್ನ ಮಾಡುತ್ತಿದೆ” ಎಂದಿದ್ದಾರೆ.

ಎಚ್ಚರಿಕೆಗಳ ನಡುವೆಯೂ “ನಾವು ಮರು ಮತದಾನ ನಡೆಸಿಯೇ ತೀರುತ್ತೇವೆ” ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ನೂತನ ಶಾಸಕ ಉತ್ತಮ್ ಜನ್ಕರ್, ” ಗ್ರಾಮಸ್ಥರು ದೃಢ ಸಂಕಲ್ಪ ಮಾಡಿದ್ದಾರೆ. ಅವರು ಯಾವುದೇ ಸಮಸ್ಯೆಯಿಲ್ಲದೆ ಚುನಾವಣೆ ನಡೆಸಲಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊಸ ವಕ್ಫ್ ಬೋರ್ಡ್ ರಚಿಸಲಾಗುವುದು..’; ಆಂಧ್ರಪ್ರದೇಶ ಸರ್ಕಾರದಿಂದ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...