Homeಅಂತರಾಷ್ಟ್ರೀಯರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

ರಿಯಲ್ ಎಸ್ಟೇಟ್ ಉದ್ಯಮಿಯ ಮರಣದಂಡನೆ ಎತ್ತಿಹಿಡಿದ ವಿಯೆಟ್ನಾಂ ನ್ಯಾಯಾಲಯ

- Advertisement -
- Advertisement -

ಹನೋಯಿ: 12 ಬಿಲಿಯನ್ ಡಾಲರ್ ವಂಚನೆ ಪ್ರಕರಣದಲ್ಲಿ ದುರುಪಯೋಗ ಮತ್ತು ಲಂಚದ ಅಪರಾಧದಲ್ಲಿ ಸಿಲುಕಿರುವ ರಿಯಲ್ ಎಸ್ಟೇಟ್ ಉದ್ಯಮಿ ಟ್ರೂಂಗ್ ಮೈ ಲ್ಯಾನ್‌  ವಿರುದ್ಧದ ಮೇಲ್ಮನವಿಯನ್ನು ತಿರಸ್ಕರಿಸಿದ ನಂತರ ವಿಯೆಟ್ನಾಂನ ನ್ಯಾಯಾಲಯವು ವಿಧಿಸಿರುವ ಮರಣದಂಡನೆ ಶಿಕ್ಷೆಯನ್ನು ಮಂಗಳವಾರದಂದು ಮತ್ತೆ ಎತ್ತಿಹಿಡಿದಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

ವಿಯೆಟ್ನಾಂನಲ್ಲಿ ದಾಖಲೆಯ ಅತಿದೊಡ್ಡ ಹಣಕಾಸು ವಂಚನೆ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ವ್ಯಾನ್ ಥಿನ್ ಫಾಟ್ ಹೋಲ್ಡಿಂಗ್ಸ್ ಗ್ರೂಪ್‌ನ ಅಧ್ಯಕ್ಷೆಯಾಗಿರುವ ಲ್ಯಾನ್ ಅವರ ಪಾತ್ರಕ್ಕಾಗಿ ನ್ಯಾಯಾಲಯವು ಇದೇ ಏಪ್ರಿಲ್‌ನಲ್ಲಿ ಅವರಿಗೆ ಮರಣದಂಡನೆ ವಿಧಿಸಿತ್ತು.

ದಕ್ಷಿಣ ಹೋ ಚಿ ಮಿನ್ಹ್ ನಗರದ ಹೈ ಪೀಪಲ್ಸ್ ಕೋರ್ಟ್ ಲ್ಯಾನ್ ಮರಣದಂಡನೆಯನ್ನುಕಡಿತಗೊಳಿಸಲು ಯಾವುದೇ ಆಧಾರಗಳಿಲ್ಲದ ಕಾರಣ ಈ ನಿರ್ಧಾರಕ್ಕೆ ಬಂದಿದೆ ಎಂದು ಆನ್‌ಲೈನ್ ಪತ್ರಿಕೆ VnExpress ವರದಿ ಮಾಡಿದೆ.

ಲ್ಯಾನ್ ಅವರು ವಂಚಿಸಿದ ಹಣದ ಮುಕ್ಕಾಲು ಭಾಗವನ್ನು ಹಿಂದಿರುಗಿಸಲು ಸಾಧ್ಯವಾದರೆ, ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

“ಲ್ಯಾನ್  ಪ್ರಕರಣ ದೇಶದ ಇತಿಹಾಸದಲ್ಲಿ ಅಭೂತಪೂರ್ವವಾಗಿದೆ ಹಾಗೆಯೇ  ದುರುಪಯೋಗಪಡಿಸಿಕೊಂಡ ಹಣದ ಮೊತ್ತವು ಅಭೂತಪೂರ್ವವಾಗಿ ದೊಡ್ಡದಾಗಿದೆ. ಅದು ಎಷ್ಟೆಂದರೆ ಮರುಪಡೆಯಲಾಗದಷ್ಟು” ಎಂದು ಸರ್ಕಾರಿ ಆನ್‌ಲೈನ್ ಪತ್ರಿಕೆ ಹೇಳಿದೆ.

ಈ ಪ್ರಕರಣವು ಸಮಾಜ, ದೇಶದ ಹಣಕಾಸು ಮಾರುಕಟ್ಟೆ, ಆರ್ಥಿಕತೆಯ ಹಲವು ಅಂಶಗಳ ಮೇಲೆ ಪರಿಣಾಮ ಬೀರಿದೆ ಎಂದು ಅದು ತಿಳಿಸಿದೆ.

ಲ್ಯಾನ್ ತನ್ನ ತಪ್ಪನ್ನು  ಒಪ್ಪಿಕೊಂಡಿರುವುದು, ಪಶ್ಚಾತ್ತಾಪ ಪಡುವುದು ಮತ್ತು ದುರುಪಯೋಗಪಡಿಸಿಕೊಂಡ ಹಣದ ಒಂದು ಭಾಗವನ್ನು ಮರುಪಾವತಿ ಮಾಡುವುದರಿಂದ ಶಿಕ್ಷೆಯಿಂದ ಕೆಲ ರಿಯಾಯತಿ ಪಡೆಯಬಹುದಾಗಿದೆ ಎಂದು ಅವರ ವಕೀಲರ ಹೇಳಿಕೆಯನ್ನು ರಾಜ್ಯ ಮಾಧ್ಯಮವು ಉಲ್ಲೇಖಿಸಿದೆ, ಆದರೆ ಪ್ರಾಸಿಕ್ಯೂಟರ್‌ಗಳು ಇದಕ್ಕೆ ಸಾಕಾಗುವುದಿಲ್ಲ ಎಂದು ಅದು ಹೇಳಿದೆ.

ಲ್ಯಾನ್‌ನ ವಕೀಲರಿಂದ  ಹೆಚ್ಚಿನ ಹೇಳಿಕೆಗಳನ್ನು ಪಡೆಯಲು ಮಾಧ್ಯಮಗಳಿಗೆ ಇಲ್ಲಿಯವರೆಗೂ ಸಾಧ್ಯವಾಗುತ್ತಿಲ್ಲ.

ವಿಯೆಟ್ನಾಂನ ನ್ಯಾಯಾಲಯದಲ್ಲಿ ಮರುವಿಚಾರಣೆಯ ಕಾರ್ಯವಿಧಾನಗಳ ಅಡಿಯಲ್ಲಿ  ಇದನ್ನು ಇನ್ನಷ್ಟು ಪರಿಶೀಲಿಸುವ ಹಕ್ಕನ್ನು ಲ್ಯಾನ್ ಹೊಂದಿದ್ದಾರೆ.

ಠೇವಣಿ ಇರಿಸುವ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಸೈಗಾನ್ ಜಾಯಿಂಟ್ ಸ್ಟಾಕ್ ಕಮರ್ಷಿಯಲ್ ಬ್ಯಾಂಕ್ (SCB) ನಲ್ಲಿ  ವಂಚನೆಯ ಕಾರಣಕ್ಕಾಗಿ 2022ರಲ್ಲಿ ಲ್ಯಾನ್ ಅವರ ಬಂಧನ ದೇಶದಲ್ಲಿ ಭಾರೀ ಸಂಚಲನೆಯನ್ನುಂಟು ಮಾಡಿತ್ತು.

ಮರಣದಂಡನೆಯ ಹೊರತಾಗಿಯೂ, ವಂಚನೆ, ಮನಿ ಲಾಂಡರಿಂಗ್ ಮತ್ತು ಅಕ್ರಮ ಗಡಿಯಾಚೆಗಿನ ಹಣ ವರ್ಗಾವಣೆಯ ಮೂಲಕ ಅಪಾರ ಆಸ್ತಿ ಗಳಿಕೆ ಆರೋಪದ ಮೇಲೆ ಅಕ್ಟೋಬರ್‌ನಲ್ಲಿ ನಡೆದ ಪ್ರತ್ಯೇಕ ವಿಚಾರಣೆಯಲ್ಲಿ ಲ್ಯಾನ್‌ಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಲಾಯಿತು.

ಇದನ್ನೂ ಓದಿ…ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...