Homeಮುಖಪುಟ'ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ' - ಸಂಸತ್ತಿನಲ್ಲಿ ಅಖಿಲೇಶ್ ಯಾದವ್

‘ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ’ – ಸಂಸತ್ತಿನಲ್ಲಿ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಐದು ಜನರ ಸಾವಿಗೆ ಕಾರಣವಾದ ಹಿಂಸಾಚಾರದ ವಿಚಾರವು ಮಂಗಳವಾರ ಸಂಸತ್ತಿನಲ್ಲಿ ಪ್ರತಿಧ್ವನಿಸಿದ್ದು, ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಅಖಿಲೇಶ್ ಯಾದವ್ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಹಿಂಸಾಚಾರವನ್ನು “ಯೋಜಿತ ಪಿತೂರಿ” ಎಂದು ಕರೆದಿರುವ ಅಖಿಲೇಶ್ ಅವರು, ಪ್ರದೇಶದಲ್ಲಿ ಸಹೋದರತ್ವದ ಮೇಲೆ “ಗುಂಡು ಹಾರಿಸುವ” ಗುರಿಯನ್ನು ಈ ಪಿತೂರಿ ಹೊಂದಿತ್ತು ಎಂದು ಹೇಳಿದ್ದಾರೆ. ಇಂತಹ ಮಸೀದಿ ಸಮೀಕ್ಷೆಗಳ ಮೂಲಕ ಬಿಜೆಪಿಯು ದೇಶದ “ಗಂಗಾ-ಜಮುನಾ ತೆಹಜೀಬ್” (ಧರ್ಮ ಸಮನ್ವಯ ಸಂಸ್ಕೃತಿ) ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಂಭಾಲ್ ಹಿಂಸಾಚಾರ

“ಸಂಭಾಲ್ ತನ್ನ ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ವರ್ಷಗಳಿಂದ ಜನರು ಈ ಸಹೋದರತ್ವದೊಂದಿಗೆ ವಾಸಿಸುತ್ತಿದ್ದಾರೆ. ಈ ಸಹೋದರತ್ವವನ್ನು ಸಂಭಾಲ್‌ನಲ್ಲಿ ಶೂಟ್ ಮಾಡಲು ಯೋಜಿತ ಸಂಚು ಈಗ ನಡೆದಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ನವೆಂಬರ್ 24 ರಂದು, ಸಂಭಾಲ್‌ನ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಐವರು ಮುಸ್ಲಿಮರ ಸಾವಿಗೀಡಾಗಿದ್ದರು. ಘಟನೆಯ ವೇಳೆ ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ಮತ್ತು ಹಲವಾರು ವಾಹನಗಳನ್ನು ಸುಟ್ಟುಹಾಕಲಾಯಿತು ಅಥವಾ ಹಾನಿಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿ ಮತ್ತು ಅದರ ಹಿತೈಷಿಗಳು ಸಂಭಾಲ್‌ನಲ್ಲಿ ನಡೆಸುತ್ತಿರುವ ಉತ್ಖನನವು ದೇಶದ ಸಹೋದರತ್ವಕ್ಕೆ ವಿರುದ್ಧವಾಗಿದೆ. ಇದು ನಮ್ಮ ಗಂಗಾ-ಜಮುನಾ ತೆಹಜೀಬ್ ಅನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದು ಯೋಜಿತ ಪಿತೂರಿಯಾಗಿದ್ದು, ಏಕೆಂದರೆ ಉತ್ತರ ಪ್ರದೇಶದ ಚುನಾವಣೆಯನ್ನು 13 ರಂದು ನಡೆಸಬೇಕಾಗಿತ್ತು, ಅದು 20 ಕ್ಕೆ ಬದಲಾಗಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪುರಾತನ ಹಿಂದೂ ದೇವಾಲಯ ಇದೆಯೆ ಎಂದು ವಕೀಲ ಕಮಿಷನರ್ ಮೂಲಕ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಆದೇಶಿಸಿದ್ದ ಸಂಭಾಲ್ ನ್ಯಾಯಾಲಯದ ತೀರ್ಪಿನ ವಿರುದ್ಧ ಶಾಹಿ ಜಾಮಾ ಮಸೀದಿಯ ಉಸ್ತುವಾರಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದಕ್ಕೆ ಮೊದಲು ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಆರಾಧನಾ ಸ್ಥಳಗಳ ಕಾಯಿದೆ (1991) ಜಾರಿಯಲ್ಲಿದ್ದರೂ ಮಸೀದಿಯ ಸಮೀಕ್ಷೆಗೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದೆ ಎಂದು ಲೋಕಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ಈ ಸರ್ಕಾರಕ್ಕೆ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ನಾವು ಸುಮ್ಮನೆ ಹೇಳುತ್ತಿಲ್ಲ. ಆರಾಧನಾ ಸ್ಥಳಗಳ ಕಾಯಿದೆ ಇರುವಾಗ, ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ವಿರುದ್ಧ ಅರ್ಜಿ ಸಲ್ಲಿಸಲಾಯಿತು. ನವೆಂಬರ್ 19 ರಂದು, ಅದೇ ದಿನ ಇನ್ನೊಂದು ಕಡೆ ಅರ್ಜಿ ಸಲ್ಲಿಸುವ ಮೊದಲೇ ಮಸೀದಿಯ ಸಮೀಕ್ಷೆಯ ಆದೇಶವನ್ನು ರವಾನಿಸಲಾಯಿತು. ಅದಾಗಿ ಸಂಭಾಲ್ ಜಿಲ್ಲಾಡಳಿತ ಮತ್ತು ಪೊಲೀಸರು ಎರಡೇ ಎರಡು ಗಂಟೆಗಳ ಅಂತರದಲ್ಲಿ ಸಮೀಕ್ಷೆಗೆ ಆಗಮಿಸಿರುವುದು ಆಘಾತಕಾರಿಯಾಗಿದೆ ಎಂದು ಅಖಿಲೇಶ್ ಹೇಳಿದ್ದಾರೆ.

“ಜಾಮಾ ಮಸೀದಿ ಸಮಿತಿ ಮತ್ತು ಇತರ ಮಧ್ಯಸ್ಥಗಾರರು ಸಮೀಕ್ಷೆಗೆ ಸಹಕರಿಸಿದ್ದಾರೆ. 2.5 ಗಂಟೆಗಳ ನಂತರ ಸರ್ವೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಆದರೆ ನವೆಂಬರ್ 22 ರಂದು ಶುಕ್ರವಾರ ಪ್ರಾರ್ಥನೆ ಸಲ್ಲಿಸಲು ಜನರು ಬಂದಾಗ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರಿಂದ ಒಳಗೆ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಜನರು ಶಾಂತರಾಗಿ ಪ್ರಾರ್ಥನೆ ಸಲ್ಲಿಸಿದರು. ನವೆಂಬರ್ 29 ರಂದು ನ್ಯಾಯಾಲಯದ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಮತ್ತು ಶಾಹಿ ಜಾಮಾ ಮಸೀದಿ ಸಮಿತಿಯು ಪ್ರಕರಣಕ್ಕೆ ಸಿದ್ಧತೆ ನಡೆಸಿದೆ. ಆದಾಗ್ಯೂ, ನವೆಂಬರ್ 23 ರ ರಾತ್ರಿ, ಮರುದಿನ [ನವೆಂಬರ್ 24] ಮತ್ತೊಂದು ಸಮೀಕ್ಷೆ ನಡೆಸಲಾಗುವುದು ಎಂದು ಆಡಳಿತ ಹೇಳಿದೆ.”

“ಒಂದು ಸಮೀಕ್ಷೆ ಪೂರ್ಣಗೊಂಡಿರುವಾಗ ಮತ್ತೊಂದು ಸಮೀಕ್ಷೆ ಏಕೆ ಬೇಕು ಎಂದು ಮಸೀದಿ ಸಮಿತಿ ಕೇಳಿದ್ದು, ಎರಡನೆಯದನ್ನು ಮಾಡಬೇಕಾದರೆ ನ್ಯಾಯಾಲಯದ ಆದೇಶವನ್ನು ಪಡೆಯಬೇಕು ಎಂದು ಹೇಳಿತ್ತು. ಆದರೆ ಜಿಲ್ಲಾಡಳಿತ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಸರ್ವಾಧಿಕಾರಿ ಧೋರಣೆ ಅನುಸರಿಸಿ ಮರುದಿನವೇ ಮಸೀದಿಗೆ ಬಂದಿತ್ತು. ಅವರನ್ನು ಮತ್ತೆ ಮಸೀದಿ ಸಮಿತಿ ಸದಸ್ಯರು ಸಮೀಕ್ಷೆಗಾಗಿ ಒಳಗೆ ಕರೆದೊಯ್ದರು. ಸಮೀಕ್ಷೆ ನಡೆಸಿದ ನಂತರ, ಸಮೀಕ್ಷೆಯ ಕಾರಣವನ್ನು ತಿಳಿಯಲು ಜನರು ಜಮಾಯಿಸಿದ್ದು, ಈ ವೇಳೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ” ಎಂದು ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

“ಆದರೆ ಸುಮಾರು 1.5 ಗಂಟೆಗಳ ನಂತರ ಜನರು ಅಲ್ಲಿ ಜಮಾಯಿಸಿದರು ಮತ್ತು ಸಮೀಕ್ಷೆಯ ಕಾರಣವನ್ನು ತಿಳಿಯಲು ಪ್ರಯತ್ನಿಸಿದರು. ಅಲ್ಲಿ ನೆರೆದಿದ್ದ ಜನರನ್ನು ಸರ್ಕಲ್ ಆಫೀಸರ್ ನಿಂದಿಸಿ ಲಾಠಿ ಚಾರ್ಜ್ ಮಾಡಿ ಗಾಯಗೊಳಿಸಿದ್ದಾರೆ. ಇದನ್ನು ವಿರೋಧಿಸಿ ಕೆಲವರು ಕಲ್ಲು ತೂರಾಟ ನಡೆಸಿದರು, ನಂತರ ಪೊಲೀಸರು ತಮ್ಮ ಸರ್ಕಾರಿ ಮತ್ತು ಖಾಸಗಿ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದರು – ಅದರ ವೀಡಿಯೊ ರೆಕಾರ್ಡಿಂಗ್‌ಗಳಿವೆ – ಮತ್ತು ಇದರಿಂದಾಗಿ ಹತ್ತಾರು ಜನರು ಗಾಯಗೊಂಡರು. ಅಗತ್ಯ ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಟ 5 ಅಮಾಯಕರು ಕೊಂದರು. ಸಂಭಾಲ್‌ನಲ್ಲಿ ಶಾಂತಿ ಕದಡಲು ಅರ್ಜಿ ಸಲ್ಲಿಸಿದವರಷ್ಟೇ ಪೊಲೀಸರು ಮತ್ತು ಜಿಲ್ಲಾಡಳಿತ ಕಾರಣ. ಅವರನ್ನು ಅಮಾನತುಗೊಳಿಸಬೇಕು ಮತ್ತು ಪೊಲೀಸರು ಮತ್ತು ಜಿಲ್ಲಾಡಳಿತದ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಬೇಕು. ಹೀಗೆ ಮಾಡಿದರೆ ಜನರಿಗೆ ನ್ಯಾಯ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಕಾನೂನುಬಾಹಿರ ಘಟನೆಗಳು ನಡೆಯುವುದಿಲ್ಲ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಮಂಗಳವಾರ ಸದನದ ಕಲಾಪ ಆರಂಭವಾದಾಗ ಪ್ರತಿಪಕ್ಷಗಳು ಸಂಭಾಲ್ ಕುರಿತು ಚರ್ಚೆಗೆ ಒತ್ತಾಯಿಸಿದ ನಂತರ ಶೂನ್ಯ ವೇಳೆಯಲ್ಲಿ ಅಖಿಲೇಶ್ ಯಾದವ್ ಈ ಭಾಷಣ ಮಾಡಿದ್ದಾರೆ. ಪ್ರಶ್ನೋತ್ತರ ಅವಧಿ ಆರಂಭವಾದ ತಕ್ಷಣ ಪ್ರತಿಪಕ್ಷ ಸದಸ್ಯರು ಸಂಭಾಲ್ ಕುರಿತು ಚರ್ಚೆ ನಡೆಸುವಂತೆ ಘೋಷಣೆ ಕೂಗಿದರು. ಆದರೆ ಶೂನ್ಯವೇಳೆಯಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಪ್ರತಿಪಕ್ಷದ ಸದಸ್ಯರು ಕೆಲಕಾಲ ಸಭಾತ್ಯಾಗ ಮಾಡಿದರೂ, ಪ್ರಶ್ನೋತ್ತರ ಅವಧಿಯ ಕೆಲ ಹೊತ್ತಿನಲ್ಲೇ ಸದನಕ್ಕೆ ಮರಳಿದರು.

ಸಂಭಾಲ್ ಘಟನೆಯನ್ನು ಅಖಿಲೇಶ್ ಯಾದವ್ ಮಾತ್ರವಲ್ಲದೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಸದ ಇ.ಟಿ. ಮೊಹಮ್ಮದ್ ಬಶೀರ್, ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ವೇಳೆ ಅವರು, 1991 ರ ಪೂಜಾ ಸ್ಥಳಗಳ ಕಾಯಿದೆಯು ಈಗ ಬೆದರಿಕೆಯಲ್ಲಿದೆ ಎಂದು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

“ಆ ಪ್ರಮುಖ ಕಾನೂನು (ಆರಾಧನೆಯ ಸ್ಥಳಗಳ ಕಾಯಿದೆ) ಈಗ ಜೀವನ್ಮರಣದ ನಡುವೆ ಇದೆ. ಸಂಭಾಲ್ ಮಸೀದಿ ಪ್ರಕರಣದಲ್ಲಿ ಐವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದೇಶದಲ್ಲಿ ಶಾಂತಿಯುತ ಸಹಬಾಳ್ವೆ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿರುವುದು ಆಘಾತಕಾರಿಯಾಗಿದೆ. ನಮ್ಮ ಜಾತ್ಯತೀತತೆಯನ್ನು ಹೊಡೆದುಹಾಕಲು ಈ ರೀತಿಯ ಕೆಲಸಗಳು ನಡೆಯುತ್ತಿವೆ” ಎಂದು ಬಶೀರ್ ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸದ ನಂತರದ ಹಿಂಸಾಚಾರವನ್ನು ಉಲ್ಲೇಖಿಸಿದ ಬಶೀರ್, “ಒಂದು ಬಾಬರಿ ಮಸೀದಿಯ ಬದಲಿಗೆ, ಈಗ ಈ ರೀತಿಯ ದುಷ್ಟರು ಹೆಚ್ಚು ಹೆಚ್ಚು ಬಾಬರಿ ಮಸೀದಿಯ ಪರಿಸ್ಥಿತಿಯನ್ನು ನಿರ್ಮಿಸಲು ಹೊರಟಿದ್ದಾರೆ” ಎಂದು ಹೇಳಿದ್ದಾರೆ.

ಶೂನ್ಯವೇಳೆಯಲ್ಲಿ ಸಮಾಜವಾದಿ ಸಂಸದ ರಾಮ್ ಗೋಪಾಲ್ ಯಾದವ್ ಅವರು ರಾಜ್ಯಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಮತದಾರರನ್ನು ಮತದಾನ ಮಾಡದಂತೆ ತಡೆಹಿಡಿಯಲಾಗಿದೆ ಎಂದು ಆರೋಪದ ಗಮನ ಬೇರೆಡೆ ಸೆಳೆಯಲು ಸಂಭಾಲ್ ಮಸೀದಿಯಲ್ಲಿ ಸಮೀಕ್ಷೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಉತ್ತರ ಪ್ರದೇಶದಲ್ಲಿ ಮೊನ್ನೆ ನಡೆದ ಚುನಾವಣೆಗಳಲ್ಲಿ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪೊಲೀಸರು ಯಾರಿಗೂ ಮತದಾನ ಮಾಡಲು ಅವಕಾಶ ನೀಡಲಿಲ್ಲ. ಅವರು ಬಲವಂತವಾಗಿ ಚುನಾವಣೆಯನ್ನು ಕೈಗೆತ್ತಿಕೊಂಡರು ಎಂದು ನಾನು ಮತ್ತು ಅನೇಕ ಜನರು ನಂಬಿದ್ದೇವೆ. ಅದರಿಂದ ಗಮನ ಬೇರೆಡೆ ಸೆಳೆಯಲು ಇದೆಲ್ಲವನ್ನೂ ಯೋಜನಾಬದ್ಧವಾಗಿ ಮಾಡಲಾಗಿದೆ” ಎಂದರು. ಈ ವೇಳೆ ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಗೋಪಾಲ್ ಯಾದವ್ ಅವರನ್ನು ಅಡ್ಡಿಪಡಿಸಿ, ಚುನಾವಣೆಯ ಕುರಿತು ಅವರ ಹೇಳಿಕೆಗಳು ದಾಖಲೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...