Homeಮುಖಪುಟ'ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ' - ಸಂಸತ್ತಿನಲ್ಲಿ ಅಖಿಲೇಶ್ ಯಾದವ್

‘ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ’ – ಸಂಸತ್ತಿನಲ್ಲಿ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಐದು ಜನರ ಸಾವಿಗೆ ಕಾರಣವಾದ ಹಿಂಸಾಚಾರದ ವಿಚಾರವು ಮಂಗಳವಾರ ಸಂಸತ್ತಿನಲ್ಲಿ ಪ್ರತಿಧ್ವನಿಸಿದ್ದು, ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಅಖಿಲೇಶ್ ಯಾದವ್ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಹಿಂಸಾಚಾರವನ್ನು “ಯೋಜಿತ ಪಿತೂರಿ” ಎಂದು ಕರೆದಿರುವ ಅಖಿಲೇಶ್ ಅವರು, ಪ್ರದೇಶದಲ್ಲಿ ಸಹೋದರತ್ವದ ಮೇಲೆ “ಗುಂಡು ಹಾರಿಸುವ” ಗುರಿಯನ್ನು ಈ ಪಿತೂರಿ ಹೊಂದಿತ್ತು ಎಂದು ಹೇಳಿದ್ದಾರೆ. ಇಂತಹ ಮಸೀದಿ ಸಮೀಕ್ಷೆಗಳ ಮೂಲಕ ಬಿಜೆಪಿಯು ದೇಶದ “ಗಂಗಾ-ಜಮುನಾ ತೆಹಜೀಬ್” (ಧರ್ಮ ಸಮನ್ವಯ ಸಂಸ್ಕೃತಿ) ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಂಭಾಲ್ ಹಿಂಸಾಚಾರ

“ಸಂಭಾಲ್ ತನ್ನ ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ವರ್ಷಗಳಿಂದ ಜನರು ಈ ಸಹೋದರತ್ವದೊಂದಿಗೆ ವಾಸಿಸುತ್ತಿದ್ದಾರೆ. ಈ ಸಹೋದರತ್ವವನ್ನು ಸಂಭಾಲ್‌ನಲ್ಲಿ ಶೂಟ್ ಮಾಡಲು ಯೋಜಿತ ಸಂಚು ಈಗ ನಡೆದಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ನವೆಂಬರ್ 24 ರಂದು, ಸಂಭಾಲ್‌ನ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಐವರು ಮುಸ್ಲಿಮರ ಸಾವಿಗೀಡಾಗಿದ್ದರು. ಘಟನೆಯ ವೇಳೆ ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ಮತ್ತು ಹಲವಾರು ವಾಹನಗಳನ್ನು ಸುಟ್ಟುಹಾಕಲಾಯಿತು ಅಥವಾ ಹಾನಿಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿ ಮತ್ತು ಅದರ ಹಿತೈಷಿಗಳು ಸಂಭಾಲ್‌ನಲ್ಲಿ ನಡೆಸುತ್ತಿರುವ ಉತ್ಖನನವು ದೇಶದ ಸಹೋದರತ್ವಕ್ಕೆ ವಿರುದ್ಧವಾಗಿದೆ. ಇದು ನಮ್ಮ ಗಂಗಾ-ಜಮುನಾ ತೆಹಜೀಬ್ ಅನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದು ಯೋಜಿತ ಪಿತೂರಿಯಾಗಿದ್ದು, ಏಕೆಂದರೆ ಉತ್ತರ ಪ್ರದೇಶದ ಚುನಾವಣೆಯನ್ನು 13 ರಂದು ನಡೆಸಬೇಕಾಗಿತ್ತು, ಅದು 20 ಕ್ಕೆ ಬದಲಾಗಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪುರಾತನ ಹಿಂದೂ ದೇವಾಲಯ ಇದೆಯೆ ಎಂದು ವಕೀಲ ಕಮಿಷನರ್ ಮೂಲಕ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಆದೇಶಿಸಿದ್ದ ಸಂಭಾಲ್ ನ್ಯಾಯಾಲಯದ ತೀರ್ಪಿನ ವಿರುದ್ಧ ಶಾಹಿ ಜಾಮಾ ಮಸೀದಿಯ ಉಸ್ತುವಾರಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದಕ್ಕೆ ಮೊದಲು ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಆರಾಧನಾ ಸ್ಥಳಗಳ ಕಾಯಿದೆ (1991) ಜಾರಿಯಲ್ಲಿದ್ದರೂ ಮಸೀದಿಯ ಸಮೀಕ್ಷೆಗೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದೆ ಎಂದು ಲೋಕಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ಈ ಸರ್ಕಾರಕ್ಕೆ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ನಾವು ಸುಮ್ಮನೆ ಹೇಳುತ್ತಿಲ್ಲ. ಆರಾಧನಾ ಸ್ಥಳಗಳ ಕಾಯಿದೆ ಇರುವಾಗ, ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ವಿರುದ್ಧ ಅರ್ಜಿ ಸಲ್ಲಿಸಲಾಯಿತು. ನವೆಂಬರ್ 19 ರಂದು, ಅದೇ ದಿನ ಇನ್ನೊಂದು ಕಡೆ ಅರ್ಜಿ ಸಲ್ಲಿಸುವ ಮೊದಲೇ ಮಸೀದಿಯ ಸಮೀಕ್ಷೆಯ ಆದೇಶವನ್ನು ರವಾನಿಸಲಾಯಿತು. ಅದಾಗಿ ಸಂಭಾಲ್ ಜಿಲ್ಲಾಡಳಿತ ಮತ್ತು ಪೊಲೀಸರು ಎರಡೇ ಎರಡು ಗಂಟೆಗಳ ಅಂತರದಲ್ಲಿ ಸಮೀಕ್ಷೆಗೆ ಆಗಮಿಸಿರುವುದು ಆಘಾತಕಾರಿಯಾಗಿದೆ ಎಂದು ಅಖಿಲೇಶ್ ಹೇಳಿದ್ದಾರೆ.

“ಜಾಮಾ ಮಸೀದಿ ಸಮಿತಿ ಮತ್ತು ಇತರ ಮಧ್ಯಸ್ಥಗಾರರು ಸಮೀಕ್ಷೆಗೆ ಸಹಕರಿಸಿದ್ದಾರೆ. 2.5 ಗಂಟೆಗಳ ನಂತರ ಸರ್ವೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಆದರೆ ನವೆಂಬರ್ 22 ರಂದು ಶುಕ್ರವಾರ ಪ್ರಾರ್ಥನೆ ಸಲ್ಲಿಸಲು ಜನರು ಬಂದಾಗ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರಿಂದ ಒಳಗೆ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಜನರು ಶಾಂತರಾಗಿ ಪ್ರಾರ್ಥನೆ ಸಲ್ಲಿಸಿದರು. ನವೆಂಬರ್ 29 ರಂದು ನ್ಯಾಯಾಲಯದ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಮತ್ತು ಶಾಹಿ ಜಾಮಾ ಮಸೀದಿ ಸಮಿತಿಯು ಪ್ರಕರಣಕ್ಕೆ ಸಿದ್ಧತೆ ನಡೆಸಿದೆ. ಆದಾಗ್ಯೂ, ನವೆಂಬರ್ 23 ರ ರಾತ್ರಿ, ಮರುದಿನ [ನವೆಂಬರ್ 24] ಮತ್ತೊಂದು ಸಮೀಕ್ಷೆ ನಡೆಸಲಾಗುವುದು ಎಂದು ಆಡಳಿತ ಹೇಳಿದೆ.”

“ಒಂದು ಸಮೀಕ್ಷೆ ಪೂರ್ಣಗೊಂಡಿರುವಾಗ ಮತ್ತೊಂದು ಸಮೀಕ್ಷೆ ಏಕೆ ಬೇಕು ಎಂದು ಮಸೀದಿ ಸಮಿತಿ ಕೇಳಿದ್ದು, ಎರಡನೆಯದನ್ನು ಮಾಡಬೇಕಾದರೆ ನ್ಯಾಯಾಲಯದ ಆದೇಶವನ್ನು ಪಡೆಯಬೇಕು ಎಂದು ಹೇಳಿತ್ತು. ಆದರೆ ಜಿಲ್ಲಾಡಳಿತ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಸರ್ವಾಧಿಕಾರಿ ಧೋರಣೆ ಅನುಸರಿಸಿ ಮರುದಿನವೇ ಮಸೀದಿಗೆ ಬಂದಿತ್ತು. ಅವರನ್ನು ಮತ್ತೆ ಮಸೀದಿ ಸಮಿತಿ ಸದಸ್ಯರು ಸಮೀಕ್ಷೆಗಾಗಿ ಒಳಗೆ ಕರೆದೊಯ್ದರು. ಸಮೀಕ್ಷೆ ನಡೆಸಿದ ನಂತರ, ಸಮೀಕ್ಷೆಯ ಕಾರಣವನ್ನು ತಿಳಿಯಲು ಜನರು ಜಮಾಯಿಸಿದ್ದು, ಈ ವೇಳೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ” ಎಂದು ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

“ಆದರೆ ಸುಮಾರು 1.5 ಗಂಟೆಗಳ ನಂತರ ಜನರು ಅಲ್ಲಿ ಜಮಾಯಿಸಿದರು ಮತ್ತು ಸಮೀಕ್ಷೆಯ ಕಾರಣವನ್ನು ತಿಳಿಯಲು ಪ್ರಯತ್ನಿಸಿದರು. ಅಲ್ಲಿ ನೆರೆದಿದ್ದ ಜನರನ್ನು ಸರ್ಕಲ್ ಆಫೀಸರ್ ನಿಂದಿಸಿ ಲಾಠಿ ಚಾರ್ಜ್ ಮಾಡಿ ಗಾಯಗೊಳಿಸಿದ್ದಾರೆ. ಇದನ್ನು ವಿರೋಧಿಸಿ ಕೆಲವರು ಕಲ್ಲು ತೂರಾಟ ನಡೆಸಿದರು, ನಂತರ ಪೊಲೀಸರು ತಮ್ಮ ಸರ್ಕಾರಿ ಮತ್ತು ಖಾಸಗಿ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದರು – ಅದರ ವೀಡಿಯೊ ರೆಕಾರ್ಡಿಂಗ್‌ಗಳಿವೆ – ಮತ್ತು ಇದರಿಂದಾಗಿ ಹತ್ತಾರು ಜನರು ಗಾಯಗೊಂಡರು. ಅಗತ್ಯ ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಟ 5 ಅಮಾಯಕರು ಕೊಂದರು. ಸಂಭಾಲ್‌ನಲ್ಲಿ ಶಾಂತಿ ಕದಡಲು ಅರ್ಜಿ ಸಲ್ಲಿಸಿದವರಷ್ಟೇ ಪೊಲೀಸರು ಮತ್ತು ಜಿಲ್ಲಾಡಳಿತ ಕಾರಣ. ಅವರನ್ನು ಅಮಾನತುಗೊಳಿಸಬೇಕು ಮತ್ತು ಪೊಲೀಸರು ಮತ್ತು ಜಿಲ್ಲಾಡಳಿತದ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಬೇಕು. ಹೀಗೆ ಮಾಡಿದರೆ ಜನರಿಗೆ ನ್ಯಾಯ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಕಾನೂನುಬಾಹಿರ ಘಟನೆಗಳು ನಡೆಯುವುದಿಲ್ಲ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಮಂಗಳವಾರ ಸದನದ ಕಲಾಪ ಆರಂಭವಾದಾಗ ಪ್ರತಿಪಕ್ಷಗಳು ಸಂಭಾಲ್ ಕುರಿತು ಚರ್ಚೆಗೆ ಒತ್ತಾಯಿಸಿದ ನಂತರ ಶೂನ್ಯ ವೇಳೆಯಲ್ಲಿ ಅಖಿಲೇಶ್ ಯಾದವ್ ಈ ಭಾಷಣ ಮಾಡಿದ್ದಾರೆ. ಪ್ರಶ್ನೋತ್ತರ ಅವಧಿ ಆರಂಭವಾದ ತಕ್ಷಣ ಪ್ರತಿಪಕ್ಷ ಸದಸ್ಯರು ಸಂಭಾಲ್ ಕುರಿತು ಚರ್ಚೆ ನಡೆಸುವಂತೆ ಘೋಷಣೆ ಕೂಗಿದರು. ಆದರೆ ಶೂನ್ಯವೇಳೆಯಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಪ್ರತಿಪಕ್ಷದ ಸದಸ್ಯರು ಕೆಲಕಾಲ ಸಭಾತ್ಯಾಗ ಮಾಡಿದರೂ, ಪ್ರಶ್ನೋತ್ತರ ಅವಧಿಯ ಕೆಲ ಹೊತ್ತಿನಲ್ಲೇ ಸದನಕ್ಕೆ ಮರಳಿದರು.

ಸಂಭಾಲ್ ಘಟನೆಯನ್ನು ಅಖಿಲೇಶ್ ಯಾದವ್ ಮಾತ್ರವಲ್ಲದೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಸದ ಇ.ಟಿ. ಮೊಹಮ್ಮದ್ ಬಶೀರ್, ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ವೇಳೆ ಅವರು, 1991 ರ ಪೂಜಾ ಸ್ಥಳಗಳ ಕಾಯಿದೆಯು ಈಗ ಬೆದರಿಕೆಯಲ್ಲಿದೆ ಎಂದು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

“ಆ ಪ್ರಮುಖ ಕಾನೂನು (ಆರಾಧನೆಯ ಸ್ಥಳಗಳ ಕಾಯಿದೆ) ಈಗ ಜೀವನ್ಮರಣದ ನಡುವೆ ಇದೆ. ಸಂಭಾಲ್ ಮಸೀದಿ ಪ್ರಕರಣದಲ್ಲಿ ಐವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದೇಶದಲ್ಲಿ ಶಾಂತಿಯುತ ಸಹಬಾಳ್ವೆ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿರುವುದು ಆಘಾತಕಾರಿಯಾಗಿದೆ. ನಮ್ಮ ಜಾತ್ಯತೀತತೆಯನ್ನು ಹೊಡೆದುಹಾಕಲು ಈ ರೀತಿಯ ಕೆಲಸಗಳು ನಡೆಯುತ್ತಿವೆ” ಎಂದು ಬಶೀರ್ ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸದ ನಂತರದ ಹಿಂಸಾಚಾರವನ್ನು ಉಲ್ಲೇಖಿಸಿದ ಬಶೀರ್, “ಒಂದು ಬಾಬರಿ ಮಸೀದಿಯ ಬದಲಿಗೆ, ಈಗ ಈ ರೀತಿಯ ದುಷ್ಟರು ಹೆಚ್ಚು ಹೆಚ್ಚು ಬಾಬರಿ ಮಸೀದಿಯ ಪರಿಸ್ಥಿತಿಯನ್ನು ನಿರ್ಮಿಸಲು ಹೊರಟಿದ್ದಾರೆ” ಎಂದು ಹೇಳಿದ್ದಾರೆ.

ಶೂನ್ಯವೇಳೆಯಲ್ಲಿ ಸಮಾಜವಾದಿ ಸಂಸದ ರಾಮ್ ಗೋಪಾಲ್ ಯಾದವ್ ಅವರು ರಾಜ್ಯಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಮತದಾರರನ್ನು ಮತದಾನ ಮಾಡದಂತೆ ತಡೆಹಿಡಿಯಲಾಗಿದೆ ಎಂದು ಆರೋಪದ ಗಮನ ಬೇರೆಡೆ ಸೆಳೆಯಲು ಸಂಭಾಲ್ ಮಸೀದಿಯಲ್ಲಿ ಸಮೀಕ್ಷೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಉತ್ತರ ಪ್ರದೇಶದಲ್ಲಿ ಮೊನ್ನೆ ನಡೆದ ಚುನಾವಣೆಗಳಲ್ಲಿ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪೊಲೀಸರು ಯಾರಿಗೂ ಮತದಾನ ಮಾಡಲು ಅವಕಾಶ ನೀಡಲಿಲ್ಲ. ಅವರು ಬಲವಂತವಾಗಿ ಚುನಾವಣೆಯನ್ನು ಕೈಗೆತ್ತಿಕೊಂಡರು ಎಂದು ನಾನು ಮತ್ತು ಅನೇಕ ಜನರು ನಂಬಿದ್ದೇವೆ. ಅದರಿಂದ ಗಮನ ಬೇರೆಡೆ ಸೆಳೆಯಲು ಇದೆಲ್ಲವನ್ನೂ ಯೋಜನಾಬದ್ಧವಾಗಿ ಮಾಡಲಾಗಿದೆ” ಎಂದರು. ಈ ವೇಳೆ ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಗೋಪಾಲ್ ಯಾದವ್ ಅವರನ್ನು ಅಡ್ಡಿಪಡಿಸಿ, ಚುನಾವಣೆಯ ಕುರಿತು ಅವರ ಹೇಳಿಕೆಗಳು ದಾಖಲೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...