Homeಮುಖಪುಟಕದನ ವಿರಾಮ ಮುರಿದ ಇಸ್ರೇಲ್‌ : ಲೆಬನಾನ್‌ ಮೇಲೆ ದಾಳಿ ; 11 ಜನರ ಹತ್ಯೆ

ಕದನ ವಿರಾಮ ಮುರಿದ ಇಸ್ರೇಲ್‌ : ಲೆಬನಾನ್‌ ಮೇಲೆ ದಾಳಿ ; 11 ಜನರ ಹತ್ಯೆ

- Advertisement -
- Advertisement -

ಇಸ್ರೇಲ್‌ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಒಪ್ಪಂದ ನಡೆದರೂ, ಅದು ಹೆಸರಿಗೆ ಮಾತ್ರ ಎಂಬಂತಾಗಿದೆ. ಸೋಮವಾರ (ಡಿ.2) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಲೆಬನಾನ್‌ನ 11 ಜನರು ಸಾವನ್ನಪ್ಪಿದ್ದಾರೆ. ಆ ಬಳಿಕ ಪರಸ್ಪರ ಸಂಘರ್ಷ‍ ಉಲ್ಬಣಿಸಿದೆ.

ನವೆಂಬರ್ 27ರಂದು ಯುಎಸ್‌, ಈಜಿಪ್ಟ್, ಕತಾರ್ ಮತ್ತು ತುರ್ಕಿ ದೇಶಗಳ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಸೇನೆ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಕದನ ವಿರಾಮಕ್ಕೆ ಸಹಿ ಹಾಕಿತ್ತು. ಈ ವಿಚಾರವನ್ನು ಯುಎಸ್‌ ಅಧ್ಯಕ್ಷ ಜೋ ಬೈಡನ್‌ ಅವರೇ ಘೋಷಣೆ ಮಾಡಿದ್ದರು.

ಆದರೆ, ಇಸ್ರೇಲ್ ಕದನ ವಿರಾಮ ಮುರಿದು ಸೋಮವಾರ ಲೆಬನಾನ್‌ ಮೇಲೆ ವೈಮಾನಿಕ ದಾಳಿ ನಡೆಸಿ ಇಬ್ಬರನ್ನು ಕೊಂದು ಹಾಕಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಹಿಜ್ಬುಲ್ಲಾ ಕೂಡ ಇಸ್ರೇಲ್ ಸೇನಾ ನೆಲೆ ಮೇಲೆ ದಾಳಿ ನಡೆಸಿದೆ. ನಂತರ ಇಸ್ರೇಲ್ ನಡೆಸಿದ ಸರಣಿ ದಾಳಿಗಳಲ್ಲಿ 9 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿದೆ.

ಲೆಬನಾನ್ ತನ್ನದೇ ಎಂದು ಹೇಳಿಕೊಳ್ಳುವ ವಿವಾದಿತ ಪ್ರದೇಶವಾದ ಫಾರ್ ಚೌಬಾದ ಬೆಟ್ಟಗಳಲ್ಲಿನ ಇಸ್ರೇಲಿ ಮಿಲಿಟರಿ ನೆಲೆಯ ಮೇಲೆ ದಾಳಿ ಮಾಡುವ ಮೂಲಕ ಕದನ ವಿರಾಮದ ‘ಪುನರಾವರ್ತಿತ ಉಲ್ಲಂಘನೆ’ ಗಳಿಗೆ “ಪ್ರಾಥಮಿಕ ರಕ್ಷಣಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದೇವೆ ಎಂದು ಹಿಜ್ಬುಲ್ಲಾ ಸಮರ್ಥಿಸಿಕೊಂಡಿದೆ.

ಲೆಬನಾನ್‌ನಾದ್ಯಂತ ಮಾರಣಾಂತಿಕ ವಾಯುದಾಳಿಗಳು, ದಕ್ಷಿಣದಲ್ಲಿ ನಾಗರಿಕರ ಮೇಲೆ ಗುಂಡು ಹಾರಿಸುವುದು ಮತ್ತು ರಾಜಧಾನಿ ಬೈರುತ್ ಸೇರಿದಂತೆ ಲೆಬನಾನಿನ ವಾಯುಪ್ರದೇಶದಲ್ಲಿ ಡ್ರೋನ್‌, ಜೆಟ್‌ಗಳನ್ನು ಹಾರಿಸುವ ಮೂಲಕ ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ ಎಂದು ಹಿಜ್ಬುಲ್ಲಾ ಆರೋಪಿಸಿದೆ.

ದಾಳಿ ನಿಲ್ಲಿಸುವಂತೆ ಸಂಬಂಧಿ ಅಧಿಕಾರಿಗಳು ಮನವಿ ಮಾಡಿದರೂ, ಇಸ್ರೇಲ್ ಸುಮ್ಮನಾಗಲಿಲ್ಲ. ಹಾಗಾಗಿ, ನಾವು ಪ್ರತಿಕ್ರಿಯೆ ನೀಡಬೇಕಾಗಿ ಬಂದು ಎಂದು ಹಿಜ್ಬುಲ್ಲಾ ತಿಳಿಸಿದೆ.

ಆದರೆ, ಹಿಜ್ಬಲ್ಲಾ ಪ್ರತಿಕ್ರಿಯೆ ಇಸ್ರೇಲ್ ಕಡೆಯಿಂದ ಇನ್ನಷ್ಟು ದಾಳಿಗಳನ್ನು ಪ್ರೇರೇಪಿಸಿದ್ದಲ್ಲದೆ ಜೀವ ಹಾನಿಗೆ ಕಾರಣವಾಗಿದೆ. ಇಸ್ರೇಲ್ ಸರಣಿ ದಾಳಿಗಳನ್ನು ನಡೆಸಿ ಇದು ನಮ್ಮ ತೀಕ್ಣ ಪ್ರತಿಕ್ರಿಯೆ ಎಂದಿದೆ.

ಇಸ್ರೇಲ್ ಮತ್ತು ಹಿಬ್ಜುಲ್ಲಾ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಮನೆ ಬಿಟ್ಟು ದೂರದ ಊರುಗಳಿಗೆ ತೆರಳಿದ್ದ ಬೈರೂತ್‌ ಸೇರಿದಂತೆ ಲೆಬನಾನ್‌ನ ವಿವಿಧ ಭಾಗಗಳ ಜನರು ಮರಳಿ ಬಂದಿದ್ದರು. ಈಗ ಸಂಘರ್ಷ ಮತ್ತೆ ಉಲ್ಬಣಿಸಿದ್ದರಿಂದ ಅವರು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಇದನ್ನೂ ಓದಿ : ‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...