Homeಮುಖಪುಟಕದನ ವಿರಾಮ ಮುರಿದ ಇಸ್ರೇಲ್‌ : ಲೆಬನಾನ್‌ ಮೇಲೆ ದಾಳಿ ; 11 ಜನರ ಹತ್ಯೆ

ಕದನ ವಿರಾಮ ಮುರಿದ ಇಸ್ರೇಲ್‌ : ಲೆಬನಾನ್‌ ಮೇಲೆ ದಾಳಿ ; 11 ಜನರ ಹತ್ಯೆ

- Advertisement -
- Advertisement -

ಇಸ್ರೇಲ್‌ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಒಪ್ಪಂದ ನಡೆದರೂ, ಅದು ಹೆಸರಿಗೆ ಮಾತ್ರ ಎಂಬಂತಾಗಿದೆ. ಸೋಮವಾರ (ಡಿ.2) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಲೆಬನಾನ್‌ನ 11 ಜನರು ಸಾವನ್ನಪ್ಪಿದ್ದಾರೆ. ಆ ಬಳಿಕ ಪರಸ್ಪರ ಸಂಘರ್ಷ‍ ಉಲ್ಬಣಿಸಿದೆ.

ನವೆಂಬರ್ 27ರಂದು ಯುಎಸ್‌, ಈಜಿಪ್ಟ್, ಕತಾರ್ ಮತ್ತು ತುರ್ಕಿ ದೇಶಗಳ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಸೇನೆ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಕದನ ವಿರಾಮಕ್ಕೆ ಸಹಿ ಹಾಕಿತ್ತು. ಈ ವಿಚಾರವನ್ನು ಯುಎಸ್‌ ಅಧ್ಯಕ್ಷ ಜೋ ಬೈಡನ್‌ ಅವರೇ ಘೋಷಣೆ ಮಾಡಿದ್ದರು.

ಆದರೆ, ಇಸ್ರೇಲ್ ಕದನ ವಿರಾಮ ಮುರಿದು ಸೋಮವಾರ ಲೆಬನಾನ್‌ ಮೇಲೆ ವೈಮಾನಿಕ ದಾಳಿ ನಡೆಸಿ ಇಬ್ಬರನ್ನು ಕೊಂದು ಹಾಕಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಹಿಜ್ಬುಲ್ಲಾ ಕೂಡ ಇಸ್ರೇಲ್ ಸೇನಾ ನೆಲೆ ಮೇಲೆ ದಾಳಿ ನಡೆಸಿದೆ. ನಂತರ ಇಸ್ರೇಲ್ ನಡೆಸಿದ ಸರಣಿ ದಾಳಿಗಳಲ್ಲಿ 9 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿದೆ.

ಲೆಬನಾನ್ ತನ್ನದೇ ಎಂದು ಹೇಳಿಕೊಳ್ಳುವ ವಿವಾದಿತ ಪ್ರದೇಶವಾದ ಫಾರ್ ಚೌಬಾದ ಬೆಟ್ಟಗಳಲ್ಲಿನ ಇಸ್ರೇಲಿ ಮಿಲಿಟರಿ ನೆಲೆಯ ಮೇಲೆ ದಾಳಿ ಮಾಡುವ ಮೂಲಕ ಕದನ ವಿರಾಮದ ‘ಪುನರಾವರ್ತಿತ ಉಲ್ಲಂಘನೆ’ ಗಳಿಗೆ “ಪ್ರಾಥಮಿಕ ರಕ್ಷಣಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದೇವೆ ಎಂದು ಹಿಜ್ಬುಲ್ಲಾ ಸಮರ್ಥಿಸಿಕೊಂಡಿದೆ.

ಲೆಬನಾನ್‌ನಾದ್ಯಂತ ಮಾರಣಾಂತಿಕ ವಾಯುದಾಳಿಗಳು, ದಕ್ಷಿಣದಲ್ಲಿ ನಾಗರಿಕರ ಮೇಲೆ ಗುಂಡು ಹಾರಿಸುವುದು ಮತ್ತು ರಾಜಧಾನಿ ಬೈರುತ್ ಸೇರಿದಂತೆ ಲೆಬನಾನಿನ ವಾಯುಪ್ರದೇಶದಲ್ಲಿ ಡ್ರೋನ್‌, ಜೆಟ್‌ಗಳನ್ನು ಹಾರಿಸುವ ಮೂಲಕ ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ ಎಂದು ಹಿಜ್ಬುಲ್ಲಾ ಆರೋಪಿಸಿದೆ.

ದಾಳಿ ನಿಲ್ಲಿಸುವಂತೆ ಸಂಬಂಧಿ ಅಧಿಕಾರಿಗಳು ಮನವಿ ಮಾಡಿದರೂ, ಇಸ್ರೇಲ್ ಸುಮ್ಮನಾಗಲಿಲ್ಲ. ಹಾಗಾಗಿ, ನಾವು ಪ್ರತಿಕ್ರಿಯೆ ನೀಡಬೇಕಾಗಿ ಬಂದು ಎಂದು ಹಿಜ್ಬುಲ್ಲಾ ತಿಳಿಸಿದೆ.

ಆದರೆ, ಹಿಜ್ಬಲ್ಲಾ ಪ್ರತಿಕ್ರಿಯೆ ಇಸ್ರೇಲ್ ಕಡೆಯಿಂದ ಇನ್ನಷ್ಟು ದಾಳಿಗಳನ್ನು ಪ್ರೇರೇಪಿಸಿದ್ದಲ್ಲದೆ ಜೀವ ಹಾನಿಗೆ ಕಾರಣವಾಗಿದೆ. ಇಸ್ರೇಲ್ ಸರಣಿ ದಾಳಿಗಳನ್ನು ನಡೆಸಿ ಇದು ನಮ್ಮ ತೀಕ್ಣ ಪ್ರತಿಕ್ರಿಯೆ ಎಂದಿದೆ.

ಇಸ್ರೇಲ್ ಮತ್ತು ಹಿಬ್ಜುಲ್ಲಾ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಮನೆ ಬಿಟ್ಟು ದೂರದ ಊರುಗಳಿಗೆ ತೆರಳಿದ್ದ ಬೈರೂತ್‌ ಸೇರಿದಂತೆ ಲೆಬನಾನ್‌ನ ವಿವಿಧ ಭಾಗಗಳ ಜನರು ಮರಳಿ ಬಂದಿದ್ದರು. ಈಗ ಸಂಘರ್ಷ ಮತ್ತೆ ಉಲ್ಬಣಿಸಿದ್ದರಿಂದ ಅವರು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಇದನ್ನೂ ಓದಿ : ‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...