Homeಕರ್ನಾಟಕಪೇಜಾವರ ಸ್ವಾಮಿ ನಡೆ ಮತೀಯವಾದಿ ನಾಯಕರಂತಿದೆ : ಬಿ.ಕೆ ಹರಿಪ್ರಸಾದ್

ಪೇಜಾವರ ಸ್ವಾಮಿ ನಡೆ ಮತೀಯವಾದಿ ನಾಯಕರಂತಿದೆ : ಬಿ.ಕೆ ಹರಿಪ್ರಸಾದ್

- Advertisement -
- Advertisement -

“ನಮ್ಮನ್ನೂ ಗೌರವಿಸುವ ಸಂವಿಧಾನ ಬರಲಿ” ಎಂದು ಹೇಳಿಕೆ ಕೊಟ್ಟು, ನಂತರ “ನಾನು ಸಂವಿಧಾನ ವಿರುದ್ದ ಮಾತಾನಾಡಿಯೇ ಇಲ್ಲ” ಎಂದಿರುವ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಹರಿಪ್ರಸಾದ್, “ಸಂವಿಧಾನ ಬದಲಾವಣೆಯ ಮುಂಚೂಣಿಯ ನಾಯಕರಂತೆ ವರ್ತಿಸುತ್ತಿದ್ದ ಪೇಜಾವರರು, ತಮ್ಮ ಹೇಳಿಕೆಗಳು ಹಾಗೂ ನಡವಳಿಕೆಗಳಿಂದ ಪ್ರಜ್ಞಾವಂತ ಸಮಾಜ ತಿರುಗಿ ಬಿದ್ದಿರುವುದನ್ನ ನೋಡಿ “ನಾನು ಸಂವಿಧಾನ ವಿರೋಧಿ ಹೇಳಿಕೆಯೇ ನೀಡಿಲ್ಲ” ಎಂದು ತಾವೇ ಆಡಿದ ಮಾತುಗಳನ್ನು ತಿರುಚಿಕೊಳ್ಳುತ್ತಿರುವುದು ವಿಪರ್ಯಾಸ” ಎಂದಿದ್ದಾರೆ.

ಸಮಾಜ ದಾರಿ ತಪ್ಪಿದರೆ ತಿದ್ದುವ ಹಾಗೂ ಧರ್ಮದೊಳಗಿನ ಸಹಬಾಳ್ವೆಯ ತಿರುಳನ್ನು ತಿಳಿ ಹೇಳುವ ಸ್ವಾಮೀಜಿಗಳೇ ಸಮಾಜವನ್ನು ದಾರಿತಪ್ಪಿಸುತ್ತಿರುವುದು ಸ್ವಾಸ್ಥ್ಯ ಸಮಾಜವನ್ನು ಒಡೆಯುವ ಹುನ್ನಾರ ಮಾತ್ರವಲ್ಲ ಪೇಜಾವವರ ನಡೆಗಳು ಮತೀಯವಾದಿ ಸಂಘಟನೆ ನಾಯಕರಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಸಂವಿಧಾನದಡಿಯಲ್ಲಿ ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ಮಾಧ್ಯಮ ವಕ್ತಾರರಂತೆ “ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದ್ದಾರೆ” ಎಂದು ಬಹಿರಂಗ ಹೇಳಿಕೆ ನೀಡುವುದು ಪೇಜಾವರರು ಬಿಜೆಪಿ ಪಕ್ಷದ ನಿಷ್ಟೆಯನ್ನು ಪದೇ ಪದೇ ಸಾಬೀತು ಮಾಡುತ್ತಿರುವಂತಿದೆ. ಆಧಾರ ಇಲ್ಲದೇ ಒಂದು ಸರ್ಕಾರದ ಮೇಲೆ ಗಂಭೀರ ಆರೋಪಗಳನ್ನು ಮಾಡುವುದು ಯತಿಗಳಾದಂತವರಿಗೆ ತರವಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಸಂವಿಧಾನದ ವಿರೋಧಿ ನಿಲುವುಗಳಿಂದ ದಲಿತರು, ಬಹುಜನ ಶೋಷಿತ ಸಮುದಾಯಗಳ ಆಕ್ರೋಶವನ್ನು ಎದುರಿಸಲಾಗದೆ ಪೇಜಾವರರು ಅಲ್ಪಸಂಖ್ಯಾತರ ವಿರುದ್ಧ ಮಾತಾಡುವ ಮೂಲಕ ಚರ್ಚೆಯನ್ನೇ ದಾರಿ ತಪ್ಪಿಸುತ್ತಿದ್ದಾರೆ. ಸಂವಿಧಾನ ಮೂಲಕವೇ ಆಯ್ಕೆಯಾಗಿ ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿದ ಬಿಜೆಪಿಯ ನಾಯಕರಿಗೆ ಸಾರ್ವಜನಿಕ ಜೀವನದಲ್ಲಿ ಯೋಗ್ಯತೆಯೇ ಇಲ್ಲ ಎಂದು ಜನರು ತಕ್ಕ ಉತ್ತರ ನೀಡಿದ್ದಾರೆ. ಅಂತಹ ದುರ್ದೈವ ಪೇಜಾವರರು ಬರ ಮಾಡಿಕೊಳ್ಳದೇ ಇರಲಿ ಎಂದಿದ್ದಾರೆ.

ಸಂವಿಧಾನದ ವಿರುದ್ಧ ತಮಗಿರುವ ಅಸಹನೆ, ಆಕ್ರೋಶವನ್ನು ಸಾಬೀತು ಮಾಡುತ್ತಿರುವ ಪೇಜಾವರರು, ಇದೇ ಸಂವಿಧಾನದಡಿಯಲ್ಲಿ ರಕ್ಷಣೆ ಪಡೆಯುತ್ತಿರುವುದನ್ನು ಮರೆಯಬಾರದು. ತಮಗೆ ಗೌರವ ನೀಡುವ ಸಂವಿಧಾನ ಬರಲಿ ಎಂದ ರಾಜ್ಯದ ಸಂವಿಧಾನದ ರಕ್ಷಕರಾಗಿರುವ ರಾಜ್ಯಪಾಲರಿಗೆ ಮನವಿ ನೀಡುವುದು ಅತ್ಯಂತ ಖಂಡನೀಯ. ಕೂಡಲೇ ರಾಜ್ಯಪಾಲರು ಸಂವಿಧಾನ ವಿರೋಧಿ ಮನಸ್ಥಿತಿ ಸ್ವಾಮೀಜಿಗಳ ಮೇಲೆ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ‘ಸುಲಿಗೆ’ ಎಫ್‌ಐಆರ್ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...