Homeಮುಖಪುಟಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್...

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

- Advertisement -
- Advertisement -

‘ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿದ ಆರೋಪ’ದ ಮೇಲೆ ತನ್ನ ವಿರುದ್ದ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೈರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟ್ ಪೀಠ ಹಿಂದೆ ಸರಿದಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠ ಅರ್ಜಿಯ ವಿಚಾರಣೆಯಿಂದ ಸ್ವಯಂ ಹಿಂದೆ ಸರಿದಿದೆ ಎಂದು ವರದಿ ಹೇಳಿದೆ.

ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರ ದೂರಿನ ಆಧಾರದ ಮೇಲೆ ಉತ್ತರ ಪ್ರದೇಶದ ಗಾಝಿಯಾಬಾದ್ ಪೊಲೀಸರು ಝುಬೈರ್ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಝುಬೈರ್ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳನ್ನು ಮಾಡಿರುವ ಅಪರಾಧ ಹೊರಿಸಿದ್ದಾರೆ.

ಝುಬೈರ್ ವಿರುದ್ದದ ಪ್ರಕರಣ ಯತಿ ನರಸಿಂಹಾನಂದ ಮಾಡಿದ್ದ ದ್ವೇಷ ಭಾಷಣದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್‌ಗೆ ಸಂಬಂಧಿಸಿದೆ.

ಗುರುವಾರ (ಡಿ.3) ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠವು, ಝುಬೈರ್ ಅರ್ಜಿಯನ್ನು ಕೈಗೆತ್ತಿಕೊಂಡು ಸುಮಾರು 20 ನಿಮಿಷಗಳ ಕಾಲ ವಿಚಾರಣೆ ನಡೆಸಿತು. ಬಳಿಕ ವಿಚಾರಣೆಯಿಂದ ಹಿಂದೆ ಸರಿಯಿತು. ಮತ್ತೊಂದು ಪೀಠದ ಮುಂದೆ ಪ್ರಕರಣವನ್ನು ಪಟ್ಟಿ ಮಾಡುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ಸೂಚಿಸಿತು.

ಈ ವರ್ಷದ ಅಕ್ಟೋಬರ್ 3ರಂದು ಝುಬೈರ್ ಎಕ್ಸ್‌ನಲ್ಲಿ ಮೂರು ಪೋಸ್ಟ್‌ಗಳನ್ನು ಹಾಕಿದ್ದರು. ಈ ಪೈಕಿ ಮೊದಲನೆಯದ್ದು, ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರು ಸೆಪ್ಟೆಂಬರ್ 29 ರಂದು ಗಾಝಿಯಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೋವನ್ನು ಒಳಗೊಂಡಿತ್ತು.

ಝುಬೈರ್ ಪೋಸ್ಟ್ ಮಾಡಿದ್ದ ವಿಡಿಯೋದಲ್ಲಿ , ದ್ವೇಷ ಭಾಷಣದಲ್ಲಿ ಕುಖ್ಯಾತಿ ಪಡೆದಿರುವ ಯತಿ ನರಸಿಂಹಾನಂದ, ಪ್ರವಾದಿ ಮುಹಮ್ಮದರ ಪ್ರತಿಕೃತಿಯನ್ನು ಸುಡುವಂತೆ ಕರೆ ಕೊಟ್ಟಿದ್ದ ದೃಶ್ಯವಿತ್ತು. ಯತಿ ನರಸಿಂಹಾನಂದನ ಪ್ರವಾದಿ ವಿರುದ್ದದ ಕರೆ ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು. ನರಸಿಂಹಾನಂದನ ವಿರುದ್ದ ಕಠಿಣ ಕ್ರಮಕ್ಕೆ ಮುಸ್ಲಿಮರು ಒತ್ತಾಯಿಸಿದ್ದರು.

ಎರಡನೇ ಪೋಸ್ಟ್‌ನಲ್ಲಿ ಝುಬೈರ್ ಅವರು “ಯತಿ ನರಸಿಂಹಾನಂದನನ್ನು ಬೆಂಬಲಿಸುವವರಿಗೆ, ಯತಿ ನರಸಿಂಹಾನಂದ ಸರಸ್ವತಿ ಮಹಾರಾಜ್ ಅವರು ರಾಜಕೀಯದಲ್ಲಿರುವ ಮಹಿಳೆಯರ ಬಗ್ಗೆ, ವಿಶೇಷವಾಗಿ ರಾಜಕೀಯದಲ್ಲಿರುವ ಬಿಜೆಪಿ ಮಹಿಳಾ ನಾಯಕರ ಬಗ್ಗೆ (2021) ಕೆಟ್ಟ ಹೇಳಿಕೆಗಳನ್ನು ನೀಡಿರುವ ವಿಡಿಯೋ ಇಲ್ಲಿದೆ” ಎಂದು ಬರೆದುಕೊಂಡಿದ್ದರು. ಜೊತೆಗೆ ನರಸಿಂಹಾನಂದ ಮಹಿಳಾ ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಹಂಚಿಕೊಂಡಿದ್ದರು. 2022 ರಲ್ಲಿ ಪೃಥ್ವಿರಾಜ್ ಚವಾಣ್ ಕುರಿತು ನರಸಿಂಹಾನಂದ ನೀಡಿದ್ದ ಅವಹೇಳನಕಾರಿ ಹೇಳಿಕೆಯ ವಿಡಿಯೋ ಕೂಡ ಅದರ ಜೊತೆಗೆ ಇತ್ತು.

ಯತಿ ನರಸಿಂಹಾನಂದ ಅವರ ಹಳೆಯ ಕೋಮುದ್ವೇಷದ, ಮಹಿಳಾ ವಿರೋಧಿ ಹೇಳಿಕೆಗಳ ವಿಡಿಯೋಗಳನ್ನು ಹಂಚಿಕೊಂಡಿದ್ದಕ್ಕೆ ಝುಬೈರ್ ವಿರುದ್ದ ನರಸಿಂಹಾನಂದ ಟ್ರಸ್ಟ್‌ನ ಉದಿತಾ ತ್ಯಾಗಿ ದೂರು ದಾಖಲಿಸಿದ್ದರು. ಮುಸ್ಲಿಮರನ್ನು ನರಸಿಂಹಾನಂದ ವಿರುದ್ದ ಎತ್ತಿಕಟ್ಟಿ ಹಿಂಸಾಚಾರವನ್ನು ಪ್ರಚೋದಿಸುವ ಸಲುವಾಗಿ ಝುಬೈರ್ ಹಳೆಯ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಉದಿತಾ ತ್ಯಾಗಿ ದೂರು ಸ್ವೀಕರಿಸಿದ ಪೊಲೀಸರು, ಬಿಎನ್‌ಎಸ್‌ ಸೆಕ್ಷನ್‌ಗಳಾದ 196 (ಧಾರ್ಮಿಕ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 228 (ಸುಳ್ಳು ಪುರಾವೆಗಳನ್ನು ಸೃಷ್ಟಿಸುವುದು), 299 (ಧಾರ್ಮಿಕ ಭಾವನೆಗಳನ್ನು ಅತಿರೇಕಗೊಳಿಸುವುದು), 356 (3) (ಮಾನನಷ್ಟ), ಮತ್ತು 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಝುಬೈರ್ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು.

ಎಫ್ಐಆರ್ ಪ್ರಶ್ನಿಸಿ ಮತ್ತು ಬಂಧನದಿಂದ ರಕ್ಷಣೆ ಕೋರಿ ಝುಬೈರ್ ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಝುಬೈರ್ ವಿರುದ್ಧದ ಆರೋಪಗಳನ್ನು ನಿರ್ದಿಷ್ಟಪಡಿಸಿ ಅಫಿಡವಿಟ್ ಸಲ್ಲಿಸುವಂತೆ ತನಿಖಾಧಿಕಾರಿಗೆ ಸೂಚಿಸಿತ್ತು. ಅದರಂತೆ ನವೆಂಬರ್ 27 ರಂದು ತನಿಖಾಧಿಕಾರಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಆ ಅಫಿಡವಿಟ್‌ನಲ್ಲಿ ಐಟಿ ಕಾಯ್ದೆಯ ಸೆಕ್ಷನ್ 66 (ಕಂಪ್ಯೂಟರ್ ಸಂಬಂಧಿತ ಅಪರಾಧಗಳು) ಮತ್ತು ಬಿಎನ್‌ಎಸ್‌ ಸೆಕ್ಷನ್ 152 (ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯ) ಅಡಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದರು.

ನರಸಿಂಹಾನಂದರ ಹೇಳಿಕೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಲು ಮತ್ತು ಕಾನೂನು ಕ್ರಮಕ್ಕೆ ಸಲಹೆ ನೀಡುವ ಉದ್ದೇಶದಿಂದ ಹಳೆಯ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದೆ ಎಂದು ಝುಬೈರ್ ನ್ಯಾಯಾಲಯದಲ್ಲಿ ವಾದಿಸಿದ್ದರು. ನನ್ನ ಪೋಸ್ಟ್ ಹಿಂಸಾಚಾರ ಉತ್ತೇಜಿಸಲು ಸಾಧ್ಯವಿಲ್ಲ ಎಂದಿದ್ದರು. ನರಸಿಂಹಾನಂದರ ಹೇಳಿಕೆಯ ವಿಡಿಯೋ ಸಾರ್ವಜನಿಕ ವೇದಿಕೆಗಳಲ್ಲಿ ಇರುವುದರಿಂದ, ಅದನ್ನು ಹಂಚಿಕೊಳ್ಳುವುದರಿಂದ ಮಾನನಷ್ಟವಾಗುವುದಿಲ್ಲ ಎಂದು ಹೇಳಿದ್ದರು.

ಯತಿ ನರಸಿಂಹಾನಂದರ ಆಪಾದಿತ ಕ್ರಿಮಿನಲ್ ಚಟುವಟಿಕೆಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ನನ್ನ ಮೇಲೆ ಎಫ್‌ಐಆರ್ ಹಾಕಿ ಧ್ವನಿ ಅಡಗಿಸಲು ದುರುದ್ದೇಶಪೂರಿತ ಪ್ರಯತ್ನ ಮಾಡಲಾಗಿದೆ ಎಂದು ಝುಬೈರ್ ಆರೋಪಿಸಿದ್ದರು.

ಇದನ್ನೂ ಓದಿ : ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...