Homeಮುಖಪುಟಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್...

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

- Advertisement -
- Advertisement -

‘ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿದ ಆರೋಪ’ದ ಮೇಲೆ ತನ್ನ ವಿರುದ್ದ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೈರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟ್ ಪೀಠ ಹಿಂದೆ ಸರಿದಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠ ಅರ್ಜಿಯ ವಿಚಾರಣೆಯಿಂದ ಸ್ವಯಂ ಹಿಂದೆ ಸರಿದಿದೆ ಎಂದು ವರದಿ ಹೇಳಿದೆ.

ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರ ದೂರಿನ ಆಧಾರದ ಮೇಲೆ ಉತ್ತರ ಪ್ರದೇಶದ ಗಾಝಿಯಾಬಾದ್ ಪೊಲೀಸರು ಝುಬೈರ್ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಝುಬೈರ್ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳನ್ನು ಮಾಡಿರುವ ಅಪರಾಧ ಹೊರಿಸಿದ್ದಾರೆ.

ಝುಬೈರ್ ವಿರುದ್ದದ ಪ್ರಕರಣ ಯತಿ ನರಸಿಂಹಾನಂದ ಮಾಡಿದ್ದ ದ್ವೇಷ ಭಾಷಣದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್‌ಗೆ ಸಂಬಂಧಿಸಿದೆ.

ಗುರುವಾರ (ಡಿ.3) ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠವು, ಝುಬೈರ್ ಅರ್ಜಿಯನ್ನು ಕೈಗೆತ್ತಿಕೊಂಡು ಸುಮಾರು 20 ನಿಮಿಷಗಳ ಕಾಲ ವಿಚಾರಣೆ ನಡೆಸಿತು. ಬಳಿಕ ವಿಚಾರಣೆಯಿಂದ ಹಿಂದೆ ಸರಿಯಿತು. ಮತ್ತೊಂದು ಪೀಠದ ಮುಂದೆ ಪ್ರಕರಣವನ್ನು ಪಟ್ಟಿ ಮಾಡುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ಸೂಚಿಸಿತು.

ಈ ವರ್ಷದ ಅಕ್ಟೋಬರ್ 3ರಂದು ಝುಬೈರ್ ಎಕ್ಸ್‌ನಲ್ಲಿ ಮೂರು ಪೋಸ್ಟ್‌ಗಳನ್ನು ಹಾಕಿದ್ದರು. ಈ ಪೈಕಿ ಮೊದಲನೆಯದ್ದು, ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರು ಸೆಪ್ಟೆಂಬರ್ 29 ರಂದು ಗಾಝಿಯಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೋವನ್ನು ಒಳಗೊಂಡಿತ್ತು.

ಝುಬೈರ್ ಪೋಸ್ಟ್ ಮಾಡಿದ್ದ ವಿಡಿಯೋದಲ್ಲಿ , ದ್ವೇಷ ಭಾಷಣದಲ್ಲಿ ಕುಖ್ಯಾತಿ ಪಡೆದಿರುವ ಯತಿ ನರಸಿಂಹಾನಂದ, ಪ್ರವಾದಿ ಮುಹಮ್ಮದರ ಪ್ರತಿಕೃತಿಯನ್ನು ಸುಡುವಂತೆ ಕರೆ ಕೊಟ್ಟಿದ್ದ ದೃಶ್ಯವಿತ್ತು. ಯತಿ ನರಸಿಂಹಾನಂದನ ಪ್ರವಾದಿ ವಿರುದ್ದದ ಕರೆ ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು. ನರಸಿಂಹಾನಂದನ ವಿರುದ್ದ ಕಠಿಣ ಕ್ರಮಕ್ಕೆ ಮುಸ್ಲಿಮರು ಒತ್ತಾಯಿಸಿದ್ದರು.

ಎರಡನೇ ಪೋಸ್ಟ್‌ನಲ್ಲಿ ಝುಬೈರ್ ಅವರು “ಯತಿ ನರಸಿಂಹಾನಂದನನ್ನು ಬೆಂಬಲಿಸುವವರಿಗೆ, ಯತಿ ನರಸಿಂಹಾನಂದ ಸರಸ್ವತಿ ಮಹಾರಾಜ್ ಅವರು ರಾಜಕೀಯದಲ್ಲಿರುವ ಮಹಿಳೆಯರ ಬಗ್ಗೆ, ವಿಶೇಷವಾಗಿ ರಾಜಕೀಯದಲ್ಲಿರುವ ಬಿಜೆಪಿ ಮಹಿಳಾ ನಾಯಕರ ಬಗ್ಗೆ (2021) ಕೆಟ್ಟ ಹೇಳಿಕೆಗಳನ್ನು ನೀಡಿರುವ ವಿಡಿಯೋ ಇಲ್ಲಿದೆ” ಎಂದು ಬರೆದುಕೊಂಡಿದ್ದರು. ಜೊತೆಗೆ ನರಸಿಂಹಾನಂದ ಮಹಿಳಾ ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಹಂಚಿಕೊಂಡಿದ್ದರು. 2022 ರಲ್ಲಿ ಪೃಥ್ವಿರಾಜ್ ಚವಾಣ್ ಕುರಿತು ನರಸಿಂಹಾನಂದ ನೀಡಿದ್ದ ಅವಹೇಳನಕಾರಿ ಹೇಳಿಕೆಯ ವಿಡಿಯೋ ಕೂಡ ಅದರ ಜೊತೆಗೆ ಇತ್ತು.

ಯತಿ ನರಸಿಂಹಾನಂದ ಅವರ ಹಳೆಯ ಕೋಮುದ್ವೇಷದ, ಮಹಿಳಾ ವಿರೋಧಿ ಹೇಳಿಕೆಗಳ ವಿಡಿಯೋಗಳನ್ನು ಹಂಚಿಕೊಂಡಿದ್ದಕ್ಕೆ ಝುಬೈರ್ ವಿರುದ್ದ ನರಸಿಂಹಾನಂದ ಟ್ರಸ್ಟ್‌ನ ಉದಿತಾ ತ್ಯಾಗಿ ದೂರು ದಾಖಲಿಸಿದ್ದರು. ಮುಸ್ಲಿಮರನ್ನು ನರಸಿಂಹಾನಂದ ವಿರುದ್ದ ಎತ್ತಿಕಟ್ಟಿ ಹಿಂಸಾಚಾರವನ್ನು ಪ್ರಚೋದಿಸುವ ಸಲುವಾಗಿ ಝುಬೈರ್ ಹಳೆಯ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಉದಿತಾ ತ್ಯಾಗಿ ದೂರು ಸ್ವೀಕರಿಸಿದ ಪೊಲೀಸರು, ಬಿಎನ್‌ಎಸ್‌ ಸೆಕ್ಷನ್‌ಗಳಾದ 196 (ಧಾರ್ಮಿಕ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 228 (ಸುಳ್ಳು ಪುರಾವೆಗಳನ್ನು ಸೃಷ್ಟಿಸುವುದು), 299 (ಧಾರ್ಮಿಕ ಭಾವನೆಗಳನ್ನು ಅತಿರೇಕಗೊಳಿಸುವುದು), 356 (3) (ಮಾನನಷ್ಟ), ಮತ್ತು 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಝುಬೈರ್ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು.

ಎಫ್ಐಆರ್ ಪ್ರಶ್ನಿಸಿ ಮತ್ತು ಬಂಧನದಿಂದ ರಕ್ಷಣೆ ಕೋರಿ ಝುಬೈರ್ ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಝುಬೈರ್ ವಿರುದ್ಧದ ಆರೋಪಗಳನ್ನು ನಿರ್ದಿಷ್ಟಪಡಿಸಿ ಅಫಿಡವಿಟ್ ಸಲ್ಲಿಸುವಂತೆ ತನಿಖಾಧಿಕಾರಿಗೆ ಸೂಚಿಸಿತ್ತು. ಅದರಂತೆ ನವೆಂಬರ್ 27 ರಂದು ತನಿಖಾಧಿಕಾರಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಆ ಅಫಿಡವಿಟ್‌ನಲ್ಲಿ ಐಟಿ ಕಾಯ್ದೆಯ ಸೆಕ್ಷನ್ 66 (ಕಂಪ್ಯೂಟರ್ ಸಂಬಂಧಿತ ಅಪರಾಧಗಳು) ಮತ್ತು ಬಿಎನ್‌ಎಸ್‌ ಸೆಕ್ಷನ್ 152 (ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯ) ಅಡಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದರು.

ನರಸಿಂಹಾನಂದರ ಹೇಳಿಕೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಲು ಮತ್ತು ಕಾನೂನು ಕ್ರಮಕ್ಕೆ ಸಲಹೆ ನೀಡುವ ಉದ್ದೇಶದಿಂದ ಹಳೆಯ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದೆ ಎಂದು ಝುಬೈರ್ ನ್ಯಾಯಾಲಯದಲ್ಲಿ ವಾದಿಸಿದ್ದರು. ನನ್ನ ಪೋಸ್ಟ್ ಹಿಂಸಾಚಾರ ಉತ್ತೇಜಿಸಲು ಸಾಧ್ಯವಿಲ್ಲ ಎಂದಿದ್ದರು. ನರಸಿಂಹಾನಂದರ ಹೇಳಿಕೆಯ ವಿಡಿಯೋ ಸಾರ್ವಜನಿಕ ವೇದಿಕೆಗಳಲ್ಲಿ ಇರುವುದರಿಂದ, ಅದನ್ನು ಹಂಚಿಕೊಳ್ಳುವುದರಿಂದ ಮಾನನಷ್ಟವಾಗುವುದಿಲ್ಲ ಎಂದು ಹೇಳಿದ್ದರು.

ಯತಿ ನರಸಿಂಹಾನಂದರ ಆಪಾದಿತ ಕ್ರಿಮಿನಲ್ ಚಟುವಟಿಕೆಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ನನ್ನ ಮೇಲೆ ಎಫ್‌ಐಆರ್ ಹಾಕಿ ಧ್ವನಿ ಅಡಗಿಸಲು ದುರುದ್ದೇಶಪೂರಿತ ಪ್ರಯತ್ನ ಮಾಡಲಾಗಿದೆ ಎಂದು ಝುಬೈರ್ ಆರೋಪಿಸಿದ್ದರು.

ಇದನ್ನೂ ಓದಿ : ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...