HomeUncategorizedಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

ಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

- Advertisement -
- Advertisement -

ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು 2009 ರಿಂದ 2013 ರವರೆಗೆ ಚುನಾವಣಾ ಆಯೋಗದ ವಿಶೇಷ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಅಶೋಕ್ ಅವರ ಕೆಲಸದ ಅವಧಿಯಲ್ಲಿ ಇತರರ ಮೇಲೆ ಪ್ರಭಾವ ಬೀರಿದ್ದರಾ..?, ತಮ್ಮ ಹುದ್ದೆಯನ್ನು ಬಳಸಿಕೊಂಡು ಬೇರೆ ಲಾಭ ಪಡೆಯಲು ಯತ್ನಿಸಿದ್ದರಾ..? ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ಭಾರತ ಸರ್ಕಾರ, 11 ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಪತ್ರ ಬರೆದಿದೆ.

ಪ್ರಕರಣ ಹೊರಬರುತ್ತಿದ್ದಂತೆಯೇ ಅಶೋಕ್‌ ಲಾವಾಸರವರು ಕಳೆದ ಚುನಾವಣೆಯಲ್ಲಿ ಮೋದಿ ಮತ್ತು ಅಮಿತ್‌ ಶಾ ವಿರುದ್ಧ ಮಾತಾಡಿದ್ದಕ್ಕೆ ಈಗ ಶಿಕ್ಷೆ ಅನುಭವಿಸಬೇಕಾಗಿದೆ. ಮೋದಿ ಮತ್ತು ಶಾರನ್ನು ಎದುರಾಕಿಕೊಂಡ ಎಲ್ಲರಿಗೂ ಇದೇ ಗತಿ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಐಎಎಸ್ ಅಧಿಕಾರಿಯಾಗಿದ್ದ ಅಶೋಕ್ ಲಾವಾಸಾ, ಸೆಪ್ಟೆಂಬರ್ 2009 ರಿಂದ ಡಿಸೆಂಬರ್ 2013 ರವರೆಗೆ ಜೆಎಸ್ ಹೆಚ್ಚುವರಿ ಕಾರ್ಯದರ್ಶಿ / ವಿಶೇಷ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಈ ವೇಳೆ ಕೆಲ ಕಂಪನಿಗಳು ಮತ್ತು ಸಹಾಯಕ ಕಂಪನಿಗಳಿಗೆ ಲಾಭವಾಗುವಂತೆ ಅನಗತ್ಯ ಪ್ರಭಾವ ಬೀರಲು ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ಅಶೋಕ್ ಲಾವಾಸಾ ಬಗ್ಗೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸುವಂತೆ ಪಿ.ಎಸ್.ಯು ಗಳ ಮುಖ್ಯ ವಿಜಿಲೆನ್ಸ್ ಅಧಿಕಾರಿಗಳಿಗೆ ತಿಳಿಸಿದೆ.

ಪಿ.ಎಸ್.ಯುನಲ್ಲಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ, ಎನ್‌ಎಚ್‌ಪಿಸಿ ಲಿಮಿಟೆಡ್ ಅಥವಾ ಹಿಂದಿನ ರಾಷ್ಟ್ರೀಯ ಜಲವಿದ್ಯುತ್ ನಿಗಮ, ಆರ್‌ಇಸಿ ಲಿಮಿಟೆಡ್, ಗ್ರಾಮೀಣ ವಿದ್ಯುದ್ದೀಕರಣ ನಿಗಮ ಮತ್ತು ವಿದ್ಯುತ್ ಫೈನಾನ್ಸ್ ಕಾರ್ಪೊರೇಷನ್ ವಿಭಾಗಗಳು ಸೇರಿವೆ.

ಮುಖ್ಯವಾಗಿ ಮೋದಿ ಮತ್ತು ಅಮಿತ್‌ ಶಾರವರು ಲೋಕಸಭಾ ಚುನಾವಣೆಗೂ ಮೊದಲು ನಡೆದ ರ್‍ಯಾಲಿಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದವು. ದೂರುಗಳ ವಿಚಾರಣೆ ಸಂದರ್ಭದಲ್ಲಿ ಅಶೋಕ್‌ ಲಾವಾಸರವರು 10 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಮೋದಿ ಮತ್ತು ಅಮಿತ್‌ ಶಾ ಅಪರಾಧಿಗಳು ಎಂದು ಅಭಿಪ್ರಾಯಪಟ್ಟರೆ ಉಳಿದ ಇಬ್ಬರು ಚುನಾವಣಾಧಿಕಾರಿಗಳು ಮೋದಿ ಮತ್ತು ಅಮಿತ್‌ ಶಾ ಪರವಾಗಿ ವಾದಿಸಿ ಅವರಿಗೆ ಕ್ಲಿನ್‌ಚಿಟ್‌ ನೀಡಿದ್ದರು. ಇದರಿಂದ ಕುಪಿತಗೊಂಡ ಅಶೋಕ್‌ ಲಾವಾಸ ತೀರ್ಪಿನಲ್ಲಿ ನನ್ನ ಅಲ್ಪಸಂಖ್ಯಾತ ಅಭಿಪ್ರಾಯವನ್ನು ದಾಖಲಿಸಬೇಕೆಂದು ಒತ್ತಾಯಿಸಿ ಸಭೆಗಳಿಂದ ದೂರವುಳಿದಿದ್ದರು. ಇದು ಮೋದಿ ಮತ್ತು ಅಮಿತ್‌ ಶಾ ರವರಿಗೆ ಸಾಕಷ್ಟು ಮುಜುಗರ ತಂದಿತ್ತು.

ಆ ಸೇಡನ್ನು ತೀರಿಸಿಕೊಳ್ಳಲು ಈಗ ಹಳೆಯ ಕೇಸುಗಳಲ್ಲಿ ಅಶೋಕ್‌ ಲಾವಾಸ ರವರ ಮೇಲೆ ಮೋದಿ ಮತ್ತು ಅಮಿತ್‌ ಶಾ ದ್ವೇಷ ಸಾಧಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾತ್ರವಲ್ಲದೇ.

ಅಲ್ಲದೇ ಲಾವಾಸರವರ ಪತ್ನಿ ನಾವೆಲ್‌ ಸಿಂಗ್ಹಾಲ್‌ ಲಾವಾಸರವರು ವಿರುದ್ಧ ಐಟಿ ಇಲಾಖೆಯು ನೋಟಿಸ್ ಜಾರಿ ಮಾಡಿದೆ. ಆಕೆಯು ಹಲವಾರು ಕಂಪನಿಗಳ ನಿರ್ದೇಶಕರಾಗಿದ್ದ ಅವಧಿಯಲ್ಲಿ ಸಮರ್ಪಕವಾಗಿ ಐಟಿ ರಿರ್ಟನ್ಸ್‌ ಸಲ್ಲಿಸಿಲ್ಲ ಎಂದು ಆರೋಪಿಸಿದೆ.

ಜೊತೆಗೆ ಲಾವಾಸರವರ ಸಹೋದರಿ ಶಕುಂತಲಾ ಲಾವಾಸರವರ ಮೇಲೆಯೂ ಐಟಿ ನೋಟಿಸ್‌ ನೀಡಿದೆ. ಲಾವಾಸರವರ ಪುತ್ರ ಅಬಿರ್‌ ಲಾವಾಸರವರು ತೊಡಗಿಸಿಕೊಂಡಿರುವ ಬುಕ್ಸ್ ಕಂಪನಿಗಳ ಮೇಲೆಯೂ ಐಟಿ ಇಲಾಖೆಯ ಕೆಂಗಣ್ಣು ಬಿದ್ದಿದೆ. 2009-10 ಸಾಲಿನ ಹಳೆಯ ವಿಚಾರಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಕಿರುಕುಳ ಕೊಡಲು ಮುಂದಾಗಿದೆ. ಆದರೆ ನಾವು ಹೆದರುವುದಿಲ್ಲ ಏಕೆಂದರೆ ಎಲ್ಲಾ ವ್ಯವಹಾರಗಳನ್ನು ಕಾನೂನಾತ್ಮಕವಾಗಿಯೇ ಮಾಡಿದ್ದೇವೆ ಎಂದು ಲಾವಾಸ ಕುಟುಂಬ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾನೂನಾತ್ಮಕವಾಗಿ ಅಥವಾ ನ್ಯಾಯಯುತವಾಗಿ ಕೆಲಸ ಕಾರ್ಯ ನಿರ್ವಹಿಸುವ ಯಾವುದೇ ಅಧಿಕಾರಿಗಳಿಗೂ ಎಲ್ಲಾ ಸಕಾ೯ರಗಳೂ ಕೂಡ ಯಾವುದೇ ರೀತಿಯಲ್ಲಿ ಶಿಕ್ಷಿಸಲು ಹೊಂಚು ಹಾಕುತ್ತವೆ.

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...