Homeಕರ್ನಾಟಕಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ - ಡಾ. ಮೀನಾ ಕಂದಸಾಮಿ

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ – ಡಾ. ಮೀನಾ ಕಂದಸಾಮಿ

- Advertisement -
- Advertisement -

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ ಎಂದು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಡಾ. ಮೀನಾ ಕಂದಸಾಮಿ ಮಂಗಳವಾರ ಹೇಳಿದ್ದಾರೆ. ಅವರು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಐದನೇ ಪಿ.ಪಿ.ಗೋಮತಿ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪ್ರತಿರೋಧಕ್ಕಾಗಿ ಬರವಣಿಗೆ’ ಕುರಿತು ಮಾತನಾಡುತ್ತಿದ್ದರು.

ಕರ್ನಾಟಕ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಪಿ.ಪಿ.ಗೋಮತಿ ಸ್ಮಾರಕ ಶಿಕ್ಷಣ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಲೇಖಕಿ, ಕವಯಿತ್ರಿ, ಜಾತಿ ವಿರೋಧಿ ಹೋರಾಟಗಾರ್ತಿಯು ಆಗಿರುವ ಮೀನಾ ಕಂದಸಾಮಿ ಅವರು ಮಾತನಾಡುತ್ತಾ, ಯೂನಿವರ್ಸಿಟಿಗಳಲ್ಲಿ ದೊಡ್ಡ ಮಟ್ಟದಲ್ಲಿ ತಳಸಮುದಾಯಗಳ ವಿದ್ಯಾರ್ಥಿಗಳು ಮಾನಸಿಕ, ಹಾಗೂ ದೈಹಿಕ ಶೋಷಣೆ ಅನುಭವಿಸುತ್ತಿರುವುದನ್ನು ಪ್ರತಿನಿತ್ಯ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಒಂದು ವ್ಯವಸ್ಥೆಯಾಗಿ ಯೂನಿವರ್ಸಿಟಿಗಳು ಬ್ರಾಹ್ಮಣವಾದದ ಅಡ್ಡೆಗಳಾಗಿವೆ. ದೇವಸ್ಥಾನಗಳಲ್ಲಿ ಪುರೋಹಿತರು ಸನಾತನಾವಾದಿಗಳಾಗಿರದೇ ಇರಬಹುದು, ಆದರೆ ಯೂನಿವರ್ಸಿಟಿಗಳಲ್ಲಿ ಇರುವ ಸನಾತನವಾದ ಬಹುಜನರನ್ನು ಉಸಿರುಗಟ್ಟಿಸುವ ಮಟ್ಟಿಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಭಾರತದಲ್ಲಿ ಬರವಣಿಗೆ, ಪ್ರತಿರೋಧ ಮತ್ತು ಸೆನ್ಸಾರ್‌ಶಿಪ್‌ಗಳ ಅಪಾಯಗಳ ಬಗ್ಗೆ ಮಾತನಾಡಿದ ಅವರು, ಅಹಿತಕರ ಸತ್ಯಗಳನ್ನು ಮಾತನಾಡಲು ಮುಂದೆ ಬರುತ್ತಿರುವ ಬರಹಗಾರರು ಎದುರಿಸುತ್ತಿರುವ ಹೋರಾಟಗಳತ್ತ ಅವರು ಗಮನ ಸೆಳೆದರು. ”ಸಾಹಿತಿಗಳಾದ ಎಂ.ಎಂ. ಕಲ್ಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರಿಬ್ಬರೂ ತಮ್ಮ ನಿರ್ಭೀತ ಮಾತುಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಹತ್ಯೆಯಾದರು. ನೀವು ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ” ಎಂದು ಅವರು ಟೀಕಿಸಿದರು.

ಭಿನ್ನಾಭಿಪ್ರಾಯವನ್ನು ನಿಗ್ರಹಿಸುವ ಪ್ರಸ್ತುತ ವಾತಾವರಣದ ಬಗ್ಗೆ ಅವರು ವಿಷಾದಿಸಿದ ಅವರು, “ವಿಮರ್ಶಾತ್ಮಕ ಧ್ವನಿಗಳನ್ನು ರಾಷ್ಟ್ರಕ್ಕೆ ಬೆದರಿಕೆ ಎಂದು ಹೇಳಲಾಗುತ್ತದೆ. ಲೇಖಕರನ್ನು ಯಾಕೆ ಕೊಲ್ಲಲಾಗುತ್ತದೆ ಅಥವಾ ಜೈಲಿಗೆ ಹಾಕಲಾಗುತ್ತಿದೆ?. ಇಂತಹ ಜನರನ್ನು ಅರ್ಬನ್ ನಕ್ಸಲರು ಎಂದು ಬ್ರಾಂಡ್ ಮಾಡುವ ಮೂಲಕ ಸರ್ಕಾರವು ಹೋರಾಟಗಾರರು ಮತ್ತು ಬರಹಗಾರರ ಲೇಖನಿಗಳನ್ನು ಹಾಗೂ ದಂಗೆಕೋರರ ಬಂದೂಕುಗಳಿಗೆ ಸಮೀಕರಿಸುತ್ತಿದೆ. ಅಂತಹ ಹೋಲಿಕೆಗಳು ಭಿನ್ನಾಭಿಪ್ರಾಯದ ಧ್ವನಿಗಳಿಗೆ ಸರ್ಕಾರಿ ಕಿರುಕುಳವನ್ನು ಕಾನೂನುಬದ್ಧಗೊಳಿಸುತ್ತವೆ” ಎಂದು ಅವರು ಎಚ್ಚರಿಸಿದ್ದಾರೆ.

“ರಾಜಕೀಯ ವ್ಯಕ್ತಿಗಳು ಮತ್ತು ಹೋರಾಟಗಾರರನ್ನು ಮೌನಗೊಳಿಸಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಂತಹ ಸರ್ಕಾರಿ ಯಂತ್ರಗಳ ದುರುಪಯೋಗ ಮಾಡಲಾಗುತ್ತಿದೆ. ಮೂಲತಃ ನ್ಯಾಯವನ್ನು ಎತ್ತಿಹಿಡಿಯಲು ರಚಿಸಲಾಗಿರುವ ಈ ಏಜೆನ್ಸಿಗಳು ಜನರ ನಿಗ್ರಹದ ಸಾಧನಗಳಾಗಿ ಮಾರ್ಪಟ್ಟಿವೆ. ಬರಹಗಾರರು ಸೆನ್ಸಾರ್‌ಶಿಪ್‌ನ ಬಲಿಪಶುಗಳಾಗಿದ್ದಾರೆ. ಈ ದೇಶದಲ್ಲಿ, ಕೇವಲ ಬರವಣಿಗೆ ಮಾತ್ರವಲ್ಲ, ಓದುವುದು ಸಹ ಪ್ರತಿರೋಧವಾಗಿದೆ. ವ್ಯಾಪಕವಾದ ದಮನದ ಸಮಯದಲ್ಲಿ ಸಾಹಿತ್ಯದೊಂದಿಗೆ ವಿಮರ್ಶಾತ್ಮಕವಾಗಿ ತೊಡಗಿಸಿಕೊಳ್ಳಬೇಕು” ಎಂದು ಮೀನಾ ಕಂದಸಾಮಿ ಅವರು ಪ್ರೇಕ್ಷಕರನ್ನು ಒತ್ತಾಯಿಸಿದ್ದಾರೆ.

ದ್ವೇಷ ಭಾಷಣವನ್ನು ಬಹಿರಂಗಪಡಿಸುವುದಕ್ಕಾಗಿ ಅನೇಕ ಕಾನೂನು ಸವಾಲುಗಳನ್ನು ಎದುರಿಸುತ್ತಿರುವ ಪತ್ರಕರ್ತ ಮತ್ತು ಫ್ಯಾಕ್ಟ್‌ ಚೆಕ್ಕರ್‌ ಮೊಹಮ್ಮದ್ ಜುಬೈರ್ ಅವರ ಉದಾಹರಣೆಯನ್ನು ಅವರು ಉಲ್ಲೇಖಿಸಿದ ಅವರು, ಸತ್ಯ ಹೇಳುವವರನ್ನು ದೇಶದ ಶತ್ರುಗಳಾಗಿ ಬಿಂಬಿಸುವ ಪ್ರವೃತ್ತಿಯು ಬೆಳೆಯುತ್ತಿರುವ ಬಗ್ಗೆ ಎತ್ತಿತೋರಿಸಿದ್ದಾರೆ. ಸತ್ಯ ಮಾತನಾಡುವ, ಅನ್ಯಾಯವನ್ನು ಬಯಲಿಗೆಳೆದು, ಶೋಷಿತರಿಗೆ ಸಾಂತ್ವನ ಹೇಳುವವರೇ ನಿಜವಾದ ದೇಶಭಕ್ತರೆಂದು ಗುರುತಿಸಲ್ಪಡುತ್ತಾರೆ ಎಂದು ಡಾ.ಕಂದಸಾಮಿ ಆಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...