Homeಕರ್ನಾಟಕಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ - ಡಾ. ಮೀನಾ ಕಂದಸಾಮಿ

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ – ಡಾ. ಮೀನಾ ಕಂದಸಾಮಿ

- Advertisement -
- Advertisement -

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ ಎಂದು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಡಾ. ಮೀನಾ ಕಂದಸಾಮಿ ಮಂಗಳವಾರ ಹೇಳಿದ್ದಾರೆ. ಅವರು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಐದನೇ ಪಿ.ಪಿ.ಗೋಮತಿ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪ್ರತಿರೋಧಕ್ಕಾಗಿ ಬರವಣಿಗೆ’ ಕುರಿತು ಮಾತನಾಡುತ್ತಿದ್ದರು.

ಕರ್ನಾಟಕ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಪಿ.ಪಿ.ಗೋಮತಿ ಸ್ಮಾರಕ ಶಿಕ್ಷಣ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಲೇಖಕಿ, ಕವಯಿತ್ರಿ, ಜಾತಿ ವಿರೋಧಿ ಹೋರಾಟಗಾರ್ತಿಯು ಆಗಿರುವ ಮೀನಾ ಕಂದಸಾಮಿ ಅವರು ಮಾತನಾಡುತ್ತಾ, ಯೂನಿವರ್ಸಿಟಿಗಳಲ್ಲಿ ದೊಡ್ಡ ಮಟ್ಟದಲ್ಲಿ ತಳಸಮುದಾಯಗಳ ವಿದ್ಯಾರ್ಥಿಗಳು ಮಾನಸಿಕ, ಹಾಗೂ ದೈಹಿಕ ಶೋಷಣೆ ಅನುಭವಿಸುತ್ತಿರುವುದನ್ನು ಪ್ರತಿನಿತ್ಯ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಒಂದು ವ್ಯವಸ್ಥೆಯಾಗಿ ಯೂನಿವರ್ಸಿಟಿಗಳು ಬ್ರಾಹ್ಮಣವಾದದ ಅಡ್ಡೆಗಳಾಗಿವೆ. ದೇವಸ್ಥಾನಗಳಲ್ಲಿ ಪುರೋಹಿತರು ಸನಾತನಾವಾದಿಗಳಾಗಿರದೇ ಇರಬಹುದು, ಆದರೆ ಯೂನಿವರ್ಸಿಟಿಗಳಲ್ಲಿ ಇರುವ ಸನಾತನವಾದ ಬಹುಜನರನ್ನು ಉಸಿರುಗಟ್ಟಿಸುವ ಮಟ್ಟಿಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಭಾರತದಲ್ಲಿ ಬರವಣಿಗೆ, ಪ್ರತಿರೋಧ ಮತ್ತು ಸೆನ್ಸಾರ್‌ಶಿಪ್‌ಗಳ ಅಪಾಯಗಳ ಬಗ್ಗೆ ಮಾತನಾಡಿದ ಅವರು, ಅಹಿತಕರ ಸತ್ಯಗಳನ್ನು ಮಾತನಾಡಲು ಮುಂದೆ ಬರುತ್ತಿರುವ ಬರಹಗಾರರು ಎದುರಿಸುತ್ತಿರುವ ಹೋರಾಟಗಳತ್ತ ಅವರು ಗಮನ ಸೆಳೆದರು. ”ಸಾಹಿತಿಗಳಾದ ಎಂ.ಎಂ. ಕಲ್ಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರಿಬ್ಬರೂ ತಮ್ಮ ನಿರ್ಭೀತ ಮಾತುಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಹತ್ಯೆಯಾದರು. ನೀವು ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ” ಎಂದು ಅವರು ಟೀಕಿಸಿದರು.

ಭಿನ್ನಾಭಿಪ್ರಾಯವನ್ನು ನಿಗ್ರಹಿಸುವ ಪ್ರಸ್ತುತ ವಾತಾವರಣದ ಬಗ್ಗೆ ಅವರು ವಿಷಾದಿಸಿದ ಅವರು, “ವಿಮರ್ಶಾತ್ಮಕ ಧ್ವನಿಗಳನ್ನು ರಾಷ್ಟ್ರಕ್ಕೆ ಬೆದರಿಕೆ ಎಂದು ಹೇಳಲಾಗುತ್ತದೆ. ಲೇಖಕರನ್ನು ಯಾಕೆ ಕೊಲ್ಲಲಾಗುತ್ತದೆ ಅಥವಾ ಜೈಲಿಗೆ ಹಾಕಲಾಗುತ್ತಿದೆ?. ಇಂತಹ ಜನರನ್ನು ಅರ್ಬನ್ ನಕ್ಸಲರು ಎಂದು ಬ್ರಾಂಡ್ ಮಾಡುವ ಮೂಲಕ ಸರ್ಕಾರವು ಹೋರಾಟಗಾರರು ಮತ್ತು ಬರಹಗಾರರ ಲೇಖನಿಗಳನ್ನು ಹಾಗೂ ದಂಗೆಕೋರರ ಬಂದೂಕುಗಳಿಗೆ ಸಮೀಕರಿಸುತ್ತಿದೆ. ಅಂತಹ ಹೋಲಿಕೆಗಳು ಭಿನ್ನಾಭಿಪ್ರಾಯದ ಧ್ವನಿಗಳಿಗೆ ಸರ್ಕಾರಿ ಕಿರುಕುಳವನ್ನು ಕಾನೂನುಬದ್ಧಗೊಳಿಸುತ್ತವೆ” ಎಂದು ಅವರು ಎಚ್ಚರಿಸಿದ್ದಾರೆ.

“ರಾಜಕೀಯ ವ್ಯಕ್ತಿಗಳು ಮತ್ತು ಹೋರಾಟಗಾರರನ್ನು ಮೌನಗೊಳಿಸಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಂತಹ ಸರ್ಕಾರಿ ಯಂತ್ರಗಳ ದುರುಪಯೋಗ ಮಾಡಲಾಗುತ್ತಿದೆ. ಮೂಲತಃ ನ್ಯಾಯವನ್ನು ಎತ್ತಿಹಿಡಿಯಲು ರಚಿಸಲಾಗಿರುವ ಈ ಏಜೆನ್ಸಿಗಳು ಜನರ ನಿಗ್ರಹದ ಸಾಧನಗಳಾಗಿ ಮಾರ್ಪಟ್ಟಿವೆ. ಬರಹಗಾರರು ಸೆನ್ಸಾರ್‌ಶಿಪ್‌ನ ಬಲಿಪಶುಗಳಾಗಿದ್ದಾರೆ. ಈ ದೇಶದಲ್ಲಿ, ಕೇವಲ ಬರವಣಿಗೆ ಮಾತ್ರವಲ್ಲ, ಓದುವುದು ಸಹ ಪ್ರತಿರೋಧವಾಗಿದೆ. ವ್ಯಾಪಕವಾದ ದಮನದ ಸಮಯದಲ್ಲಿ ಸಾಹಿತ್ಯದೊಂದಿಗೆ ವಿಮರ್ಶಾತ್ಮಕವಾಗಿ ತೊಡಗಿಸಿಕೊಳ್ಳಬೇಕು” ಎಂದು ಮೀನಾ ಕಂದಸಾಮಿ ಅವರು ಪ್ರೇಕ್ಷಕರನ್ನು ಒತ್ತಾಯಿಸಿದ್ದಾರೆ.

ದ್ವೇಷ ಭಾಷಣವನ್ನು ಬಹಿರಂಗಪಡಿಸುವುದಕ್ಕಾಗಿ ಅನೇಕ ಕಾನೂನು ಸವಾಲುಗಳನ್ನು ಎದುರಿಸುತ್ತಿರುವ ಪತ್ರಕರ್ತ ಮತ್ತು ಫ್ಯಾಕ್ಟ್‌ ಚೆಕ್ಕರ್‌ ಮೊಹಮ್ಮದ್ ಜುಬೈರ್ ಅವರ ಉದಾಹರಣೆಯನ್ನು ಅವರು ಉಲ್ಲೇಖಿಸಿದ ಅವರು, ಸತ್ಯ ಹೇಳುವವರನ್ನು ದೇಶದ ಶತ್ರುಗಳಾಗಿ ಬಿಂಬಿಸುವ ಪ್ರವೃತ್ತಿಯು ಬೆಳೆಯುತ್ತಿರುವ ಬಗ್ಗೆ ಎತ್ತಿತೋರಿಸಿದ್ದಾರೆ. ಸತ್ಯ ಮಾತನಾಡುವ, ಅನ್ಯಾಯವನ್ನು ಬಯಲಿಗೆಳೆದು, ಶೋಷಿತರಿಗೆ ಸಾಂತ್ವನ ಹೇಳುವವರೇ ನಿಜವಾದ ದೇಶಭಕ್ತರೆಂದು ಗುರುತಿಸಲ್ಪಡುತ್ತಾರೆ ಎಂದು ಡಾ.ಕಂದಸಾಮಿ ಆಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...