Homeಮುಖಪುಟಪಂಜಾಬ್ : ಶಿರೋಮಣಿ ಅಕಾಲಿ ದಳದ ನಾಯಕ ಸುಖಬೀರ್ ಸಿಂಗ್ ಬಾದಲ್‌ ಮೇಲೆ ಗುಂಡಿನ ದಾಳಿ

ಪಂಜಾಬ್ : ಶಿರೋಮಣಿ ಅಕಾಲಿ ದಳದ ನಾಯಕ ಸುಖಬೀರ್ ಸಿಂಗ್ ಬಾದಲ್‌ ಮೇಲೆ ಗುಂಡಿನ ದಾಳಿ

- Advertisement -
- Advertisement -

ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶ ದ್ವಾರದಲ್ಲಿ ಶಿರೋಮಣಿ ಅಕಾಲಿದಳದ (ಎಸ್‌ಎಡಿ) ನಾಯಕ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವ ಘಟನೆ ಇಂದು (ಡಿ.4) ಬೆಳಿಗ್ಗೆ ನಡೆದಿದೆ.

ತಕ್ಷಣ ಸ್ಥಳದಲ್ಲಿದ್ದ ಜನರು ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಪೊಲೀಸರ ಪ್ರಕಾರ, ದಾಳಿ ನಡೆಸಿದ ವ್ಯಕ್ತಿಯನ್ನು ನಾರಾಯಣ ಸಿಂಗ್ ಚೌರಾ ಎಂದು ಗುರುತಿಸಲಾಗಿದ್ದು, ಆತನನ್ನು ತಕ್ಷಣ ವಶಕ್ಕೆ ತೆಗೆದುಕೊಳ್ಳಲಾಗಿದೆ. ದಾಳಿಯ ಉದ್ದೇಶ ಇನ್ನೂ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಾದಲ್‌ ಅವರು ಸ್ವರ್ಣ ಮಂದಿರದ ಪ್ರವೇಶ ದ್ವಾರದಲ್ಲಿ ನೀಲಿ ಸಮವಸ್ತ್ರ ಧರಿಸಿ ಗಾಲಿ ಕುರ್ಚಿಯಲ್ಲಿ ಕುಳಿತುಕೊಂಡು ಕುತ್ತಿಗೆಗೆ ಫಲಕ ನೇತುಹಾಕಿ, ಕೈಯಲ್ಲಿ ಈಟಿ ಹಿಡಿದುಕೊಂಡು ‘ತನ್ಖಾ’ ಎಂದು ಕರೆಯಲ್ಪಡುವ ಧಾರ್ಮಿಕ ಶಿಕ್ಷೆಯನ್ನು ಅನುಭವಿಸುತ್ತಿದ್ದರು.

ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿಯಾಗಿರುವ ಸುಖ್‌ಬೀರ್‌ ಸಿಂಗ್‌ ಬಾದಲ್‌ ಅವರು ನಿನ್ನೆಯೂ (ಮಂಗಳವಾರ) ಸ್ವರ್ಣ ಮಂದಿರದ ಮುಂಭಾಗದಲ್ಲಿ ಸೇವಾದಾರನಾಗಿ (ಸೇವಕ) ಕರ್ತವ್ಯ ನೆರವೇರಿಸಿದ್ದರು.

ಅಕಾಲಿದಳದ ಮತ್ತೊಬ್ಬ ಹಿರಿಯ ನಾಯಕ ಸುಖ್‌ದೇವ್‌ ಸಿಂಗ್‌ ಢೀಂಡಸಾ ಅವರೂ, ಬಾದಲ್ ಜೊತೆ ಸೇವಾದಾರನಾಗಿ ಶಿಕ್ಷೆ ಅನುಭವಿಸುತ್ತಿದ್ದರು. ಮಾಜಿ ಸಚಿವ ವಿಕ್ರಂ ಸಿಂಗ್‌ ಮಜೀಠಿಯಾ ಅವರು ನಿನ್ನೆ ಸಮುದಾಯ ಭವನದಲ್ಲಿ ಪಾತ್ರೆಗಳನ್ನು ತೊಳೆದಿದ್ದರು.

ಪಂಜಾಬ್‌ನಲ್ಲಿ 2007–2017ರ ನಡುವೆ ‘ಎಸ್‌ಎಡಿ ಸರ್ಕಾರ’ದ ಅವಧಿಯಲ್ಲಿ ಪ್ರಮಾದಗಳನ್ನು ಎಸಗಿದ್ದಕ್ಕಾಗಿ, ಸುಖ್‌ಬೀರ್‌ ಸಿಂಗ್ ಬಾದಲ್ ಹಾಗೂ ಇತರ ನಾಯಕರಿಗೆ ಅಕಾಲ್‌ ತಖ್ತ್‌ನ ಜಾಥೇದಾರರು (ಸಿಖ್‌ ಧರ್ಮದ ಪರಮೋಚ್ಚ ಗುರು) ಸೋಮವಾರ ತನ್ಖಾ(ಧಾರ್ಮಿಕ ಶಿಕ್ಷೆ) ಪ್ರಕಟಿಸಿದ್ದರು.

ಶಿಕ್ಷೆ ಅನುಸಾರ, ಸುಖ್‌ಬೀರ್‌ ಹಾಗೂ ಎಸ್‌ಎಡಿಯ ಇತರ ನಾಯಕರು ಸ್ವರ್ಣಮಂದಿರದಲ್ಲಿ ಸೇವಾದಾರನಾಗಿ ಕೆಲಸ ಮಾಡಬೇಕು. ಒಂದು ಗಂಟೆ ಕೀರ್ತನೆಗಳನ್ನು ಆಲಿಸಬೇಕು, ಪಾತ್ರೆಗಳು ಹಾಗೂ ಭಕ್ತರ ಬೂಟುಗಳನ್ನು ಸ್ವಚ್ಛಗೊಳಿಸಬೇಕೆಂದು ಅಕಾಲ್‌ ತಖ್ತ್‌ನ ಜಾಥೇದಾರ ಜ್ಞಾನಿ ರಘ್‌ಬೀರ್‌ ಸಿಂಗ್‌ ಅವರು ಸೋಮವಾರ ಸೂಚಿಸಿದ್ದರು.

ಇದನ್ನೂ ಓದಿ : ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...