Homeಮುಖಪುಟಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ - ವರದಿ

ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ – ವರದಿ

- Advertisement -
- Advertisement -

ಮಹಿಳೆಯರ ಬೇಡಿಕೆಯ ಮೇರೆಗೆ ರಾಜ್ಯದಲ್ಲಿ ಹೇರಿದ್ದ ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲು ಬಿಹಾರ ಮುಖ್ಯಮಂತ್ರಿ ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ. ಮದ್ಯ ನಿಷೇಧದಿಂದ ತಮಗೆ ಲಾಭಕ್ಕಿಂತ ಹೆಚ್ಚು ಹಾನಿಯಾಗುತ್ತಿದೆ ಎಂಬ ವರದಿಗಳನ್ನು ಪರಿಗಣಿಸಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಡಿಸೆಂಬರ್ 15 ರಿಂದ ನಿತೀಶ್ ಕುಮಾರ್ ನಡೆಸಲು ಉದ್ದೇಶಿಸಿರುವ ಮೆರವಣಿಗೆಯಲ್ಲಿ ಮಹಿಳೆಯರು ಈ ಆಗ್ರಹವನ್ನು ಇಡಲು ಸಜ್ಜಾಗಿದ್ದಾರೆ. ಜೆಡಿಯುನ ಪ್ರಮುಖ ಮತದಾರರೆಂದು ಪರಿಗಣಿಸಲ್ಪಟ್ಟಿರುವ ಮಹಿಳೆಯರು ಈಗಾಗಲೇ ನಿಷೇಧ ಕಾನೂನಿನ ಕಳಪೆ ಅನುಷ್ಠಾನ ಮತ್ತು ರಾಜ್ಯಾದ್ಯಂತ ಕಳ್ಳಭಟ್ಟಿ ವ್ಯಾಪಾರ ಪ್ರವರ್ಧಮಾನಕ್ಕೆ ಬರುತ್ತಿರುವ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೆಡಿಯು ಯಾತ್ರೆ ವೇಳೆ ಸಿಎಂ ಅವರ ಮುಂದೆ ನಮ್ಮ ಬೇಡಿಕೆ ಇಡುತ್ತೇವೆ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಅಥವಾ ಅದನ್ನು ರದ್ದುಗೊಳಿಸಬೇಕು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ ಎಂದು ವೈಶಾಲಿಯ ರಾಘೋಪುರ ಫತೇಪುರ್ ನಿವಾಸಿ ತೆಟಾರಿಯಾ ದೇವಿ ಹೇಳಿದ್ದಾರೆ. ಪ್ರಾಸಂಗಿಕವಾಗಿ ರಾಘೋಪುರವು ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರ ವಿಧಾನಸಭಾ ಕ್ಷೇತ್ರವಾಗಿದೆ.

ಏಪ್ರಿಲ್ 2016 ರಲ್ಲಿ ನಿತೀಶ್ ಅವರು ಬಿಹಾರದಲ್ಲಿ ಸಂಪೂರ್ಣ ಮದ್ಯ ನಿಷೇಧವನ್ನು ಹೇರಿದ್ದರು. ಅವರ ಈ ನೀತಿಗೆ ಸ್ವಾಗತ ಮತ್ತು ಟೀಕೆಗಳು ಸಮಾನವಾಗಿ ವ್ಯಕ್ತವಾಗಿತ್ತು. ಈ ವೇಳೆ ನಿತೀಶ್ ಅವರು ಆರ್‌ಜೆಡಿ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದರು. ಆದರೂ, ಆರ್‌ಜೆಡಿ ನಿತೀಶ್ ಅವರ ಈ ಕ್ರಮದ ವಿರುದ್ಧ ಬಹಿರಂಗವಾಗಿ ಟೀಕೆ ವ್ಯಕ್ತಪಡಿಸಿತ್ತು.

ವಿಶೇಷವಾಗಿ ರಾಜ್ಯಕ್ಕೆ ಭಾರಿ ಪ್ರಮಾಣದ ಕಳ್ಳಸಾಗಣೆ ಮತ್ತು ಕಾನೂನಿನ ಕಳಪೆ ಜಾರಿಯಿಂದಾಗಿ ನಡೆಯುವ ದುರಂತಗಳ ಬಗ್ಗೆ ಮತ್ತು ಕಡಿಮೆ ಬೆಲೆಯಲ್ಲಿ ಸಿಗುವ ನಕಲಿ ಮದ್ಯದ ಸೇವನೆಯಿಂದ ಉಂಟಾಗುವ ಸಾವುನೋವುಗಳ ಬಗ್ಗೆ ಆರ್‌ಜೆಡಿ ಆತಂಕ ವ್ಯಕ್ತಪಡಿಸಿತ್ತು.

ಕೇಂದ್ರ ಸಚಿವ ಮತ್ತು HAM ಸಂಸ್ಥಾಪಕ ಜಿತನ್ ರಾಮ್ ಮಾಂಝಿ ನಿಷೇಧ ಕಾನೂನನ್ನು ತಿರುಚುವ ಮೂಲಕ ಸಣ್ಣ ಪ್ರಮಾಣದಲ್ಲಿ ಮದ್ಯ ಸೇವನೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಮಾಜಿ ಚುನಾವಣಾ ತಂತ್ರಜ್ಞ ಮತ್ತು ಹೊಸದಾಗಿ ರಚಿಸಲಾದ ಜನ್ ಸೂರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ವಿಧಾನಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದರೆ ಒಂದು ಗಂಟೆಯೊಳಗೆ ನಿಷೇಧ ಕಾನೂನನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಪ್ರಸ್ತುತ ಬಿಹಾರ ಮದ್ಯ ನಿಷೇಧದಿಂದ ಪ್ರತಿ ವರ್ಷ 20,000 ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿದೆ. ಬಿಹಾರವು ವಿಶ್ವ ದರ್ಜೆಯ ಶಿಕ್ಷಣ ವ್ಯವಸ್ಥೆಯನ್ನು ಸಾಧಿಸಲು, ಮುಂದಿನ 10 ವರ್ಷಗಳಲ್ಲಿ ₹ 5 ಲಕ್ಷ ಕೋಟಿ ಹೂಡಿಕೆ ಅಗತ್ಯವಿದೆ. ಮದ್ಯಪಾನ ನಿಷೇಧವನ್ನು ತೆಗೆದುಹಾಕಿದ ಕೂಡಲೆ, ಅದರಿಂದ ಬರುವ ಹಣವನ್ನು ಹೊಸ ಶಿಕ್ಷಣ ವ್ಯವಸ್ಥೆಯನ್ನು ಸ್ಥಾಪಿಸಲು ಮಾತ್ರ ಮೀಸಲಿಡಲಾಗುವುದು ಎಂದು ಕಿಶೋರ್ ಇತ್ತೀಚೆಗೆ ಹೇಳಿದ್ದರು.

ಪಾಟ್ನಾ ಹೈಕೋರ್ಟ್ ಕೂಡಾ ಮದ್ಯ ನಿಷೇಧ ಕಾನೂನನ್ನು ಇತ್ತೀಚೆಗೆ ಟೀಕಿಸಿದೆ. ಈ ಕಾನೂನು ಸರ್ಕಾರಿ ಅಧಿಕಾರಿಗಳಿಗೆ ಹಣ ಗಳಿಸುವ ಮತ್ತು ಅನಧಿಕೃತ ವ್ಯಾಪಾರವನ್ನು ಉತ್ತೇಜಿಸುವ ಸಾಧನವಾಗಿದೆ ಎಂದು ಕರೆದಿತ್ತು. ನಿಷೇಧ ಕಾನೂನನ್ನು ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್‌ನ ಪದಚ್ಯುತಿಯನ್ನು ರದ್ದುಗೊಳಿಸುವ ಹೈಕೋರ್ಟ್ ತೀವ್ರ ಟೀಕೆಗ ಮಾಡಿತ್ತು.

ಇದನ್ನೂ ಓದಿ: ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...