Homeಮುಖಪುಟಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ - ವರದಿ

ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ – ವರದಿ

- Advertisement -
- Advertisement -

ಮಹಿಳೆಯರ ಬೇಡಿಕೆಯ ಮೇರೆಗೆ ರಾಜ್ಯದಲ್ಲಿ ಹೇರಿದ್ದ ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲು ಬಿಹಾರ ಮುಖ್ಯಮಂತ್ರಿ ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ. ಮದ್ಯ ನಿಷೇಧದಿಂದ ತಮಗೆ ಲಾಭಕ್ಕಿಂತ ಹೆಚ್ಚು ಹಾನಿಯಾಗುತ್ತಿದೆ ಎಂಬ ವರದಿಗಳನ್ನು ಪರಿಗಣಿಸಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಡಿಸೆಂಬರ್ 15 ರಿಂದ ನಿತೀಶ್ ಕುಮಾರ್ ನಡೆಸಲು ಉದ್ದೇಶಿಸಿರುವ ಮೆರವಣಿಗೆಯಲ್ಲಿ ಮಹಿಳೆಯರು ಈ ಆಗ್ರಹವನ್ನು ಇಡಲು ಸಜ್ಜಾಗಿದ್ದಾರೆ. ಜೆಡಿಯುನ ಪ್ರಮುಖ ಮತದಾರರೆಂದು ಪರಿಗಣಿಸಲ್ಪಟ್ಟಿರುವ ಮಹಿಳೆಯರು ಈಗಾಗಲೇ ನಿಷೇಧ ಕಾನೂನಿನ ಕಳಪೆ ಅನುಷ್ಠಾನ ಮತ್ತು ರಾಜ್ಯಾದ್ಯಂತ ಕಳ್ಳಭಟ್ಟಿ ವ್ಯಾಪಾರ ಪ್ರವರ್ಧಮಾನಕ್ಕೆ ಬರುತ್ತಿರುವ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೆಡಿಯು ಯಾತ್ರೆ ವೇಳೆ ಸಿಎಂ ಅವರ ಮುಂದೆ ನಮ್ಮ ಬೇಡಿಕೆ ಇಡುತ್ತೇವೆ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಅಥವಾ ಅದನ್ನು ರದ್ದುಗೊಳಿಸಬೇಕು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ ಎಂದು ವೈಶಾಲಿಯ ರಾಘೋಪುರ ಫತೇಪುರ್ ನಿವಾಸಿ ತೆಟಾರಿಯಾ ದೇವಿ ಹೇಳಿದ್ದಾರೆ. ಪ್ರಾಸಂಗಿಕವಾಗಿ ರಾಘೋಪುರವು ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರ ವಿಧಾನಸಭಾ ಕ್ಷೇತ್ರವಾಗಿದೆ.

ಏಪ್ರಿಲ್ 2016 ರಲ್ಲಿ ನಿತೀಶ್ ಅವರು ಬಿಹಾರದಲ್ಲಿ ಸಂಪೂರ್ಣ ಮದ್ಯ ನಿಷೇಧವನ್ನು ಹೇರಿದ್ದರು. ಅವರ ಈ ನೀತಿಗೆ ಸ್ವಾಗತ ಮತ್ತು ಟೀಕೆಗಳು ಸಮಾನವಾಗಿ ವ್ಯಕ್ತವಾಗಿತ್ತು. ಈ ವೇಳೆ ನಿತೀಶ್ ಅವರು ಆರ್‌ಜೆಡಿ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದರು. ಆದರೂ, ಆರ್‌ಜೆಡಿ ನಿತೀಶ್ ಅವರ ಈ ಕ್ರಮದ ವಿರುದ್ಧ ಬಹಿರಂಗವಾಗಿ ಟೀಕೆ ವ್ಯಕ್ತಪಡಿಸಿತ್ತು.

ವಿಶೇಷವಾಗಿ ರಾಜ್ಯಕ್ಕೆ ಭಾರಿ ಪ್ರಮಾಣದ ಕಳ್ಳಸಾಗಣೆ ಮತ್ತು ಕಾನೂನಿನ ಕಳಪೆ ಜಾರಿಯಿಂದಾಗಿ ನಡೆಯುವ ದುರಂತಗಳ ಬಗ್ಗೆ ಮತ್ತು ಕಡಿಮೆ ಬೆಲೆಯಲ್ಲಿ ಸಿಗುವ ನಕಲಿ ಮದ್ಯದ ಸೇವನೆಯಿಂದ ಉಂಟಾಗುವ ಸಾವುನೋವುಗಳ ಬಗ್ಗೆ ಆರ್‌ಜೆಡಿ ಆತಂಕ ವ್ಯಕ್ತಪಡಿಸಿತ್ತು.

ಕೇಂದ್ರ ಸಚಿವ ಮತ್ತು HAM ಸಂಸ್ಥಾಪಕ ಜಿತನ್ ರಾಮ್ ಮಾಂಝಿ ನಿಷೇಧ ಕಾನೂನನ್ನು ತಿರುಚುವ ಮೂಲಕ ಸಣ್ಣ ಪ್ರಮಾಣದಲ್ಲಿ ಮದ್ಯ ಸೇವನೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಮಾಜಿ ಚುನಾವಣಾ ತಂತ್ರಜ್ಞ ಮತ್ತು ಹೊಸದಾಗಿ ರಚಿಸಲಾದ ಜನ್ ಸೂರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ವಿಧಾನಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದರೆ ಒಂದು ಗಂಟೆಯೊಳಗೆ ನಿಷೇಧ ಕಾನೂನನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಪ್ರಸ್ತುತ ಬಿಹಾರ ಮದ್ಯ ನಿಷೇಧದಿಂದ ಪ್ರತಿ ವರ್ಷ 20,000 ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿದೆ. ಬಿಹಾರವು ವಿಶ್ವ ದರ್ಜೆಯ ಶಿಕ್ಷಣ ವ್ಯವಸ್ಥೆಯನ್ನು ಸಾಧಿಸಲು, ಮುಂದಿನ 10 ವರ್ಷಗಳಲ್ಲಿ ₹ 5 ಲಕ್ಷ ಕೋಟಿ ಹೂಡಿಕೆ ಅಗತ್ಯವಿದೆ. ಮದ್ಯಪಾನ ನಿಷೇಧವನ್ನು ತೆಗೆದುಹಾಕಿದ ಕೂಡಲೆ, ಅದರಿಂದ ಬರುವ ಹಣವನ್ನು ಹೊಸ ಶಿಕ್ಷಣ ವ್ಯವಸ್ಥೆಯನ್ನು ಸ್ಥಾಪಿಸಲು ಮಾತ್ರ ಮೀಸಲಿಡಲಾಗುವುದು ಎಂದು ಕಿಶೋರ್ ಇತ್ತೀಚೆಗೆ ಹೇಳಿದ್ದರು.

ಪಾಟ್ನಾ ಹೈಕೋರ್ಟ್ ಕೂಡಾ ಮದ್ಯ ನಿಷೇಧ ಕಾನೂನನ್ನು ಇತ್ತೀಚೆಗೆ ಟೀಕಿಸಿದೆ. ಈ ಕಾನೂನು ಸರ್ಕಾರಿ ಅಧಿಕಾರಿಗಳಿಗೆ ಹಣ ಗಳಿಸುವ ಮತ್ತು ಅನಧಿಕೃತ ವ್ಯಾಪಾರವನ್ನು ಉತ್ತೇಜಿಸುವ ಸಾಧನವಾಗಿದೆ ಎಂದು ಕರೆದಿತ್ತು. ನಿಷೇಧ ಕಾನೂನನ್ನು ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್‌ನ ಪದಚ್ಯುತಿಯನ್ನು ರದ್ದುಗೊಳಿಸುವ ಹೈಕೋರ್ಟ್ ತೀವ್ರ ಟೀಕೆಗ ಮಾಡಿತ್ತು.

ಇದನ್ನೂ ಓದಿ: ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...