Homeಮುಖಪುಟಕಲಾಂ ಪ್ರಶಸ್ತಿಗೆ ಮರುನಾಮಕರಣ ಮಾಡಲೊರಟ ಜಗನ್‌.. ತೀವ್ರ ವಿರೋಧ

ಕಲಾಂ ಪ್ರಶಸ್ತಿಗೆ ಮರುನಾಮಕರಣ ಮಾಡಲೊರಟ ಜಗನ್‌.. ತೀವ್ರ ವಿರೋಧ

- Advertisement -
- Advertisement -

ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ಸರ್ವಾಧಿಕಾರಿ ಆಡಳಿತ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾರಣ ಡಾ.ಎಪಿಜೆ ಅಬ್ದುಲ್ ಕಲಾಂ ಹೆಸರಲ್ಲಿ ನೀಡುತ್ತಿರುವ ಪ್ರತಿಭಾ ಪುರಸ್ಕಾರದ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಜಗನ್‌ ಪ್ರತಿವರ್ಷ ಮಕ್ಕಳಿಗೆ ನೀಡಲಾಗುವ ಅಬ್ದುಲ್ ಕಲಾಂ ಪ್ರತಿಭಾ ಪುರಸ್ಕಾರವನ್ನು ವೈಎಸ್‌ಆರ್ ವಿದ್ಯಾ ಪುರಸ್ಕಾರ ಎಂದು ಬದಲಾಯಿಸಲು ಸೂಚಿಸಿದ್ದರು. ಆದರೆ ಸಾಕಷ್ಟು ವಾದ-ವಿವಾದದ ನಂತರ ಈ ಪ್ರಯತ್ನವನ್ನು ಕೈ ಬಿಟ್ಟಿದ್ದಾರೆ.

ಪ್ರಶಸ್ತಿಯ ಹೆಸರು ಬದಲಿಸಿ, ಮರುನಾಮಕರಣ ಮಾಡುವುದಾಗಿ ಆಂಧ್ರಪ್ರದೇಶ ಸರ್ಕಾರ ಘೋಷಿಸಿತ್ತು. ಸಿಎಂ ಜಗನ್ ಮೋಹನ್ ಅವರು ತಮ್ಮ ತಂದೆ ರಾಜಶೇಖರ್ ರೆಡ್ಡಿ ಅವರ ಹೆಸರನ್ನು ಪ್ರಶಸ್ತಿಗೆ ಮರುನಾಮಕರಣ ಮಾಡುವುದಾಗಿ ಹೇಳಿದ್ದರು. ಜಗನ್ ತಂದೆ ವೈಎಸ್ಆರ್ 2009ರಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು.

ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಸ್ಮರಣಾರ್ಥ ರಾಷ್ಟ್ರೀಯ ಶೈಕ್ಷಣಿಕ ದಿನ ನವೆಂಬರ್ 11ರಂದು ನೀಡಲಾಗುವ ಡಾ. ಎಪಿಜೆ ಅಬ್ದುಲ್ ಕಲಾಂ ಹೆಸರಿನ ಪ್ರಶಸ್ತಿಗೆ ವೈಎಸ್ ಆರ್ ವಿದ್ಯಾ ಪುರಸ್ಕಾರವೆಂದು ಹೆಸರು ಬದಲಾಯಿಸಿ, 2019ರ ಶೈಕ್ಷಣಿಕ ಸಾಲಿನಲ್ಲಿ ಪ್ರಶಸ್ತಿ ನೀಡುವುದಾಗಿ ತಿಳಿಸಿತ್ತು. ಆದರೆ ಜಗನ್ ಅವರ ಈ ಇಚ್ಛೆ ಈಡೇರಿಲ್ಲ.

ಪ್ರಶಸ್ತಿ ಹೆಸರನ್ನು ಬದಲಾಯಿಸುತ್ತಿರುವ ಬಗ್ಗೆ ಟಿಡಿಪಿ ಕಿಡಿಕಾರಿದೆ. ಸಿಎಂ ಜಗನ್ ಅವರು ವಂಶಾವಳಿ ಆಡಳಿತ ನಡೆಸುತ್ತಿದ್ದಾರೆ. ಜಗತ್ತೇ ಮೆಚ್ಚಿಕೊಂಡ ಕಲಾಂ ಅವರ ಹೆಸರನ್ನು ಬದಲಾಯಿಸಲು ಹುನ್ನಾರ ನಡೆಸಿದೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಶಸ್ತಿಗೆ ಮರುನಾಮಕರಣ ಮಾಡುತ್ತಿರುವ ವಿಚಾರ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ್ತ ಜಗನ್ ಹೆಜ್ಜೆ ಹಿಂದಿಟ್ಟಿದ್ದು, ಸೂಚನೆ ಹಿಂಪಡೆದಿದ್ದಾರೆ.

ಬಿಜೆಪಿ ನಾಯಕ ಲಂಕಾ ದಿನಕರ್, ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಿಜವಾದ ರಾಷ್ಟ್ರೀಯ ನಾಯಕರ ಹೆಸರನ್ನು ವಂಶಾವಳಿ ರಾಜಕೀಯಕ್ಕೆ ತಳುಕು ಹಾಕುತ್ತಿರುವ ಕ್ರಮ ಖಂಡನೀಯ ಎಂದರು.

ಇನ್ನು ಡಾ.ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿಯನ್ನು 10 ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ತರಗತಿಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳಿಗೆ, ಕಲಾಂ ಅವರ ಜನ್ಮದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಅದಾಗ್ಯೂ ಜಗನ್ ಮೋಹನ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಮಟ್ಟದ ಹಲವು ಯೋಜನೆಗಳ ಹೆಸರನ್ನು ಬದಲಾಯಿಸಲಾಗಿದೆ. ಎನ್.ಟಿ.ಆರ್ ಭರೋಸಾ ಯೋಜನೆಗೆ ವೈಎಸ್ಆರ್ ಪೆನ್ಶನ್ ಕನುಕಾ ಎಂದು, ಅಣ್ಣಾ ಕ್ಯಾಂಟೀನ್ಸ್ ಯೋಜನೆ ಹೆಸರನ್ನು ರಾಜಣ್ಣ ಕ್ಯಾಂಟೀನ್ಸ್ ಎಂದು, ಮಧ್ಯಾಹ್ನ ಊಟದ ಯೋಜನೆಯನ್ನು ವೈಎಸ್ಆರ್ ಅಕ್ಷಯ ಪಾತ್ರಾ ಎಂದು ಮರುನಾಮಕರಣ ಮಾಡಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...