Homeಮುಖಪುಟಸಂಭಾಲ್‌ಗೆ ಏಕಾಂಗಿಯಾಗಿ ಹೋಗಲು ಸಿದ್ಧ, ಪೊಲೀಸರು ಅನುಮತಿ ನೀಡುತ್ತಿಲ್ಲ: ರಾಹುಲ್ ಗಾಂಧಿ

ಸಂಭಾಲ್‌ಗೆ ಏಕಾಂಗಿಯಾಗಿ ಹೋಗಲು ಸಿದ್ಧ, ಪೊಲೀಸರು ಅನುಮತಿ ನೀಡುತ್ತಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಮಸೀದಿ ಸಮೀಕ್ಷೆ ಸಂಧರ್ಭದಲ್ಲಿ ಹಿಂಸಾಚಾರ ನಡೆದ ಸಂಭಾಲ್‌ಗೆ ತೆರಳುತ್ತಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ಇಲ್ಲಿನ ಗಾಜಿಪುರ ಗಡಿಯಲ್ಲಿ ತಡೆದಿದ್ದಾರೆ.

“ನಾನು ಪೊಲೀಸರೊಂದಿಗೆ ಸಂಭಾಲ್‌ಗೆ ಏಕಾಂಗಿಯಾಗಿ ಹೋಗಲು ಸಿದ್ಧನಿದ್ದೇನೆ. ಆದರೆ, ಅವರು ಅನುಮತಿಸಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ರಾಯ್ ಬರೇಲಿ ಸಂಸದ ರಾಹುಲ್ ಗಾಂಧಿ, ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಬೆಳಿಗ್ಗೆ ಘಾಜಿಪುರ ಗಡಿಯನ್ನು ತಲುಪಿದರು. ಅಲ್ಲಿ ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸಂಭಾಲ್‌ಗೆ ಪ್ರವೇಶಿಸುವುದನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಕಲಾಯಿತು. ಹಲವು ಹೊತ್ತಿನ ಮಾತುಕತೆ ಬಳಿಕ ರಾಹುಲ್ ಗಾಂಧಿ ದೆಹಲಿಗೆ ತೆರಳಿದರು.

ನಂತರ ಮಾತನಾಡಿದ ಅವರು, “ನಾವು ಸಂಭಾಲ್‌ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ, ಪೊಲೀಸರು ನಿರಾಕರಿಸುತ್ತಿದ್ದು, ನಮಗೆ ಅವಕಾಶ ನೀಡುತ್ತಿಲ್ಲ. ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ಸ್ಥಳಕ್ಕೆ ಹೋಗುವುದು ನನ್ನ ಹಕ್ಕು.. ನಾನು ಒಬ್ಬನೇ ಹೋಗಲು ಸಿದ್ಧ ಎಂದು ಪೊಲೀಸರೊಂದಿಗೆ ಹೇಳಿದೆ. ಆದರೆ ಅವರು ಅದನ್ನು ಸ್ವೀಕರಿಸಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

“ಕೆಲವು ದಿನಗಳಲ್ಲಿ ಹಿಂತಿರುಗಿದರೆ, ಅವರು ನಮ್ಮನ್ನು ಬಿಡುತ್ತಾರೆ ಎಂದು ಹೇಳುತ್ತಿದ್ದಾರೆ. ವಾಸ್ತವವಾಗಿ ಇದು ಲೋಕಸಭೆಯ ವಿರೋಧ ಪಕ್ಷದ ನಾಯಕನ ಹಕ್ಕಿಗೆ ವಿರುದ್ಧವಾಗಿದೆ. ನನಗೆ ಹೋಗಲು ಅವಕಾಶ ನೀಡಬೇಕು” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡ ಗಾಂಧಿ, ಪೊಲೀಸರ ನಿರ್ಧಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.

“ನಾವು ಸಂಭಾಲ್‌ಗೆ ಹೋಗಿ ಅಲ್ಲಿ ಏನಾಯಿತು ಎಂಬುದನ್ನು ನೋಡಲು ಬಯಸುತ್ತೇವೆ. ನಾವು ಜನರನ್ನು ಭೇಟಿಯಾಗಲು ಬಯಸುತ್ತೇವೆ. ಆದರೆ, ನನ್ನ ಸಾಂವಿಧಾನಿಕ ಹಕ್ಕನ್ನು ನನಗೆ ಅನುಮತಿಸಲಾಗುತ್ತಿಲ್ಲ.  ಸಂವಿಧಾನವನ್ನು ಕೊನೆಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ, ನಾವು ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದರು.

ವಯನಾಡ್ ಸಂಸದೆ ಪ್ರಿಯಾಂಕಾ ವಾದ್ರಾ ಮಾತನಾಡಿ, “ಸಂಭಾಲ್‌ನಲ್ಲಿ ನಡೆದದ್ದು ತಪ್ಪಾಗಿದೆ. ರಾಹುಲ್ ವಿರೋಧ ಪಕ್ಷದ ನಾಯಕ. ಅವರಿಗೆ ಸಾಂವಿಧಾನಿಕ ಹಕ್ಕಿದೆ. ಅವರು ಇತರ ಜನರಿಗಿಂತ ಭಿನ್ನರು. ಅವರನ್ನು ತಡೆಯಲು ಸಾಧ್ಯವಿಲ್ಲ, ಸಂತ್ರಸ್ತರನ್ನು ಭೇಟಿ ಮಾಡಲು ಸಾಂವಿಧಾನಿಕ ಹಕ್ಕು ಇದೆ; ಅವರಿಗೆ ಅವಕಾಶ ನೀಡಬೇಕು” ಎಂದರು.

ಸಂಭಾಲ್‌ನಲ್ಲಿ ಭಾನುವಾರದಂದು ಮುಕ್ತಾಯಗೊಳ್ಳಲಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್ 163 (ಉಪದ್ರವ ಅಥವಾ ಅಪಾಯದ ತುರ್ತು ಪ್ರಕರಣಗಳಲ್ಲಿ ಆದೇಶವನ್ನು ನೀಡುವ ಅಧಿಕಾರ) ಅಡಿಯಲ್ಲಿ ನಿರ್ಬಂಧಗಳನ್ನು ಈಗ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಅವರು ಮಂಗಳವಾರ ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್‌ನ ಪೊಲೀಸ್ ಕಮಿಷನರ್‌ಗಳು, ಅಮ್ರೋಹಾ ಮತ್ತು ಬುಲಂದ್‌ಶಹರ್ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದು ರಾಹುಲ್ ಗಾಂಧಿಯನ್ನು ತಮ್ಮ ಜಿಲ್ಲೆಗಳ ಗಡಿಯಲ್ಲಿ ನಿಲ್ಲಿಸುವಂತೆ ಸೂಚಿಸಿದ್ದಾರೆ.

“ನಾವು ರಾಹುಲ್ ಗಾಂಧಿಯವರನ್ನು ಸಂಭಾಲ್‌ ಪ್ರವೇಶಕ್ಕೆ ಅನುಮತಿಸುವುದಿಲ್ಲ. ಏಕೆಂದರೆ, ಅಲ್ಲಿನ ಆಡಳಿತವು ನಿಷೇಧಾಜ್ಞೆಗಳನ್ನು ಹೊರಡಿಸಿದೆ. ಪೊಲೀಸರು ಅವರನ್ನು ಯುಪಿ ಗೇಟ್‌ನಲ್ಲಿ ನಿಲ್ಲಿಸುತ್ತಾರೆ” ಎಂದು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳದಲ್ಲಿ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದರು.

ನವೆಂಬರ್ 19 ರಿಂದ ಸಂಭಾಲ್‌ನಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಮೊಘಲರ ಕಾಲದ ಮಸೀದಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಈ ಹಿಂದೆ ಹರಿಹರ ದೇವಾಲಯವೊಂದು ಆ ಸ್ಥಳದಲ್ಲಿತ್ತು ಎಂಬ ಹೇಳಿಕೆಯ ಮೇರೆಗೆ ಸಮೀಕ್ಷೆ ನಡೆಸಲಾಯಿತು.

ನವೆಂಬರ್ 24 ರಂದು ನಡೆದ ಎರಡನೇ ಸಮೀಕ್ಷೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದರು. ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ; ಸಂಭಾಲ್‌ ಹಿಂಸಾಚಾರ: ಪರಿಸ್ಥಿತಿ ಅವಲೋಕಿಸಲು ಘಟನಾ ಸ್ಥಳಕ್ಕೆ ಹೊರಟ ರಾಹುಲ್-ಪ್ರಿಯಾಂಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...