Homeಮುಖಪುಟ"ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು" : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

- Advertisement -
- Advertisement -

ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಗುಂಪಿನಿಂದ ಹಲ್ಲೆಗೊಳಗಾಗಿ, ಬಳಿಕ ಪೊಲೀಸರಿಂದ ಬಂಧಿತರಾಗಿದ್ದ ಬಳೆ ವ್ಯಾಪಾರಿಯನ್ನು ಮಧ್ಯ ಪ್ರದೇಶ ಇಂದೋರ್ ನ್ಯಾಯಾಲಯ ಸೋಮವಾರ (ಡಿ.2) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ತಸ್ಲೀಂ ಅಲೀ ಎಂಬ ಬಳೆ ವ್ಯಾಪಾರಿಗೆ ರಾಖಿ ಹಬ್ಬದ ವೇಳೆ ಬಳೆ ವ್ಯಾಪಾರ ಮಾಡುವ ನೆಪದಲ್ಲಿ ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಗುಂಪೊಂದು ಥಳಿಸಿತ್ತು. 2021ರ ಆಗಸ್ಟ್ 22ರಂದು ಈ ಘಟನೆ ನಡೆದಿತ್ತು.

ಈ ಕುರಿತ ವೈರಲ್ ವಿಡಿಯೋದಲ್ಲಿ, ತಸ್ಲೀಂ ಅಲೀಗೆ ಥಳಿಸಿದ ಗುಂಪು ಮತ್ತೊಮ್ಮೆ ‘ಹಿಂದೂ ಪ್ರದೇಶ’ ಕ್ಕೆ ಕಾಲಿಡಬೇಡ ಎಂದು ಎಚ್ಚರಿಕೆ ನೀಡಿದ ದೃಶ್ಯವಿತ್ತು. ಈ ವಿಡಿಯೋ ದೇಶದಾದ್ಯಂತ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ತನ್ನ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ತಸ್ಲೀಂ ಅಲೀ ದೂರು ನೀಡಿದ್ದರು. ಇದೇ ವೇಳೆ 13 ವರ್ಷದ ಬಾಲಕಿಯೊಬ್ಬಳು ತಸ್ಲೀಂ ಅಲೀ ವಿರುದ್ದ ಪ್ರತಿದೂರು ದಾಖಲಿಸಿದ್ದರು. ಆ ದೂರು ಆಧರಿಸಿ ತಸ್ಲೀಂ ಅಲೀ ಮೇಲೆ ಪೋಕ್ಸೋ ಮತ್ತು ಐಪಿಸಿಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಜೈಲಿಗಟ್ಟಿದ್ದರು.

ತನ್ನ ಮೇಲೆ ಹಲ್ಲೆ ನಡೆಸಿದ್ದವರ ವಿರುದ್ಧ ಅಲಿ ಬನಗಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐದಾರು ಜನರ ಗುಂಪೊಂದು ತನ್ನ ಹೆಸರನ್ನು ಕೇಳಿ ತನ್ನನ್ನು ಥಳಿಸಿದೆ,ಕೋಮು ನಿಂದನೆಗಳನ್ನು ಮಾಡಿದೆ. ತನ್ನ ಬಳಿಯಿದ್ದ 10,000 ರೂ. ಬೆಲೆಯ ಮೊಬೈಲ್ ಫೋನ್ ಮತ್ತು ಆಧಾರ ಕಾರ್ಡ್ ಸೇರಿದಂತೆ ದಾಖಲೆಗಳನ್ನು ಕಿತ್ತುಕೊಂಡಿದೆ ಎಂದು ಹೇಳಿದ್ದರು.

ಅಲೀ ಅವರ ದೂರಿನ ಆಧಾರದಲ್ಲಿ ಪೋಲಿಸರು ನಾಲ್ವರನ್ನು ಬಂಧಿಸಿದ್ದರು. ಆದರೆ, ಇದರ ಬೆನ್ನಲ್ಲೇ 13 ಹರೆಯದ ಬಾಲಕಿ ದೂರು ನೀಡಿದ್ದರಿಂದ, ಪೊಲೀಸರು ಅಲಿ ವಿರುದ್ಧವೇ ಪೊಕ್ಸೊ ಪ್ರಕರಣ ಹೂಡಿ ಜೈಲಿಗೆ ತಳ್ಳಿದ್ದರು.

ವರದಿಗಳ ಪ್ರಕಾರ, ದೂರು ದಾಖಲಿಸಿದ್ದ ಬಾಲಕಿ ಸೇರಿದಂತೆ ಸಾಕ್ಷಿಗಳು ಪ್ರತಿಕೂಲ ಸಾಕ್ಷ್ಯ ನುಡಿದಿದ್ದರಿಂದ ಇಂದೋರ್ ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವಿ ರಶ್ಮಿ ಬಲ್ಟಾರ್ ಅವರು ತಸ್ಲೀಂ ಅಲಿಯನ್ನು ಖುಲಾಸೆಗೊಳಿಸಿದ್ದಾರೆ ಎಂದು ಅಲೀ ಪರ ವಕೀಲ ಶೇಖ್ ಅಲೀಮ್ ತಿಳಿಸಿದ್ದಾರೆ.

ಖುಲಾಸೆಗೊಂಡ ಬಳಿಕ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅಲೀ, “ನನಗೆ ಸಂತೋಷ ಮತ್ತು ದುಃಖ ಎರಡೂ ಆಗಿವೆ. ನನ್ನ ಪರವಾಗಿ ನಿಂತವರಿಗೆ, ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದವರಿಗೆ ಮತ್ತು ನನ್ನನ್ನು ಥಳಿಸಿದವರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನ ಧರ್ಮ ಮತ್ತು ನನ್ನ ಹೆಸರಿನ ಕಾರಣದಿಂದಾಗಿ ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” ಎಂದಿದ್ದಾರೆ.

“ನಾನು ಶಾಂತಿ ಬಯಸಿದ್ದೇನೆ, ನಡೆದು ಹೋದ ಘಟನೆಯನ್ನು ಮರೆಯಲು ಬಯಸುತ್ತೇನೆ. ಇಂದೋರ್ ನಗರದ ಬಗ್ಗೆ ನನಗೆ ಯಾವುದೇ ದ್ವೇಷವಿಲ್ಲ. ಅಲ್ಲಿಯ ಎಲ್ಲಾ ನಿವಾಸಿಗಳು ನನ್ನ ಸೋದರ- ಸೋದರಿಯರು. ಜೈಲಿನಲ್ಲಿ ಜೇಲರ್‌ಗಳಾಗಲಿ, ಪೋಲಿಸರಾಗಲಿ ನನಗೆ ಕಿರುಕುಳ ನೀಡಿರಲಿಲ್ಲ. ನಾನು ಸಂವಿಧಾನ ಮತ್ತು ನ್ಯಾಯಾಂಗದಲ್ಲಿ ವಿಶ್ವಾಸವನ್ನು ಹೊಂದಿದ್ದೆ” ಎಂದು ಹೇಳಿದ್ದಾರೆ.

“ಡಿಸೆಂಬರ್ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದಾಗ ನಾನು ಮತ್ತೊಮ್ಮೆ ಇಂದೋರ್‌ನ ಬೀದಿಗೆ ಹೋಗಿದ್ದೆ. ಆ ವೇಳೆ ನನ್ನಲ್ಲಿ ಭಯ ಆವರಿಸಿತ್ತು. ನನಗೆ ಆರು ಮಕ್ಕಳಿದ್ದಾರೆ. ಅವರ ಹೊಟ್ಟೆ ತುಂಬಿಸಬೇಕಿದೆ. ಹಾಗಾಗಿ, ನಾನು ಮತ್ತೆ ಇಂದೋರ್‌ಗೆ ಹೋಗುತ್ತೇನೆ. ಯುಪಿಯಿಂದ ಪಂಜಾಬ್, ಇಂದೋರ್‌ನ ಬೀದಿಗಳಿಗೆ ತೆರಳಿ ಜಾತ್ರೆ, ಮೇಳಗಳಲ್ಲಿ ಬಳೆ ವ್ಯಾಪಾರ ಮಾಡುವುದೇ ನನ್ನ ಕಾಯಕ. ನನ್ನ ತಂದೆ, ಅಜ್ಜ ಕೂಡ ಇದನ್ನೇ ಮಾಡಿದ್ದರು” ಎಂದು ತಸ್ಲೀಂ ಅಲೀ ತಿಳಿಸಿದ್ದಾರೆ

ವರದಿಗಳ ಪ್ರಕಾರ, ಮುಸ್ಲಿಂ ವ್ಯಾಪಾರಿಯಾದ ತಸ್ಲೀಂ ಅಲೀ ತನ್ನ ಹೆಸರನ್ನು ಮರೆಮಾಚಿ ‘ಗೋಲು ಸಿಂಗ್’ ಎಂಬ ಹೆಸರಿನಲ್ಲಿ ಹಿಂದೂ ಪ್ರದೇಶಗಳಲ್ಲಿ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಲಾಗಿದೆ. ಅಸಲಿಗೆ ‘ಗೋಲು’ ಎಂಬುವುದು ತಸ್ಲೀಂ ಅವರ ಊರಿನ ಅಥವಾ ನಿಕ್ ನೇಮ್ ಆಗಿದೆ. ಸಿಂಗ್ ಎನ್ನುವುದು ತಂದೆಯ ಹೆಸರಿನಿಂದ ಬಂದಿದೆ. ತಸ್ಲೀಂ ಅವರ ತಂದೆಯ ಹೆಸರು ಮೊಹರ್ ಅಲೀ. ದಾಖಲೆಗಳಲ್ಲಿ ಅದು ತಪ್ಪಾಗಿ ‘ಮೊಹರ್ ಸಿಂಗ್’ ಎಂದು ಬಂದಿತ್ತು. ನಂತರ ಅದು ಮೊಹರ್ ಅವರ ಮಗ ತಸ್ಲೀಂ ಆಧಾರ್ ಕಾರ್ಡ್‌ನಲ್ಲೂ ಹಾಗೇಯೇ ಮುಂದುವರೆದಿದೆ. ನ್ಯಾಯಾಲಯ ಕೂಡ ಈ ಅಂಶವನ್ನು ಗಮನಿಸಿದೆ. ಪ್ರಾಸಿಕ್ಯೂಷನ್ ತಸ್ಲೀಂ ಅಲೀಯ ಅಪರಾಧವನ್ನು ರುಜುವಾತು ಮಾಡುವಲ್ಲಿ ವಿಫಲವಾಗಿದೆ.

ತಸ್ಲೀಂ ಅಲೀ ಖುಲಾಸೆಗೊಂಡಿರುವ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್, “ಅಲೀ ಅವರು ಹಲ್ಲೆಗೊಳಗಾದಾಗ ನ್ಯೂಸ್‌ ಚಾನೆಲ್‌ಗಳು ‘ಲವ್‌ ಜಿಹಾದ್’ ಎಂಬ ಶೀರ್ಷಿಕೆ ಕೊಟ್ಟು ಸುದ್ದಿ ಮಾಡಿತ್ತು. ಈಗ ಅವರು ಎಲ್ಲಾ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಎಷ್ಟು ಚಾನೆಲ್‌ಗಳು ಸುದ್ದಿ ಮಾಡಿವೆ? ಎಂದು ಪ್ರಶ್ನಿಸಿದ್ದಾರೆ.

ಅವತ್ತು ‘ಬಳೆ ನೆಪ..ಲವ್ ಜಿಹಾದ್ ಗುರಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿದ್ದ ನೀವು ಖುಲಾಸೆಗೊಂಡ ಬಗ್ಗೆ ಸುದ್ದಿ ಮಾಡಿದ್ದೀರಾ? ಎಂದು ನ್ಯೂಸ್ 18 ಮಧ್ಯ ಪ್ರದೇಶ, ಉತ್ತರಾಖಂಡ ಚಾನೆಲ್‌ಗೆ ಕೇಳಿದ್ದಾರೆ.

ಇದನ್ನೂ ಓದಿ : ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...