Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಎಚ್ ಮುನಿಯಪ್ಪನವರಿಗೆ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರು ಘೇರಾವ್ ಹಾಕಿದ್ದು,, ಭೂಸ್ವಾಧೀನ ಹಿಂಪಡೆಯುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.

ಸುದೀರ್ಘ 975 ದಿನಗಳಿಂದ ಭೂಸ್ವಾಧೀನವನ್ನು ವಿರೋಧಿಸಿ ಚನ್ನರಾಯಪಟ್ಟಣದ ನಾಡಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರ ತಾಳ್ಮೆ ಕಟ್ಟೆಯೊಡೆದಿದ್ದು, ಅನ್ನದಾತರನ್ನು ನಿರ್ಲಕ್ಷಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದರು.

“ಇಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದಾಗಿನಿಂದಲೂ ಕೂಡ ಒಂದಲ್ಲೊಂದು ನೆಪ ಹೇಳುತ್ತಿದೆ. ಆ ಮೂಲಕ ದಿನದೊಡುತ್ತಿರುವ ಸಚಿವರು ರೈತ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಇವರಿಗೆ ರೈತರ ಭೂಮಿಯನ್ನು ಕೈಬಿಡುವ ಯಾವುದೇ ಯೋಚನೆ ಇದ್ದಂತೆ ಕಾಣುತ್ತಿಲ್ಲ. ಇವರು ಕೂಡ ಹಿಂದಿನ ಸರ್ಕಾರಗಳ ರೀತಿಯಲ್ಲೇ ಬಂಡವಾಳಶಾಹಿಗಳ ಪರವಾಗಿ ವರ್ತಿಸುತ್ತಿದ್ದಾರೆ” ಸ್ಥಳದಲ್ಲಿದ್ದ ರೈತರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಸಮಜಾಯಿಷಿ ನೀಡಲು ಮುಂದಾದ ಮಂತ್ರಿಗಳು, “ಬೆಳಗಾವಿ ಅಧಿವೇಶನ ಮುಗಿಯುವುದರೊಳಗಾಗಿ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಹೇಳಿದರು. ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ಪ್ರತಿಭಟನಾನಿರತರು, “ನೀವು ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಹತ್ತಾರು ಗಡುವುಗಳನ್ನು ನೀಡುತ್ತಲೇ ಬಂದಿದ್ದೀರಿ, ಯಾವ ಬಾರಿಯೂ ಕೊಟ್ಟ‌ಮಾತಿನಂತೆ ನಡೆದುಕೊಳ್ಳಲೇ ಇಲ್ಲ. ನಾವು ನಿಮ್ಮ ಮನೆಗೆ ಅಲೆಯುತ್ತಲೇ ಇದ್ದೇವೆ, ಇಷ್ಟಾದರೂ ನಮ್ಮ ಸಮಸ್ಯೆ ಬಗ್ಗೆ ಹರಿಸಿಲ್ಲ. ಆದ್ದರಿಂದ ನೀವು ಇಂದು ನೀಡುತ್ತಿರುವ ಗಡುವಿನಲ್ಲಿ ಸಮಸ್ಯೆ ಬಗೆಹರಿಸುತ್ತೀರೆಂಬ ಯಾವ ಭರವಸೆಯೂ ಇಲ್ಲ” ಎಂದು ಮಂತ್ರಿಗಳಿಗೆ ತಿರುಗೇಟು ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತ ಮಹಿಳೆಯರು

“ರೈತರನ್ನು ಕಡೆಗಣಿಸುವ ಉದ್ದೇಶ ನನಗಿಲ್ಲ. ನಾನೂ ನಿಮ್ಮ‌ವಿಷಯವನ್ನು ಸರ್ಕಾರದ ಮುಂದೆ ಮಾತನಾಡುತ್ತಲೇ ಬಂದಿದ್ದೇನೆ. ಸಮಸ್ಯೆ ಬಗೆಹರಿಸಲು ಸಾದ್ಯವಾಗದಿರುವುದರ ಬಗ್ಗೆ ನನಗೂ ಬೇಸರವಿದೆ. ಇನ್ನು ಮುಂದೆ ನಾವೂ ಕಾಯಿಸಲು ಸಾಧ್ಯವಿಲ್ಲ. ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ರವರು ಹೊರದೇಶದ ಪ್ರಯಾಣದಲ್ಲಿರುವ ಕಾರಣ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಧಿವೇಶನದ ಸಂದರ್ಭದಲ್ಲಿ ಅವರು ವಾಪಸ್ಸಾಗಲಿದ್ದು, ಅವರೊಂದಿಗೆ ಚರ್ಚಿಸಿ ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ” ಎಂದರು.

“ಅದಕ್ಕೂ ಮುಂಚೆ ಕೆಐಎಡಿಬಿ ಅಧಿಕಾರಿಗಳು ಮತ್ತು ರೈತರನ್ನೊಳಗೊಂಡ ಜಿಲ್ಲಾಧಿಕಾರಿಗಳ ಸಭೆ ನಡೆಸಿ, ಆ ಸಭೆಯ ನಿರ್ಣಯಗಳೊಂದಿಗೆ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಸಭೆಗೆ ಬನ್ನಿ. ಅಲ್ಲಿ ರೈತರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ” ಎಂದು ತಿಳಿಸಿದರು.

ಸ್ಥಳದಲ್ಲಿಯೇ ಹಾಜರಿದ್ದ ಜಿಲ್ಲಾಧಿಕಾರಿಗಳು, ರೈತನಿಯೋಗ ಮತ್ತು ಕೆಐಎಡಿಬಿ ಅಧಿಕಾರಿಗಳ ಸಭೆಯನ್ನು ಇದೆ ಶನಿವಾರ ಡಿಸೆಂಬರ್ 7ನೇ ತಾರೀಕಿನಂದು ನಡೆಸುವುದಾಗಿ ತಿಳಿಸಿದರು. ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿಕೊಂಡರು.

“ಇದು ಅಂತಿಮ ಗಡುವು, ಸಚಿವರು ಹೇಳಿದಂತೆ ಅಧಿವೇಶನ ಮುಗಿಯುವುದರೊಳಗಾಗಿ ಸರ್ಕಾರ ಭೂಸ್ವಾಧೀನ ಕೈ ಬಿಡುವ ನಿರ್ಣಯವನ್ನು ಪ್ರಕಟಿಸದಿದ್ದರೆ ಮುಂದಿನ ಪ್ರಗತಿ ಪರಿಶೀಲನಾ ಸಭೆ ಸೇರಿದಂತೆ, ಮಂತ್ರಿಗಳು ಹಾಜರಾಗುವ ಎಲ್ಲಾ ಕಾರ್ಯಕ್ರಮಗಳಲ್ಲೂ ರೈತರು ಘೇರಾವ್ ಹಾಕೋಣ, ಅನಿರ್ದಿಷ್ಟ ಅವಧಿ ಹೋರಾಟದ ಸಾವಿರ ದಿನಕ್ಕೆ ಕಾಲಿಡುವ ಸಂಧರ್ಭದಲ್ಲಿ ಉಗ್ರ ಹೋರಾಟವನ್ನು ರೂಪಿಸಿ, ಮಂತ್ರಿಗಳಿಗೆ ಸರಿಯಾದ ಪಾಠ ಕಲಿಸೋಣ” ಎಂದು ತೀರ್ಮಾನಿಸಲಾಗಿದೆ ಎಂದು ಮುಖಂಡರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರರದ ಕಾರಳ್ಳಿ ಶ್ರೀನಿವಾಸ್, ವಕೀಲರಾದ ಸಿದ್ದಾರ್ಥ್, ರೈತ ಮುಖಂಡರಾದ ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತಪ್ಪ, ಮಾರೇಗೌಡ, ಜಯರಾಮೇಗೌಡ, ಮೋಹನ್, ವೆಂಕಟರಮಣಪ್ಪ, ನಾರಾಯಣಮ್ಮ, ಲಕ್ಷ್ಮಮ್ಮ, ಪ್ರಮೋದ್, ಮುಕುಂದ, ನಂದನ್, ಗೋಪಿನಾಥ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಇದನ್ನೂ ಓದಿ; ಬಿಡಿಎ ಪ್ರಕರಣ: ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್ ಮರುಪರಿಶೀಲಿಸುವಂತೆ ಗೌರ್ನರ್‌ಗೆ ರಾಜ್ಯ ಸರ್ಕಾರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...