Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಎಚ್ ಮುನಿಯಪ್ಪನವರಿಗೆ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರು ಘೇರಾವ್ ಹಾಕಿದ್ದು,, ಭೂಸ್ವಾಧೀನ ಹಿಂಪಡೆಯುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.

ಸುದೀರ್ಘ 975 ದಿನಗಳಿಂದ ಭೂಸ್ವಾಧೀನವನ್ನು ವಿರೋಧಿಸಿ ಚನ್ನರಾಯಪಟ್ಟಣದ ನಾಡಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರ ತಾಳ್ಮೆ ಕಟ್ಟೆಯೊಡೆದಿದ್ದು, ಅನ್ನದಾತರನ್ನು ನಿರ್ಲಕ್ಷಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದರು.

“ಇಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದಾಗಿನಿಂದಲೂ ಕೂಡ ಒಂದಲ್ಲೊಂದು ನೆಪ ಹೇಳುತ್ತಿದೆ. ಆ ಮೂಲಕ ದಿನದೊಡುತ್ತಿರುವ ಸಚಿವರು ರೈತ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಇವರಿಗೆ ರೈತರ ಭೂಮಿಯನ್ನು ಕೈಬಿಡುವ ಯಾವುದೇ ಯೋಚನೆ ಇದ್ದಂತೆ ಕಾಣುತ್ತಿಲ್ಲ. ಇವರು ಕೂಡ ಹಿಂದಿನ ಸರ್ಕಾರಗಳ ರೀತಿಯಲ್ಲೇ ಬಂಡವಾಳಶಾಹಿಗಳ ಪರವಾಗಿ ವರ್ತಿಸುತ್ತಿದ್ದಾರೆ” ಸ್ಥಳದಲ್ಲಿದ್ದ ರೈತರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಸಮಜಾಯಿಷಿ ನೀಡಲು ಮುಂದಾದ ಮಂತ್ರಿಗಳು, “ಬೆಳಗಾವಿ ಅಧಿವೇಶನ ಮುಗಿಯುವುದರೊಳಗಾಗಿ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಹೇಳಿದರು. ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ಪ್ರತಿಭಟನಾನಿರತರು, “ನೀವು ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಹತ್ತಾರು ಗಡುವುಗಳನ್ನು ನೀಡುತ್ತಲೇ ಬಂದಿದ್ದೀರಿ, ಯಾವ ಬಾರಿಯೂ ಕೊಟ್ಟ‌ಮಾತಿನಂತೆ ನಡೆದುಕೊಳ್ಳಲೇ ಇಲ್ಲ. ನಾವು ನಿಮ್ಮ ಮನೆಗೆ ಅಲೆಯುತ್ತಲೇ ಇದ್ದೇವೆ, ಇಷ್ಟಾದರೂ ನಮ್ಮ ಸಮಸ್ಯೆ ಬಗ್ಗೆ ಹರಿಸಿಲ್ಲ. ಆದ್ದರಿಂದ ನೀವು ಇಂದು ನೀಡುತ್ತಿರುವ ಗಡುವಿನಲ್ಲಿ ಸಮಸ್ಯೆ ಬಗೆಹರಿಸುತ್ತೀರೆಂಬ ಯಾವ ಭರವಸೆಯೂ ಇಲ್ಲ” ಎಂದು ಮಂತ್ರಿಗಳಿಗೆ ತಿರುಗೇಟು ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತ ಮಹಿಳೆಯರು

“ರೈತರನ್ನು ಕಡೆಗಣಿಸುವ ಉದ್ದೇಶ ನನಗಿಲ್ಲ. ನಾನೂ ನಿಮ್ಮ‌ವಿಷಯವನ್ನು ಸರ್ಕಾರದ ಮುಂದೆ ಮಾತನಾಡುತ್ತಲೇ ಬಂದಿದ್ದೇನೆ. ಸಮಸ್ಯೆ ಬಗೆಹರಿಸಲು ಸಾದ್ಯವಾಗದಿರುವುದರ ಬಗ್ಗೆ ನನಗೂ ಬೇಸರವಿದೆ. ಇನ್ನು ಮುಂದೆ ನಾವೂ ಕಾಯಿಸಲು ಸಾಧ್ಯವಿಲ್ಲ. ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ರವರು ಹೊರದೇಶದ ಪ್ರಯಾಣದಲ್ಲಿರುವ ಕಾರಣ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಧಿವೇಶನದ ಸಂದರ್ಭದಲ್ಲಿ ಅವರು ವಾಪಸ್ಸಾಗಲಿದ್ದು, ಅವರೊಂದಿಗೆ ಚರ್ಚಿಸಿ ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ” ಎಂದರು.

“ಅದಕ್ಕೂ ಮುಂಚೆ ಕೆಐಎಡಿಬಿ ಅಧಿಕಾರಿಗಳು ಮತ್ತು ರೈತರನ್ನೊಳಗೊಂಡ ಜಿಲ್ಲಾಧಿಕಾರಿಗಳ ಸಭೆ ನಡೆಸಿ, ಆ ಸಭೆಯ ನಿರ್ಣಯಗಳೊಂದಿಗೆ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಸಭೆಗೆ ಬನ್ನಿ. ಅಲ್ಲಿ ರೈತರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ” ಎಂದು ತಿಳಿಸಿದರು.

ಸ್ಥಳದಲ್ಲಿಯೇ ಹಾಜರಿದ್ದ ಜಿಲ್ಲಾಧಿಕಾರಿಗಳು, ರೈತನಿಯೋಗ ಮತ್ತು ಕೆಐಎಡಿಬಿ ಅಧಿಕಾರಿಗಳ ಸಭೆಯನ್ನು ಇದೆ ಶನಿವಾರ ಡಿಸೆಂಬರ್ 7ನೇ ತಾರೀಕಿನಂದು ನಡೆಸುವುದಾಗಿ ತಿಳಿಸಿದರು. ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿಕೊಂಡರು.

“ಇದು ಅಂತಿಮ ಗಡುವು, ಸಚಿವರು ಹೇಳಿದಂತೆ ಅಧಿವೇಶನ ಮುಗಿಯುವುದರೊಳಗಾಗಿ ಸರ್ಕಾರ ಭೂಸ್ವಾಧೀನ ಕೈ ಬಿಡುವ ನಿರ್ಣಯವನ್ನು ಪ್ರಕಟಿಸದಿದ್ದರೆ ಮುಂದಿನ ಪ್ರಗತಿ ಪರಿಶೀಲನಾ ಸಭೆ ಸೇರಿದಂತೆ, ಮಂತ್ರಿಗಳು ಹಾಜರಾಗುವ ಎಲ್ಲಾ ಕಾರ್ಯಕ್ರಮಗಳಲ್ಲೂ ರೈತರು ಘೇರಾವ್ ಹಾಕೋಣ, ಅನಿರ್ದಿಷ್ಟ ಅವಧಿ ಹೋರಾಟದ ಸಾವಿರ ದಿನಕ್ಕೆ ಕಾಲಿಡುವ ಸಂಧರ್ಭದಲ್ಲಿ ಉಗ್ರ ಹೋರಾಟವನ್ನು ರೂಪಿಸಿ, ಮಂತ್ರಿಗಳಿಗೆ ಸರಿಯಾದ ಪಾಠ ಕಲಿಸೋಣ” ಎಂದು ತೀರ್ಮಾನಿಸಲಾಗಿದೆ ಎಂದು ಮುಖಂಡರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರರದ ಕಾರಳ್ಳಿ ಶ್ರೀನಿವಾಸ್, ವಕೀಲರಾದ ಸಿದ್ದಾರ್ಥ್, ರೈತ ಮುಖಂಡರಾದ ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತಪ್ಪ, ಮಾರೇಗೌಡ, ಜಯರಾಮೇಗೌಡ, ಮೋಹನ್, ವೆಂಕಟರಮಣಪ್ಪ, ನಾರಾಯಣಮ್ಮ, ಲಕ್ಷ್ಮಮ್ಮ, ಪ್ರಮೋದ್, ಮುಕುಂದ, ನಂದನ್, ಗೋಪಿನಾಥ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಇದನ್ನೂ ಓದಿ; ಬಿಡಿಎ ಪ್ರಕರಣ: ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್ ಮರುಪರಿಶೀಲಿಸುವಂತೆ ಗೌರ್ನರ್‌ಗೆ ರಾಜ್ಯ ಸರ್ಕಾರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...