Homeಕರ್ನಾಟಕಮುಡಾ ಪ್ರಕರಣ | ಕಿಡಿ ಹಚ್ಚಿಸಿದ ಇಡಿ ಪತ್ರ : ಮತ್ತೆ ಶುರುವಾದ ವಾಕ್ಸಮರ

ಮುಡಾ ಪ್ರಕರಣ | ಕಿಡಿ ಹಚ್ಚಿಸಿದ ಇಡಿ ಪತ್ರ : ಮತ್ತೆ ಶುರುವಾದ ವಾಕ್ಸಮರ

- Advertisement -
- Advertisement -

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಲೋಕಾಯುಕ್ತಕ್ಕೆ ಪತ್ರ ಬರೆದಿರುವುದು ಮತ್ತೆ ರಾಜಕೀಯ ಸಮರದ ಕಿಡಿ ಹಚ್ಚಿಸಿದೆ. ಪರಸ್ಪರ ವಾಕ್ಸಮರ ಶುರುವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ನ್ಯಾಯಾಲಯದ ಮೇಲೆ ಪ್ರಭಾವ ಬೀರಲು ಇಡಿಯು  ದುರುದ್ದೇಶದಿಂದ ಲೋಕಾಯುಕ್ತಕ್ಕೆ ಪತ್ರ ಬರೆದಿದೆ ಎಂದು ದೂರಿದರೆ, ಬಿಜೆಪಿ-ಜೆಡಿಎಸ್ ನಾಯಕರು ಇಡಿ ಪರ ನಿಂತಿದ್ದಾರೆ.

ಲೋಕಾಯುಕ್ತಕ್ಕೆ ಪತ್ರ ಬರೆದಿರುವ ಇಡಿ, “ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾ ಹಂಚಿಕೆ ಮಾಡಿರುವ ನಿವೇಶನಗಳೇ ಅಕ್ರಮವಾಗಿದ್ದು, ಈ ಸಂಬಂಧ ತಮ್ಮ ತನಿಖೆಯಲ್ಲಿ ಪ್ರಮುಖ ಸಾಕ್ಷ್ಯಗಳು ಲಭ್ಯವಾಗಿವೆ ಎಂದಿದೆ. 50:50 ನಿಯಮದಡಿ ಮುಡಾ ನೀಡಿರುವ ಪರಿಹಾರ ನಿವೇಶನಗಳ ಹಂಚಿಕೆಯಲ್ಲಿ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ. ಒಟ್ಟು 490 ಕೋಟಿ ರೂ. ಗೈಡ್‌ಲೈನ್‌ ದರ ಮತ್ತು ರೂ. 700 ಕೋಟಿಯಷ್ಟು ಮಾರುಕಟ್ಟೆ ದರವುಳ್ಳ 1,095 ನಿವೇಶನಗಳನ್ನು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಹಾಗೂ ಪ್ರಭಾವಿಗಳಿಗೆ ಅಕ್ರಮವಾಗಿ ಹಂಚಲಾಗಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದ್ದು ಈ ಬಗ್ಗೆ ಕ್ರಮವಹಿಸಿ” ಎಂದು ಹೇಳಿದೆ.

ನ್ಯಾಯಾಲಯದ ಮೇಲೆ ಪ್ರಭಾವ ಬೀರಲು ಇಡಿ ಪತ್ರ -ಸಿಎಂ 

ಲೋಕಾಯುಕ್ತಕ್ಕೆ ಇಡಿ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, “ಹೈಕೋರ್ಟ್‌ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನವೇ ಜಾರಿ ನಿರ್ದೇಶನಾಲಯದವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದಾರೆ. ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶ ಇದು” ಎಂದು ಆರೋಪಿಸಿದ್ದಾರೆ.

ಬುಧವಾರ (ಡಿ.4) ಮಂಡ್ಯದ ಕೆ.ಆರ್‌ ಪೇಟೆಯ ಕೋಡಿಮಾರನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇಡಿ ಯವರಿಗೆ ತನಿಖೆ ಮಾಡಲು ಅಧಿಕಾರವೇ ಇಲ್ಲ. ತನಿಖೆ ಬಳಿಕ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು, ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶವಿದೆ” ಎಂದು ದೂರಿದ್ದಾರೆ.

ಇಡಿ ಹತಾಶೆಗೊಂಡಿದೆ-ಡಿ.ಕೆ ಶಿವಕುಮಾರ್

ಇಡಿ ಪತ್ರ ಬರೆದಿರುವ ಕುರಿತು ಕಿಡಿಕಾರಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, “ಯಾವುದೇ ತನಿಖೆ ನಡೆದರೂ, ಅದು ಗೌಪ್ಯವಾಗಿರಬೇಕು. ಏನಾದರು ಸಂತ್ಯಾಂಶವಿದ್ದರೆ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅದರ ಬದಲು ಮಾಧ್ಯಮಗಳಿಗೆ ನೀಡುತ್ತಾರೆಂದರೆ ಇಡಿಯವರು ಎಷ್ಟು ಹತಾಶರಾಗಿದ್ದಾರೆ ಎನ್ನುವುದು ಗೊತ್ತಾಗುತ್ತಿದೆ” ಎಂದಿದ್ದಾರೆ.

“ಮುಡಾ ಪ್ರಕರಣದಲ್ಲಿ ಹಣ ತೆಗೆದುಕೊಳ್ಳುವುದು, ಕೊಡುವುದು ಆಗಿಲ್ಲ. ಹೀಗಿರುವಾಗ ಅದು ಮನಿ ಲಾಂಡರಿಂಗ್ ಹೇಗಾಯಿತು? ತನಿಖಾ ಸಂಸ್ಥೆ ವರದಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದರೆ ಹೇಗೆ? ಒಂದು ತನಿಖಾ ಸಂಸ್ಥೆ ಮತ್ತೊಂದಕ್ಕೆ ಹೀಗೆ ಮಾಡಿ ಎನ್ನುವುದು ನಾನು ಹೊಸದಾಗಿ ನೋಡುತ್ತಿರುವುದು. ಇದಕ್ಕೆಲ್ಲ ಜನರು ಉತ್ತರ ಕೊಡಲಿದ್ದಾರೆ, ನಾವು ಕೊಡುತ್ತೇವೆ” ಎಂದು ಹೇಳಿದ್ದಾರೆ.

ಇಡಿ ವಿರುದ್ದ ಕಾನೂನು, ರಾಜಕೀಯ ಹೋರಾಟ-ಡಾ.ಜಿ ಪರಮೇಶ್ವರ್

ಲೋಕಾಯುಕ್ತ ತನಿಖೆಗೆ ಅಡ್ಡಿ ಮಾಡಲು ಮತ್ತು ನ್ಯಾಯಾಲಯದ ಮೇಲೆ ಪ್ರಭಾವ ಬೀರಲು ಇಡಿ ಪ್ರಯತ್ನಿಸುತ್ತಿದೆ. ಇಡಿ ವಿರುದ್ದ ನಾವು ಕಾನೂನಾತ್ಮಕ ಮತ್ತು ರಾಜಕೀಯ ಹೋರಾಟ ನಡೆಸುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರೇಮೇಶ್ವರ್, ” ಒಂದು ವಿಷಯಕ್ಕೆ ಸಂಬಂಧಿಸಿದಂತೆ ಎರಡು ತನಿಖಾ ಸಂಸ್ಥೆಗಳು ತನಿಖೆ ಮಾಡಲು ಅವಕಾಶವಿಲ್ಲ. ಆದರೆ, ಕಾನೂನು ಗಾಳಿಗೆ ತೂರಿ ಬಿಜೆಪಿಗೆ ಅನುಕೂಲ ಮಾಡಿಕೊಡಲು ಇಡಿ ಮುಡಾ ಪ್ರಕರಣದಲ್ಲಿ ಮೂಗು ತೂರಿಸಿದೆ ಎಂದು ಕಿಡಿಕಾರಿದ್ದಾರೆ.

ಇಡಿಗೆ ಯಾವ ಅಧಿಕಾರವಿದೆ-ಡಾ. ಸುಧಾಕರ್

ಮುಡಾ ಪ್ರಕರಣದ ತನಿಖೆ ಮಾಡಲು ಇಡಿಗೆ ನ್ಯಾಯಾಲಯ ಅನುಮತಿ ಕೊಟ್ಟಿದೆಯಾ? ರಾಜ್ಯದ ತನಿಖಾ ಸಂಸ್ಥೆಯ ಕಾರ್ಯದಲ್ಲಿ ಹಸ್ತಕ್ಷೇಪ ಮಾಡಲು ಇಡಿಗೆ ಯಾವ ಅಧಿಕಾರವಿದೆ? ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಪ್ರಶ್ನಿಸಿದ್ದಾರೆ.

ಇಡಿ ಸೀಳು ನಾಯಿ -ಕೃಷ್ಣ ಬೈರೇಗೌಡ

ಮುಡಾ ಪ್ರಕರಣದಲ್ಲಿ ಇಡಿ ಎನ್ನುವ ಸೀಳು ನಾಯಿಯನ್ನು ನಮ್ಮ‌ ಮೇಲೆ ಬಿಟ್ಟಿದ್ದಾರೆ. ಇದು ರಾಜಕೀಯ ದಾಳಿ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡಿ ಅಂದ್ರೆ ಜಾರಿ ನಿರ್ದೇಶನಾಲಯ ಅಲ್ಲ, ಅದು ರಾಜಕೀಯ ಏಜೆನ್ಸಿ. ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಲು, ನಾಯಕರ ವಿರುದ್ಧ ದಾಳಿ ಮಾಡೋಕ್ಷೆ ಇರುವ ಜಾಬ್‌ ಎಂದು ದೂರಿದ್ದಾರೆ.

ಇಡಿ ಕೇಂದ್ರ ಸರ್ಕಾರದ ಕೈಗೊಂಬೆ- ಪ್ರಿಯಾಂಕ್ ಖರ್ಗೆ

ಇಡಿ, ಸಿಬಿಐ ಹಾಗೂ ಆದಾಯ ತೆರಿಗೆ ಇಲಾಖೆಗಳು ಕೇಂದ್ರ ಸರ್ಕಾರ ಕೈಗೊಂಬೆಗಳಾಗಿವೆ. ಎಲ್ಲೆಲ್ಲಿ ಬಿಜೆಪಿಯ ರಾಜ್ಯ ಘಟಕಗಳು ದುರ್ಬಲವಾಗಿವೆಯೋ, ಅಂತಹ ಕಡೆ ಸಿಬಿಐ, ಇಡಿ, ಐಟಿಗಳನ್ನು ಪ್ರತಿಪಕ್ಷಗಳ ವಿರುದ್ಧ ಬಳಕೆ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆಲಿಬಾಬಾ ಮತ್ತು 40 ಕಳ್ಳರು-ಹೆಚ್‌.ಡಿ ಕುಮಾರಸ್ವಾಮಿ

ಮುಡಾದಲ್ಲಿ ಏನೆಲ್ಲಾ ನಡೆದಿದೆ ಎಂಬುವುದು ಹಾದಿಬೀದಿಯಲ್ಲಿ ಚರ್ಚೆಯ ನಡೆಯುತ್ತಿದೆ. ಆದರೆ, ಸರ್ಕಾರ ಮತ್ತು ಸಚಿವರು ‘ಆಲಿಬಾಬಾ ಮತ್ತು 40 ಕಳ್ಳರ ರೀತಿ’ ಇದ್ದಾರೆ. ಪ್ರಕರಣದಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಕೈಗಾರಿಕಾ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭಯದಿಂದ ನಿವೇಶನ ವಾಪಸ್ -ಬಿ.ವೈ ವಿಜಯೇಂದ್ರ

ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಕುತ್ತು ಬರುತ್ತದೆ ಎಂಬ ಭಯದಿಂದ 14 ನಿವೇಶನಗಳನ್ನು ವಾಪಸ್ ಮಾಡಿದ್ದಾರೆ. ಮುಡಾದಲ್ಲಿ ತಮ್ಮ ಪತ್ನಿಯ 14 ನಿವೇಶನಗಳನ್ನು ವಾಪಸ್ ಮಾಡಲು 65 ಕೋಟಿ ರೂಪಾಯಿ ಕೊಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ, ಬಳಿಕ ಒಂದು ರೂಪಾಯಿ ಪಡೆಯದೆ ನಿವೇಶನಗಳನ್ನು ವಾಪಸ್ ಕೊಟ್ಟಿದ್ದಾರೆ. ಅವರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಅಕ್ರಮದಲ್ಲಿ ಮರೀಗೌಡ, ದಿನೇಶ್ ಕುಮಾರ್ ಭಾಗಿ-ಆರೋಪ

ಭೂಮಾಲೀಕರಿಗೆ 50:50 ಅನುಪಾತದಲ್ಲಿ ಪರಿಹಾರ ನಿವೇಶನ ನೀಡುವ ನಿಯಮವನ್ನು ರದ್ದುಪಡಿಸಿದ ಹಲವು ತಿಂಗಳ ನಂತರವೂ ಮುಡಾ 252 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿದೆ ಎಂದು ಇಡಿ ಆರೋಪಿಸಿದೆ. ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಮತ್ತು ಆಯುಕ್ತರಾಗಿದ್ದ ಜಿ.ಟಿ ದಿನೇಶ್ ಕುಮಾರ್ ಅಕ್ರಮದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಇಡಿ ಹೇಳಿದೆ.

ಇಡಿ ಮುಂದೆ ಹಾಜರಾದ ಭೂ ಅಧಿಕಾರಿ ಮಂಜುನಾಥ್

ಇಡಿ ಪತ್ರದ ಕುರಿತು ವಾಕ್ಸಮರಗಳ ನಡುವೆ ಮುಡಾ ವಿಶೇಷ ಭೂ ಅಧಿಕಾರಿ ಮಂಜುನಾಥ್, ಬುಧವಾರ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ದಾಖಲೆಗಳ ಸಹಿತ ವಿಚಾರಣೆಗೆ ಹಾಜರಾದ ಮಂಜುನಾಥ್ ಅವರನ್ನು ಅಧಿಕಾರಿಗಳು ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಪ್ರಕರಣ ಸಂಬಂಧ ಮಾಹಿತಿ ಪಡೆದುಕೊಂಡರು.

ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಇಂದು

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಇಂದು (ಡಿ.5) ನಡೆಯಲಿದೆ. ಸಿದ್ದರಾಮಯ್ಯ ಹಾಗೂ ಜಮೀನು ಮಾಲೀಕ ದೇವರಾಜು ಮೇಲ್ಮನವಿಗಳ ವಿಚಾರಣೆಯನ್ನು ಮುಂದೂಡಿದ್ದ ಹೈಕೋರ್ಟ್ ವಿಭಾಗೀಯ ಪೀಠ ಇಂದಿಗೆ ವಿಚಾರಣೆ ನಿಗದಿ ಮಾಡಿದೆ.

ಇದನ್ನೂ ಓದಿ : ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...