Homeಮುಖಪುಟಆದಾಯ ಹೆಚ್ಚಿಸುವ ಬದಲು ಭ್ರಷ್ಟಾಚಾರ ಹೆಚ್ಚಿಸುತ್ತಿದೆ - ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಆದಾಯ ಹೆಚ್ಚಿಸುವ ಬದಲು ಭ್ರಷ್ಟಾಚಾರ ಹೆಚ್ಚಿಸುತ್ತಿದೆ – ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ಹಲವಾರು ವಸ್ತುಗಳ ಮೇಲಿನ ಜಿಎಸ್‌ಟಿಯನ್ನು ಹೆಚ್ಚಿಸಲಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಆದಾಯವನ್ನು ಹೆಚ್ಚಿಸುವ ಬದಲು “ಭ್ರಷ್ಟಾಚಾರವನ್ನು ಹೆಚ್ಚಿಸಲು” ಬಿಜೆಪಿ ಯೋಜಿಸುತ್ತಿದೆ ಎಂದು ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಆದಾಯ ಹೆಚ್ಚಿಸುವ ಬದಲು

ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಅವರು, “ಬಿಜೆಪಿ ‘ಒಂದು ದೇಶ, ಒಂದು ತೆರಿಗೆ’ ಎಂದು ಹೇಳುತ್ತಿದೆ. ಆದರೆ ಅವರ ಈ ಹೇಳಿಕೆಯು ‘ಜುಮ್ಲಾಯಿ ಜೂಟ್’ (ಸುಳ್ಳು) ಆಗಿ ಮಾರ್ಪಟ್ಟಿದೆ. ಏಕೆಂದರೆ ಈಗ ಅವರು ಹೊಸದಾಗಿ ತೆರಿಗೆ ಸ್ಪಾಬ್‌ಗಳನ್ನು ತರುತ್ತಿದ್ದಾರೆ.” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಾಯ ಹೆಚ್ಚಿಸುವ ಬದಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಒಂದು ತೆರಿಗೆ, ಹಲವು ಸ್ಲ್ಯಾಬ್‌ಗಳು’ ಎಂದಾಗ ‘ಒಂದು ತೆರಿಗೆ’ ಎಂಬ ಘೋಷಣೆಯು ನಿಜವಾದ ಅರ್ಥದಲ್ಲಿ ಸುಳ್ಳು ಎಂದು ಸಾಬೀತಾಗಿದೆ. ವಾಸ್ತವವಾಗಿ, ತೆರಿಗೆ ದರಗಳನ್ನು ಹೆಚ್ಚಿಸುವುದರ ಹಿಂದೆ ದೊಡ್ಡ ಆಟವಿದೆ. ಭ್ರಷ್ಟಾಚಾರ ಹೆಚ್ಚಿಸುವ ಬಿಜೆಪಿಯ ಪ್ಲಾನ್ ಇದಾಗಿದ್ದು, ಅಧಿಕಾರಿಗಳ ಮೂಲಕ ಅಂಗಡಿಕಾರರು ಮತ್ತು ವ್ಯಾಪಾರಸ್ಥರ ಮೇಲೆ ಹೆಚ್ಚಿನ ಒತ್ತಡ ಹೇರುವ ಮೂಲಕ ಆದಾಯ ಹೆಚ್ಚಿಸಿ ‘ವಸೂಲಿ’ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಹಾನಿಕಾರಕ ಸರಕುಗಳಾದ ಕಾರ್ಬೋನೇಟೆಡ್ ಪಾನೀಯಗಳು, ಸಿಗರೇಟ್, ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲಿನ ತೆರಿಗೆ ದರವನ್ನು ಪ್ರಸ್ತುತ ಶೇಕಡಾ 28 ರಿಂದ ಶೇಕಡಾ 35 ಕ್ಕೆ ಹೆಚ್ಚಿಸಲಾಗುವುದು ಎಂಬ ಕೇಂದ್ರದ ಸಚಿವಾಲಯಗಳ ವರದಿಗಳ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಆದಾಗ್ಯೂ, ಮಂಗಳವಾರ ಕೇಂದ್ರೀಯ ಪರೋಕ್ಷ ತೆರಿಗೆಗಳ ಮಂಡಳಿಯು ಜಿಎಸ್‌ಟಿ ದರಗಳ ತರ್ಕಬದ್ಧಗೊಳಿಸುವಿಕೆಗೆ ಸಂಬಂಧಿಸಿ ಕೇಂದ್ರದ ಸಚಿವಾಲಯಗಳ ಶಿಫಾರಸುಗಳನ್ನು ಜಿಎಸ್‌ಟಿ ಕೌನ್ಸಿಲ್‌ಗೆ ಸಲ್ಲಿಸಬೇಕಿದೆ. ಜಿಎಸ್‌ಟಿ ಕೌನ್ಸಿಲ್ ತೆರಿಗೆ ದರಗಳನ್ನು ನಿಗದಿಪಡಿಸುವಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ.

ತೆರಿಗೆ ದರ ಹೆಚ್ಚಿದಷ್ಟೂ ತೆರಿಗೆ ವಂಚನೆ ನಡೆಯುತ್ತದೆ ಎಂಬುದು ಜಗತ್ತಿನ ನಿಯಮ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಹೆಚ್ಚು ತೆರಿಗೆ ವಂಚಿಸಿದಾಗ ಭ್ರಷ್ಟ ಆಡಳಿತರೂಢ ಪಕ್ಷ ಹೆಚ್ಚು ಆದಾಯ ಗಳಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ, ತೆರಿಗೆ ವಂಚಿಸಲು ಮತ್ತು ಅದನ್ನು ಸಂಗ್ರಹಿಸಲು ಹಿಂಬಾಗಿಲಿನ ಮಾರ್ಗಗಳನ್ನು ಮೊದಲು ಸಿದ್ಧಪಡಿಸಲಾಗಿದೆ. ಅದರ ನಂತರ ಯಾವುದೇ ಹೊಸ ತೆರಿಗೆ ಯೋಜನೆಯು ಮುಂಭಾಗದ ಬಾಗಿಲಿನಿಂದ ಹೊರಬರುತ್ತದೆ ಎಂದು ಅವರು ಆರೋಪಿಸಿದ್ದಾರೆ. ಕೊನೆಯಲ್ಲಿ ಪ್ರತಿ ತೆರಿಗೆ ಕಟ್ಟುವ ಹೊರೆ ಸಾರ್ವಜನಿಕರ ಮೇಲೆ ಬೀಳುತ್ತದೆ, ಹೀಗಾಗಿಯೇ ತೆರಿಗೆಯ ಗಿರಣಿಯಲ್ಲಿ ನಲುಗಿ ಹೋಗುವುದು ಸಾರ್ವಜನಿಕರೇ ಆಗಿದ್ದು, ಹೊಡೆತ ಬೀಳುವುದು ಸಾರ್ವಜನಿಕರಿಗೆ ಆಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...