Homeಮುಖಪುಟಆದಾಯ ಹೆಚ್ಚಿಸುವ ಬದಲು ಭ್ರಷ್ಟಾಚಾರ ಹೆಚ್ಚಿಸುತ್ತಿದೆ - ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಆದಾಯ ಹೆಚ್ಚಿಸುವ ಬದಲು ಭ್ರಷ್ಟಾಚಾರ ಹೆಚ್ಚಿಸುತ್ತಿದೆ – ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ಹಲವಾರು ವಸ್ತುಗಳ ಮೇಲಿನ ಜಿಎಸ್‌ಟಿಯನ್ನು ಹೆಚ್ಚಿಸಲಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಆದಾಯವನ್ನು ಹೆಚ್ಚಿಸುವ ಬದಲು “ಭ್ರಷ್ಟಾಚಾರವನ್ನು ಹೆಚ್ಚಿಸಲು” ಬಿಜೆಪಿ ಯೋಜಿಸುತ್ತಿದೆ ಎಂದು ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಆದಾಯ ಹೆಚ್ಚಿಸುವ ಬದಲು

ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಅವರು, “ಬಿಜೆಪಿ ‘ಒಂದು ದೇಶ, ಒಂದು ತೆರಿಗೆ’ ಎಂದು ಹೇಳುತ್ತಿದೆ. ಆದರೆ ಅವರ ಈ ಹೇಳಿಕೆಯು ‘ಜುಮ್ಲಾಯಿ ಜೂಟ್’ (ಸುಳ್ಳು) ಆಗಿ ಮಾರ್ಪಟ್ಟಿದೆ. ಏಕೆಂದರೆ ಈಗ ಅವರು ಹೊಸದಾಗಿ ತೆರಿಗೆ ಸ್ಪಾಬ್‌ಗಳನ್ನು ತರುತ್ತಿದ್ದಾರೆ.” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಾಯ ಹೆಚ್ಚಿಸುವ ಬದಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಒಂದು ತೆರಿಗೆ, ಹಲವು ಸ್ಲ್ಯಾಬ್‌ಗಳು’ ಎಂದಾಗ ‘ಒಂದು ತೆರಿಗೆ’ ಎಂಬ ಘೋಷಣೆಯು ನಿಜವಾದ ಅರ್ಥದಲ್ಲಿ ಸುಳ್ಳು ಎಂದು ಸಾಬೀತಾಗಿದೆ. ವಾಸ್ತವವಾಗಿ, ತೆರಿಗೆ ದರಗಳನ್ನು ಹೆಚ್ಚಿಸುವುದರ ಹಿಂದೆ ದೊಡ್ಡ ಆಟವಿದೆ. ಭ್ರಷ್ಟಾಚಾರ ಹೆಚ್ಚಿಸುವ ಬಿಜೆಪಿಯ ಪ್ಲಾನ್ ಇದಾಗಿದ್ದು, ಅಧಿಕಾರಿಗಳ ಮೂಲಕ ಅಂಗಡಿಕಾರರು ಮತ್ತು ವ್ಯಾಪಾರಸ್ಥರ ಮೇಲೆ ಹೆಚ್ಚಿನ ಒತ್ತಡ ಹೇರುವ ಮೂಲಕ ಆದಾಯ ಹೆಚ್ಚಿಸಿ ‘ವಸೂಲಿ’ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಹಾನಿಕಾರಕ ಸರಕುಗಳಾದ ಕಾರ್ಬೋನೇಟೆಡ್ ಪಾನೀಯಗಳು, ಸಿಗರೇಟ್, ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲಿನ ತೆರಿಗೆ ದರವನ್ನು ಪ್ರಸ್ತುತ ಶೇಕಡಾ 28 ರಿಂದ ಶೇಕಡಾ 35 ಕ್ಕೆ ಹೆಚ್ಚಿಸಲಾಗುವುದು ಎಂಬ ಕೇಂದ್ರದ ಸಚಿವಾಲಯಗಳ ವರದಿಗಳ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಆದಾಗ್ಯೂ, ಮಂಗಳವಾರ ಕೇಂದ್ರೀಯ ಪರೋಕ್ಷ ತೆರಿಗೆಗಳ ಮಂಡಳಿಯು ಜಿಎಸ್‌ಟಿ ದರಗಳ ತರ್ಕಬದ್ಧಗೊಳಿಸುವಿಕೆಗೆ ಸಂಬಂಧಿಸಿ ಕೇಂದ್ರದ ಸಚಿವಾಲಯಗಳ ಶಿಫಾರಸುಗಳನ್ನು ಜಿಎಸ್‌ಟಿ ಕೌನ್ಸಿಲ್‌ಗೆ ಸಲ್ಲಿಸಬೇಕಿದೆ. ಜಿಎಸ್‌ಟಿ ಕೌನ್ಸಿಲ್ ತೆರಿಗೆ ದರಗಳನ್ನು ನಿಗದಿಪಡಿಸುವಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ.

ತೆರಿಗೆ ದರ ಹೆಚ್ಚಿದಷ್ಟೂ ತೆರಿಗೆ ವಂಚನೆ ನಡೆಯುತ್ತದೆ ಎಂಬುದು ಜಗತ್ತಿನ ನಿಯಮ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಹೆಚ್ಚು ತೆರಿಗೆ ವಂಚಿಸಿದಾಗ ಭ್ರಷ್ಟ ಆಡಳಿತರೂಢ ಪಕ್ಷ ಹೆಚ್ಚು ಆದಾಯ ಗಳಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ, ತೆರಿಗೆ ವಂಚಿಸಲು ಮತ್ತು ಅದನ್ನು ಸಂಗ್ರಹಿಸಲು ಹಿಂಬಾಗಿಲಿನ ಮಾರ್ಗಗಳನ್ನು ಮೊದಲು ಸಿದ್ಧಪಡಿಸಲಾಗಿದೆ. ಅದರ ನಂತರ ಯಾವುದೇ ಹೊಸ ತೆರಿಗೆ ಯೋಜನೆಯು ಮುಂಭಾಗದ ಬಾಗಿಲಿನಿಂದ ಹೊರಬರುತ್ತದೆ ಎಂದು ಅವರು ಆರೋಪಿಸಿದ್ದಾರೆ. ಕೊನೆಯಲ್ಲಿ ಪ್ರತಿ ತೆರಿಗೆ ಕಟ್ಟುವ ಹೊರೆ ಸಾರ್ವಜನಿಕರ ಮೇಲೆ ಬೀಳುತ್ತದೆ, ಹೀಗಾಗಿಯೇ ತೆರಿಗೆಯ ಗಿರಣಿಯಲ್ಲಿ ನಲುಗಿ ಹೋಗುವುದು ಸಾರ್ವಜನಿಕರೇ ಆಗಿದ್ದು, ಹೊಡೆತ ಬೀಳುವುದು ಸಾರ್ವಜನಿಕರಿಗೆ ಆಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...