Homeಕರ್ನಾಟಕರಾಜಿನಾಮೆ ನೀಡುವ ಮುನ್ನ ಯಡಿಯೂರಪ್ಪನವರ ಮನೆಗೆ ಹೋಗಿದ್ದೆ ಎಂದ ನಾರಾಯಣಗೌಡ: ವಿಡಿಯೋ ನೋಡಿ

ರಾಜಿನಾಮೆ ನೀಡುವ ಮುನ್ನ ಯಡಿಯೂರಪ್ಪನವರ ಮನೆಗೆ ಹೋಗಿದ್ದೆ ಎಂದ ನಾರಾಯಣಗೌಡ: ವಿಡಿಯೋ ನೋಡಿ

- Advertisement -
- Advertisement -

ಐದು ಗಂಟೆ ಸುಮಾರಿಗೆ ನಾನು ಅವರ ಮನೆಗೆ ಹೋದೆ. ಆಗ ಅವರು ಏನಪ್ಪ ಮುಖ್ಯಮಂತ್ರಿಯಾಗೊ ಅವಕಾಶ ಇದೆ ಬೆಂಬಲಿಸ್ತಿಯಾ ಎಂದರು. ನನ್ನ ತಂದೆ ಬೂಕನಕೆರೆಲೀ ವೀರಭದ್ರ ಸ್ವಾಮಿ ಪೂಜೆ ಮಾಡಿಕೊಂಡು ಬೆಳೆಸಿದ್ದಾರೆ. ಆದರೆ ಕೆ.ಆರ್.ಪೇಟೆ ತಾಲೂಕು ಅಭಿವೃದ್ಧಿಯಾಗಿಲ್ಲ ಎಂದು ಸ್ವಪ್ನದಲ್ಲಿ ಬಂದು ಕಾಡುತ್ತಿದ್ದಾರೆ. ನೀನು ಕೈ ಜೋಡಿಸಿದ್ರೆ ಕೆ.ಆರ್.ಪೇಟೆ ಅಭಿವೃದ್ಧಿ ಮಾಡೋಣ. ಏನಂತೀಯ ಎಂದ್ರು.

ಅದಕ್ಕೆ ನಾನು ತಾಲೂಕಿನ ಅಭಿವೃದ್ದಿಗಾಗಿ 7೦೦ ಕೋಟಿ ಅನುದಾನ ಕೇಳಿದ್ದೆ. ಆದ್ರೆ ಯಡಿಯೂರಪ್ಪನವರು ಸಾವಿರ ಕೋಟಿ ಕೊಡ್ತಿನಿ ಅಂದ್ರು. ಅದ್ರಂತೆ ನಮ್ಮ ತಾಲೂಕಿನ ಅಭಿವೃದ್ದಿಗೆ ಸಾವಿರ ಕೋಟಿ ಅನುದಾನ ಮಂಜೂರು ಮಾಡಿದ್ದಾರೆ ಹಾಗಾಗಿ ನಾನು ರಾಜಿನಾಮೆ ಕೊಟ್ಟೆ ಎಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದು ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.

ವಿಡಿಯೋ ನೋಡಿ

ಆ ಮೂಲಕ ರಾಜೀನಾಮೆಗೂ ಮೊದಲು ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿರುವುದಾಗಿ ಹೇಳಿಕೊಂಡಿದ್ದಲ್ಲದೇ, ಆಪರೇಷನ್ ಕಮಲ ಮಾಡಿದ್ದು ಬಿ.ಎಸ್.ಯಡಿಯೂರಪ್ಪನವರೆ ಎಂದು ಜೆಡಿಎಸ್ ಅನರ್ಹ ಶಾಸಕ ನಾರಾಯಣಗೌಡ ಸಾರಿದ್ದಾರೆ.

ಮಂಡ್ಯದ ಬೂಕನಕೆರೆಯಲ್ಲಿ ಮಾತನಾಡಿರುವ ಅನರ್ಹಶಾಸಕ ನಾರಾಯಣಗೌಡ, ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ರಾಜಿನಾಮೆ ನೀಡಿದೆವು. ಹಾಗಾಗಿ ನಮ್ಮ ಕ್ಷೇತ್ರದ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ನನ್ನ ಕ್ಷೇತ್ರಕ್ಕೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿ ದ್ರೋಹ ಬಗೆದರು ಎಂದು ಹೇಳಿದ್ದಾರೆ.

ಇನ್ನು ಮುಂದುವರೆದು ಎಚ್‌.ಡಿ ದೇವೇಗೌಡರು ಅವರ ಮನೆ ಚಪ್ಪಲಿ ಬಿಡುವಲ್ಲಿ ನಮ್ಮನ್ನು ನಿಲ್ಲಿಸುತ್ತಿದ್ದಾರೆ. ಈಗ ಸ್ವಾಭಿಮಾನಿಗಳಾಗಿದ್ದೇವೆ ಎಂದು ತಮ್ಮ ರಾಜಿನಾಮೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪು ಬರುವ ಮುನ್ನವೇ ಅನರ್ಹ ಶಾಸಕರು ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಅವರಿಂದ ಬರುತ್ತಿರುವ ಗೊಂದಲದ ಹೇಳಿಕೆಗಳಲ್ಲಿ ಯಾವುದು ಸತ್ಯ, ಯಾವುದು ಮಿಥ್ಯ ಎಂಬ ಗೊಂದಲವೂ ಜನರಲ್ಲಿ ಮೂಡತೊಡಗಿದೆ.

ಹಿರೇಕೆರೂರಿನಲ್ಲಿ ಮಾತನಾಡಿರುವ ಅನರ್ಹ ಶಾಸಕ ಬಿ.ಸಿ.ಪಾಟೀಲ್, ಕಾಂಗ್ರೆಸ್ ಜೆಡಿಎಸ್ ನಾಯಕರ ವಿರುದ್ಧ ಗರಂ ಆಗಿದ್ದಾರೆ. ಯಡಿಯೂರಪ್ಪಗೂ ನಮ್ಮ ರಾಜಿನಾಮೆಗೂ ಸಂಬಂಧವಿಲ್ಲ ಎಂದು ಮಾತು ಬದಲಿಸಿದ್ದಾರೆ. ಈವರೆಗೆ ಬೇರೆ ರೀತಿಯಲ್ಲೇ ಮಾತನಾಡುತ್ತಿದ್ದ ಅನರ್ಹ ಶಾಸಕರು ಇದೀಗ ರಾಗಬದಲಿಸಿದ್ದಾರೆ.

ನನಗೆ ಕಾಂಗ್ರೆಸ್ ನಲ್ಲಿ ಅನ್ಯಾಯವಾಗಿತ್ತು. ಹಾಗಾಗಿ ನಾನು ರಾಜಿನಾಮೆ ನೀಡಬೇಕಾಗಿ ಬಂತು. ಸಿದ್ದರಾಮಯ್ಯ ಮಾತುಗಳು ಮತ್ತು ಜೆಡಿಎಸ್, ಕಾಂಗ್ರೆಸ್ ಮುಖಂಡರ ನಡೆಯೂ ಕೂಡ ನಾವು ರಾಜಿನಾಮೆ ನೀಡಲು ಕಾರಣ ಎಂದು ಸಮಜಾಯಿಸಿ ಕೊಟ್ಟಿದ್ದಾರೆ.

ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಿಗೆ ಗ್ರೌಂಡು ರಿಯಾಲಿಟಿ ಗೊತ್ತಿಲ್ಲ. ನಮ್ಮನ್ನು ಪಕ್ಷದಲ್ಲಿ ಕೂಲಿಗಳ ರೀತಿ ನಡೆಸಿಕೊಂಡರು. ಇದರಿಂದ ಬೇಸತ್ತು ರಾಜಿನಾಮೆ ನೀಡಬೇಕಾಯಿತು. ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ಕಡೆಗಣಿಸಲಾಯಿತು. ಹಿರೇಕೆರೂರು ಕ್ಷೇತ್ರದಲ್ಲಿ ನಾನೊಬ್ಬನೇ ಶಾಸಕ. ನನಗೆ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದೆ ದ್ರೋಹ ಬಗೆದರು ಎಂದು ಆರೋಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ದಾಹ. ಅವರು ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ. ಅದಕ್ಕಾಗಿ ಬಣ್ಣ ಬದಲಿಸುತ್ತಾರೆ. ಅವರೊಂದು ರೀತಿ ಊಸರವಳ್ಳಿ ಇದ್ದಂತೆ. ಅವರು ಜೋಕರ್ ಇದ್ದಂತೆ. ಆಟ ಯಾರ ಕಡೆ ಇರುತ್ತದೋ ಅವರ ಕಡೆ ಹೋಗುತ್ತಾರೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಸುಧಾಕರ್ ಕೂಡ ನನ್ನ ಕ್ಷೇತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ  ಒಂದು ಸಾವಿರ ಕೋಟಿ ಬಿಡುಗಡೆ ಮಾಡಿದ್ದಾರೆ. ಅಭಿವೃದ್ಧಿಯ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...