Homeಮುಖಪುಟಮದ್ರಸಾ ಕಾಯ್ದೆ ತಿದ್ದುಪಡಿಗೆ ಮುಂದಾದ ಉತ್ತರ ಪ್ರದೇಶ ಸರ್ಕಾರ

ಮದ್ರಸಾ ಕಾಯ್ದೆ ತಿದ್ದುಪಡಿಗೆ ಮುಂದಾದ ಉತ್ತರ ಪ್ರದೇಶ ಸರ್ಕಾರ

- Advertisement -
- Advertisement -

ಮದ್ರಸಾ ಕಾಯ್ದೆಯ ತಿದ್ದುಪಡಿಗೆ ಉತ್ತರ ಪ್ರದೇಶ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಕರಡು ಮಸೂದೆಯನ್ನು ಸಿದ್ದಪಡಿಸಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶ ಮದ್ರಸಾ ಕಾಯ್ದೆ-2004ರ ಅಡಿ ಸ್ಥಾಪಿತವಾಗಿರುವ ಮದ್ರಸಾ ಮಂಡಳಿ ಪ್ರಸ್ತುತ 1ನೇ ತರಗತಿಯಿಂದ ಪದವಿವರೆಗಿನ ತರಗತಿಗಳ ಪಠ್ಯ, ಪರೀಕ್ಷೆ ಸೇರಿದಂತೆ ಎಲ್ಲಾ ವಿಷಯಗಳನ್ನು ನಿಯಂತ್ರಣ, ನಿರ್ವಹಣೆ ಮಾಡುತ್ತಿದೆ. ಕಾಯ್ದೆಗೆ ತಿದ್ದುಪಡಿ ತಂದರೆ, ಮದ್ರಸಾ ಮಂಡಳಿ 1ರಿಂದ 12ರವರೆಗಿನ ತರಗತಿಗಳನ್ನು ಮಾತ್ರ ನಿಯಂತ್ರಣ ಮಾಡಲಿದೆ.

ಕೆಲ ಇಸ್ಲಾಮಿಕ್ ಸಂಸ್ಥೆಗಳಲ್ಲಿ ‘ಮೌಲವಿ, ಫಾಝಿಲ್’ ಎಂಬ ಇಸ್ಲಾಮಿಕ್ ಬಿರುದುಗಳನ್ನು ನೀಡಲಾಗುತ್ತದೆ. ಈ ಪದವಿಗಳನ್ನೂ ಮದ್ರಸಾ ಮಂಡಳಿಯೇ ನಿಯಂತ್ರಣ ಮಾಡುತ್ತಿದೆ. ಅಂದರೆ, ಮದ್ರಸಾ ಮಂಡಳಿಗೆ ಪದವಿ ನೀಡಲು ಅಧಿಕಾರವಿದೆ. ಆದರೆ, 1956ರ ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ದ ಕಾಯ್ದೆ ಪದವಿ ನೀಡುವ ಅಧಿಕಾರ ವಿಶ್ವ ವಿದ್ಯಾನಿಲಯಗಳಿಗೆ ಮಾತ್ರ ಇದೆ ಎಂದು ಹೇಳುತ್ತದೆ. ಈ ವಿಚಾರ ಸಂಘರ್ಷಕ್ಕೆ ಕಾರಣವಾಗಬಹುದು. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಿ ಎಂದು ಕಳೆದ ತಿಂಗಳು ಸುಪ್ರೀಂ ಕೋರ್ಟ್ ಹೇಳಿತ್ತು. ಹಾಗಾಗಿ, ಉತ್ತರ ಪ್ರದೇಶ ಸರ್ಕಾರ ಮದ್ರಸಾ ಕಾಯ್ದೆಗೆ ತಿದ್ದುಪಡಿ ತಂದು ಪದವಿ ವಿಷಯವನ್ನು ಹೊರಗಿಡಲು ಮುಂದಾಗಿದೆ.

ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ 2004ರ ಉತ್ತರ ಪ್ರದೇಶ ಮದ್ರಸಾ ಶಿಕ್ಷಣ ಮಂಡಳಿ ಕಾಯ್ದೆ (Uttar Pradesh Board of Madrasa Education Act)ಯ ಸಾಂವಿಧಾನಿಕ ಸಿಂಧುತ್ವವನ್ನು 2024ರ ನವೆಂಬರ್ 5ರಂದು ಎತ್ತಿ ಹಿಡಿದಿದೆ. ಈ ಮೂಲಕ ಕಾಯ್ದೆಯನ್ನು ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಬದಿಗೊತ್ತಿದೆ.

2024ರ ಮಾರ್ಚ್‌ನಲ್ಲಿ, ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಮದ್ರಸಾ ಶಿಕ್ಷಣ ಮಂಡಳಿ ಕಾಯ್ದೆ-2004 ಅನ್ನು ರದ್ದುಗೊಳಿಸಿತ್ತು. ಈ ಕಾಯ್ದೆ ಜಾತ್ಯತೀತತೆಯ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು. ಆದರೆ, ಏಪ್ರಿಲ್‌ನಲ್ಲಿ ಮಧ್ಯಂತರ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್, ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ನಿರ್ಧರಿಸುವವರೆಗೆ ಹೈಕೋರ್ಟ್ ತೀರ್ಪಿಗೆ ತಡೆ ನೀಡಿತ್ತು. ಬಳಿಕ ನವೆಂಬರ್ 5ರಂದು ಅಂತಿಮ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಎತ್ತಿ ಹಿಡಿದಿದೆ.

ಕಾಯ್ದೆಯ ಕುರಿತ ಮೇಲ್ಮವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಉತ್ತರಿಸಿದ್ದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ, ಕಾಯ್ದೆ ಸಾಂವಿಧಾನಿಕವಾಗಿದೆ. ಅದನ್ನು ಸಂಪೂರ್ಣವಾಗಿ ರದ್ದುಪಡಿಸಬೇಕಿಲ್ಲ. ಕೆಲವೊಂದು ಆಕ್ಷೇಪಾರ್ಹ ನಿಬಂಧನೆಗಳನ್ನು ಮಾತ್ರ ಮರು ಪರಿಶೀಲಿಸಬೇಕಿದೆ ಎಂದಿತ್ತು.

ಮದ್ರಸಾ ಕಾಯ್ದೆಯು ಮದ್ರಸಾ ಶಿಕ್ಷಣಕ್ಕೆ ಕಾನೂನು ಚೌಕಟ್ಟನ್ನು ಒದಗಿಸುತ್ತದೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಆರ್‌ಟಿ) ಪಠ್ಯಕ್ರಮದ ಹೊರತಾಗಿ, ಧಾರ್ಮಿಕ ಶಿಕ್ಷಣ ನೀಡಲು ಅನುವು ಮಾಡಿಕೊಡುತ್ತದೆ.

ಮದ್ರಸಾ ಕಾಯ್ದೆಯಡಿ ಮುಸ್ಲಿಂ ಸಮುದಾಯದ ಸದಸ್ಯರನ್ನು ಒಳಗೊಂಡ ಮದ್ರಸಾ ಶಿಕ್ಷಣ ಮಂಡಳಿಯನ್ನು ರಚಿಸಲಾಗುತ್ತದೆ. ಈ ಮಂಡಳಿ ಮದ್ರಸಾ ಶಿಕ್ಷಣದ ಪಠ್ಯ ಪುಸ್ತಕ ಸೇರಿದಂತೆ ಕೋರ್ಸ್ ಮೆಟೀರಿಯಲ್‌ಗಳನ್ನು ಸಿದ್ದಪಡಿಸುವುದು, ‘ಮೌಲವಿ’ (10ನೇ ತರಗತಿಗೆ ಸಮಾನ) ಮತ್ತು ‘ಪಾಝಿಲ್’ (ಸ್ನಾತಕೋತ್ತರಕ್ಕೆ ಸಮಾನ) ಕೋರ್ಸ್‌ಗಳಿಗೆ ಪರೀಕ್ಷೆಗಳನ್ನು ನಡೆಸುವುದು ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ನಡೆಸುತ್ತದೆ. ಈ ಮದ್ರಸಾ ಮಂಡಳಿಯ ಕಾರ್ಯವೈಖರಿಯ ಬಗ್ಗೆ ಕಾಯ್ದೆಯ ಸೆಕ್ಷನ್ 9ರಡಿ ವಿವರಿಸಲಾಗಿದೆ.

ಇದನ್ನೂ ಓದಿ : ಹೋಟೆಲ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆ ಮೇಲೆ ಸಂಪೂರ್ಣ ನಿಷೇಧ: ಅಸ್ಸಾಂ ಸಿಎಂ ಘೋಷಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...