Homeಕರ್ನಾಟಕಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

- Advertisement -
- Advertisement -

ಮುಡಾ ಪ್ರಕರಣದಲ್ಲಿ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರತ್ಯೇಕ ಪ್ರಕರಣಗಳಲ್ಲಿ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಇಂದು (ಡಿ.5) ಆದೇಶಿಸಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಅನುಮತಿಸಿರುವುದನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ, ಭೂ ಮಾಲೀಕ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿ ಹಾಗೂ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌. ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ ಅರವಿಂದ್‌ ಅವರ ವಿಭಾಗೀಯ ಪೀಠ ಇಂದು ನಡೆಸಿದೆ. ರಾಜ್ಯಪಾಲರು ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಈ ಪ್ರಕರಣಗಳಲ್ಲಿ ನೋಟಿಸ್‌ ಜಾರಿ ಮಾಡಿದೆ.

ಆಪಾದಿತ ಮುಡಾ ನಿವೇಶನ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವುದನ್ನು ಹೈಕೋರ್ಟ್ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು.

ಸಿಎಂ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಅಧಿಕಾರ ವ್ಯಾಪ್ತಿಯನ್ನು ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ ಪ್ರಮುಖವಾಗಿ ಪ್ರಶ್ನಿಸಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಈ ಪ್ರಕರಣದಲ್ಲಿ ತನಿಖೆಗೆ ಅನುಮತಿಸುವ ಸಕ್ಷಮ ಪ್ರಾಧಿಕಾರದ ವಿಚಾರವು ಮಹತ್ವದ ಸಾಂವಿಧಾನಿಕ ವಿಚಾರವಾಗಿದೆ. ಇದು ಯಾವುದೇ ಪಕ್ಷದ ಮುಖ್ಯಮಂತ್ರಿ, ಮಂತ್ರಿಗೆ ಸಂಬಂಧಿಸಿದ್ದಲ್ಲ. ಈ ರೀತಿ ಮುಖ್ಯಮಂತ್ರಿ, ಸಚಿವರ ವಿರುದ್ಧ ತನಿಖೆಗೆ ಅನುಮತಿಸುತ್ತಾ ಹೋದರೆ ಅರಾಜಕತೆ ಸೃಷ್ಟಿಯಾಗಲಿದೆ. ಇದು ನಮ್ಮ ದೇಶದ ರಾಜ್ಯಾಡಳಿತಕ್ಕೆ ಸಂಬಂಧಿಸಿದ್ದಾಗಿದೆ. ಇಲ್ಲಿ ಬಹುಮುಖ್ಯವಾದ ಸಾಂವಿಧಾನಿಕ ವಿಚಾರಗಳು ಅಡಕವಾಗಿವೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17ಎ ಅಡಿ ಮುಖ್ಯಮಂತ್ರಿಯ ವಿರುದ್ಧ ತನಿಖೆಗೆ ಅನುಮತಿಸಲು ರಾಜ್ಯಪಾಲರಿಗೆ ವ್ಯಾಪ್ತಿಯೇ ಇಲ್ಲ” ಎಂದು ವಿವರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ ಅವರು “ರಾಜ್ಯಪಾಲರ ಅನುಮತಿಯನ್ನು ಎತ್ತಿ ಹಿಡಿಯುವ ಮೂಲಕ ಏಕಸದಸ್ಯ ಪೀಠ ಪ್ರಮಾದ ಎಸಗಿದೆ” ಎಂದು ವಿವರಿಸಲು ಮುಂದಾದರು. ಆದರೆ ಇದಕ್ಕೆ ಪೀಠವು ಅನುಮತಿಸಲಿಲ್ಲ ಎಂದು ತಿಳಿದು ಬಂದಿದೆ.

ನ್ಯಾಯಾಲಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಡಾ. ಅಭಿಷೇಕ ಮನುಸಿಂಘ್ವಿ ಮತ್ತು ಪ್ರೊ. ರವಿವರ್ಮ ಕುಮಾರ್‌, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಕಪಿಲ್‌ ಸಿಬಲ್‌ ಮತ್ತು ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ, ಜೆ ದೇವರಾಜು ಅವರನ್ನು ಪ್ರತಿನಿಧಿಸಿದ್ದ ದುಷ್ಯಂತ್‌ ದವೆ, ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಪ್ರತಿನಿಧಿಸಿದ್ದ ವಕೀಲರಾದ ಕೆ ಜಿ ರಾಘವನ್‌ ಮತ್ತು ಮಣೀಂದರ್‌ ಸಿಂಗ್‌ ಅವರ ವಾದ-ಪ್ರತಿವಾದಗಳನ್ನು ಆಲಿಸಿತು.

ಸಿಎಂ ಸಿದ್ದರಾಮಯ್ಯ ಮತ್ತು ಜೆ ದೇವರಾಜು ಅವರು ಸಲ್ಲಿಸಿರುವ ಪ್ರತ್ಯೇಕ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ (ರಾಜ್ಯಪಾಲರ ವಿಶೇಷ ಕಾರ್ಯದರ್ಶಿ), ದೂರುದಾರರಾದ ಟಿ ಜೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಎಸ್‌.ಪಿ ಪ್ರದೀಪ್‌ ಕುಮಾರ್‌ ಅವರಿಗೆ ನೋಟಿಸ್‌ ಜಾರಿ ಮಾಡಿತು.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯಲ್ಲಿ ನೋಟಿಸ್‌ ಆಗಿರುವುದನ್ನು ಪ್ರಶ್ನಿಸಿ ಜೆ ದೇವರಾಜು ಸಲ್ಲಿಸಿರುವ ಮತ್ತೊಂದು ಮೇಲ್ಮನವಿಯಲ್ಲಿ, ಸ್ನೇಹಮಯಿ ಕೃಷ್ಣ, ಕೇಂದ್ರ ಗೃಹ ಇಲಾಖೆ, ಸಿಬಿಐ, ಲೋಕಾಯುಕ್ತ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ ಪಾರ್ವತಿ, ಸಹೋದರ ಬಿ.ಎಂ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ. ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಿದೆ.

ಇದನ್ನೂ ಓದಿ : ಮುಡಾ ಪ್ರಕರಣ | ಕಿಡಿ ಹಚ್ಚಿಸಿದ ಇಡಿ ಪತ್ರ : ಮತ್ತೆ ಶುರುವಾದ ವಾಕ್ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...