Homeಮುಖಪುಟನೆನಪಿನಿಂದ ಮಾಸದ ಡಿಸೆಂಬರ್-6

ನೆನಪಿನಿಂದ ಮಾಸದ ಡಿಸೆಂಬರ್-6

- Advertisement -
- Advertisement -

ಡಿಸೆಂಬರ್ 6 ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ. ಬಹು ವೈವಿದ್ಯತೆಯ ಈ ದೇಶಕ್ಕೆ ಜೀವಪರ, ಸಾಮಾಜಿಕ ನ್ಯಾಯ ಮತ್ತು ಸಮ ಸಮಾಜದ ಆಶಯಗಳನ್ನು ಒಳಗೊಂಡ ಉದಾತ್ತ ಸಂವಿಧಾನ ಕೊಟ್ಟ ಮಹಾನ್ ಚೇತನ ಡಾ. ಬಿ.ಆರ್ ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ’ ಮತ್ತು ಬಾಬರಿ ಮಸೀದಿಯ ಧ್ವಂಸ ಘಟನೆ ನಡೆದ ದಿನವಾಗಿದೆ ಇದು.

ಡಿಸೆಂಬರ್‌ 6,1956 ರಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಮರಣ ಹೊಂದಿದರು. ಇದೇ ಡಿಸೆಂಬರ್ 6, 1992ರಂದು ಬಾಬರಿ ಧ್ವಂಸ ನಡೆಯಿತು. ಈ ಎರಡು ಘಟನೆಗಳು ಮತ್ತು ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗಳು ಪರಸ್ಪರ ಒಂದಕ್ಕೊಂದು ಸಂಬಂಧ ಹೊಂದಿವೆ.

ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶವನ್ನು ಜಾತ್ಯಾತೀತ, ಪ್ರಜಾಪ್ರಭುತ್ವದ ನಾಡಾಗಿ ರೂಪಿಸಿದೆ. ದೇಶದ ಪ್ರತಿಯೊಬ್ಬರನ್ನೂ ಸಮಾನತೆಯಿಂದ ಕಾಣಬೇಕು ಎಂದು ಹೇಳಿದೆ. ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕಾಗಿ ರಕ್ಷಿಸಿದೆ.

ಆದರೆ, 1992ರ ಬಾಬರಿ ಮಸೀದಿ ಧ್ವಂಸ ಮತ್ತು ಬಳಿಕ ನಡೆದ ಬೆಳವಣಿಗೆಗಳು ಸಂವಿಧಾನ ಆಶಯಗಳನ್ನು ಸಮಾಧಿ ಮಾಡಿತು. ಬಾಬಾ ಸಾಹೇಬರ ಪರಿನಿರ್ವಾಣ ದಿನವೇ ನಡೆದ ಬಾಬರಿ ಮಸೀದಿ ಧ್ವಂಸದಿಂದ ಸಂವಿಧಾನದ ಆಶಯಗಳೂ ನಿಬ್ಬಾನವಾಯಿತು.

ಸಂವಿಧಾನದ ಮೂಲ ಪ್ರತಿಯಲ್ಲಿ ಈಗಲೂ ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ, ಧಾರ್ಮಿಕ ಆಚರಣೆ ಇತ್ಯಾದಿ ಹಕ್ಕುಗಳಿವೆ. ಆದರೆ, ಅವುಗಳು ಆಚರಣೆಯಲ್ಲಿ ಉಳಿದಿಲ್ಲ. ಪ್ರಸ್ತುತ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಗಳು ಅದಕ್ಕೆ ಪುಷ್ಠಿ ನೀಡುತ್ತಿವೆ.

ಬಾಬರಿ ಮಸೀದಿ ಧ್ವಂಸ ಸಂಬಂಧಿತ ಸಮಸ್ಯೆಗಳು ಸೃಷ್ಟಿಯಾದ ಬಳಿಕ ಪಿ.ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ 1991ರಲ್ಲಿ ಆರಾಧನಾ ಸ್ಥಳಗಳ ಕಾಯ್ದೆ ಜಾರಿಗೆ ತಂದಿತು. ಅದರ ಪ್ರಕಾರ, ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಧಾರ್ಮಿಕ ಸ್ಥಳಗಳ ಸ್ವರೂಪ ಹೇಗಿತ್ತೋ ಹಾಗೆಯೇ ಉಳಿಸಿಕೊಳ್ಳಬೇಕು, ಬದಲಾವಣೆ ಮಾಡಬಾರದು.

ಸಂವಿಧಾನ ಆಶಯಗಳನ್ನು ರಕ್ಷಿಸಲು ಜಾರಿಗೆ ಬಂದ ಈ ಕಾಯ್ದೆಯನ್ನು ನ್ಯಾಯಾಂಗವೇ ಮೂಲೆಗೆ ತಳ್ಳುವ ಮೂಲಕ ಅಧಿಕೃತವಾಗಿ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಬಾಬರಿ ಮಸೀದಿ ತೀರ್ಪು ಬಂದ ಬಳಿಕ, ಆ ರೀತಿಯ ಬೆಳವಣಿಗೆ ಮುಂದೆ ನಡೆಯಬಾರದು ಎಂಬ ಒತ್ತಾಯ ಕೇಳಿ ಬಂದಿತ್ತು. ಬಾಬರಿ ಮಸೀದಿ-ರಾಮ ಜನ್ಮಭೂಮಿ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠ ಕೂಡ 1991ರ ಆರಾಧನಾ ಕಾಯ್ದೆ ಸಂವಿಧಾನ ಆಶಯಗಳಿಗೆ ಪೂರಕವಾಗಿದೆ ಎಂದಿತ್ತು.

ಬಾಬರಿ ಮಸೀದಿ ತೀರ್ಪಿತ್ತಿದ ನ್ಯಾಯ ಪೀಠದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಕೂಡ ಇದ್ದರು. ಇದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನವನ್ನು ಕೊಟ್ಟರು. ಆ ವ್ಯಾಖ್ಯಾನ ಈಗ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ.

“1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ ಅವರು 2022ರಲ್ಲಿ ಜ್ಞಾನವ್ಯಾಪಿ ಪ್ರಕರಣದಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯೆ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ಎಂದು ಇತ್ತೀಚೆಗೆ ಹಿರಿಯ ವಕೀಲ ದುಷ್ಯಂತ್ ದವೆ ಹೇಳಿದ್ದರು.

“ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನ ನೀಡಿ ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಕಣ್ಣೀರು ಹಾಕಿದ್ದಾರೆ.

ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ನೀಡಿರುವ ವ್ಯಾಖ್ಯಾನವೇ ಈಗ ದೇಶದಲ್ಲಿ ಮಸೀದಿ ಅಡಿ ಮಂದಿರ ಹುಡುಕುವ ಸಮಸ್ಯೆಗಳಿಗೆ ಮೂಲಕ ಕಾರಣ ಎಂದು ಕಾಂಗ್ರೆಸ್ ಕೂಡ ಆರೋಪಿಸಿದೆ.

ಬಾಬರಿ ಮಸೀದಿ ತೀರ್ಪಿನ ಬಳಿಕ, ಇನ್ನೊಂದು ಆ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಎಂದು ದೇಶದ ಸಂವಿಧಾನ ಪರ ಮನಸ್ಸುಗಳು ಅಂದುಕೊಂಡಿತ್ತು. ಆರಾಧನಾ ಸ್ಥಳಗಳ ಕಾಯ್ದೆ ಅದಕ್ಕೆ ಒಂದು ಗೋಡೆಯಾಗಿ ಕಂಡಿತ್ತು.

ಆದರೆ, ವಾರಣಾಸಿಯ ಜ್ಞಾನವ್ಯಾಪಿ, ಮಥುರಾದ ಶಾಹಿ ಈದ್ಗಾ, ಸಂಭಾಲ್ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಪ್ರಕರಣಗಳು ಮತ್ತೆ ಆತಂಕವನ್ನು ಸೃಷ್ಟಿಸಿದೆ. ಈ ಪ್ರಕರಣಗಳಲ್ಲಿ ಆರಂಭದಲ್ಲೇ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿಯಬೇಕಿದ್ದ ನ್ಯಾಯಾಂಗ, ಅರ್ಜಿಗಳನ್ನು ಪುರಸ್ಕರಿಸಿ, ಸಮೀಕ್ಷೆಗೆ ಆದೇಶಿಸುವ ಮೂಲಕ ಆತಂಕವನ್ನು ಹೆಚ್ಚಿಸಿದೆ. ಈ ಮೂಲಕ ನ್ಯಾಯಾಂಗವೇ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಮಸೀದಿಗಳ ಸ್ವರೂಪ ಬದಲಾವಣೆಯಲ್ಲ ಸಮೀಕ್ಷೆ ಮಾತ್ರ ಎಂದು ಸಮರ್ಥಿಸಲಾಗುತ್ತಿದೆ. ಸ್ವರೂಪ ಬದಲಾವಣೆಗೆ ಅವಕಾಶ ಇಲ್ಲದಿರುವಾಗ ಸಮೀಕ್ಷೆಯ ಅಗತ್ಯವೇನಿದೆ? ಎಂದು ವಕೀಲ ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ದೇಶದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ದವಾದ ಆಡಳಿತ ವ್ಯವಸ್ಥೆ ಇರುವಾಗ, ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯಬೇಕಾದ ನ್ಯಾಯಾಂಗ ಕೂಡ, ನಿರ್ಧಿಷ್ಟ ಸಮುದಾಯಗಳು ಆತಂಕಪಡುವಂತಹ ಆದೇಶಗಳನ್ನು ಕೊಡುತ್ತಿರುವುದು ದೇಶ ಎಂತಹ ಶೋಚನೀಯ ಪರಸ್ಥಿತಿಯೆಡೆಗೆ ಸಾಗುತ್ತಿದೆ ಎಂಬುವುದನ್ನು ತೋರಿಸುತ್ತದೆ.

ಸರ್ವರ ಹಕ್ಕುಗಳನ್ನು ಎತ್ತಿ ಹಿಡಿದ ಸಂವಿಧಾನದ ರೂವಾರಿ ಬಾಬಾ ಸಾಹೇಬರ ಪರಿ ನಿರ್ವಾಣ ಮತ್ತು ಬಾಬರಿಯ ನಿರ್ಣಾಮದ ಈ ದಿನ ಸಂವಿಧಾನದ ಆಶಯಗಳನ್ನು ಆಶಯಗಳನ್ನು ರಕ್ಷಿಸುವ ಕಾರ್ಯಕ್ಕೆ ಧುಮುಕಬೇಕಿದೆ. ಇತಿಹಾಸವನ್ನು ಮೆಲುಕು ಹಾಕುವ ಮೂಲಕ ಭವಿಷ್ಯವನ್ನು ರೂಪಿಸಬೇಕಿದೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...