Homeಕರ್ನಾಟಕಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು - ಡಾ. ಅಕ್ಕಯ್ ಪದ್ಮಶಾಲಿ

ಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು – ಡಾ. ಅಕ್ಕಯ್ ಪದ್ಮಶಾಲಿ

- Advertisement -
- Advertisement -

ಹಿಂದಿನ ಹಲವು ಆಡಳಿತಾತ್ಮಕ ನಿಯಮ ನಿಬಂಧನೆಗಳಿಂದ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ ಮತ್ತು ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗೆ ಚ್ಯುತಿ ಆಗುತ್ತಿರುವುದು ಸಾಧಾರಣ ಎಂದು ಪರಿಗಣಿಸಲ್ಪಡುತ್ತಿರುವ ಅತಿ ಗಂಭೀರ ವಿಷಯವಾಗಿದೆ ಎಂದು ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಡಾ. ಅಕ್ಕಯ್ ಪದ್ಮಶಾಲಿ ಅವರು ಶುಕ್ರವಾರ ಹೇಳಿದರು. ಸೌಲಭ್ಯಕ್ಕಾಗಿ ದಾಖಲಾತಿ ಬೇಕು

ಅವರು ಇತರ ಸಮುದಾಯದ ಜೊತೆಗೆ ಸೇರಿ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ, ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗಾಗಿ ‘ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಆಂದೋಲನ’ವನ್ನು ಚಾಲನೆ ನೀಡಿ ಮಾತನಾಡುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ಕಾಲಗಳು ಉರುಳಿದಂತೆ ನಮ್ಮ ಸಾಮಾಜಿಕ ಸಂರಚನೆ ಮತ್ತು ಕುಟುಂಬ ವ್ಯವಸ್ಥೆಗಳಲ್ಲಿ ಹೊಸ ಹೊಸ ಬದಲಾವಣೆಗಳು ನಿರಂತರ ಆಗುತ್ತಲೇ ಇವೆ. ಈ ಹಿಂದಿನ ಹಲವು ಆಡಳಿತಾತ್ಮಕ ನಿಯಮ ನಿಬಂಧನೆಗಳಿಂದ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ ಮತ್ತು ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗೆ ಚ್ಯುತಿ ಆಗುತ್ತಿರುವುದು ಸಾಧಾರಣ ಎಂದು ಪರಿಗಣಿಸಲ್ಪಡುತ್ತಿರುವ ಅತಿ ಗಂಭೀರ ವಿಷಯವಾಗಿದೆ” ಎಂದು ಹೇಳಿದರು. ಸೌಲಭ್ಯಕ್ಕಾಗಿ ದಾಖಲಾತಿ ಬೇಕು

“ಸಿಂಗಲ್ ಮದರ್ ಮಕ್ಕಳ ತಂದೆಯ ಹೆಸರನ್ನು ಕೊಡುವ ಸ್ಥಿತಿಯಲ್ಲಿ ಇರುವುದಿಲ್ಲ. ಈ ಮಗುವಿನ ತಂದೆ ಎಂದು ಅವನು ಒಪ್ಪಿರುವುದೇ ಇಲ್ಲ. ತಂದೆ ಹೆಸರು ಇಲ್ಲ, ಆಧಾರ್ ಕಾರ್ಡ್ ಇಲ್ಲ ಎಂಬ ಒಂದೇ ಕಾರಣಕ್ಕೆ ಈ ಮಕ್ಕಳಿಗೆ ಸರ್ಕಾರಗಳಿಂದ ಸಿಗಬೇಕಾದ ಸೇವಾ ಸೌಲಭ್ಯಗಳನ್ನು ಉದಾಹರಣೆಗೆ ಆರೋಗ್ಯ, ಶೈಕ್ಷಣಿಕ ಸೇವಾ ಸೌಲಭ್ಯಗಳನ್ನು ಸಿಗದಂತಾಗಿವೆ. ಕಡ್ಡಾಯವಾಗಿ ತಂದೆಯ ಹೆಸರನ್ನು ನಮೂದಿಸಲೇಬೇಕೆಂಬ ನಿಯಮ ನಿಬಂಧನೆಗಳು ಕಗ್ಗಂಟಾಗಿ ಪರಿಣಮಿಸಿ ಈ ಮಕ್ಕಳ ಹಕ್ಕುಗಳನ್ನು ಸಮಾಧಿ ಮಾಡುತ್ತಿವೆ” ಎಂದು ಅವರು ಹೇಳಿದರು.

“ನಿಯಮ ನಿಬಂಧನೆಗಳು, ದಾಖಲಾತಿಗಳು ಮಕ್ಕಳ ಹಕ್ಕುಗಳಿಗೆ ಪೂರಕವಾಗಿ ಇರಬೇಕೆ ಹೊರತು ಮಾರಕವಾಗಿರಬಾರದು. ಸೌಲಭ್ಯಗಳಿಗಾಗಿ ದಾಖಲಾತಿಗಳು ಬೇಕು ಆದರೆ ದಾಖಲಾತಿಗಳಿಂದಲೇ ಸೌಲಭ್ಯಗಳು ಎಂಬಂತಾಗಬಾರದು. ಈ ಮಕ್ಕಳು ಪಡೆದುಕೊಳ್ಳುವ ಆರೋಗ್ಯ ಶಿಕ್ಷಣ ಇನ್ನಿತರ ಯಾವುದೇ ಒಂದು ಸೌಲಭ್ಯಗಳನ್ನು ಕೊಡಲು ಈ ಮಕ್ಕಳ ತಂದೆಯ ಹೆಸರು, ವಿಳಾಸ, ಫೋನ್ ನಂಬರ್, ಸಹಿ ಮತ್ತು ಭಾವಚಿತ್ರಗಳು ಕಡ್ಡಾಯವಾಗಿ ಒದಗಿಸಬೇಕೆಂಬ ನಿಬಂಧನೆ ಅಪ್ರಸ್ತುತವಾಗುತ್ತದೆ” ಎಂದು ಅವರು ಹೇಳಿದರು.

“ಈ ಸಂದರ್ಭಗಳಲ್ಲಿ ತಂದೆಯ ಹೆಸರನ್ನು ನಮೂದಿಸಬೇಕೋ ಅಥವಾ ಬೇಡವೋ ಎಂಬ ನಿರ್ಧಾರವನ್ನು ಆ ಮಗುವಿನ ತಾಯಿ ಅಥವಾ ಪೋಷಕಿಯ ಆಯ್ಕೆಗೆ ಬಿಡಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಇರುವಂತಹ ನಿಯಮ ನಿಬಂಧನೆಗಳಲ್ಲಿ ಬದಲಾವಣೆಯನ್ನು ತಂದು ಒಂದು ಹೊಸ ನೀತಿಯನ್ನು ರೂಪಿಸಬೇಕು. ಈ ಆಂದೋಲನ ಚಾಲನೆ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಯಿತು.” ಎಂದು ಅಕ್ಕಯ್ ಅವರು ಹೇಳಿದರು.

ಆನ್‌ಲೈನ್ ಕಾರ್ಯಕ್ರಮದಲ್ಲಿ ಪ್ರಕಾಶ್ ರಾಜ್, ಸ್ಪೆಸ್ ಫಾರ್ ಡ್ರೀಮ್ಸ್‌ನ ವಿಕ್ಟೊರಿಯಾ ಪ್ರದೀಪ್, ಸಾಧನಾ ಮಹಿಳಾ ಸಂಘದ ಗೀತಾ, ಪ್ರಕೃತಿ ಕಲಾ ಸೇವಾ ಸಮಿತಿಯ ಆಶಾ ಹೆಚ್.ಎಲ್., ಗಾಯತ್ರಿ, ರಕ್ಷಿತಾ, ಮಾಳವಿಕ ಒಂದೆಡೆ, ಕಾವ್ಯ ಆಪ್ತಮಿತ್ರ, ಕರ್ನಾಟಕ ಅಂತರ್ಲಿಂಗಿ ಅಸೋಸಿಯೇಷನ್‌ ಅಧ್ಯಕ್ಷೆ ಕುಮಾರಿ ಅಬಿದಾ ಬೇಗಮ್, ಸನೋ ರಾಮನಗರ ಇನ್ನಿತರರು ಭಾಗವಹಿಸಿದರು.

ಇದನ್ನೂ ಓದಿ: ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...