Homeಕರ್ನಾಟಕಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು - ಡಾ. ಅಕ್ಕಯ್ ಪದ್ಮಶಾಲಿ

ಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು – ಡಾ. ಅಕ್ಕಯ್ ಪದ್ಮಶಾಲಿ

- Advertisement -
- Advertisement -

ಹಿಂದಿನ ಹಲವು ಆಡಳಿತಾತ್ಮಕ ನಿಯಮ ನಿಬಂಧನೆಗಳಿಂದ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ ಮತ್ತು ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗೆ ಚ್ಯುತಿ ಆಗುತ್ತಿರುವುದು ಸಾಧಾರಣ ಎಂದು ಪರಿಗಣಿಸಲ್ಪಡುತ್ತಿರುವ ಅತಿ ಗಂಭೀರ ವಿಷಯವಾಗಿದೆ ಎಂದು ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಡಾ. ಅಕ್ಕಯ್ ಪದ್ಮಶಾಲಿ ಅವರು ಶುಕ್ರವಾರ ಹೇಳಿದರು. ಸೌಲಭ್ಯಕ್ಕಾಗಿ ದಾಖಲಾತಿ ಬೇಕು

ಅವರು ಇತರ ಸಮುದಾಯದ ಜೊತೆಗೆ ಸೇರಿ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ, ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗಾಗಿ ‘ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಆಂದೋಲನ’ವನ್ನು ಚಾಲನೆ ನೀಡಿ ಮಾತನಾಡುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ಕಾಲಗಳು ಉರುಳಿದಂತೆ ನಮ್ಮ ಸಾಮಾಜಿಕ ಸಂರಚನೆ ಮತ್ತು ಕುಟುಂಬ ವ್ಯವಸ್ಥೆಗಳಲ್ಲಿ ಹೊಸ ಹೊಸ ಬದಲಾವಣೆಗಳು ನಿರಂತರ ಆಗುತ್ತಲೇ ಇವೆ. ಈ ಹಿಂದಿನ ಹಲವು ಆಡಳಿತಾತ್ಮಕ ನಿಯಮ ನಿಬಂಧನೆಗಳಿಂದ ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಮಿಕರ ಮತ್ತು ದೇವದಾಸಿಯರ ಮತ್ತು ಒಂಟಿ ಮಹಿಳೆಯರ ಮಕ್ಕಳ ಹಕ್ಕುಗಳಿಗೆ ಚ್ಯುತಿ ಆಗುತ್ತಿರುವುದು ಸಾಧಾರಣ ಎಂದು ಪರಿಗಣಿಸಲ್ಪಡುತ್ತಿರುವ ಅತಿ ಗಂಭೀರ ವಿಷಯವಾಗಿದೆ” ಎಂದು ಹೇಳಿದರು. ಸೌಲಭ್ಯಕ್ಕಾಗಿ ದಾಖಲಾತಿ ಬೇಕು

“ಸಿಂಗಲ್ ಮದರ್ ಮಕ್ಕಳ ತಂದೆಯ ಹೆಸರನ್ನು ಕೊಡುವ ಸ್ಥಿತಿಯಲ್ಲಿ ಇರುವುದಿಲ್ಲ. ಈ ಮಗುವಿನ ತಂದೆ ಎಂದು ಅವನು ಒಪ್ಪಿರುವುದೇ ಇಲ್ಲ. ತಂದೆ ಹೆಸರು ಇಲ್ಲ, ಆಧಾರ್ ಕಾರ್ಡ್ ಇಲ್ಲ ಎಂಬ ಒಂದೇ ಕಾರಣಕ್ಕೆ ಈ ಮಕ್ಕಳಿಗೆ ಸರ್ಕಾರಗಳಿಂದ ಸಿಗಬೇಕಾದ ಸೇವಾ ಸೌಲಭ್ಯಗಳನ್ನು ಉದಾಹರಣೆಗೆ ಆರೋಗ್ಯ, ಶೈಕ್ಷಣಿಕ ಸೇವಾ ಸೌಲಭ್ಯಗಳನ್ನು ಸಿಗದಂತಾಗಿವೆ. ಕಡ್ಡಾಯವಾಗಿ ತಂದೆಯ ಹೆಸರನ್ನು ನಮೂದಿಸಲೇಬೇಕೆಂಬ ನಿಯಮ ನಿಬಂಧನೆಗಳು ಕಗ್ಗಂಟಾಗಿ ಪರಿಣಮಿಸಿ ಈ ಮಕ್ಕಳ ಹಕ್ಕುಗಳನ್ನು ಸಮಾಧಿ ಮಾಡುತ್ತಿವೆ” ಎಂದು ಅವರು ಹೇಳಿದರು.

“ನಿಯಮ ನಿಬಂಧನೆಗಳು, ದಾಖಲಾತಿಗಳು ಮಕ್ಕಳ ಹಕ್ಕುಗಳಿಗೆ ಪೂರಕವಾಗಿ ಇರಬೇಕೆ ಹೊರತು ಮಾರಕವಾಗಿರಬಾರದು. ಸೌಲಭ್ಯಗಳಿಗಾಗಿ ದಾಖಲಾತಿಗಳು ಬೇಕು ಆದರೆ ದಾಖಲಾತಿಗಳಿಂದಲೇ ಸೌಲಭ್ಯಗಳು ಎಂಬಂತಾಗಬಾರದು. ಈ ಮಕ್ಕಳು ಪಡೆದುಕೊಳ್ಳುವ ಆರೋಗ್ಯ ಶಿಕ್ಷಣ ಇನ್ನಿತರ ಯಾವುದೇ ಒಂದು ಸೌಲಭ್ಯಗಳನ್ನು ಕೊಡಲು ಈ ಮಕ್ಕಳ ತಂದೆಯ ಹೆಸರು, ವಿಳಾಸ, ಫೋನ್ ನಂಬರ್, ಸಹಿ ಮತ್ತು ಭಾವಚಿತ್ರಗಳು ಕಡ್ಡಾಯವಾಗಿ ಒದಗಿಸಬೇಕೆಂಬ ನಿಬಂಧನೆ ಅಪ್ರಸ್ತುತವಾಗುತ್ತದೆ” ಎಂದು ಅವರು ಹೇಳಿದರು.

“ಈ ಸಂದರ್ಭಗಳಲ್ಲಿ ತಂದೆಯ ಹೆಸರನ್ನು ನಮೂದಿಸಬೇಕೋ ಅಥವಾ ಬೇಡವೋ ಎಂಬ ನಿರ್ಧಾರವನ್ನು ಆ ಮಗುವಿನ ತಾಯಿ ಅಥವಾ ಪೋಷಕಿಯ ಆಯ್ಕೆಗೆ ಬಿಡಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಇರುವಂತಹ ನಿಯಮ ನಿಬಂಧನೆಗಳಲ್ಲಿ ಬದಲಾವಣೆಯನ್ನು ತಂದು ಒಂದು ಹೊಸ ನೀತಿಯನ್ನು ರೂಪಿಸಬೇಕು. ಈ ಆಂದೋಲನ ಚಾಲನೆ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಯಿತು.” ಎಂದು ಅಕ್ಕಯ್ ಅವರು ಹೇಳಿದರು.

ಆನ್‌ಲೈನ್ ಕಾರ್ಯಕ್ರಮದಲ್ಲಿ ಪ್ರಕಾಶ್ ರಾಜ್, ಸ್ಪೆಸ್ ಫಾರ್ ಡ್ರೀಮ್ಸ್‌ನ ವಿಕ್ಟೊರಿಯಾ ಪ್ರದೀಪ್, ಸಾಧನಾ ಮಹಿಳಾ ಸಂಘದ ಗೀತಾ, ಪ್ರಕೃತಿ ಕಲಾ ಸೇವಾ ಸಮಿತಿಯ ಆಶಾ ಹೆಚ್.ಎಲ್., ಗಾಯತ್ರಿ, ರಕ್ಷಿತಾ, ಮಾಳವಿಕ ಒಂದೆಡೆ, ಕಾವ್ಯ ಆಪ್ತಮಿತ್ರ, ಕರ್ನಾಟಕ ಅಂತರ್ಲಿಂಗಿ ಅಸೋಸಿಯೇಷನ್‌ ಅಧ್ಯಕ್ಷೆ ಕುಮಾರಿ ಅಬಿದಾ ಬೇಗಮ್, ಸನೋ ರಾಮನಗರ ಇನ್ನಿತರರು ಭಾಗವಹಿಸಿದರು.

ಇದನ್ನೂ ಓದಿ: ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...