Homeಮುಖಪುಟಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ - ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ...

ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

- Advertisement -
- Advertisement -

2021 ರಲ್ಲಿ ಅಂದಿನ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಸರ್ಕಾರ ಮತ್ತು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಸಹಿ ಮಾಡಿದ ವಿದ್ಯುತ್ ಸರಬರಾಜು ಒಪ್ಪಂದದ ಕುರಿತು ಆಂಧ್ರ ಪ್ರದೇಶ ಕಾಂಗ್ರೆಸ್ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ)ದಲ್ಲಿ ಪ್ರಕರಣ ದಾಖಲಿಸಿದೆ. ಜಗನ್ ನಡೆಸಿದ್ದ

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರು ಆಂಧ್ರದ ಆಗಿನ ಸಿಎಂ ಜಗನ್‌ಗೆ 1750 ಕೋಟಿ ರೂಪಾಯಿಗಳ ಲಂಚವನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಅಮೆರಿಕದ ಸೆಕ್ಯುರಿಟೀಸ್ ಎಕ್ಸ್‌ಚೇಂಜ್ ಕಮಿಷನ್‌ನ ದೋಷಾರೋಪಣೆ ಮಾಡಿತ್ತು. ಅದಾನಿಯ ಲಂಚ ನೀಡುವುದಾಗಿ ಹೇಳಿದ ನಂತರ ಸರ್ಕಾರವು ಸೌರ ವಿದ್ಯುತ್ ದರಗಳನ್ನು ಒಪ್ಪಿಕೊಂಡಿತ್ತು ಎಂದು ಆರೋಪಿಸಲಾಗಿದೆ. ಜಗನ್ ನಡೆಸಿದ್ದ

ಆಂಧ್ರಪ್ರದೇಶದ ಪ್ರಸ್ತುತ ಸಿಎಂ ಚಂದ್ರಬಾಬು ನಾಯ್ಡು ಅವರು ಎಸಿಬಿಯನ್ನು ನಿಯಂತ್ರಿಸುತ್ತಿದ್ದಾರೆ ಮತ್ತು ಆದ್ದರಿಂದ ಆಪಾದಿತ ಹಗರಣದ ಬಗ್ಗೆ ಯಾವುದೇ ತನಿಖೆ ನಡೆಸುತ್ತಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಜಗನ್ ಅವರ ಸಹೋದರಿ ವೈಎಸ್ ಶರ್ಮಿಳಾ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಎಸಿಬಿ ಚಂದ್ರಬಾಬು ನಾಯ್ಡು ನಿಯಂತ್ರಣದಲ್ಲಿದೆಯೇ? ಈ ಡೀಲ್ ಅಥವಾ ಅದರ ಹಿಂದಿನ ಭ್ರಷ್ಟಾಚಾರವನ್ನು ತನಿಖೆ ಮಾಡಲು ಎಸಿಬಿಗೆ ಅಧಿಕಾರವಿದೆಯೇ ಅಥವಾ ಅದನ್ನು ಚಂದ್ರಬಾಬು ನಾಯ್ಡು ನಿಯಂತ್ರಿಸುತ್ತಿದ್ದಾರೆಯೇ? ತಾನು ಭ್ರಷ್ಟಾಚಾರದ ವಿರುದ್ಧ ಇದ್ದೇನೆ ಎಂದು ಎಸಿಬಿ ತನ್ನನ್ನು ತಾನು ಸಾಬೀತುಪಡಿಸಬೇಕು. ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು” ಎಂದು ಶರ್ಮಿಳಾ ಆಗ್ರಹಿಸಿದ್ದಾರೆ.

ಆರೋಪದ ಬಗ್ಗೆ ತನಿಖೆ ನಡೆಸದ ಚಂದ್ರಬಾಬು ನಾಯ್ಡು ಮತ್ತು ಟಿಡಿಪಿಯನ್ನು ಪ್ರಶ್ನಿಸಿದ ಶರ್ಮಿಳಾ, “ರಾಜಕೀಯ ಒಲವು ಮತ್ತು ಎನ್‌ಡಿಎ ಮೈತ್ರಿಕೂಟ ತೆಗೆದುಕೊಳ್ಳುತ್ತಿರುವ ನಿಲುವಿನಿಂದಾಗಿ ಮಾತ್ರ ಯಾವುದೇ ತನಿಖೆ ನಡೆಯುತ್ತಿಲ್ಲ” ಎಂದು ಅವರು ಹೇಳಿದ್ದಾರೆ. ಈ ಒಪ್ಪಂದದಲ್ಲಿ ಭಾಗಿಯಾಗಿರುವ ಭ್ರಷ್ಟಾಚಾರವನ್ನು ಎತ್ತಿತೋರಿಸಿದ ಅವರು ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ಆಂಧ್ರಪ್ರದೇಶದ ಹಣಕಾಸು ಸಚಿವ ಪಯ್ಯವುಲಾ ಕೇಶವ್ ಅವರು 2021 ರಲ್ಲಿ ಸಲ್ಲಿಸಿದ ಅರ್ಜಿಯನ್ನು ಅವರು ಹೈಲೈಟ್ ಮಾಡಿದ್ದಾರೆ.

“ಟಿಡಿಪಿಗೆ 2021 ರಿಂದ ಹಗರಣದ ಬಗ್ಗೆ ತಿಳಿದಿತ್ತು. ಅವರು ನಡೆಸಿದ ತನಿಖೆಯ ಪ್ರಕಾರ, 2021 ರಲ್ಲಿ 1300 ಪುಟಗಳ ಅರ್ಜಿಯನ್ನು ಸಲ್ಲಿಸಲಾಗಿದೆ. ಅವರು ಈ ಹಗರಣದ ಬಗ್ಗೆ ಏಕೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ? ಚಂದ್ರಬಾಬು ನಾಯ್ಡು ಈಗ ಮುಖ್ಯಮಂತ್ರಿ. ಪಯ್ಯಾವುಲ ಕೇಶವ್ ಕೂಡ ಸಚಿವರಾಗಿದ್ದಾರೆ. ಅವರೇಕೆ ಕ್ರಮ ಕೈಗೊಳ್ಳುತ್ತಿಲ್ಲ? ಎಂದು ಕೇಳಿದ್ದಾರೆ.

ಈ ವಿಷಯದ ಬಗ್ಗೆ ಮಾತನಾಡುವಾಗ, ಚಂದ್ರಬಾಬು ನಾಯ್ಡು ಅವರು ಒಪ್ಪಂದಕ್ಕೆ ಸಹಿ ಹಾಕಲು ಜಗನ್ ಮೋಹನ್ ರೆಡ್ಡಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಅದಾನಿ ಭಾಗಿಯಾಗಿರುವ ಬಗ್ಗೆ ಒಂದು ಮಾತನ್ನೂ ಅವರು ಉಲ್ಲೇಖಿಸಲಿಲ್ಲ. ಅದಾನಿ ಬಿಜೆಪಿ ಪರವಾಗಿರುವ ಕಾರಣಕ್ಕೆ ಮತ್ತು ಬಿಜೆಪಿಯು ಟಿಡಿಪಿ ನಡುವಿನ ಮೈತ್ರಿಯನ್ನು ಒಪ್ಪಿಕೊಂಡಿರುವ ಕಾರಣ ಅವರ ಬಗ್ಗೆ ಮಾತನಾಡಲು ಟಿಡಿಪಿ ಹೆದರುತ್ತಿದೆ ಅಥವಾ ಹಿಂಜರಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅದಾನಿಯನ್ನು ಬೆಂಬಲಿಸಿದರೆ ರಾಹುಲ್ ಗಾಂಧಿ ಅವರು ಅದಾನಿಯನ್ನು ಅನೇಕ ವಿಷಯಗಳಲ್ಲಿ ಟೀಕಿಸುತ್ತಿದ್ದಾರೆ ಎಂದು ಶರ್ಮಿಳಾ ಪ್ರತಿಪಾದಿಸಿದ್ದಾರೆ. “ಮೋದಿ ಸರ್ಕಾರ ಅದಾನಿಯನ್ನು ಉಳಿಸಲು ನೋಡುತ್ತಿದೆ. ಏಕೆಂದರೆ ಅವರು ಬಿಜೆಪಿಗೆ ಹಣ ನೀಡುತ್ತಾರೆ. ಈ ಹಗರಣವನ್ನು ಪರಿಶೀಲಿಸಲು ಜಂಟಿ ಸಂಸದೀಯ ಸಮಿತಿಯನ್ನು ರಚಿಸದಿರುವ ಹಿಂದಿನ ಕಾರಣ ಇದೆ ಆಗಿದೆ. ಹಗರಣದ ತನಿಖೆಯಾಗದಿರಲು ಬಿಜೆಪಿ ಮತ್ತು ಅದಾನಿ ಸ್ನೇಹ ಸಂಬಂಧವೇ ಕಾರಣ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: 6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ – ಕಾರ್ಮಿಕರ ಹೋರಾಟಕ್ಕೆ ಗೆಲುವು

6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ – ಕಾರ್ಮಿಕರ ಹೋರಾಟಕ್ಕೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...