Homeಮುಖಪುಟರೈತ ಹೋರಾಟದ ನಡುವೆ ಎಮ್‌ಎಸ್‌ಪಿ ನೀಡುವುದಾಗಿ ಭರವಸೆ ನೀಡಿದ ಕೇಂದ್ರ ಸರ್ಕಾರ

ರೈತ ಹೋರಾಟದ ನಡುವೆ ಎಮ್‌ಎಸ್‌ಪಿ ನೀಡುವುದಾಗಿ ಭರವಸೆ ನೀಡಿದ ಕೇಂದ್ರ ಸರ್ಕಾರ

- Advertisement -
- Advertisement -

ತಮ್ಮ ಬೆಲೆಗಳಿಗೆ ಎಂಎಸ್‌ಪಿ ಖಾತರಿ ನೀಡುವ ಕಾನೂನು ರಚಿಸಬೇಕು ಎಂಬ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ರೈತರು ದೆಹಲಿಗೆ ಪಾದಯಾತ್ರೆ ಆರಂಭಿಸಿರುವ ನಡುವೆ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಸರ್ಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಿದೆ ಎಂದು ಹೇಳಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ರೈತರ ಎಮ್‌ಎಸ್‌ಪಿ ಸಮಸ್ಯೆಗೆ ಪೂರಕವಾಗಿ ಉತ್ತರಿಸಿದ ಅವರು ಈ ಭರವಸೆ ನೀಡಿದ್ದಾರೆ. ರೈತ ಹೋರಾಟದ

“ರೈತರ ಎಲ್ಲಾ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎಂದು ನಾನು ನಿಮ್ಮ ಮೂಲಕ ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ಇದು ಮೋದಿ ಸರ್ಕಾರ ಮತ್ತು ಮೋದಿ ಅವರ ಭರವಸೆಯನ್ನು ಪೂರೈಸುವ ಭರವಸೆ” ಎಂದು ಚೌಹಾಣ್ ಹೇಳಿದ್ದಾರೆ.

ವಿಪಕ್ಷಗಳನ್ನು ಉಲ್ಲೇಖಿಸಿದ ಅವರು, ನಮ್ಮ ಮಿತ್ರರು ಅಧಿಕಾರದಲ್ಲಿದ್ದಾಗ ಎಂಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ದಾಖಲೆ ಸಮೇತ ಹೇಳಿಕೆ ನೀಡಿದ್ದರು. ಅದರಲ್ಲೂ ಉತ್ಪನ್ನದ ವೆಚ್ಚಕ್ಕಿಂತ ಶೇ.50ರಷ್ಟು ಹೆಚ್ಚು ನೀಡುವ ಕುರಿತು ನನ್ನ ಬಳಿ ದಾಖಲೆ ಇದೆ ಎಂದು ಅವರು ಹೇಳಿದ್ದಾರೆ. ಅವರು ತಮ್ಮ ಪ್ರತಿಪಾದನೆಯನ್ನು ಬೆಂಬಲಿಸಲು ಮಾಜಿ ಕೃಷಿ ಸಚಿವ ಕಾಂತಿಲಾಲ್ ಭೂರಿಯಾ, ಕೃಷಿ ಮಂತ್ರಿಗಳಾದ ಶರದ್ ಪವಾರ್ ಮತ್ತು ಕೆ.ವಿ. ಥಾಮಸ್ ಅವರನ್ನು ಉಲ್ಲೇಖಿಸಿದ್ದಾರೆ. ರೈತ ಹೋರಾಟದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಈ ಹೇಳಿಕೆಗಳ ನಂತರ, ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು, ಈ ಹೇಳಿಕೆಯ ದೃಢೀಕರಣಕ್ಕಾಗಿ ದಾಖಲೆಗಳನ್ನು ದಾಖಲಿಸುವಂತೆ ಕೇಳಿಕೊಂಡರು. ಅದನ್ನು ಸಚಿವ ಚೌಹಾಣ್ ಒಪ್ಪಿಕೊಂಡರು.

“ಅವರು ಎಂದಿಗೂ ರೈತರನ್ನು ಗೌರವಿಸಿಲ್ಲ ಮತ್ತು ಲಾಭದಾಯಕ ಬೆಲೆಗಳ ರೈತರ ಬೇಡಿಕೆಗಳನ್ನು ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ. 2019 ರಿಂದ ಪ್ರಧಾನಿ ನರೇಂದ್ರ ಮೋದಿ ಅವರು  50% ದಷ್ಟು ಲಾಭವನ್ನು ನೀಡುವ ಮೂಲಕ ರೈತರಿಗೆ ಉತ್ಪಾದನಾ ವೆಚ್ಚದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಲೆಕ್ಕ ಹಾಕಲು ನಿರ್ಧರಿಸಿದ್ದಾರೆ ಎಂದು ನಾನು ನಿಮ್ಮ ಮೂಲಕ ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ” ಎಂದು ಸಚಿವ ಚೌಹಾಣ್ ಪ್ರತಿಪಾದಿಸಿದ್ದಾರೆ.

ಮೋದಿ ಸರ್ಕಾರ ಈಗಾಗಲೇ ರೈತರಿಗೆ ಲಾಭದಾಯಕ ಬೆಲೆಗಳನ್ನು ನೀಡುತ್ತಿದೆ ಎಂದ ಅವರು, ಭತ್ತ, ಗೋಧಿ, ಜೋಳ, ಸೋಯಾಬೀನ್ ಅನ್ನು ಮೂರು ವರ್ಷಗಳ ಹಿಂದಿನ ಉತ್ಪಾದನಾ ವೆಚ್ಚದ 50%ಕ್ಕಿಂತ ಹೆಚ್ಚು ಬೆಲೆಯಲ್ಲಿ ಖರೀದಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸರಕುಗಳ ದರಗಳು ಕುಸಿದಾಗಲೆಲ್ಲಾ ರಫ್ತು ಸುಂಕಗಳು ಮತ್ತು ಬೆಲೆಗಳನ್ನು ಬದಲಾಯಿಸುವಲ್ಲಿ ಸರ್ಕಾರ ಹಸ್ತಕ್ಷೇಪ ನಡೆಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಕೃಷಿ ಸಾಲ ಮನ್ನಾ ನೀತಿಯ ಚೌಕಟ್ಟನ್ನು ರಚಿಸಲು ಸರ್ಕಾರ ಪರಿಗಣಿಸುತ್ತಿದೆಯೇ ಎಂಬ ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಚೌಹಾಣ್, ಅದರ ಬದಲಿಗೆ ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. “ನಾವು ರೈತರ ಆದಾಯವನ್ನು ಹೆಚ್ಚಿಸಬೇಕು ಎಂದು ನಂಬುತ್ತೇವೆ. ಅದಕ್ಕಾಗಿ ಈ ಸರ್ಕಾರವು ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...