Homeಮುಖಪುಟ'ಜೈ ಶ್ರೀರಾಮ್' ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

- Advertisement -
- Advertisement -

‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಲ್ಲಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಧ್ಯ ಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಪೊಲೀಸರು ಶುಕ್ರವಾರ (ಡಿ.6) ಬಂಧಿಸಿದ್ದಾರೆ.

ರತ್ಲಂ ಜಿಲ್ಲೆಯ ಮನಕ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಅಮೃತ ಸಾಗರ್ ತಲಾಬ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಗಳು ಹೇಳಿವೆ.

“ದೌರ್ಜನ್ಯದ ವಿಡಿಯೋ ಸೋರಿಕೆ ಮಾಡಿರುವ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ವಿಡಿಯೋದಲ್ಲಿ ಮಕ್ಕಳಿಗೆ ಥಳಿಸಿರುವ ಆರೋಪಿಯನ್ನು ಬಂಧಿಸಿ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಿ ರಿಮಾಂಡ್ ಹೋಮ್‌ಗೆ ಕಳುಹಿಸಲಾಗಿದೆ. ನಮ್ಮ ತಂಡ ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದು, ಶೀಘ್ರದಲ್ಲಿ ಅವರನ್ನು ಬಂಧಿಸುತ್ತೇವೆ. ಘಟನೆ ಸಂಬಂಧ ಆರೋಪಿಗಳ ವಿರುದ್ದ ಬಿಎನ್‌ಎಸ್ ಸೆಕ್ಷನ್‌ಗಳಾದ 296, 115(2), 126(2), 351(2), 196, ಮತ್ತು 3(5)ರ ಅಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿ ಅಪ್ರಾಪ್ತ ಎಂದು ಮನಕ್ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಸುರೇಂದ್ರ ಸಿಂಗ್ ಗಾರ್ಡಿಯಾ ತಿಳಿಸಿದ್ದಾರೆ.

ಹಲ್ಲೆಗೊಳಗಾದ ಮೂವರು ಮಕ್ಕಳು 7, 11 ಮತ್ತು 13 ವರ್ಷ ವಯಸ್ಸಿನವರು. ಅವರು ಕ್ರಮವಾಗಿ 2, 5 ಮತ್ತು 6 ನೇ ತರಗತಿಗಳ ವಿದ್ಯಾರ್ಥಿಗಳು. ಹಲ್ಲೆ ನಡೆಸಿ ಬಂಧಿತನಾಗಿರುವ ಆರೋಪಿಗೆ 17 ವರ್ಷ ವಯಸ್ಸು ಎಂದು ಎಸ್‌ಹೆಚ್‌ಒ ಹೇಳಿದ್ದಾರೆ.

“ನಾನು, ನನ್ನ ಇಬ್ಬರು ಸ್ನೇಹಿತರ ಜೊತೆ ಸುಮಾರು ಒಂದೂವರೆ ತಿಂಗಳ ಹಿಂದೆ ಅಮೃತ್ ಸಾಗರ್ ತಲಾಬ್ ಬಳಿ ವಾಯು ವಿಹಾರಕ್ಕೆ ಹೋಗಿದ್ದೆ. ನಾವು ಅಲ್ಲಿ ಕುಳಿತಿದ್ದಾಗ ನಮ್ಮ ಬಳಿ ಇಬ್ಬರು ಬಂದು ಹೆಸರು ಕೇಳಿದರು. ನಂತರ ಅವರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು ಮತ್ತು ಹಲ್ಲೆ ನಡೆಸಿದರು. ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯಿಸಿದರು. ಅವರಲ್ಲಿ ಒಬ್ಬ ನಮ್ಮ ಮೇಲೆ ಹಲ್ಲೆ ನಡೆಸುತ್ತಿರುವಾಗ, ಇನ್ನೋರ್ವ ವಿಡಿಯೋ ಮಾಡಿದ್ದಾರೆ. ನಂತರ ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ನಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹಲ್ಲೆಗೊಳಗಾದ 13 ವರ್ಷದ ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾನೆ.

ವರದಿಗಳ ಪ್ರಕಾರ, ಒಂದು ಸುಮಾರು ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಗುರುವಾರ (ಡಿ.5) ವಿಡಿಯೋ ವೈರಲ್ ಆದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ದೂರು ದಾಖಲಿಸಲು ಇಮ್ರಾನ್ ಖೋಖರ್ ಎಂಬ ಸಾಮಾಜಿಕ ಕಾರ್ಯಕರ್ತ ಮಕ್ಕಳ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಇಮ್ರಾನ್, “ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಕುಡಿದ ಮತ್ತಿನಲ್ಲಿ ಮನೋರಂಜನೆಗಾಗಿ ತನ್ನ ಮೊಬೈಲ್‌ನಲ್ಲಿದ್ದ ವಿಡಿಯೋ ಸೋರಿಕೆ ಮಾಡಿದ್ದಾನೆ. ಇದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಮಕ್ಕಳು ಭಯಬೀತರಾಗಿದ್ದಾರೆ. ಆದ್ದರಿಂದ ಅವರು ಯಾರಲ್ಲೂ ಅ ವಿಷಯ ಹೇಳಿರಲಿಲ್ಲ” ಎಂದು ತಿಳಿಸಿದ್ದಾರೆ.

“ಹಲ್ಲೆಗೊಳಗಾದ ಮೂವರ ಪೈಕಿ 7 ವರ್ಷದ ಬಾಲಕ 10 ತಿಂಗಳ ಹಿಂದೆಯಷ್ಟೇ ಅಪಘಾತದಲ್ಲಿ ತನ್ನ ತಂದೆ-ತಾಯಿಯನ್ನು ಕಳೆದುಕೊಂಡಿದ್ದಾನೆ. ಆತ ತನ್ನ ಅಜ್ಜಿ ಮತ್ತು ಚಿಕ್ಕಮ್ಮನ ಆಶ್ರಯದಲ್ಲಿದ್ದಾನೆ. ಹಲ್ಲೆಯ ವಿಡಿಯೋ ಸೋರಿಕೆಯಾದ ಬಳಿಕ ಬಾಲಕ ಮನೆಯ ಕೊಠಡಿಯಲ್ಲಿ ಬಾಗಿಲು ಹಾಕಿ ಕುಳಿತಿದ್ದ. ನಾವು ಪೊಲೀಸರ ಸಹಾಯದಿಂದ ಬಾಗಿಲು ಒಡೆದು ಆತನನ್ನು ರಕ್ಷಿಸಿದ್ದೇವೆ” ಎಂದು ಇಮ್ರಾನ್ ಹೇಳಿದ್ದಾರೆ.

ಹಲ್ಲೆಗೊಳಗಾದ ಇನ್ನಿಬ್ಬರು ಮಕ್ಕಳ ಪೋಷಕರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ನಮ್ಮ ಮಕ್ಕಳು ಕಳೆದ ಒಂದು ತಿಂಗಳಿನಿಂದ ವಿಭಿನ್ನವಾಗಿ ವರ್ತಿಸುತ್ತಿದ್ದರು. ಶಾಲೆಗೆ ಹೋಗುತ್ತಿರಲಿಲ್ಲ. ಹೊರಗಡೆ ಆಟವಾಡಲೂ ಹೋಗುತ್ತಿರಲಿಲ್ಲ. ಯಾರೊಂದಿಗೂ ಸೇರುತ್ತಿರಲಿಲ್ಲ. ಮಾತನಾಡಲು ಭಯಪಡುತ್ತಿದ್ದರು. ಆದರೆ, ನಮಗೆ ಅವರ ಮೇಲೆ ಹಲ್ಲೆ ನಡೆದಿರುವುದು ಗೊತ್ತಿರಲಿಲ್ಲ. ವಿಡಿಯೋ ನೋಡಿದ ಮೇಲೆ ನಮಗೆ ಆಘಾತವಾಯಿತು, ಸಹಿಸಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...