Homeಚಳವಳಿರೈತರ ಹೋರಾಟಕ್ಕೆ ಜಯ : ಎಲ್ಲಾ ಕೃಷಿ ಉತ್ಪನ್ನಗಳಿಗೆ 'ಎಂಎಸ್‌ಪಿ' ಕೇಂದ್ರ ಸರ್ಕಾರ

ರೈತರ ಹೋರಾಟಕ್ಕೆ ಜಯ : ಎಲ್ಲಾ ಕೃಷಿ ಉತ್ಪನ್ನಗಳಿಗೆ ‘ಎಂಎಸ್‌ಪಿ’ ಕೇಂದ್ರ ಸರ್ಕಾರ

- Advertisement -
- Advertisement -

ರೈತರ ಬೃಹತ್ ಹೋರಾಟದ ನಡುವೆ ಎಲ್ಲಾ ಕೃಷಿ ಉತ್ಪನ್ನಗಳನ್ನು ‘ಕನಿಷ್ಠ ಬೆಂಬಲ ಬೆಲೆ’ (ಎಂಎಸ್‌ಪಿ) ಯಲ್ಲಿ ಖರೀದಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಹೋರಾಟಕ್ಕೆ ದೊಡ್ಡ ಜಯ ಸಿಕ್ಕಂತಾಗಿದೆ.

ರೈತರ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಘೋಷಣೆ ಮಾಡಬೇಕು. ಅದಕ್ಕೆ ಕಾನೂನು ಖಾತರಿ ನೀಡಬೇಕು ಎಂಬುವುದು ಕಳೆದ 9 ತಿಂಗಳಿನಿಂದ ಹರಿಯಾಣದ ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ರೈತರ ಪ್ರಮುಖ ಬೇಡಿಕೆಯಾಗಿತ್ತು. ಈಗ ಅದನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ.

ಶುಕ್ರವಾರ (ಡಿ.6) ಹೋರಾಟವನ್ನು ತೀವ್ರಗೊಳಿಸಿದ್ದ ರೈತರು, ರಾಜಧಾನಿ ದೆಹಲಿಯತ್ತ ಮೆರವಣಿಗೆ ಹಮ್ಮಿಕೊಂಡಿದ್ದರು. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗಿದ್ದರು. ಈ ವೇಳೆ ಪೊಲೀಸರು ರೈತರ ಮೇಲೆ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್‌ ನಡೆಸಿದ್ದರು. ಇದರಿಂದ ಉದ್ವಿಗ್ನ ವಾತಾವರಣ ಉಂಟಾಗಿತ್ತು.

ಅತ್ತ ಹರಿಯಾಣ ಗಡಿಯಲ್ಲಿ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದ್ದ ವೇಳಯೇ, ಇತ್ತ ರಾಜ್ಯಸಭೆಯಲ್ಲಿ ರೈತರಿಗೆ ಎಂಎಸ್‌ಪಿ ನೀಡುವ ಕುರಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರೈತರ ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನೀಡುವುದಾಗಿ ಭರವಸೆ ನೀಡಿದ್ದಾರೆ.

“ರೈತರ ಎಲ್ಲಾ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎಂದು ನಾನು ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ಇದು ಮೋದಿ ಸರ್ಕಾರ ಮತ್ತು ಮೋದಿಯವರ ಭರವಸೆಯನ್ನು ಈಡೇರಿಸುವ ಗ್ಯಾರಂಟಿಯನ್ನು ನಾನು ನಿಮಗೆ ಕೊಡುತ್ತೇನೆ” ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇದೇ ವೇಳೆ ಪ್ರತಿಪಕ್ಷದ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಚೌಹಾಣ್, “ಇನ್ನೊಂದು ಕಡೆಯ ನಮ್ಮ ಸ್ನೇಹಿತರು ಅಧಿಕಾರದಲ್ಲಿದ್ದಾಗ ಎಂ.ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ದಾಖಲೆಯಲ್ಲಿ ಹೇಳಿದ್ದರು. ವಿಶೇಷವಾಗಿ ಉತ್ಪನ್ನದ ವೆಚ್ಚಕ್ಕಿಂತ 50 ಪ್ರತಿಶತ ಹೆಚ್ಚು ನೀಡಲು, ಈ ಬಗ್ಗೆ ನನ್ನ ಬಳಿ ದಾಖಲೆ ಇದೆ” ಎಂದಿದ್ದಾರೆ.

ಚೌಹಾಣ್ ಅವರು ತಮ್ಮ ಹೇಳಿಕೆಯಲ್ಲಿ ಕೇಂದ್ರ ಕೃಷಿ ಇಲಾಖೆಯ ಮಾಜಿ ರಾಜ್ಯ ಸಚಿವ ಕಾಂತಿಲಾಲ್ ಭೂರಿಯಾ, ಮಾಜಿ ಕೃಷಿ ಸಚಿವರಾದ ಶರದ್ ಪವಾರ್ ಮತ್ತು ಕೆ ವಿ ಥಾಮಸ್ ಅವರನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ.

ಚೌಹಾಣ್ ಟೀಕೆಯ ವೇಳೆ ಪ್ರತಿಕ್ರಿಯಿಸಿದ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಅವರು, “ನಿಮ್ಮ ಆರೋಪವನ್ನು ದೃಢೀಕರಿಸಲು ದಾಖಲೆ ಸಲ್ಲಿಸಿ” ಎಂದು ಸೂಚಿಸಿದರು. ಅದಕ್ಕೆ ಚೌಹಾಣ್ ಒಪ್ಪಿಕೊಂಡಿದ್ದಾರೆ.

ಮೋದಿ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ದ ಸುದೀರ್ಘ ಹೋರಾಟ ನಡೆಸಿ ಜಯಗಳಿಸಿದ್ದ ರೈತರು, ಕಳೆದ ಫೆಬ್ರವರಿಯಲ್ಲಿ ಎಂಎಸ್‌ಪಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹರಿಯಾಣದಿಂದ ದೆಹಲಿಗೆ ‘ದೆಹಲಿ ಚಲೋ’ ಪಾದಯಾತ್ರೆ ಹಮ್ಮಿಕೊಂಡಿದ್ದರು. ಆದರೆ, ಅವರು ದೆಹಲಿ ಪ್ರವೇಶಿಸಲು ಹರಿಯಾಣದ ಬಿಜೆಪಿ ಸರ್ಕಾರ ಅವಕಾಶ ನೀಡಿರಲಿಲ್ಲ.

ರೈತರ ನಿರಂತರ ಹೋರಾಟದ ವೇಳೆ ಪೊಲೀಸರೊಂದಿಗೆ ಹಲವು ಬಾರಿ ಸಂಘರ್ಷ ನಡೆದಿತ್ತು. ಕೆಲ ರೈತರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಕಳೆದ ಒಂದು ವಾರದಿಂದ ಪ್ರತಿಭಟನೆ ತೀವ್ರಗೊಳಿಸಿದ್ದ ಶುಕ್ರವಾರ ಪೊಲೀಸರ ಬ್ಯಾರಿಕೇಡ್‌ಗಳನ್ನು ಬೇಧಿಸಿ ದೆಹಲಿಯತ್ತ ಹೊರಟಿದ್ದರು. ಈ ವೇಳೆ ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿಚಾರ್ಜ್ ಮಾಡಿ ಅಡ್ಡಿಪಡಿಸಿದ್ದಾರೆ.

ಇದನ್ನೂ ಓದಿ : ಹರಿಯಾಣ | ರೈತರ ಮೇಲೆ ಅಶ್ರುವಾಯು ದಾಳಿ; ಇಂಟರ್‌ನೆಟ್ ಬಂದ್; ಸೆಕ್ಷನ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...