Homeಚಳವಳಿರೈತರ ಹೋರಾಟಕ್ಕೆ ಜಯ : ಎಲ್ಲಾ ಕೃಷಿ ಉತ್ಪನ್ನಗಳಿಗೆ 'ಎಂಎಸ್‌ಪಿ' ಕೇಂದ್ರ ಸರ್ಕಾರ

ರೈತರ ಹೋರಾಟಕ್ಕೆ ಜಯ : ಎಲ್ಲಾ ಕೃಷಿ ಉತ್ಪನ್ನಗಳಿಗೆ ‘ಎಂಎಸ್‌ಪಿ’ ಕೇಂದ್ರ ಸರ್ಕಾರ

- Advertisement -
- Advertisement -

ರೈತರ ಬೃಹತ್ ಹೋರಾಟದ ನಡುವೆ ಎಲ್ಲಾ ಕೃಷಿ ಉತ್ಪನ್ನಗಳನ್ನು ‘ಕನಿಷ್ಠ ಬೆಂಬಲ ಬೆಲೆ’ (ಎಂಎಸ್‌ಪಿ) ಯಲ್ಲಿ ಖರೀದಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಹೋರಾಟಕ್ಕೆ ದೊಡ್ಡ ಜಯ ಸಿಕ್ಕಂತಾಗಿದೆ.

ರೈತರ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಘೋಷಣೆ ಮಾಡಬೇಕು. ಅದಕ್ಕೆ ಕಾನೂನು ಖಾತರಿ ನೀಡಬೇಕು ಎಂಬುವುದು ಕಳೆದ 9 ತಿಂಗಳಿನಿಂದ ಹರಿಯಾಣದ ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ರೈತರ ಪ್ರಮುಖ ಬೇಡಿಕೆಯಾಗಿತ್ತು. ಈಗ ಅದನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ.

ಶುಕ್ರವಾರ (ಡಿ.6) ಹೋರಾಟವನ್ನು ತೀವ್ರಗೊಳಿಸಿದ್ದ ರೈತರು, ರಾಜಧಾನಿ ದೆಹಲಿಯತ್ತ ಮೆರವಣಿಗೆ ಹಮ್ಮಿಕೊಂಡಿದ್ದರು. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗಿದ್ದರು. ಈ ವೇಳೆ ಪೊಲೀಸರು ರೈತರ ಮೇಲೆ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್‌ ನಡೆಸಿದ್ದರು. ಇದರಿಂದ ಉದ್ವಿಗ್ನ ವಾತಾವರಣ ಉಂಟಾಗಿತ್ತು.

ಅತ್ತ ಹರಿಯಾಣ ಗಡಿಯಲ್ಲಿ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದ್ದ ವೇಳಯೇ, ಇತ್ತ ರಾಜ್ಯಸಭೆಯಲ್ಲಿ ರೈತರಿಗೆ ಎಂಎಸ್‌ಪಿ ನೀಡುವ ಕುರಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರೈತರ ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನೀಡುವುದಾಗಿ ಭರವಸೆ ನೀಡಿದ್ದಾರೆ.

“ರೈತರ ಎಲ್ಲಾ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎಂದು ನಾನು ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ಇದು ಮೋದಿ ಸರ್ಕಾರ ಮತ್ತು ಮೋದಿಯವರ ಭರವಸೆಯನ್ನು ಈಡೇರಿಸುವ ಗ್ಯಾರಂಟಿಯನ್ನು ನಾನು ನಿಮಗೆ ಕೊಡುತ್ತೇನೆ” ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇದೇ ವೇಳೆ ಪ್ರತಿಪಕ್ಷದ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಚೌಹಾಣ್, “ಇನ್ನೊಂದು ಕಡೆಯ ನಮ್ಮ ಸ್ನೇಹಿತರು ಅಧಿಕಾರದಲ್ಲಿದ್ದಾಗ ಎಂ.ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ದಾಖಲೆಯಲ್ಲಿ ಹೇಳಿದ್ದರು. ವಿಶೇಷವಾಗಿ ಉತ್ಪನ್ನದ ವೆಚ್ಚಕ್ಕಿಂತ 50 ಪ್ರತಿಶತ ಹೆಚ್ಚು ನೀಡಲು, ಈ ಬಗ್ಗೆ ನನ್ನ ಬಳಿ ದಾಖಲೆ ಇದೆ” ಎಂದಿದ್ದಾರೆ.

ಚೌಹಾಣ್ ಅವರು ತಮ್ಮ ಹೇಳಿಕೆಯಲ್ಲಿ ಕೇಂದ್ರ ಕೃಷಿ ಇಲಾಖೆಯ ಮಾಜಿ ರಾಜ್ಯ ಸಚಿವ ಕಾಂತಿಲಾಲ್ ಭೂರಿಯಾ, ಮಾಜಿ ಕೃಷಿ ಸಚಿವರಾದ ಶರದ್ ಪವಾರ್ ಮತ್ತು ಕೆ ವಿ ಥಾಮಸ್ ಅವರನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ.

ಚೌಹಾಣ್ ಟೀಕೆಯ ವೇಳೆ ಪ್ರತಿಕ್ರಿಯಿಸಿದ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಅವರು, “ನಿಮ್ಮ ಆರೋಪವನ್ನು ದೃಢೀಕರಿಸಲು ದಾಖಲೆ ಸಲ್ಲಿಸಿ” ಎಂದು ಸೂಚಿಸಿದರು. ಅದಕ್ಕೆ ಚೌಹಾಣ್ ಒಪ್ಪಿಕೊಂಡಿದ್ದಾರೆ.

ಮೋದಿ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ದ ಸುದೀರ್ಘ ಹೋರಾಟ ನಡೆಸಿ ಜಯಗಳಿಸಿದ್ದ ರೈತರು, ಕಳೆದ ಫೆಬ್ರವರಿಯಲ್ಲಿ ಎಂಎಸ್‌ಪಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹರಿಯಾಣದಿಂದ ದೆಹಲಿಗೆ ‘ದೆಹಲಿ ಚಲೋ’ ಪಾದಯಾತ್ರೆ ಹಮ್ಮಿಕೊಂಡಿದ್ದರು. ಆದರೆ, ಅವರು ದೆಹಲಿ ಪ್ರವೇಶಿಸಲು ಹರಿಯಾಣದ ಬಿಜೆಪಿ ಸರ್ಕಾರ ಅವಕಾಶ ನೀಡಿರಲಿಲ್ಲ.

ರೈತರ ನಿರಂತರ ಹೋರಾಟದ ವೇಳೆ ಪೊಲೀಸರೊಂದಿಗೆ ಹಲವು ಬಾರಿ ಸಂಘರ್ಷ ನಡೆದಿತ್ತು. ಕೆಲ ರೈತರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಕಳೆದ ಒಂದು ವಾರದಿಂದ ಪ್ರತಿಭಟನೆ ತೀವ್ರಗೊಳಿಸಿದ್ದ ಶುಕ್ರವಾರ ಪೊಲೀಸರ ಬ್ಯಾರಿಕೇಡ್‌ಗಳನ್ನು ಬೇಧಿಸಿ ದೆಹಲಿಯತ್ತ ಹೊರಟಿದ್ದರು. ಈ ವೇಳೆ ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿಚಾರ್ಜ್ ಮಾಡಿ ಅಡ್ಡಿಪಡಿಸಿದ್ದಾರೆ.

ಇದನ್ನೂ ಓದಿ : ಹರಿಯಾಣ | ರೈತರ ಮೇಲೆ ಅಶ್ರುವಾಯು ದಾಳಿ; ಇಂಟರ್‌ನೆಟ್ ಬಂದ್; ಸೆಕ್ಷನ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...