Homeಮುಖಪುಟಮಾನಸಿಕ ಅಸ್ವಸ್ಥ ರೋಗಿಗಳನ್ನು ಬಿಸಾಡಿದ ಆಸ್ಪತ್ರೆ:  ಒಂದು ಶವ ಪತ್ತೆ

ಮಾನಸಿಕ ಅಸ್ವಸ್ಥ ರೋಗಿಗಳನ್ನು ಬಿಸಾಡಿದ ಆಸ್ಪತ್ರೆ:  ಒಂದು ಶವ ಪತ್ತೆ

- Advertisement -
- Advertisement -

ಔರಂಗಾಬಾದ್: ಬಿಹಾರದ ಔರಂಗಾಬಾದ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಇಬ್ಬರು ಮಾನಸಿಕ ಅಸ್ವಸ್ಥ ರೋಗಿಗಳನ್ನು ಬೆಡ್‌ಶೀಟ್‌ಗಳಿಂದ ಸುತ್ತಿಕೊಂಡು ಕಟ್ಟಿಹಾಕಿ ಆಸ್ಪತ್ರೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿ ಎಸೆದು ಬಂದಿದ್ದು, ಇದರಲ್ಲಿ ಒಬ್ಬ ರೋಗಿಯು ಸಾವನ್ನಪ್ಪಿದ್ದು, ಇನ್ನೊಬ್ಬ ಕಾಣೆಯಾಗಿದ್ದಾನೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಾಸ್ಥ್ಯ ಮಿಷನ್ ಎಂದು ಬರೆದಿರುವ ಕೆಂಪು ಮತ್ತು ಬಿಳಿ ಬೆಡ್ ಶೀಟ್‌ನಲ್ಲಿ ಸುತ್ತಿದ 50 ವರ್ಷದ ವ್ಯಕ್ತಿಯ ಅಪರಿಚಿತ ಶವವನ್ನು ಪೊಲೀಸರು ಪತ್ತೆ ಮಾಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಔರಂಗಾಬಾದ್‌ನ ಮಾಡೆಲ್ ಸದರ್ ಆಸ್ಪತ್ರೆಯ ಇಬ್ಬರು ಸಿಬ್ಬಂದಿಗಳಾದ ಹರೇಂದ್ರ ಕುಮಾರ್- ರೋಗಿಗಳನ್ನು ಸ್ಟ್ರೆಚರ್‌ನಲ್ಲಿ ತುಂಬಿಕೊಂಡರೆ ಮತ್ತು ಸ್ಟ್ರೆಚರ್ ಸಿಬ್ಬಂದಿ ಸ್ರಂಜನ್ ಕುಮಾರ್- ಇಬ್ಬರು ಮಾನಸಿಕ ಅಸ್ವಸ್ಥ ರೋಗಿಗಳಿಗೆ ಬೆಡ್‌ಶೀಟ್‌ಗಳನ್ನು ಸುತ್ತಿ ಆಸ್ಪತ್ರೆಯ ಆಂಬ್ಯುಲೆನ್ಸ್‌ಗೆ ಹಾಕಿದರು ಮತ್ತು ಕುಗ್ರಾಮವೊಂದರಲ್ಲಿ ಅವರನ್ನು ಬಿಟ್ಟು ತೆರಳಿದ್ದರು ಎಂದು  ಪೊಲೀಸರು ಹೇಳಿದ್ದಾರೆ.

ಸ್ಟ್ರೆಚರ್ ಮೇಲೆ ಕರೆದೊಯ್ಯುವಾಗ ಇಬ್ಬರು ಜೀವಂತವಾಗಿದ್ದರು ಎಂದು ಸುರಂಜನ್ ಕುಮಾರ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ರೋಗಿಗಳಲ್ಲಿ ಒಬ್ಬರು ನಂತರ ಸಾವನ್ನಪ್ಪಿದರು, ಇನ್ನೊಬ್ಬರು ಇನ್ನೂ ಪತ್ತೆಯಾಗಿಲ್ಲ. ತನಿಖೆ ಮುಂದುವರಿದಿದ್ದು, ನಾಪತ್ತೆಯಾಗಿರುವ ರೋಗಿಗಾಗಿ ಶೋಧ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಯ ಡೆಪ್ಯುಟಿ ಸೂಪರಿಂಟೆಂಡೆಂಟ್ ಕುಮಾರ್ ಅಶುತೋಷ್ ಮತ್ತು ಮ್ಯಾನೇಜರ್ ಹೇಮಂತ್ ರಾಜನ್ ಅವರ ಆದೇಶವನ್ನು ಪಾಲಿಸಿದ್ದೇವೆ. ಅವರನ್ನು ದೂರದ ಪ್ರದೇಶಗಳಿಗೆ ಬಿಡುವಂತೆ ಆಸ್ಪತ್ರೆಯ ಅಧಿಕಾರಿಗಳು ನಮ್ಮನ್ನು ಕೇಳಿಕೊಂಡರು ಎಂದು ಹರೇಂದ್ರ ಮತ್ತು ಸುರಂಜನ್ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ.

ಆರರಿಂದ ಏಳು ದಿನಗಳ ಹಿಂದೆ ಇಬ್ಬರು ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಇಬ್ಬರೂ ಆಸ್ಪತ್ರೆಯ ಆವರಣವನ್ನು ಕೊಳಕು ಮಾಡುತ್ತಿದ್ದರು ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ಆಸ್ಪತ್ರೆಯ ಕುಮಾರ್ ಅಶುತೋಷ್, ಹೇಮಂತ್ ರಾಜನ್, ಮೇಲ್ವಿಚಾರಕ ಶೈಲೇಶ್ ಕುಮಾರ್ ಮಿಶ್ರಾ, ಹರೇಂದರ್ ಕುಮಾರ್, ಆಂಬ್ಯುಲೆನ್ಸ್ ಚಾಲಕ ಶಿವಶಂಕರ್ ಕುಮಾರ್ ಮತ್ತು ಸ್ಟ್ರೆಚರ್ ಸಿಬ್ಬಂದಿ ಸುರಂಜನ್ ಮತ್ತು ಧರ್ಮಪಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105 ಅಡಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ದೀಪಕ್ ಕುಮಾರ್ ರೈ ಅವರ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ದೂರು ದಾಖಲಿಸಲಾಗಿದೆ.

ನಾವು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ. ಈವರೆಗೆ ಯಾರ ಬಂಧನವೂ ಆಗಿಲ್ಲ. ಎರಡನೇ ರೋಗಿಯ ಹುಡುಕಾಟವೂ ನಡೆಯುತ್ತಿದೆ ಎಂದು ಔರಂಗಾಬಾದ್ ಎಸ್ಪಿ ಅಂಬರೀಷ್ ರಾಹುಲ್ ಹೇಳಿದ್ದಾರೆ.

ನವೆಂಬರ್ 12ರ ಬೆಳ್ಳಂಬೆಳಗ್ಗೆ ಪೋಖ್ರಾಹಿ ದೇವಸ್ಥಾನದ ಬಳಿ ಆಂಬ್ಯುಲೆನ್ಸ್ ನಿಂದ ಬೆಡ್‌ ಶೀಟ್ ತುಂಬಿದ್ದ ದೇಹಗಳನ್ನು ಎಸೆಯುವುದನ್ನು ನೋಡಿದ್ದೇನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿರುವುದು ಪ್ರಕರಣಕ್ಕೆ ತಿರುವು ನೀಡಿದೆ.

“ನವೆಂಬರ್ 14 ರಂದು ಪೊಲೀಸ್ ಠಾಣೆಯಲ್ಲಿಈ ಕುರಿತು ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿತ್ತು. ಆದರೆ ಪೊಲೀಸರು ಶವವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ವಿವರಗಳನ್ನು ಅವನ ಗುರುತಿಗೆ ಪ್ರಕಟನೆಯನ್ನು ಹೊರಡಿಸಲಾಗಿತ್ತು ಎಂದು ಬರುನ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೌರಭ್ ಕುಮಾರ್ ಹೇಳಿದರು. .

ಜಿಲ್ಲಾಡಳಿತವು ತನಿಖೆಗೆ ಆದೇಶಿಸಿ ತ್ರಿಸದಸ್ಯ ತಂಡವನ್ನು ರಚಿಸಿದ್ದು, ವರದಿ ಸಲ್ಲಿಸಿದೆ. ಪೊಲೀಸ್ ತಂಡವು ಘಟನಾ ಸ್ಥಳದಲ್ಲಿ ಮತ್ತು ಆಸ್ಪತ್ರೆಯ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ್ದು, ಇದರಲ್ಲಿ ಸಿಬ್ಬಂದಿ ಆಂಬ್ಯುಲೆನ್ಸ್‌ನೊಳಗೆ ಇಬ್ಬರು ರೋಗಿಗಳನ್ನು ಹಾಕಿರುವುದನ್ನು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಆಸ್ಪತ್ರೆಯ ಮ್ಯಾನೇಜರ್ ಹೇಮಂತ್ ರಾಜನ್ ಅವರನ್ನು ಪ್ರಶ್ನಿಸಿದಾಗ, ಇಬ್ಬರು ರೋಗಿಗಳನ್ನು ಸಸಾರಾಮ್ ಮೂಲದ ನಾರಾಯಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗಿತ್ತು ಎಂದರು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೇಳಿದಾಗ  ಅವರಿಗೆ ನೀಡಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತಮ ಸ್ಥಿತಿಯಲ್ಲಿದ್ದ ರೋಗಿಯನ್ನು ಆಸ್ಪತ್ರೆಯಿಂದ 20 ಕಿಮೀ ದೂರದಲ್ಲಿರುವ ಟೆಂಗ್ರಾ ಮೋರ್‌ನಲ್ಲಿ ಬಿಡಲಾಗಿತ್ತು, ಹೆಚ್ಚು ಗಂಭೀರವಾದ ಎರಡನೇ ರೋಗಿಯನ್ನು 20 ಕಿಮೀ, ಪೊಖ್ರಾಹಿ ಗ್ರಾಮದ ಬಳಿಯ ದೇವಸ್ಥಾನದ ಬಳಿ ಬಿಡಲಾಗಿತ್ತುಎಂದು ಹೇಳಿರುವ ಆಸ್ಪತ್ರೆಯ ಸಿಬ್ಬಂದಿ ಹರೇಂದ್ರ ಕುಮಾರ್ ಮತ್ತು ಸ್ರಂಜನ್ ಅವರನ್ನುಪೊಲೀಸರು  ಬಂಧಿಸಿದ್ದಾರೆ.

ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ವಿಧಿ ವಿಜ್ಞಾನ ಸಂಸ್ಥೆಗೆ ಕಳುಹಿಸಲಾಗಿದ್ದು ಶವವನ್ನು ಸಂರಕ್ಷಿಸಲಾಗಿದೆ ಎಂದು ಪೋಸ್ಟ್‌ಮಾರ್ಟಮ್ ವರದಿ ಹೇಳಿದೆ.

ಇದನ್ನೂ ಓದಿ…ರೈತರ ಹೋರಾಟಕ್ಕೆ ಜಯ : ಎಲ್ಲಾ ಕೃಷಿ ಉತ್ಪನ್ನಗಳಿಗೆ ‘ಎಂಎಸ್‌ಪಿ’ ಘೋಷಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...