Homeಕರ್ನಾಟಕದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

ದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

- Advertisement -
- Advertisement -

ಮಂಗಳವಾರ ಮುಂಜಾನೆ ಈರುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ದಲ್ಲಾಳಿ ಅಂಗಡಿಗಳ ಗ್ಲಾಸ್‌ಗಳನ್ನು ರೈತರು ಒಡೆದು ಪುಡಿಪುಡಿ ಮಾಡಿದ ಘಟನೆ ಗದಗ ಎಪಿಎಂಸಿಯಲ್ಲಿ ನಡೆದಿದೆ. ರೈತರ ಆಕ್ರೋಶಕ್ಕೆ ದಲ್ಲಾಳಿಗಳು ಅಂಗಡಿಗಳನ್ನು ಬಿಟ್ಟು ಪರಾರಿಯಾದರು.

ಆಕ್ರೋಶಗೊಂಡ ರೈತರು ಗದಗ ಎಪಿಎಂಸಿಯಿಂದ ಜನರಲ್ ಕಾರ್ಯಪ್ಪ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಹೆದ್ದಾರಿ ತಡೆದರು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಗದಗ ಎಸ್ಪಿ ಶ್ರೀನಾಥ್ ಜೋಷಿ, ಎಸಿ ಭೇಟಿ ನೀಡಿ ರೈತರ ಮನವೊಲಿಸಿದರು. ದಲ್ಲಾಳಿಗಳ ಜೊತೆ ಮಾತನಾಡಿ ಸೂಕ್ತ ಬೆಲೆ ಒದಗಿಸೋ ಪ್ರಯತ್ನ ಮಾಡೋ ಭರವಸೆ ಸಿಕ್ಕ ನಂತರ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಕ್ವಿಂಟಲ್ ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ ರೂ. 150 ಕ್ಕೆ ಕುಸಿದಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಗದಗ ಇಡೀ ರಾಜ್ಯಕ್ಕೆ ಉಳ್ಳಾಗಡ್ಡಿಯ ದೊಡ್ಡ ಮಾರುಕಟ್ಟೆ. ಗದಗಿನ ಎಲ್ಲಾ ತಾಲ್ಲೂಕುಗಳಲ್ಲೂ ಅಪಾರ ಪ್ರಮಾಣದಲ್ಲಿ ಪ್ರತಿವರ್ಷ ಉಳ್ಳಾಗಡ್ಡಿ ಬೆಳೆಯುತ್ತಾರೆ. ಕೆಲವೊಮ್ಮೆ ಬೆಳೆಯನ್ನು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ, ಮುಂಬೈನ ನಾಸಿಕಕ್ಕೂ ಕಳಿಸಿ ಮಾರುತ್ತಾರೆ. ಇಲ್ಲಿನ ಈರುಳ್ಳಿಗೆ ಒಳ್ಳೆ ಬೆಲೆಯೂ ಇದೆ. ಈ ಸಲ ವಿಪರೀತ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿ ನಾಶವಾಗಿದೆ. ಕೊಳೆರೋಗದಿಂದಲೂ ಇಳುವರಿ ಕಡಿಮೆಯಾಗಿದೆ. ಆದರೆ, ಚೆನ್ನಾಗಿ ಬಂದ ಬೆಳೆಗೂ ಸರಿಯಾದ ಬೆಲೆ ಸಿಕ್ಕಿಲ್ಲ.

ಮೊದಲಿಗೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ್ದರಿಂದ ಧಾರಣೆ ಕುಸಿದಿತ್ತು. ನಂತರ ರಫ್ತು ನಿಷೇಧ ತೆಗೆದ ಮೇಲೂ ಧಾರಣೆಯೇನೂ ಏರಲಿಲ್ಲ. ಕಳೆದ ವರ್ಷ 7-8 ಸಾವಿರವಿದ್ದ ದರ ಈ ವರ್ಷ 4 ಸಾವಿರಕ್ಕೆ ಇಳಿಯಿತು. ಆದರೆ ಇಂದು ಮುಂಜಾನೆ ರೈತರಿಗೆ ದೊಡ್ಡ ಆಘಾತ ಕಾದಿತ್ತು. ಈರುಳ್ಳಿ ದರ ಏಕಾಏಕಿ ಕ್ವಿಂಟಾಲ್‌ಗೆ 150 ರೂಪಾಯಿಗೆ ಕುಸಿಯಿತು.

ಕ್ಷಣಕಾಲ ಕುಸಿದೇ ಹೋದ ರೈತ ಸಮೂಹ ನಂತರ ಈ ಮಾರುಕಟ್ಟೆ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದರು. ಅದರ ಪರಿಣಾಮವಾಗಿ ತಂದಿದ್ದ ಈರುಳ್ಳಿಯನ್ನು ಎಪಿಎಂಸಿ ಆವರಣ, ರಸ್ತೆಗಳಲ್ಲಿ ಚೆಲ್ಲಾಡಿದರು. ದಲ್ಲಾಳಿ ಅಂಗಡಿಗಳ ಗಾಜುಗಳನ್ನು ಈರುಳ್ಳಿ ಎಸೆದೇ ಪುಡಿಪುಡಿ ಮಾಡಿದರು. ಕುರ್ಚಿ ಟೇಬಲ್ಲುಗಳನ್ನು ಜಖಂಗೊಳಿಸಿದರು. ಭಯಭಿತರಾದ ದಲ್ಲಾಳಿ ಅಂಗಡಿಯ ವ್ಯಾಪಾರಸ್ಥರು ಎದ್ದು ಬಿದ್ದ್ದು ಓಡಿ ಹೋದರು.

ಈ ಪರಿಸ್ಥಿತಿಗೆ ಕಾರಣರಾದ ದಲ್ಲಾಳಿ ಅಂಗಡಿಯ ವಂಚಕ ವ್ಯಾಪಾರಿಗಳನ್ನು ಅಟ್ಟಾಡಿಸಿಕೊಂಡು ಹೋದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಕೊಡಬೇಕು ಅಂತ ಆಗ್ರಹಿಸಿ ಎಪಿಎಂಸಿಯಿಂದ ಪ್ರತಿಭಟನೆ ಮಾಡ್ತಾ, ನಗರದ ಜನರಲ್ ಕಾರ್ಯಪ್ಪ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗೆ ಉಳ್ಳಾಗಡ್ಡಿ ಇಂದು ಸಾಕ್ಷಿಯಾಗಿ ನಿಂತಿದೆ. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಕಣ್ಣೀರು ಮಾತ್ರವಲ್ಲ, ಆಕ್ರೋಶವೂ ಇದೆ.

ಸಾಕು ಸಾಕಾಗಿದೆ : ಗಂಗಾಧರಯ್ಯ, ರೈತ.

ಗದಗ ಜಿಲ್ಲೆ ಈ ಬಾರಿಯ ಪ್ರವಾಹದಿಂದ ನಲುಗಿಹೋಗಿದೆ. ರೈತರು ಬೆಳೆದಿದ್ದ ಈರುಳ್ಳಿಯೆಲ್ಲಾ ನೀರು ಪಾಲಾಗಿತ್ತು. ಅಷ್ಟೋ ಇಷ್ಟೋ ಉಳಿದ ಬೆಳೆಯನ್ನು ಮಾರುಕಟ್ಟೆಗೆ ತಂದ್ರೆ ಕ್ವಿಂಟಲ್ ಈರುಳ್ಳಿಗೆ 100 ರಿಂದ 150 ರೂಪಾಯಿ ಮಾತ್ರ ಹರಾಜು ಕೂಗಲಾಗ್ತಿದೆ. ಇದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಲೆಯ ಕಣ್ಣಾ ಮುಚ್ಚಾಲೆ ಆಟದಿಂದ ಇಂದು ರೈತರ ಆಕ್ರೋಶದ ಕಟ್ಟೆ ಇಂದು ಒಡೆದು ಹೋಯಿತು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...