Homeಅಂತರಾಷ್ಟ್ರೀಯಗಾಜಾದಲ್ಲಿ 1,410 ಕುಟುಂಬಗಳು ಸಂಪೂರ್ಣ ನಿರ್ನಾಮ

ಗಾಜಾದಲ್ಲಿ 1,410 ಕುಟುಂಬಗಳು ಸಂಪೂರ್ಣ ನಿರ್ನಾಮ

- Advertisement -
- Advertisement -

ಜೆರುಸಲೇಂ: ಗಾಜಾದಲ್ಲಿ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಗಳಲ್ಲಿ ಸಂಪೂರ್ಣವಾಗಿ ಕೆಲ ಪ್ಯಾಲೆಸ್ತೀನ್ ಕುಟುಂಬಗಳು ನಿರ್ನಾಮವಾಗಿವೆ. ಕೆಲವು ಬಾಂಬ್ ದಾಳಿಗಳು  ಮಕ್ಕಳು ಸೇರಿದಂತೆ ಒಂದೇ ಮನೆಯ ನಾಲ್ಕು ತಲೆಮಾರುಗಳನ್ನು ನಾಶಮಾಡಿವೆ ಎಂದು ಇಸ್ರೇಲಿ ಪತ್ರಿಕೆ ಹಾರೆಟ್ಜ್  ವರದಿ ಮಾಡಿದೆ.

ಅನಾಮಧೇಯ ಪತ್ರಕರ್ತರ ಹೇಳಿಕೆಗಳನ್ನು ಉಲ್ಲೇಖಿಸಿ, ಹಾರೆಟ್ಜ್  ವರದಿಯು,  “ಅಲ್-ನಸ್ರ್, ಡೊಗ್ಮುಶ್, ಸೇಲಂ, ಅಲ್-ಮಸ್ರಿ ಮತ್ತು ಅಲ್-ಅಸ್ತಲ್ ಕುಟುಂಬಗಳನ್ನು ಪ್ಯಾಲೆಸ್ತೀನ್ ಜನಸಂಖ್ಯಾ ನೋಂದಣಿಯಿಂದ ಅಳಿಸಿಹಾಕಲಾಗಿದೆ” ಎಂದು ಹೇಳಿದೆ.

ವರದಿಯು ಗಾಜಾದಲ್ಲಿನ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳನ್ನು ಉಲ್ಲೇಖಿಸಿದೆ.  ಇಸ್ರೇಲ್‌ ಮತ್ತು ಹಮಾಸ್ ನಡುವಿನ ಯುದ್ಧದ ಪ್ರಾರಂಭ ಮತ್ತು ಈ ವರ್ಷದ ನವೆಂಬರ್ 1 ರ ನಡುವೆ ಸುಮಾರು 7,160 ಕುಟುಂಬಗಳ ನಡುವೆ  ಬಾಂಬ್ ದಾಳಿ ನಡೆಸಲಾಗಿದೆ” ಎಂದು ಇದು ಬಹಿರಂಗಪಡಿಸಿದೆ.

1,410 ಕುಟುಂಬಗಳು ಸಂಪೂರ್ಣವಾಗಿ ನಾಶವಾಗಿದ್ದು, 5,444 ಜನರು ಸತ್ತಿದ್ದಾರೆ. ಹಾಗೆಯೇ 3,463 ಕುಟುಂಬಗಳಲ್ಲಿ, 7,934 ಜನರು ಸಾವನ್ನಪ್ಪಿದ್ದಾರೆ ಮತ್ತು ಇದರಲ್ಲಿ ಪ್ರತಿ ಕುಟುಂಬಕ್ಕೆ ಒಬ್ಬ ಸದಸ್ಯ ಮಾತ್ರ ಉಳಿದುಕೊಂಡಿದ್ದಾರೆ ಎಂದು ಅದು  ವರದಿಯಲ್ಲಿ ಹೇಳಿದೆ.

2,287 ಕುಟುಂಬಗಳಲ್ಲಿ, 9,577 ಜನರು ಸಾವನ್ನಪ್ಪಿದ್ದು, ಇದರಲ್ಲಿ ಇಬ್ಬರು ಅಥವಾ ಹೆಚ್ಚಿನ ಕುಟುಂಬ ಸದಸ್ಯರು ಬದುಕುಳಿದಿದ್ದಾರೆ ಎಂದು ವರದಿ ತಿಳಿಸಿದೆ..

ಹಾರೆಟ್ಜ್ ಲೇಖನಕ್ಕೆ ಸಂಬಂಧಿಸಿದಂತೆ ಕಾಮೆಂಟ್‌ಗಾಗಿ ಮಾಡಿದ ವಿನಂತಿಗೆ ಇಸ್ರೇಲ್ ರಕ್ಷಣಾ ಪಡೆಗಳು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದೆ.

ಇಸ್ರೇಲ್ ಗಾಜಾಪಟ್ಟಿಯ ಮೇಲೆ ನರಮೇಧದ ಯುದ್ಧವನ್ನು ಪ್ರಾರಂಭಿಸಿದೆ, ಇದು 2023ರ ಅಕ್ಟೋಬರ್ 7 ರಿಂದ 44,600 ಕ್ಕೂ ಹೆಚ್ಚು ಜನರನ್ನು ಕೊಂದು ಹಾಕಿದ್ದು, ಇದರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಸಾವನ್ನಪ್ಪಿದ್ದಾರೆ.

ಕಳೆದ ತಿಂಗಳು, ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯವು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರಿಗೆ ಯುದ್ಧ ಅಪರಾಧಗಳು ಮತ್ತು ಗಾಜಾದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಂಧನ ವಾರಂಟ್ ಹೊರಡಿಸಿತು.

ಗಾಜಾದ ಮೇಲಿನ ಯುದ್ಧಕ್ಕಾಗಿ ಇಸ್ರೇಲ್ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ನರಮೇಧದ ಪ್ರಕರಣವನ್ನು ಎದುರಿಸುತ್ತಿದೆ.

ಇದನ್ನೂ ಓದಿ….ಮಾನಸಿಕ ಅಸ್ವಸ್ಥ ರೋಗಿಗಳನ್ನು ಬಿಸಾಡಿದ ಆಸ್ಪತ್ರೆ:  ಒಂದು ಶವ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...