Homeಅಂತರಾಷ್ಟ್ರೀಯಗಾಜಾದಲ್ಲಿ 1,410 ಕುಟುಂಬಗಳು ಸಂಪೂರ್ಣ ನಿರ್ನಾಮ

ಗಾಜಾದಲ್ಲಿ 1,410 ಕುಟುಂಬಗಳು ಸಂಪೂರ್ಣ ನಿರ್ನಾಮ

- Advertisement -
- Advertisement -

ಜೆರುಸಲೇಂ: ಗಾಜಾದಲ್ಲಿ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಗಳಲ್ಲಿ ಸಂಪೂರ್ಣವಾಗಿ ಕೆಲ ಪ್ಯಾಲೆಸ್ತೀನ್ ಕುಟುಂಬಗಳು ನಿರ್ನಾಮವಾಗಿವೆ. ಕೆಲವು ಬಾಂಬ್ ದಾಳಿಗಳು  ಮಕ್ಕಳು ಸೇರಿದಂತೆ ಒಂದೇ ಮನೆಯ ನಾಲ್ಕು ತಲೆಮಾರುಗಳನ್ನು ನಾಶಮಾಡಿವೆ ಎಂದು ಇಸ್ರೇಲಿ ಪತ್ರಿಕೆ ಹಾರೆಟ್ಜ್  ವರದಿ ಮಾಡಿದೆ.

ಅನಾಮಧೇಯ ಪತ್ರಕರ್ತರ ಹೇಳಿಕೆಗಳನ್ನು ಉಲ್ಲೇಖಿಸಿ, ಹಾರೆಟ್ಜ್  ವರದಿಯು,  “ಅಲ್-ನಸ್ರ್, ಡೊಗ್ಮುಶ್, ಸೇಲಂ, ಅಲ್-ಮಸ್ರಿ ಮತ್ತು ಅಲ್-ಅಸ್ತಲ್ ಕುಟುಂಬಗಳನ್ನು ಪ್ಯಾಲೆಸ್ತೀನ್ ಜನಸಂಖ್ಯಾ ನೋಂದಣಿಯಿಂದ ಅಳಿಸಿಹಾಕಲಾಗಿದೆ” ಎಂದು ಹೇಳಿದೆ.

ವರದಿಯು ಗಾಜಾದಲ್ಲಿನ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳನ್ನು ಉಲ್ಲೇಖಿಸಿದೆ.  ಇಸ್ರೇಲ್‌ ಮತ್ತು ಹಮಾಸ್ ನಡುವಿನ ಯುದ್ಧದ ಪ್ರಾರಂಭ ಮತ್ತು ಈ ವರ್ಷದ ನವೆಂಬರ್ 1 ರ ನಡುವೆ ಸುಮಾರು 7,160 ಕುಟುಂಬಗಳ ನಡುವೆ  ಬಾಂಬ್ ದಾಳಿ ನಡೆಸಲಾಗಿದೆ” ಎಂದು ಇದು ಬಹಿರಂಗಪಡಿಸಿದೆ.

1,410 ಕುಟುಂಬಗಳು ಸಂಪೂರ್ಣವಾಗಿ ನಾಶವಾಗಿದ್ದು, 5,444 ಜನರು ಸತ್ತಿದ್ದಾರೆ. ಹಾಗೆಯೇ 3,463 ಕುಟುಂಬಗಳಲ್ಲಿ, 7,934 ಜನರು ಸಾವನ್ನಪ್ಪಿದ್ದಾರೆ ಮತ್ತು ಇದರಲ್ಲಿ ಪ್ರತಿ ಕುಟುಂಬಕ್ಕೆ ಒಬ್ಬ ಸದಸ್ಯ ಮಾತ್ರ ಉಳಿದುಕೊಂಡಿದ್ದಾರೆ ಎಂದು ಅದು  ವರದಿಯಲ್ಲಿ ಹೇಳಿದೆ.

2,287 ಕುಟುಂಬಗಳಲ್ಲಿ, 9,577 ಜನರು ಸಾವನ್ನಪ್ಪಿದ್ದು, ಇದರಲ್ಲಿ ಇಬ್ಬರು ಅಥವಾ ಹೆಚ್ಚಿನ ಕುಟುಂಬ ಸದಸ್ಯರು ಬದುಕುಳಿದಿದ್ದಾರೆ ಎಂದು ವರದಿ ತಿಳಿಸಿದೆ..

ಹಾರೆಟ್ಜ್ ಲೇಖನಕ್ಕೆ ಸಂಬಂಧಿಸಿದಂತೆ ಕಾಮೆಂಟ್‌ಗಾಗಿ ಮಾಡಿದ ವಿನಂತಿಗೆ ಇಸ್ರೇಲ್ ರಕ್ಷಣಾ ಪಡೆಗಳು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದೆ.

ಇಸ್ರೇಲ್ ಗಾಜಾಪಟ್ಟಿಯ ಮೇಲೆ ನರಮೇಧದ ಯುದ್ಧವನ್ನು ಪ್ರಾರಂಭಿಸಿದೆ, ಇದು 2023ರ ಅಕ್ಟೋಬರ್ 7 ರಿಂದ 44,600 ಕ್ಕೂ ಹೆಚ್ಚು ಜನರನ್ನು ಕೊಂದು ಹಾಕಿದ್ದು, ಇದರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಸಾವನ್ನಪ್ಪಿದ್ದಾರೆ.

ಕಳೆದ ತಿಂಗಳು, ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯವು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರಿಗೆ ಯುದ್ಧ ಅಪರಾಧಗಳು ಮತ್ತು ಗಾಜಾದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಂಧನ ವಾರಂಟ್ ಹೊರಡಿಸಿತು.

ಗಾಜಾದ ಮೇಲಿನ ಯುದ್ಧಕ್ಕಾಗಿ ಇಸ್ರೇಲ್ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ನರಮೇಧದ ಪ್ರಕರಣವನ್ನು ಎದುರಿಸುತ್ತಿದೆ.

ಇದನ್ನೂ ಓದಿ….ಮಾನಸಿಕ ಅಸ್ವಸ್ಥ ರೋಗಿಗಳನ್ನು ಬಿಸಾಡಿದ ಆಸ್ಪತ್ರೆ:  ಒಂದು ಶವ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...