Homeಮುಖಪುಟಮಹಾರಾಷ್ಟ್ರ | ಬಾಬರಿ ಮಸೀದಿ ಧ್ವಂಸ ಸಮರ್ಥಿಸಿದ ಶಿವಸೇನೆ : ಎಂವಿಎ ಒಕ್ಕೂಟ ತೊರೆದ ಸಮಾಜವಾದಿ...

ಮಹಾರಾಷ್ಟ್ರ | ಬಾಬರಿ ಮಸೀದಿ ಧ್ವಂಸ ಸಮರ್ಥಿಸಿದ ಶಿವಸೇನೆ : ಎಂವಿಎ ಒಕ್ಕೂಟ ತೊರೆದ ಸಮಾಜವಾದಿ ಪಕ್ಷ

- Advertisement -
- Advertisement -

ಶಿವಸೇನೆ (ಯುಬಿಟಿ) ಪಕ್ಷದ ನಾಯಕ ಬಾಬರಿ ಮಸೀದಿ ಧ್ವಂಸವನ್ನು ಸಮರ್ಥಿಸಿರುವ ಹಿನ್ನೆಲೆ, ಸಮಾಜವಾದಿ ಪಕ್ಷದ (ಎಸ್‌ಪಿ) ಮಹಾರಾಷ್ಟ್ರ ಘಟಕ ಪ್ರತಿಪಕ್ಷಗಳ ಒಕ್ಕೂಟ ಮಹಾ ವಿಕಾಸ ಅಘಾಡಿ (ಎಂವಿಎ) ಯನ್ನು ತೊರೆದಿದೆ.

ಈ ಕುರಿತು ಸಮಾಜವಾದಿ ಎಸ್‌ಪಿ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಅಬು ಅಸಿಮ್ ಅಝ್ಮಿ ಅಧಿಕೃತ ಘೋಷಣೆ ಮಾಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎಸ್‌ಪಿ ಇಬ್ಬರು ಶಾಸಕರನ್ನು ಹೊಂದಿದೆ. ಈ ಪೈಕಿ ರಾಜ್ಯಾಧ್ಯಕ್ಷ ಅಬು ಅಸಿಮ್ ಅಝ್ಮಿ ಅವರು ಒಬ್ಬರು. ಅಝ್ಮಿ ಮುಂಬೈನ ಮನ್ಖುರ್ದ್-ಶಿವಾಜಿನಗರದ ಶಾಸಕರಾದರೆ, ಇನ್ನೊಬ್ಬರು ರೈಸ್ ಶೇಖ್ ಥಾಣೆ ಜಿಲ್ಲೆಯ ಭಿವಂಡಿ ಪೂರ್ವ ಕ್ಷೇತ್ರದ ಶಾಸಕರಾಗಿದ್ದಾರೆ.

“ನಾವು ಆಡಳಿತಾರೂಢ ಮಹಾಯುತಿ ಅಥವಾ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿಯ ಭಾಗವಲ್ಲ. ನಮ್ಮಿಬ್ಬರಿಗಾಗಿ ಪ್ರತ್ಯೇಕ ಜಾಗವನ್ನು ಮೀಸಲಿಡುವಂತೆ ಸ್ಪೀಕರ್ ಮತ್ತು ಮಹಾರಾಷ್ಟ್ರ ಶಾಸಕಾಂಗ ಕಾರ್ಯದರ್ಶಿಯನ್ನು ಕೋರುತ್ತೇವೆ” ಎಂದು ಅಝ್ಮಿ ಹೇಳಿದ್ದಾರೆ.

“ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಸಮಯದಲ್ಲಾಗಲಿ, ಪ್ರಚಾರದ ಸಮಯದಲ್ಲಾಗಲಿ ಎಂವಿಎ ನಮ್ಮೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ. ನಮ್ಮನ್ನು ಯಾವುದೇ ಸಭೆ, ರ್ಯಾಲಿಗಳಿಗೆ ಕರೆಯುತ್ತಿರಲಿಲ್ಲ” ಎಂದು ಅಝ್ಮಿ ತಿಳಿಸಿದ್ದಾರೆ.

“ಉದ್ದವ್ ಠಾಕ್ರೆಯವರು ಅವರ ಪಕ್ಷದ ಆಂತರಿಕ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಬಲ ಹಿಂದುತ್ವ ಪ್ರತಿಪಾದಿಸುವಂತೆ ಹೇಳಿದ್ದಾರಂತೆ. ಶಿವಸೇನೆಯವರು ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸವನ್ನು ಸಮರ್ಥಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಇದನ್ನು ನಾವು ಹೇಗೆ ಸಹಿಸಿಕೊಳ್ಳುವುದು?” ಎಂದು ಅಝ್ಮಿ ಪ್ರಶ್ನಿಸಿದ್ದಾರೆ.

ವರದಿಗಳ ಪ್ರಕಾರ, ಬಾಬರಿ ಮಸೀದಿ ಧ್ವಂಸವನ್ನು ಸಮರ್ಥಿಸಿ, ಸಂಭ್ರಮಿಸಿ ಶಿವಸೇನೆ (ಯುಬಿಟಿ) ಎಂಎಲ್‌ಸಿ ಹಾಗೂ ಉದ್ದವ್ ಠಾಕ್ರೆ ಅವರ ಆಪ್ತ ಸಹಾಯಕ ಮಿಲಿಂದ್ ನಾರ್ವೇಕರ್ ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್ ಎಸ್‌ಪಿ ನಾಯಕರನ್ನು ಕೆರಳಿಸಿದೆ. ಮಿಲಿಂದ್ ಹಂಚಿಕೊಂಡಿದ್ದ ಪೋಸ್ಟ್‌ನಲ್ಲಿ ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ, ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಫೋಟೋಗಳಿವೆ.

“ಮಿಲಿಂದ್ ನಾರ್ವೇಕರ್ ಪೋಸ್ಟ್‌ನಿಂದ ನಮ್ಮ ಮನಸ್ಸಿಗೆ ನೋವಾಗಿದ್ದು, ಎಲ್ಲಾ ಸಮುದಾಯಗಳ ಏಕತೆ ಮತ್ತು ಗೌರವದ ಮೌಲ್ಯಗಳಿಗೆ ವಿರುದ್ಧವಾಗಿವೆ. ನಾವು ಸೌಹಾರ್ದತೆಯನ್ನು ಉತ್ತೇಜಿಸಲು ಇಲ್ಲಿದ್ದೇವೆ, ಜನರನ್ನು ವಿಭಜಿಸಲು ಅಲ್ಲ” ಎಂದು ಅಝ್ಮಿ ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ | ಇವಿಎಂ ತಿರುಚಿದ ಆರೋಪ : ಪ್ರಮಾಣವಚನ ಸಮಾರಂಭ ಬಹಿಷ್ಕರಿಸಿದ ವಿಪಕ್ಷ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...